Friday | March 27, 2026 |

ವಿದ್ಯಾರ್ಥಿ ವೇತನಕ್ಕೆ ಕೇಂದ್ರ ಅಡ್ಡಿ; ನೀತಿ ರೂಪಿಸದ ರಾಜ್ಯ, 4,254 ದಲಿತ ವಿದ್ಯಾರ್ಥಿಗಳಿಗೆ ಆಗಿದೆಯೇ ವಂಚನೆ?

Support THE-FILE

spot_img

ಬೆಂಗಳೂರು; ಭಾರತ ಸರ್ಕಾರದ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮದ ಮ್ಯಾನೇಜ್‌ಮೆಂಟ್‌ ಕೋಟಾದಡಿ ಆಯ್ಕೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಕೇಂದ್ರ ಸರ್ಕಾರವು ಹಿಂದೆ ಸರಿದಿದ್ದ ಕಾರಣ ಸುಮಾರು 4,254 ದಲಿತ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅಡ್ಡಿಯಾಗಿತ್ತು. ಈ ಸಂಖ್ಯೆಯು ಪ್ರಸಕ್ತ ಸಾಲಿನಲ್ಲಿ ದುಪ್ಪಟ್ಟುಗೊಂಡಿರುವುದು ಇದೀಗ ಬಹಿರಂಗವಾಗಿದೆ.

 

ಅಲ್ಲದೇ ಕೇಂದ್ರ ಸರ್ಕಾರದ ಪಾಲನ್ನೂ ರಾಜ್ಯ ಸರ್ಕಾರವೇ ಭರಿಸಲು ಮುಂದಾದಲ್ಲಿ ಹೆಚ್ಚುವರಿಯಾಗಿ ಆರ್ಥಿಕ ಪರಿಣಾಮಗಳು ಬೀರಲಿವೆ ಎಂದು ಹಿಂದಿನ ಬಿಜೆಪಿ ಸರ್ಕಾರದಲ್ಲಿ ಆರ್ಥಿಕ ಇಲಾಖೆಯು ಅಭಿಪ್ರಾಯಿಸಿತ್ತು.

 

ಈ ಬಗ್ಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾವುದೇ ನಿರ್ಧಾರಗಳು ಹೊರಬಂದಿರಲಿಲ್ಲ.  ಕೇಂದ್ರ ಮತ್ತು ರಾಜ್ಯದ ಸರ್ಕಾರದ ಈ ನಿರ್ಧಾರದಿಂದಾಗಿ ಕಳೆದ ಎರಡು ವರ್ಷದಲ್ಲಿ  ಅಂದಾಜು 4,254ಕ್ಕೂ ಹೆಚ್ಚು  ವಿದ್ಯಾರ್ಥಿಗಳು, ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಸೌಲಭ್ಯದಿಂದ ವಂಚಿತರಾಗಿದ್ದರು. ಮತ್ತು ಹಾಸ್ಟೆಲ್‌ ಪ್ರವೇಶದಿಂದಲೂ ನಿರಾಕರಣೆಗೆ ಒಳಗಾಗಿದ್ದರು!

 

2021, 2022ರ ಅವಧಿಯಿಂದಲೂ ಈ ಪ್ರಸ್ತಾವನೆಯನ್ನು ಸಮಾಜ ಕಲ್ಯಾಣ ಇಲಾಖೆಯು ಆರ್ಥಿಕ ಇಲಾಖೆಗೆ ಸಲ್ಲಿಸುತ್ತಲೇ ಬಂದಿದೆ. ಆದರೆ ಕಳೆದ ಮೂರು ವರ್ಷಗಳಿಂದಲೂ ಮ್ಯಾನೇಜ್‌ಮೆಂಟ್‌ ಕೋಟಾದಡಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ  ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಸೌಲಭ್ಯ ನೀಡುವ ವಿಷಯವು ಇತ್ಯರ್ಥಗೊಂಡಿಲ್ಲ. ಅಲ್ಲದೇ ಮ್ಯಾನೇಜ್‌ಮೆಂಟ್‌ ಕೋಟಾದ ವಿದ್ಯಾರ್ಥಿಗಳು ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆಯದೇ ಇರುವ ಕಾರಣ ಅವರನ್ನು ವಿದ್ಯಾರ್ಥಿ ನಿಲಯದಲ್ಲಿಯೂ ಪ್ರವೇಶ ಕಲ್ಪಿಸಿಲ್ಲ.

 

ಈ ಕುರಿತು ‘ದಿ ಫೈಲ್‌’, 260 ಪುಟಗಳನ್ನೊಳಗೊಂಡ ಸಮಗ್ರ ಕಡತವನ್ನು ಆರ್‍‌ಟಿಐ ಅಡಿಯಲ್ಲಿ ಪಡೆದುಕೊಂಡಿದೆ.

 

ಏನದು ಯೋಜನೆ?

 

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪಿಯುಸಿ ಹಾಗೂ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ ವಿದ್ಯಾರ್ಥಿಗಳಿಗೆ ಕೇಂದ್ರ ಪುರಸ್ಕೃತ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮವು ಜಾರಿಯಲ್ಲಿದೆ.  ಕೇಂದ್ರ ಸರ್ಕಾರವು ಶೇ.  60 ಮತ್ತು ರಾಜ್ಯ ಸರ್ಕಾರವು ಶೇ. 40ರ ಅನುಪಾತದಲ್ಲಿ ಈ ಯೋಜನೆಯು ಅನುಷ್ಠಾನಗೊಂಡಿದೆ.

 

 

ಈ ಸಂಬಂಧ ಕೇಂದ್ರ ಸರ್ಕಾರವು ಮಾರ್ಗಸೂಚಿಗಳನ್ನು ಹೊರಡಿಸಿತ್ತು. 2020-21ರ ಪೂರ್ವದಲ್ಲಿ ಮ್ಯಾನೇಜ್‌ಮೆಂಟ್‌ ಕೋಟಾದಡಿ ದಾಖಲಾಗಿದ್ದ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ವಿದ್ಯಾರ್ಥಿ ವೇತನ ಮಂಜೂರಾಗಿತ್ತು. ಅಲ್ಲದೇ ಅವರ ಕೋರ್ಸ್‌ ಮುಗಿಯುವರೆಗೂ ಅವರಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದಿದ್ದರು. ಆದರೆ  2020-21ನೇ ಸಾಲಿನಿಂದ ಮ್ಯಾನೇಜ್‌ಮೆಂಟ್‌ ಕೋಟಾದಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳು ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದಿರಲಿಲ್ಲ.

 

2018-19, 2019-20ನೇ ಸಾಲಿನಲ್ಲಿ ಮ್ಯಾನೇಜ್‌ಮೆಂಟ್‌ ಕೋಟಾದಡಿಯ ದಾಖಲಾಗಿದ್ದ ವಿದ್ಯಾರ್ಥಿಗಳಿಗೆ ಅವರ ವ್ಯಾಸಂಗ ಮುಗಿಯುವವರೆಗೆ ವಿದ್ಯಾರ್ಥಿ ವೇತನ ಮಂಜೂರಾತಿಗೆ ಸಂಬಂಧಿಸಿದಂತೆ ಸರ್ಕಾರದಿಂದ  ಪ್ರತ್ಯೇಕ ಆದೇಶಗಳನ್ನು  ಹೊರಡಿಸಿತ್ತು. ಈ ಆದೇಶಗಳ ಪ್ರಕಾರ ಮ್ಯಾನೇಜ್‌ಮೆಂಟ್‌ ಕೋಟಾದಡಿ ಪ್ರವೇಶ ಪಡೆದಿದ್ದರೂ ಸಹ ಅಂತಹ ಕೋರ್ಸ್‌ಗಳಿಗೆ ಸರ್ಕಾರವು ಸರ್ಕಾರಿ ಸೀಟುಗಳಿಗೆ ನಿಗದಿ ಮಾಡಿದ್ದ ಶುಲ್ಕಗಳನ್ನು ಮಾತ್ರ ಮಂಜೂರು ಮಾಡಲು ಸೂಚಿಸಿತ್ತು.

 

ಇದರ ಪ್ರಕಾರ 2020-21ನೇ ಸಾಲಿನವರೆಗೂ ರಾಜ್ಯದ ಬೇಡಿಕೆಯಂತೆ ತನ್ನ ಪಾಲಿನ ಶೇ. 60ರಷ್ಟು ಹಣವನ್ನು ಕೇಂದ್ರವು ರಾಜ್ಯದ ಖಜಾನೆಗೆ ವರ್ಗಾವಣೆ ಮಾಡುತ್ತಿತ್ತು. ರಾಜ್ಯ ತನ್ನ ಪಾಲಿನ ಮೊತ್ತವಾದ ಶೇ.40ನ್ನು ಸೇರಿಸಿ ವಿದ್ಯಾರ್ಥಿ ವೇತನ ಮಂಜೂರು ಮಾಡುತ್ತಿತ್ತು. ಆದರೆ 2021-22ನೇ ಸಾಲಿನಿಂದ ಭಾರತ ಸರ್ಕಾರವೇ ನೇರವಾಗಿ ತನ್ನ ಪಾಲಿನ ಶೇ. 60ರಷ್ಟು ಅನುದಾನವನ್ನು ವಿದ್ಯಾರ್ಥಿಯ ಖಾತೆಗೆ ಜಮಾ ಮಾಡುತ್ತಿದೆ.

 

ಕೇಂದ್ರದಿಂದಲೇ ಅರ್ಜಿ ತಿರಸ್ಕೃತ

 

ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಪ್ರತಿಯೊಂದು ವಿದ್ಯಾರ್ಥಿಯ ಅರ್ಜಿಯನ್ನು ಎನ್‌ಎಸ್‌ಪಿ ತಂತ್ರಾಂಶದಲ್ಲಿ ಮರು ಪರಿಶೀಲಿಸುತ್ತಿತ್ತು. ನಂತರ ವಿದ್ಯಾರ್ಥಿ ವೇತನ ಮಂಜೂರು ಮಾಡುತ್ತಿತ್ತು. ಈ ಪದ್ಧತಿಯಲ್ಲಿ ಮ್ಯಾನೇಜ್‌ಮೆಂಟ್‌ ಕೋಟಾದಡಿ ಸೀಟು ಪಡೆದ ವಿದ್ಯಾರ್ಥಿಗೆ ರಾಜ್ಯ ಸರ್ಕಾರವು  ಒಂದು ವೇಳೆ ವಿದ್ಯಾರ್ಥಿ ವೇತನ ಮಂಜೂರು ಮಾಡಿದರೂ ಸಹ ಕೇಂದ್ರ ಸರ್ಕಾರವು ಅಂತಹ ಪ್ರಕರಣಗಳನ್ನು ತಿರಸ್ಕರಿಸುತ್ತದೆ.

 

ಕಳೆದ 2 ವರ್ಷಗಳಿಂದ ಒಟ್ಟಾರೆಯಾಗಿ 4,254 ವಿದ್ಯಾರ್ಥಿಗಳು ಮ್ಯಾನೇಜ್‌ಮೆಂಟ್‌ ಕೋಟಾದಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದರು. ಇದರ ಪ್ರಕಾರ ಒಟ್ಟು ಮೊತ್ತ   13,21,87,437 ರು.ಗಳಾಗುತ್ತವೆ. ಈ ಪ್ರಸ್ತಾವನೆ ಪ್ರಕಾರ ವಾರ್ಷಿಕವಾಗಿ 13.00 ಕೋಟಿ ರು.ಗಳಿಂದ 15.00 ಕೋಟಿ ರುವರೆಗೆ ರಾಜ್ಯ ತನ್ನ ಪಾಲಿನಲ್ಲಿಯೇ ಪೂರ್ಣ ಅನುದಾನ ಭರಿಸಬೇಕಿದೆ. ಆದರೆ 2020-21 ಹಾಗೂ 2021-22ನೇ ಸಾಲಿನಲ್ಲಿ ಮ್ಯಾನೇಜ್‌ಮೆಂಟ್‌ ಕೋಟಾದಡಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ತಿರಸ್ಕರಿಸಿರುವುದು ಕಡತದ ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

 

 

ಇದನ್ನು ಪ್ರಶ್ನಿಸಿರುವ ಅನೇಕ ಕಾಲೇಜುಗಳು ಮ್ಯಾನೇಜ್‌ಮೆಂಟ್‌ ಶುಲ್ಕವನ್ನು ಪಾವತಿಸಬೇಕು ಎಂದು ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಗಳನ್ನೂ ಸಲ್ಲಿಸಿರುವುದು ಗೊತ್ತಾಗಿದೆ.

 

 

4,254 ದಲಿತ  ವಿದ್ಯಾರ್ಥಿಗಳಿಗೆ ತೊಂದರೆ

 

ಕೇಂದ್ರ ಸರ್ಕಾರವು ಇತ್ತೀಚೆಗೆ ಹೊರಡಿಸಿರುವ ನಿರ್ದೇಶನದ ಪ್ರಕಾರ 2020-21ನೇ ಸಾಲಿನಿಂದ ಕಡುಬಡವರಾದ ಪರಿಶಿಷ್ಟ ಜಾತಿಯ ಕಾಲೇಜು ಹಂತದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರಾಗಿಲ್ಲ. ಮ್ಯಾನೇಜ್‌ಮೆಂಟ್‌ ಕೋಟಾದಡಿಯಲ್ಲಿ ಪ್ರವೇಶ ಪಡೆದಿರುವ ಸುಮಾರು 4,254 ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.  ಇದಕ್ಕಾಗಿ ಅಗತ್ಯವಿರುವ 13.50 ಕೋಟಿ ರು.ಗಳನ್ನು ಎಸ್‌ಸಿಎಸ್‌ಪಿಯ ವಿಡಿಪಿಯಲ್ಲಿ ಒದಗಿಸಿಕೊಂಡು ಅನುದಾನ ಬಿಡುಗಡೆ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿತ್ತು.

 

 

ರಾಜ್ಯದಿಂದಲೇ ಶೇ.100ರಷ್ಟು ಪಾವತಿಗೆ ಕೋರಿಕೆ

 

‘ಪ್ರತಿ ವರ್ಷ ಅಂದಾಜು 4,500ರಿಂದ 5,000 ವಿದ್ಯಾರ್ಥಿಗಳು ಮ್ಯಾನೇಜ್‌ಮೆಂಟ್‌ ಕೋಟಾದಡಿ ಪ್ರವೇಶ ಪಡೆಯುತ್ತಿದ್ದಾರೆ. ಈ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ನಿರ್ವಹಣೆ ವೆಚ್ಚವನ್ನು ಪಾವತಿಸಲು ವಾರ್ಷಿಕವಾಗಿ 15.00 ಕೋಟಿ ಅವಶ್ಯಕತೆ ಇದೆ. ಕೇಂದ್ರ ಸರ್ಕಾರವು ಮ್ಯಾನೇಜ್‌ಮೆಂಟ್‌ ಕೋಟಾ ವಿದ್ಯಾರ್ಥಿಗಳಿಗೆ ಯಾವುದೇ ವಿದ್ಯಾರ್ಥಿ ವೇತನ ಮಂಜೂರು ಮಾಡದ ಕಾರಣ ಈ ಅರ್ಜಿಗಳನ್ನು 4,254 ಅರ್ಜಿಗಳನ್ನು ಶೇ.60ರ ಪಾವತಿಗಾಗಿ ಕೇಂದ್ರ ಸರ್ಕಾರಕ್ಕೆ ವರ್ಗಾಯಿಸಲು ಸಾಧ್ಯವಿಲ್ಲ. ಈ ಎಲ್ಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವೇ ಶೇ.100ರಷ್ಟು ವಿದ್ಯಾರ್ಥಿ ವೇತನವನ್ನು ಪಾವತಿಸಬೇಕು. ಇದಕ್ಕಾಗಿ ಹೆಚ್ಚುವರಿಯಾಗಿ 15.00 ಕೋಟಿ ರು.ಗಳನ್ನು ಆರ್ಥಿಕ ಇಲಾಖೆಯಿಂದ ಹಂಚಿಕೆ ಮಾಡಿಸಿಕೊಳ್ಳಬೇಕಿದೆ,’ ಎಂದು ಪ್ರಸ್ತಾವನೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯು ಕೋರಿತ್ತು.

 

ಹಾಸ್ಟೆಲ್‌ಗಳಿಗೂ ಪ್ರವೇಶ ಕಲ್ಪಿಸಿಲ್ಲ

 

ಅಲ್ಲದೇ ಮ್ಯಾನೇಜ್‌ಮೆಂಟ್‌ ಕೋಟಾದ ವಿದ್ಯಾರ್ಥಿಗಳು ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆಯದೇ ಇರುವ ಕಾರಣ ಅವರನ್ನು ವಿದ್ಯಾರ್ಥಿ ನಿಲಯದಲ್ಲಿಯೂ ಪ್ರವೇಶ ಕಲ್ಪಿಸಿರಲಿಲ್ಲ.

 

 

ಒಂದು ವೇಳೆ ಎಲ್ಲಾ 5,000 ವಿದ್ಯಾರ್ಥಿಗಳು ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿಯೇ ಪ್ರವೇಶ ಪಡೆದಲ್ಲಿ 15.00 ಕೋಟಿ ವಿದ್ಯಾರ್ಥಿ ವೇತನದ ಮೊತ್ತದ ಜತೆಗೆ ಇಬಿಎಲ್‌ ಲೆಕ್ಕ ಶೀರ್ಷಿಕೆಯಡಿ ಹೆಚ್ಚುವರಿಯಾಗಿ 8.5 ಕೋಟಿ ರು ಅವಶ್ಯವಾಗಿರುತ್ತದೆ ಎಂದು ಪ್ರಸ್ತಾವನೆಯಲ್ಲಿ ಕೋರಿತ್ತು. ಅಲ್ಲದೇ ಇದು ಮುಂದಿನ ಆರ್ಥಿಕ ವರ್ಷಗಳಲ್ಲಿ ಹೆಚ್ಚಾಗುವ ಸಾಧ್ಯತೆಯೂ ಇದೆ ಎಂದೂ ವಿವರಿಸಿತ್ತು.

Hot this week

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

Topics

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

Related Articles

Popular Categories

error: Content is protected !!