Sunday | August 23, 2026 |

ಹೆಚ್‌ಎಂಟಿ ಪ್ರಕರಣ; ಸರ್ಕಾರದ ವಿರುದ್ಧವೇ ಆರೋಪ, ರಕ್ಷಣೆ ಕೋರಿ ಸಿಬಿಐಗೆ ಐಎಫ್‌ಎಸ್‌ ಗೋಕುಲ್‌ ಪತ್ರ

ಬೆಂಗಳೂರು; ಹೆಚ್‌ಎಂಟಿಯು ಅನಧಿಕೃತವಾಗಿ ಅರಣ್ಯ ಜಮೀನನ್ನು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡಿರುವುದು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಹಸ್ತಾಂತರಿಸಿರುವ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಆರೋಪಿತ ಅಧಿಕಾರಿ ಐಎಫ್‌ಎಸ್‌ ಆರ್‍‌ ಗೋಕುಲ್‌ ಅವರು ಇದೀಗ ಸರ್ಕಾರದ ವಿರುದ್ಧವೇ ಆರೋಪ ಮಾಡಿದ್ದಾರೆ. ಅಲ್ಲದೇ ರಕ್ಷಣೆ ಕೋರಿ ಸಿಬಿಐಗೂ ಪತ್ರವನ್ನು ಬರೆದಿದ್ದಾರೆ.

 

ಈ ಸಂಗತಿಯನ್ನು ‘ದಿ ಫೈಲ್‌’, ಇದೀಗ ದಾಖಲೆ ಸಹಿತ ಹೊರಗೆಡವುತ್ತಿದೆ.

 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ಗೆ ಕಡತದ (FEE/107/FLL/2025 COMPUTER NUMBER 1772747) ಟಿಪ್ಪಣಿ ಹಾಳೆಗಳು ಲಭ್ಯವಾಗಿವೆ.

 

 

ಬೇಲಿಕೇರಿ ಕಬ್ಬಿಣದ ಅದಿರು ಕಳವು ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಅವರಿಗೆ ನ್ಯಾಯಾಲಯವು ಸಜೆ ವಿಧಿಸಿತ್ತು. ಕೆಲವೇ ಕೆಲವು ದಿನಗಳ ಅಂತರದಲ್ಲಿ ಇದೇ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ ಸಾಕ್ಷಿಯಾಗಿರುವ ಐಎಫ್‌ಎಸ್‌ ಅಧಿಕಾರಿ ಗೋಕುಲ್‌ ಅವರಿಗೆ,  ಹೆಚ್‌ಎಂಟಿಯು ಅರಣ್ಯ ಜಮೀನನ್ನು ಅನಧಿಕೃತವಾಗಿ ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡಿರುವ ಪ್ರಕರಣದಲ್ಲಿ ನೋಟೀಸ್‌ ನೀಡಿತ್ತು. ಈ ಪ್ರಕರಣದಲ್ಲಿ ಸರ್ಕಾರವು ತಮ್ಮನ್ನು ಬಲಿಪಶು ಮಾಡಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ ಎಂದು ಗೊತ್ತಾಗಿದೆ.

 

ಸರ್ಕಾರದ ವಿರುದ್ಧವೇ ಗಂಭೀರ ಆರೋಪ ಮಾಡುವ ಮೂಲಕ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಸರ್ಕಾರವನ್ನು ಗೋಕುಲ್‌ ಅವರು ಬೆದರಿಸುತ್ತಿದ್ದಾರೆ ಎಂದು ಅರಣ್ಯ ಇಲಾಖೆಯ ಅಧಿಕಾರಿವರ್ಗವು ಇದಕ್ಕೆ ತಿರುಗೇಟು ನೀಡಿದೆ.

 

ಹೆಚ್‌ಎಂಟಿಯು ಅನಧಿಕೃತವಾಗಿ ಅರಣ್ಯ ಜಮೀನನ್ನು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡಿರುವುದು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಹಸ್ತಾಂತರಿಸಿರುವ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಆರೋಪಿತ ಅಧಿಕಾರಿ ಐಎಫ್‌ಎಸ್‌ ಆರ್‍‌ ಗೋಕುಲ್‌ ಅವರು ‘ ಈ ಪ್ರಕರಣದಲ್ಲಿ ತಮ್ಮನ್ನು ಬಲಿಪಶು ಮಾಡಲಾಗುತ್ತಿದೆ,’ ಎಂದು ಮುಖ್ಯ ಕಾರ್ಯದರ್ಶಿಗೆ ಬರೆದಿದ್ದಾರೆ ಎನ್ನಲಾಗಿರುವ ಪತ್ರವು ರಾಜಕೀಯ ವಲಯದಲ್ಲಿ ಮತ್ತೊಂದು ಸುತ್ತಿನ ಚರ್ಚೆಗೆ ಗ್ರಾಸವಾಗಲಿದೆ.

 

ಹೆಚ್ಎಂಟಿ ವಶದಲ್ಲಿರುವ ಅರಣ್ಯ ಜಮೀನಿಗೆ ಸಂಬಂಧಿಸಿದಂತೆ ವ್ಯಾಜ್ಯ ನಿರ್ವಹಣಾಧಿಕಾರಿಯಾಗಿ ನೇಮಕಗೊಂಡ ನಂತರ ಡಿನೋಟಿಫಿಕೇಷನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಅರಣ್ಯ ಸಚಿವಾಲಯವು ನೋಟೀಸ್‌ ಜಾರಿಗೊಳಿಸಿತ್ತು.

 

ಈ ನೋಟೀಸ್‌ಗೆ ಉತ್ತರ, ಸಮಜಾಯಿಷಿ ನೀಡಿರುವ ಗೋಕುಲ್‌ ಅವರು ‘Concerns and Victimization,‘ ಎಂದು ಮುಖ್ಯಕಾರ್ಯದರ್ಶಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿರುವುದು ಗೊತ್ತಾಗಿದೆ. ಈ ಮೂಲಕ ಸರ್ಕಾರದ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ ಎಂದು ಟಿಪ್ಪಣಿ ಹಾಳೆಯಲ್ಲಿ ಅಧಿಕಾರಿಗಳು ವಿವರಿಸಿದ್ದಾರೆ.

 

 

ನೋಟೀಸ್‌ ನೀಡಿರುವ ಸಂದರ್ಭವನ್ನು ಬೇಲಿಕೇರಿ ಬಂದರಿನಲ್ಲಿ ಕಬ್ಬಿಣ ಅದಿರು ಕಳವು ಪ್ರಕರಣ, ಆಡಳಿತ ಪಕ್ಷದ ಶಾಸಕರಿಗೆ ನ್ಯಾಯಾಲಯವು ಸಜೆ ವಿಧಿಸಿರುವ ತೀರ್ಪಿನ ಸಂದರ್ಭಕ್ಕೂ ತಳಕು ಹಾಕಿರುವುದು ತಿಳಿದು ಬಂದಿದೆ.

 

ಬಲಿಪಶುವೇ?

 

ಗೋಕುಲ್‌ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಬರೆದಿರುವ ತಮ್ಮ ಪತ್ರದಲ್ಲಿ ‘Concerns and Victimization,’ ಎಂದು ಉಲ್ಲೇಖಿಸಿ, ಬೇಲಿಕೇರಿ ಕಬ್ಬಿಣದ ಅದಿರು ಕಳವು ಪ್ರಕರಣದಲ್ಲಿ ತಾವು ಪ್ರಾಸಿಕ್ಯೂಷನ್‌ ಸಾಕ್ಷಿಯಾಗಿದ್ದು, ಹಾಲಿ ಆಡಳಿತ ಪಕ್ಷದ ಒಬ್ಬರು ಶಾಸಕರಿಗೆ 2024ರ ಅಕ್ಟೋಬರ್‍‌ 24ರಂದು ಸಜೆ ಆಗಿರುತ್ತದೆ. ಅದಾದ ಕೆಲವೇ ದಿನಗಳಲ್ಲಿ ಅಂದರೆ 2024ರ ನವೆಂಬರ್‍‌ 11ರಂದು ತಾವು ನೋಟೀಸ್‌ ನೀಡಿರುವುದಾಗಿ ಉಲ್ಲೇಖಿಸಿ ಸರ್ಕಾರದ ವಿರುದ್ಧವೇ ಗಂಭೀರ ಆರೋಪ ಮಾಡಿರುತ್ತಾರೆ ಎಂದು ಟಿಪ್ಪಣಿ ಹಾಳೆಯಲ್ಲಿ ಹೇಳಲಾಗಿದೆ.

 

ಬೆದರಿಕೆ ತಂತ್ರವೋ?

 

ಗೋಕುಲ್‌ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿನ ಅಂಶಗಳನ್ನು ಅರಣ್ಯ ಇಲಾಖೆಯು ತಳ್ಳಿ ಹಾಕಿದೆ. ನೋಟೀಸ್‌ ನೀಡಿರುವುದಕ್ಕೂ ಹಿಂದಿನ ಬೆಳವಣಿಗೆಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಸಾಬೀತುಪಡಿಸುವ ಅಂಶಗಳನ್ನು ಟಿಪ್ಪಣಿ ಹಾಳೆಯಲ್ಲಿ ಚರ್ಚಿಸಿರುವುದು ಗೊತ್ತಾಗಿದೆ.

 

ಅರಣ್ಯ ಸಚಿವರ ಕಾರ್ಯಾಲಯದ ಟಿಪ್ಪಣಿ (2024ರ ಸೆ. 24, ಟಿಪ್ಪಣಿ ಸಂಖ್ಯೆ ಅಜೀಪ/984/2024-25 e-8604601/2024 )ಯನ್ನು ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಕಳಿಸಿತ್ತು. ಇದರಲ್ಲಿ ಸಚಿವರ ಮತ್ತು ಸಚಿವ ಸಂಪುಟದ ಪೂರ್ವಾನುಮತಿ ಪಡೆಯದೇ ಸಾವಿರಾರು ಕೋಟಿ ರುಪಾಯಿ ಮೌಲ್ಯದ ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡಲು ಐ ಎ ಹಾಕಿರುವ ಎಲ್ಲ ಅಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್‌ ನೀಡಿ 7 ದಿನಗಳ ಒಳಗಾಗಿ ಉತ್ತರ ಪಡೆದು ಮುಂದಿನ ಕ್ರಮ ಜರುಗಿಸಲು ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿರುತ್ತದೆ ಎಂದು ವಿವರಣೆ ನೀಡಿರುವುದು ತಿಳಿದು ಬಂದಿದೆ.

 

 

‘ಅಂದರೇ ಆಡಳಿತ ಪಕ್ಷದ ಹಾಲಿ ಶಾಸಕರ ವಿರುದ್ಧವಾಗಿ ನ್ಯಾಯಾಲಯ ತೀರ್ಪು ಪ್ರಕಟಿಸುವ ಒಂದು ತಿಂಗಳುಗಳ ಮೊದಲೇ ಈ ಸೂಚನೆ ಅರಣ್ಯ ಸಚಿವಾಲಯದಿಂದ ಬಂದಿದ್ದು, ಆರ್‍‌ ಗೋಕುಲ್‌ ಅವರು ತಮ್ಮ ಕರ್ತವ್ಯ ಲೋಪ ಮುಚ್ಚಿಕೊಳ್ಳಲು ಸರ್ಕಾರದ ವಿರುದ್ಧವೇ ಗಂಭೀರ ಸ್ವರೂಪದದ ಮತ್ತು ಆಧಾರ ರಹಿತ ಆರೋಪ ಮಾಡುವಂತಹ ಉದ್ಧಟತನ ಪ್ರದರ್ಶಿಸಿರುತ್ತಾರೆ,’ ಎಂದು ವಿವರಿಸಿರುವುದು ಗೊತ್ತಾಗಿದೆ.

 

ಅಲ್ಲದೇ ಮೇಲಾಧಿಕಾರಿಗಳ ಪೂರ್ವಾನುಮತಿ ಪಡೆಯದೇ ಸರ್ಕಾರದ ವಿರುದ್ಧವೇ ಆರೋಪ ಮಾಡಿ ರಕ್ಷಣೆ ಕೋರಿ ಸಿಬಿಐಗೆ ಪತ್ರ ಬರೆದಿದ್ದಾರೆ. ಇದು ಕೂಡ ಅಶಿಸ್ತಿನ ಪರಮಾವಧಿಯಾಗಿದೆ. ನಿಯಮಬಾಹಿರವಾಗಿದೆ ಮತ್ತು ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಅನುಸರಿಸುತ್ತಿರುವ ಬೆದರಿಕೆ ತಂತ್ರವೆಂದೇ ಪರಿಗಣಿಸಬೇಕಾಗುತ್ತದೆ ಎಂದೂ ಟಿಪ್ಪಣಿ ಹಾಳೆಯಲ್ಲಿ ದಾಖಲಿಸಿರುವುದು ತಿಳಿದು ಬಂದಿದೆ.

Hot this week

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...
Please Scan to make Your Contribution

Topics

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

Related Articles

Popular Categories

error: Content is protected !!