Thursday | May 14, 2026 |

ಗೃಹ ಜ್ಯೋತಿ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳ ಅಂಕಿ ಅಂಶಗಳೇ ಸರ್ಕಾರದಲ್ಲಿಲ್ಲ

ಬೆಂಗಳೂರು;  ಗೃಹ ಜ್ಯೋತಿ ಯೋಜನೆ ಒಟ್ಟು ಫಲಾನುಭವಿಗಳ ಪೈಕಿ  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ನಿರ್ದಿಷ್ಯ ಅಂಕಿ ಅಂಶಗಳು ಸರ್ಕಾರದ ಬಳಿ  ಲಭ್ಯವಿಲ್ಲ.

 

ರಾಜ್ಯದ ಎಲ್ಲಾ ಪ್ರವರ್ಗದ ಗೃಹ ಬಳಕೆ ಮತ್ತು ಗ್ರಾಹಕರ ಸೌಲಭ್ಯಕ್ಕಾಗಿ ಗೃಹ ಜ್ಯೋತಿ  ಅನುಷ್ಠಾನಗೊಂಡಿದೆ.  ಗೃಹ ಜ್ಯೋತಿ ಯೋಜನೆಗೆ ನೋಂದಣಿಯಲ್ಲಿಯೂ  ಜಾತಿವಾರು ಮಾಹಿತಿ ಅಂಕಣ ನಮೂದಿಸಿಲ್ಲ. ಜಾತಿವಾರು ವಿವರಗಳ ಮಾಹಿತಿ ಸಂಗ್ರಹಿಸದ ಕಾರಣ ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ನಿರ್ದಿಷ್ಟ ಅಂಕಿ ಅಂಶಗಳು ಲಭ್ಯವಿಲ್ಲ ಎಂದು ಖುದ್ದು ಸಚಿವ ಕೆ ಜೆ ಜಾರ್ಜ್‌ ಅವರು ಸದನಕ್ಕೆ ಉತ್ತರ ನೀಡಿದ್ದರು.

 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ಯೋಜನೆಯ ನಿಧಿಯನ್ನು ಗ್ಯಾರಂಟಿ ಯೋಜನೆಗಳಿಗೆ ಮಾರ್ಗಪಲ್ಲಟಗೊಳಿಸಿದ್ದರ ಕುರಿತು ಭಾರೀ ವಿರೋಧ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ   ಗೃಹ ಜ್ಯೋತಿ ಯೋಜನೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ  ಫಲಾನುಭವಿಗಳ ಅಂಕಿ ಅಂಶಗಳು ಲಭ್ಯವಿಲ್ಲ ಎಂದು ಸದನಕ್ಕೆ ಕೊಟ್ಟಿರುವ ಉತ್ತರವು ಮುನ್ನೆಲೆಗೆ ಬಂದಿದೆ.

 

ಗೃಹ ಜ್ಯೋತಿ ಯೋಜನೆಯಡಿಯಲ್ಲಿ ನೋಂದಣಿ ಮಾಡಿಕೊಂಡಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವ್ಯಾಪ್ತಿಗೆ ಒಳಪಡುವ ವಿದ್ಯುತ್‌ ಬಳಕೆದಾರರ ವಿವರಗಳು ಮತ್ತು ಅಂಕಿ ಅಂಶಗಳ ಕುರಿತಾಗಿ ವಿಧಾನ ಪರಿಷತ್‌ನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಚುಕ್ಕೆ ಗುರುತಿಲ್ಲದ ಪ್ರಶ್ನೆ ಕೇಳಿದ್ದರು. ಇದಕ್ಕೆ ಸಚಿವ ಕೆ ಜೆ ಜಾರ್ಜ್‌ ಅವರು ಉತ್ತರ ನೀಡಿದ್ದರು.

 

ಉತ್ತರದಲ್ಲೇನಿದೆ?

 

ಗೃಹ ಜ್ಯೋತಿ ಯೋಜನೆಯನ್ನು ರಾಜ್ಯದಲ್ಲಿನ ಎಲ್ಲಾ ಪ್ರವರ್ಗದ ಗೃಹ ಬಳಕೆ ಗ್ರಾಹಕರ ಸೌಲಭ್ಯಕ್ಕಾಗಿ ಅನುಷ್ಠಾನಗೊಳಿಸಲಾಗಿರುತ್ತದೆ. ಈ ಯೋಜನೆಯ ಸೌಲಭ್ಯಕ್ಕಾಗಿ ನೋಂದಾಯಿಸುವ ಫಲಾನುಭವಿಗಳು ಸೇವಾ ಸಿಂಧು ತಂತ್ರಾಂಶದಲ್ಲಿ ನೋಂದಣಿ ಮಾಡಬೇಕಾಗಿದೆ. ಈ ನೋಂದಣಿ ಅರ್ಜಿಯಲ್ಲಿ ಮಾಹಿತಿಯನ್ನು ಸರಳೀಕರಣಗೊಳಿಸುವ ಸಲುವಾಗಿ ಪ್ರತ್ಯೇಕವಾಗಿ ಜಾತಿವಾರು ಮಾಹಿತಿ ಅಂಕಣ ನಮೂದಿಸಿರುವುದಿಲ್ಲ. ಹೊಸದಾಗಿ ವಿದ್ಯುತ್‌ ಸಂಪರ್ಕ ಪಡೆಯುವ ಸಂದರ್ಭದಲ್ಲಿಯೂ ಸಹ ಜಾತಿವಾರು ವಿವರಗಳ ಮಾಹಿತಿ ಸಂಗ್ರಹಿಸಲ್ಪಡುವುದಿಲ್ಲ. ಹೀಗಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳ ನಿರ್ದಿಷ್ಟ ಅಂಕಿ ಅಂಶಗಳು ಲಭ್ಯವಿರುವುದಿಲ್ಲ ಎಂದು ಸಚಿವ ಕೆ ಜೆ ಜಾರ್ಜ್‌ ಅವರು ಉತ್ತರ ಒದಗಿಸಿರುವುದು ಗೊತ್ತಾಗಿದೆ.

 

 

ವಿಶೇಷವೆಂದರೇ ಇಂಧನ ಇಲಾಖೆಯಡಿ ಒಟ್ಟು 3.53 ಲಕ್ಷ ಎಸ್‌ ಸಿ ಮತ್ತು ಎಸ್‌ ಟಿ ರೈತರ ಪಂಪ್‌ ಸೆಟ್‌ಗಳಿವೆ. ಇದಕ್ಕೆ ಅನುಗುಣವಾಗಿ 1,437.18 ಅನುದಾನ ಮಾತ್ರ ಅಗತ್ಯವಿದೆ. ಎಸ್‌ಸಿಎಸ್‌ಪಿ ಮತ್ತು ಎಸ್‌ಟಿಪಿ ಕಾಯ್ದೆಯಂತೆ ಫಲಾನುಭವಿಗಳ ಸಂಖ್ಯೆಗೆ ಅನುಗುಣವಾಗಿ ವೆಚ್ಚ ಭರಿಸಬೇಕಾಗಿದೆ. ಅಂದಾಜು 846 ಕೋಟಿ ರು ಉಳಿಕೆಯಾಗಗುತ್ತದೆ. ಅದೇ ರೀತಿ ಗೃಹ ಜ್ಯೋತಿ ಯೋಜನೆಯಡಿಯೂ ಸಹ ನಿಖರ ಅಂಕಿ ಅಂಶಗಳನ್ನು ಇಂಧನ ಇಲಾಖೆಯಿಂದ ಒದಗಿಸಿಲ್ಲ.

 

 

ಸಮಾಜ ಕಲ್ಯಾಣ ಇಲಾಖೆಯು 2025ರ ಜನವರಿ 18ರಂದು ನಡೆದಿದ್ದ ಎಸ್‌ಸಿಸಿಎಸ್‌ಪಿ ಮತ್ತು ಎಸ್‌ಟಿಪಿ ನೋಡಲ್‌ ಏಜೆನ್ಸಿ ಸಭೆಯಲ್ಲಿ ಈ ಸಂಗತಿಯ ಕುರಿತು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯು ಚರ್ಚಿಸಿದ್ದರು.

 

ಬೆಸ್ಕಾಂ ಸೇರಿದಂತೆ ಎಸ್ಕಾಂಗಳ ವ್ಯಾಪ್ತಿಯಲ್ಲಿ ಗೃಹ ಜ್ಯೋತಿ ಯೋಜನೆಯಡಿಯಲ್ಲಿ 2024ರ ಜೂನ್‌ ಅಂತ್ಯಕ್ಕೆ ಒಟ್ಟಾರೆ 1,66,41,767 ಮಂದಿ ನೋಂದಣಿ ಮಾಡಿಕೊಂಡಿದ್ದರು. ಇದೇ ಅವಧಿಯಲ್ಲಿ 30,99, 711 ಮಂದಿ ಗೃಹ ಜ್ಯೋತಿ ಯೋಜನೆಯಿಂದ ಹೊರಗುಳಿದಿದ್ದರು.

 

 

ಬೆಸ್ಕಾಂ ವ್ಯಾಪ್ತಿಯಲ್ಲಿ 7013678, ಮೆಸ್ಕಾಂ ವ್ಯಾಪ್ತಿಯಲ್ಲಿ 1744327, ಸೆಸ್ಕ್‌ 2393702, ಹೆಸ್ಕಾಂ 3317039, ಜೆಸ್ಕಾಂ 2173021 ಸೇರಿ ಒಟ್ಟಾರೆ 1,66,41,767 ಮಂದಿ ನೋಂದಣಿ ಮಾಡಿಸಿಕೊಂಡಿದ್ದರು. ಅದೇ ರೀತಿ ಬೆಸ್ಕಾಂ ವ್ಯಾಪ್ತಿಯಲ್ಲಿ 2190395, ಮೆಸ್ಕಾಂ 347150, ಸೆಸ್ಕ್‌ 135250, ಹೆಸ್ಕಾಂ 348355, ಜೆಸ್ಕಾಂ 78561 ಸೇರಿ 3099711 ಮಂದಿ  ಯೋಜನೆಯಿಂದ ಹೊರಗುಳಿದಿದ್ದರು ಎಂದು ಸದನಕ್ಕೆ ಮಾಹಿತಿ ಒದಗಿಸಿದ್ದರು.

 

 

ಹಾಗೆಯೇ 2023-24ನೇ ಸಾಲಿನಲ್ಲಿ ಗೃಹ ಜ್ಯೋತಿ ಯೋಜನೆಯಡಿಯಲ್ಲಿ ನೋಂದಾಯಿತ ವಿದ್ಯುತ್‌ ಬಳೆಕದಾರರು 5953.89 ದಶಲಕ್ಷ ಯೂನಿಟ್‌ ವಿದ್ಯುತ್‌ ಬಳಕೆ ಮಾಡಿದ್ದರು. ಇದಕ್ಕಾಗಿ ಒಟ್ಟಾರೆ 2,554.11 ಕೋಟಿ ರು ವೆಚ್ಚವಾಗಿತ್ತು. 2024-25ನೇ ಸಾಲಿನಲ್ಲಿ 2558.40 ದಶಲಕ್ಷ ಯೂನಿಟ್‌ ವಿದ್ಯುತ್‌ನನ್ನು 2024ರ ಜೂನ್‌ ಅಂತ್ಯಕ್ಕೆ ಬಳಕೆ ಮಾಡಿದ್ದರು. ಇದಕ್ಕಾಗಿ 2,304.24 ಕೋಟಿ ರು ವೆಚ್ಚವಾಗಿತ್ತು ಎಂದು ಉತ್ತರಿಸಿದ್ದರು.

 

 

2023-24ನೇ ಸಾಲಿನಲ್ಲಿ ಎಸ್ಕಾಂಗಳಿಗೆ ಯಾವುದೇ ಬಾಕಿ ಉಳಿಸಿರಲಿಲ್ಲ. ಇದೇ ಅವಧಿಯಲ್ಲಿ ಬೆಸ್ಕಾಂಗೆ 2,771.59 ಕೋಟಿ ರು., ಮೆಸ್ಕಾಂಗೆ 639.00 ಕೋಟಿ, ಸೆಸ್ಕ್‌ಗೆ 629.69 ಕೋಟಿ, ಹೆಸ್ಕಾಂಗೆ 1,092.91 ಕೋಟಿ, ಜೆಸ್ಕಾಂಗೆ 675 ಕೋಟಿ ರು ಬಿಡುಗಡೆಯಾಗಿತ್ತು ಎಂದು ಸಚಿವ ಜಾರ್ಜ್‌ ಅವರು ನೀಡಿದ್ದ ಉತ್ತರದಿಂದ ಗೊತ್ತಾಗಿದೆ.

 

ಗ್ಯಾರಂಟಿ ಹಣವೇನು ಸರ್ಕಾರದ ಸಂಬಳವೇ ಎಂದು ಸಚಿವ ಕೆ ಜೆ ಜಾರ್ಜ್‌ ಅವರು ಉತ್ತರಿಸಿದ್ದರು.   ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿದ್ದ ಎಸ್ಕಾಂಗಳಿಗೆ ಸರ್ಕಾರವು ಬಾಕಿ  ಹಣ ಬಿಡುಗಡೆ ಮಾಡಿರಲಿಲ್ಲ. ಹೀಗಾಗಿ   ಗ್ರಾಹಕರಿಂದಲೇ ಹಣ ವಸೂಲು ಮಾಡಲಾಗುವುದು ಎಂದು ನೋಟೀಸ್‌ ಕೂಡ ಜಾರಿಗೊಳಿಸಿದ್ದವು. ನಂತರ ಸಚಿವ ಕೆ ಜೆ ಜಾರ್ಜ್‌ ಸೂಚನೆ ಮೇರೆಗೆ ನೋಟೀಸ್‌ ಹಿಂಪಡೆದುಕೊಳ್ಳಲು ಸೂಚಿಸಿದ್ದನ್ನು ಸ್ಮರಿಸಬಹುದು.

Hot this week

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...
Please Scan to make Your Contribution

Topics

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

Related Articles

Popular Categories

error: Content is protected !!