Wednesday | May 13, 2026 |

ಹಣ ವಸೂಲಿ, ಕ್ರಿಪ್ಟೋ ಕರೆನ್ಸಿಯಲ್ಲಿಯೂ ಹೂಡಿಕೆ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಬಿಡುಗಡೆಯಾದ ಪತ್ರಿಕಾ ಹೇಳಿಕೆ

ಬೆಂಗಳೂರು; ಲೋಕಾಯುಕ್ತ ಹೆಸರು ಹೇಳಿ ಸರ್ಕಾರಿ ಅಧಿಕಾರಿಗಳಿಂದ ಕೋಟ್ಯಂತರ ರುಪಾಯಿ ವಸೂಲು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ  ಆರೋಪಿ ನಿಂಗಪ್ಪ ಅಬಕಾರಿ ಇಲಾಖೆಯ ವಿವಿಧ ಅಧಿಕಾರಿಗಳಿಂದ ಕಳೆದ 6 ತಿಂಗಳಿನಿಂದಲೂ  ಹಣವನ್ನು ವಸೂಲಿ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

 

ಈ ಪ್ರಕರಣವು ಅಧಿಕಾರಿಗಳ ವಲಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗುತ್ತಿದ್ದಂತೆ  ಲೋಕಾಯುಕ್ತ ಪೊಲೀಸ್‌ ವಿಭಾಗವು ಇದೀಗ ಅಧಿಕೃತವಾಗಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

 

ಬಂಧಿತ ಆರೋಪಿ ನಿಂಗಪ್ಪ  ಎಂಬಾತನೊಂದಿಗೆ ಹಾಲಿ ರಾಜ್ಯ ಸರ್ಕಾರದ ಪ್ರಭಾವಿ ಮೂವರು ಸಚಿವರ ಆಪ್ತ ಕಾರ್ಯದರ್ಶಿಗಳು ನಿಕಟ ಸಂಪರ್ಕ ಹೊಂದಿದ್ದರು ಮತ್ತು ಸಚಿವರುಗಳ ಆಪ್ತ ಕಾರ್ಯದರ್ಶಿಗಳೊಂದಿಗೆ ನಂಟು ಹೊಂದಿದ್ದ ಎಂದು ಹೇಳಲಾಗಿತ್ತು.

 

ಅಲ್ಲದೇ ಆರೋಪಿ ನಿಂಗಪ್ಪ ಎಂಬಾತನು 6 ತಿಂಗಳಿನಿಂದಲೂ  ಅಧಿಕಾರಿಗಳಿಂದ ವಸೂಲಿ ಮಾಡಿದ್ದ ಹಣವನ್ನು ಕ್ರಿಪ್ಟೋ ಕರೆನ್ಸಿಯಲ್ಲಿಯೂ ಹೂಡಿಕೆ ಮಾಡಿದ್ದ ಎಂದು ‘ದಿ ಫೈಲ್‌’, ವರದಿ ಪ್ರಕಟಿಸಿತ್ತು. ಈ  ವರದಿಯು ಅಧಿಕಾರಿ ವರ್ಗದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

 

 

ಇದೀಗ ಲೋಕಾಯುಕ್ತ ಪೊಲೀಸ್‌ ವಿಭಾಗವು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿಯೂ ಕ್ರಿಪ್ಟೋ ಕರೆನ್ಸಿಯಲ್ಲಿ ಆರೋಪಿಯು ಹೂಡಿಕೆ ಮಾಡಿದ್ದಾನೆ ಎಂದು ಅಧಿಕೃತವಾಗಿ ಹೇಳಲಾಗಿದೆ.

 

 

ಇದು ‘ದಿ ಫೈಲ್‌’, ವರದಿಗೆ ಮತ್ತಷ್ಟು ಬಲ ಬಂದಂತಾಗಿದೆ.

 

ಲೋಕಾ ಹೆಸರಿನಲ್ಲಿ ವಸೂಲಿ; ಬಂಧಿತ ಆರೋಪಿಯೊಂದಿಗೆ ಮೂವರು ಸಚಿವರ ಆಪ್ತ ಕಾರ್ಯದರ್ಶಿಗಳ ನಂಟು?

 

ಈ ವರದಿಯ ಬೆನ್ನಲ್ಲೇ ಲೋಕಾಯುಕ್ತ ಪೊಲೀಸ್‌ ವಿಭಾಗವು ಇದೀಗ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯೂ ಮುನ್ನೆಲೆಗೆ ಬಂದಿದೆ.

 

ಪತ್ರಿಕಾ ಹೇಳಿಕೆಯಲ್ಲೇನಿದೆ?

 

ಆರೋಪಿ ನಿಂಗಪ್ಪ ಅಬಕಾರಿ ಇಲಾಖೆಯ ವಿವಿಧ ಅಧಿಕಾರಿಗಳಿಂದ ಕಳೆದ 6 ತಿಂಗಳಿನಿಂದ ಹಣವನ್ನು ವಸೂಲಿ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಈ ರೀತಿ ವಸೂಲಿ ಮಾಡಿದ ಹಣವನ್ನು ತನ್ನ ಹಾಗೂ ತನ್ನಸಂಬಂಧಿಕರುಗಳ ಹೆಸರಿನಲ್ಲಿ ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿರುತ್ತೇನೆಂದು ಒಪ್ಪಿಕೊಂಡಿರುತ್ತಾನೆ ಎಂದು ಹೇಳಲಾಗಿದೆ.

 

‘ಆತನ ಮೊಬೈಲ್‌ನ್ನು ಪರಿಶೀಲಿಸಲಾಗಿ ಸುಮಾರು 13 ಕ್ರಿಪ್ಟೋ ವ್ಯಾಲೆಟ್‌ಗಳಲ್ಲಿ ಹಣವನ್ನು ಹೂಡಿಕೆ ಮಾಡಿರುವುದು ಕಂಡು ಬಂದಿದೆ. ಹಣದ ಮೂಲ ಪತ್ತೆ ಹಚ್ಚುವ ಸಲುವಾಗಿ ಸದರಿ ವ್ಯಾಲೆಟ್‌ಗಳನ್ನು ಫ್ರೀಜ್‌ ಆಡಿ ತನಿಖೆ ಮುಂದುವರೆಸಲಾಗಿದೆ,’ ಎಂದು ವಿವರಿಸಿದೆ.

 

ಅಬಕಾರಿ ಇಲಾಖೆಯ ಯಾವ ಯಾವ ಅಧಿಕಾರಿಗಳು ಆರೋಪಿ ನಿಂಗಪ್ಪನಿಗೆ ಎಷ್ಟೆಷ್ಟು  ಹಣ ನೀಡುರುತ್ತಾರೆ ಎಂಬ ಬಗ್ಗೆ ತನಿಖೆಯನ್ನು ಮುಂದುವರೆಸಲಾಗಿದೆ. ಆರೋಪಿಯೊಂದಿಗೆ ಬೇರೆ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ವಾಟ್ಸ್‌ಪ್ ಸಂದೇಶಗಳು, ಕರೆಗಳ ವಿವರಗಳು ಮತ್ತು ವಾಟ್ಸ್‌ಪ್ ಕರೆಗಳ ವಿವರಗಳನ್ನು ಪರಿಶೀಲಿಸುತ್ತಿದ್ದು ಶಾಮೀಲಾಗಿರುವ ಬಗ್ಗೆ ಮಾಹಿತಿಯನ್ನು ಕಲೆ ಹಾಕಲಾಗುತ್ತಿರುತ್ತದೆ ಎಂದು ತಿಳಿಸಿದೆ.

 

ಲೋಕಾಯುಕ್ತ ಹೆಸರು ಹೇಳಿ ಸರ್ಕಾರಿ ಅಧಿಕಾರಿಗಳಿಂದ ಕೋಟ್ಯಂತರ ರುಪಾಯಿ ವಸೂಲು ಮಾಡಿರುವ ಪ್ರಕರಣದಲ್ಲಿ ಬಂಧಿತ ಆರೋಪಿ ನಿಂಗಪ್ಪ ಎಂಬಾತನೊಂದಿಗೆ ಹಾಲಿ ರಾಜ್ಯ ಸರ್ಕಾರದ ಪ್ರಭಾವಿ ಮೂವರು ಸಚಿವರ ಆಪ್ತ ಕಾರ್ಯದರ್ಶಿಗಳು ನಿಕಟ ಸಂಪರ್ಕ ಹೊಂದಿದ್ದಾರೆ ಎಂದು ಹೇಳಲಾಗಿತ್ತು.

 

ಅಲ್ಲದೇ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಎಸ್ಪಿ ಶ್ರೀನಾಥ ಜೋಷಿ ಅವರೊಂದಿಗೆ ಮುಖ್ಯಮಂತ್ರಿ ಸಚಿವಾಲಯದ ಉನ್ನತ ಅಧಿಕಾರಿಗಳಿಬ್ಬರು  ನಿಕಟ ಸಂಪರ್ಕ ಹೊಂದಿದ್ದರು ಮತ್ತು  ಕೆಲವು ಪ್ರಕರಣಗಳಲ್ಲಿ ಅವರು  ನೆರವು ಕೋರಿದ್ದರು ಎಂದು ತಿಳಿದು ಬಂದಿತ್ತು.

 

ವಜಾಗೊಂಡಿರುವ ಮುಖ್ಯ ಪೇದೆ ನಿಂಗಪ್ಪ ಎಂಬಾತನು  8ಕ್ಕೂ ಹೆಚ್ಚು ಕೆಎಎಸ್‌ ಅಧಿಕಾರಿಗಳಿಂದ ಹಣ ವಸೂಲು ಮಾಡಿದ್ದ ಎಂದು ಹೇಳಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಮುಂದೆ,  ಸಚಿವರುಗಳ ಆಪ್ತ ಕಾರ್ಯದರ್ಶಿಗಳ ಹೆಸರು ಸೇರಿದಂತೆ ಹಲವರ ಹೆಸರುಗಳನ್ನು ಬಾಯ್ಬಿಟ್ಟಿದ್ದಾನೆ ಎಂದು ಹೇಳಲಾಗಿತ್ತು.

 

ಬಂಧಿತ ಆರೋಪಿ ಕೋಟ್ಯಂತರ ರೂ.ವಸೂಲಿ ಮಾಡಿರುವ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಯು ಹಲವು ಪುರಾವೆ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಶಿ ಅವರನ್ನು ಎತ್ತಂಗಡಿ ಮಾಡಲಾಗಿತ್ತು.

 

ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ?

 

ಹಣ ವಸೂಲು ಮಾಡುತ್ತಿದ್ದ ಎಂದು ಹೇಳಲಾಗಿರುವ ಆರೋಪಿತ ನಿಂಗಪ್ಪ , ಲೋಕಾಯುಕ್ತದ ಕೆಲವು ಅಧಿಕಾರಿಗಳಿಂದ ಕ್ರಿಪ್ಟೋ ಕರೆನ್ಸಿಯಲ್ಲಿಯೂ ಹೂಡಿಕೆ ಮಾಡಿಸಿದ್ದ. ಬೆಂಗಳೂರು ನಗರ ಹೊರತುಪಡಿಸಿ ಉಳಿದ ಜಿಲ್ಲೆಗಳ ಲೋಕಾ ಎಸ್ಪಿಗಳಿಂದಲೂ ಕ್ರಿಪ್ಟೋ ಕರೆನ್ಸಿಯಲ್ಲಿ ಮಧ್ಯವರ್ತಿಗಳ ಮೂಲಕ ಹೂಡಿಕೆ ಮಾಡಿಸಿದ್ದ ಎಂಬ ಆಪಾದನೆ ಕೇಳಿ ಬಂದಿತ್ತು.

 

ಅಬಕಾರಿ ಡಿಸಿಗಳಿಂದ ತಿಂಗಳಿಗೆ ಲಕ್ಷಕ್ಕೂ ಹೆಚ್ಚು ವಸೂಲಿ!

 

ಹಣಕ್ಕಾಗಿ ಬೇಡಿಕೆ ಮತ್ತು ಹಣ ನೀಡದೇ ಇದ್ದ ಹಲವು ಅಧಿಕಾರಿಗಳಿಗೆ ಬೆದರಿಕೆಯೊಡ್ಡಿದ್ದಾನೆ ಎಂದು ಆರೋಪಿತನಾಗಿರುವ ನಿಂಗಪ್ಪ, ಅಬಕಾರಿ ಡಿಸಿಗಳಿಂದ ತಿಂಗಳಿಗೆ ಲಕ್ಷಕ್ಕೂ ಹೆಚ್ಚು ವಸೂಲು ಮಾಡಿದ್ದಾನೆ ಎಂಬ ಆಪಾದನೆ ಕೇಳಿ ಬಂದಿದೆ. ವಿಜಯನಗರ ಮೆಟ್ರೋ ಸ್ಟೇಷನ್‌, ಜೀವನ್‌ ಭೀಮಾ ನಗರ, ಎಂ ಜಿ ರಸ್ತೆ, ಜೆಡಿಎಸ್‌ನ ಹಳೇ ಕಚೇರಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಹಣವನ್ನು ವಸೂಲು ಮಾಡಿದ್ದ ಎಂದು ಹೇಳಲಾಗಿತ್ತು.

 

ಅಬಕಾರಿ ಹಗರಣವೊಂದರಲ್ಲಿ ಸಿಲುಕಿದ್ದಾರೆ ಎಂದು ಹೇಳಲಾಗಿರುವ 100ಕ್ಕೂ ಹೆಚ್ಚು ಅಬಕಾರಿ ಅಧಿಕಾರಿಗಳಿಂದ ತಿಂಗಳಿಗೆ ತಲಾ 1 ಲಕ್ಷ ರು ನಂತೆ ವಸೂಲು ಮಾಡಲಾಗುತ್ತಿತ್ತು. ಈ ಮಧ್ಯೆ ಇದೇ ಹಗರಣಕ್ಕೆ ಸಂಬಂಧಿಸಿದಂತೆ ಕೆಲವು ಅಬಕಾರಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸ್‌ ವಿಭಾಗದ ಮತ್ತೊಬ್ಬ ಎಸ್‌ಪಿಯೊಬ್ಬರು ಮೊಕದ್ದಮೆ ದಾಖಲಿಸಿದ್ದರು ಎಂದು ತಿಳಿದು ಬಂದಿತ್ತು.

 

ಕೋಟ್ಯಂತರ ರು. ಕಪ್ಪುಹಣ ವರ್ಗಾವಣೆ; ಅಶ್ವಿನ್‌ ಕುಕೃತ್ಯದ ಬಗ್ಗೆ ಸಾಕ್ಷ್ಯ ನುಡಿದ ಇ ಡಿ ಉಪ ನಿರ್ದೇಶಕ

 

ಪ್ರತಿ ತಿಂಗಳೂ ತಲಾ 1 ಲಕ್ಷ ರು ನೀಡುತ್ತಿದ್ದರೂ ಸಹ ಮೊಕದ್ದಮೆ ದಾಖಲಾಗಿದ್ದಕ್ಕೆ ಈಗಾಗಲೇ ಹಣ ಕೊಟ್ಟಿದ್ದ ಅಧಿಕಾರಿಗಳು ಆರೋಪಿತ ನಿಂಗಪ್ಪ ವಿರುದ್ಧ ತಿರುಗಿ ಬಿದ್ದಿದ್ದರು ಎಂದು ಗೊತ್ತಾಗಿದೆ.

 

ಬಿಡಿಎ, ಅಬಕಾರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಲೋಕಾಯುಕ್ತ ದಾಳಿ, ಅಕ್ರಮ ಆಸ್ತಿ ಗಳಿಕೆ ಆರೋಪದ ಮೇರೆಗೆ ಕರೆ ಮಾಡಿ ಹಣ ವಸೂಲಿ ಮಾಡುತ್ತಿದ್ದ ಆರೋಪ ಪ್ರಕರಣದಲ್ಲಿ ಆರೋಪಿ ನಿಂಗಪ್ಪನನ್ನು ಕೆಲ ದಿನಗಳ ಹಿಂದೆ ಲೋಕಾಯುಕ್ತ ಎಸ್ಪಿ ಕೋನ ವಂಶಿಕೃಷ್ಣ ನೇತೃತ್ವದ ತಂಡ ಬಂಧಿಸಿತ್ತು.
ಆರೋಪಿ ನಿಂಗಪ್ಪನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿತ್ತು.

 

ನಿಂಗಪ್ಪ, ಮೂಲತಃ ಚಿತ್ರದುರ್ಗದ ಹೊಸದುರ್ಗದಲ್ಲಿ ಕಾರ್ಯನಿರ್ವಹಿಸಿದ್ದ. ಆ ಅವಧಿಯಲ್ಲಿಯೇ ಲೋಕಾಯುಕ್ತ ಎಸ್ಪಿ ಶ್ರೀನಾಥ ಜೋಷಿ ಅವರು ಸಹ ಚಿತ್ರದುರ್ಗದಲ್ಲಿ ಕಾರ್ಯನಿರ್ವಹಿಸಿದ್ದರು. ಆಗಿನಿಂದಲೂ ನಿಂಗಪ್ಪ ಸಂಪರ್ಕದಲ್ಲಿದ್ದ ಎಂದು ಹೇಳಲಾಗಿತ್ತು.

 

ಕೆಲ ವರ್ಷಗಳ ಹಿಂದೆ ನಿಂಗಪ್ಪ, ಸೇವೆಯಿಂದ ವಜಾಗೊಂಡಿದ್ದ. ಬಳಿಕ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಸರಕಾರಿ ಅಧಿಕಾರಿಗಳನ್ನು ಬೆದರಿಸಿ ಸುಲಿಗೆಯನ್ನೇ ವೃತ್ತಿ ಮಾಡಿಕೊಂಡಿದ್ದ. ಈ ಸಂಬಂಧ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಹಲವು ಬಾರಿ ಜೈಲು ಸೇರಿದ್ದ ಎಂದು ತಿಳಿದು ಬಂದಿದೆ.

 

ಲೋಕಾ ಪೊಲೀಸರ ಶೋಧ; ಬರಿಗೈಯಲ್ಲಿ ಮರಳಿದ ಪೊಲೀಸರು, ತಲೆಮರೆಸಿಕೊಂಡಿದ್ದಾರೆಯೇ ಜೋಷಿ?

ವಿಶೇಷವೆಂದರೇ ಸಿದ್ದರಾಮಯ್ಯ ಅವರು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿಯೂ ಲೋಕಾಯುಕ್ತರಾಗಿದ್ದ ಭಾಸ್ಕರರಾವ್‌ ಅವರ ಪುತ್ರ ಮತ್ತು ಲೋಕಾಯುಕ್ತ ಸಂಸ್ಥೆಯ ಅಧಿಕಾರಿಗಳು ಹಲವರಿಂದ ಹಣಕ್ಕಾಗಿ ಬೇಡಿಕೆ ಇರಿಸಿದ್ದರು. ಆ ಸಂದರ್ಭದಲ್ಲಿ ಲೋಕಾಯುಕ್ತ ಎಸ್ಪಿಯಾಗಿದ್ದ ಸೋನಿಯಾ ನಾರಂಗ್ ಅವರು ಈ ಪ್ರಕರಣವನ್ನು ಬಹಿರಂಗಪಡಿಸಿದ್ದರು. ಅಲ್ಲದೇ ಲೋಕಾಯುಕ್ತ ಹುದ್ದೆಗೆ ಭಾಸ್ಕರರಾವ್‌ ಅವರು ರಾಜೀನಾಮೆ ನೀಡಿದ್ದರು. ಹಾಗೂ ಅವರ ಪುತ್ರ ಅಶ್ವಿನ್‌ ರಾವ್‌ ಸಹ ಪೊಲೀಸರ ಬಂಧನಕ್ಕೆ ಒಳಗಾಗಿದ್ದ.

 

ಈ ಪ್ರಕರಣದ ನಂತರ ಲೋಕಾಯುಕ್ತಕ್ಕಿದ್ದ ಪೊಲೀಸ್‌ ಅಧಿಕಾರವನ್ನು ಮೊಟಕುಗೊಳಿಸಿ, ಭ್ರಷ್ಟಾಚಾರ ನಿಗ್ರಹ ದಳವನ್ನು ಸ್ಥಾಪಿಸಲಾಗಿತ್ತು. ಆ ನಂತರ ಎಸಿಬಿಯನ್ನೂ ರದ್ದುಗೊಳಿಸಿ ಲೋಕಾಯುಕ್ತ ಸಂಸ್ಥೆಗೆ ಪುನಃ ಪೊಲೀಸ್‌ ಅಧಿಕಾರವನ್ನು ಮರು ಸ್ಥಾಪಿಸಲಾಗಿತ್ತು.  ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಎರಡು ವರ್ಷ ಪೂರ್ಣಗೊಳಿಸಿರುವ ಹೊತ್ತಿನಲ್ಲೇ  ಲೋಕಾಯುಕ್ತ ಹೆಸರಿನಲ್ಲಿ ನಿಂಗಪ್ಪ ಎಂಬಾತ ಹಣ ವಸೂಲಿ ಮಾಡಿರುವ ಪ್ರಕರಣವು ಮುನ್ನೆಲೆಗೆ ಬಂದಿದೆ. ಅಲ್ಲದೇ  ಲೋಕಾಯುಕ್ತ ಸಂಸ್ಥೆಯ ವಿಶ್ವಾಸಾರ್ಹತೆಯ ಪ್ರಶ್ನೆಯೂ ಎದುರಾಗಿದೆ.

Hot this week

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...
Please Scan to make Your Contribution

Topics

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

Related Articles

Popular Categories

error: Content is protected !!