Wednesday | March 25, 2026 |

ಸ್ಮಾರ್ಟ್‌ ಮೀಟರ್; ಹೈಕೋರ್ಟ್‌ ಅಭಿಪ್ರಾಯಕ್ಕೆ ಸ್ಪಷ್ಟ ನಿಲುವು ಪ್ರಕಟಿಸದ ಸರ್ಕಾರ, ‘ರಾಜಶ್ರೀ’ ಬೆನ್ನಿಗೆ ನಿಂತಿತೇ?

Support THE-FILE

spot_img

ಬೆಂಗಳೂರು; ರಾಜ್ಯದಲ್ಲಿ ಸ್ಮಾರ್ಟ್ ವಿದ್ಯುತ್ ಮೀಟರ್‌ಗಳ ಖರೀದಿ ಮತ್ತು ಅಳವಡಿಕೆಗೆ ಸಂಬಂಧಿಸಿದ ಟೆಂಡರ್‌ನಲ್ಲಿ ಯಾವುದೇ ಅಕ್ರಮವೆಸಗಿಲ್ಲ ಎಂದು ಪ್ರತಿಪಾದಿಸಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ರಾಜಶ್ರೀ ಎಲೆಕ್ಟ್ರಿಕಲ್‌ ಸಂಸ್ಥೆ ಬೆನ್ನಿಗೆ ನಿಂತಿದೆ.

 

ಅಲ್ಲದೇ ಈ ಪ್ರಕರಣದ ಕುರಿತು ರಾಜ್ಯ ಉಚ್ಛ ನ್ಯಾಯಾಲಯವು ವ್ಯಕ್ತಪಡಿಸಿದ್ದ ಅಭಿಪ್ರಾಯದ ಕುರಿತು ರಾಜ್ಯ ಸರ್ಕಾರವು ತನ್ನ ನಿಲುವನ್ನು ಇದುವರೆಗೂ ಪ್ರಕಟಿಸಿಲ್ಲ. ಇದೇ 11ರಂದು ನಡೆಯಲಿರುವ ವಿಧಾನಮಂಡಲ ಅಧಿವೇಶನಕ್ಕೆ ಇಂಧನ ಇಲಾಖೆಯು ನೀಡಿರುವ ಉತ್ತರದಲ್ಲಿ ಎಲ್ಲಿಯೂ ತನ್ನ ನಿಲುವುನ್ನು ತಿಳಿಸಿಲ್ಲ.

 

ಸ್ಮಾರ್ಟ್ ಮೀಟರ್‍‌ ಅಳವಡಿಕೆ ಟೆಂಡರ್‍‌ನಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳ ಕುರಿತು ಪ್ರತಿಪಕ್ಷ ಬಿಜೆಪಿಯು ಕಾನೂನು ಹೋರಾಟ ನಡೆಸಿದೆ. ಈ ಪ್ರಕರಣದಲ್ಲಿ ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಇತರ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರಿಂದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವರದಿ ಕೇಳಿತ್ತು. ಅಲ್ಲದೇ ಇದಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

 

ಈ ಬೆಳವಣಿಗೆಗಳನ್ನಾಧರಿಸಿ ಪ್ರತಿಪಕ್ಷ ಬಿಜೆಪಿಯು ಇದೇ 11ರಂದು ನಡೆಯಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಸರ್ಕಾರದ ಮೇಲೆ ಮುಗಿಬೀಳಲು ಸಜ್ಜಾಗಿದೆ. ಈ ಸಂಬಂಧ ವಿಧಾನ ಪರಿಷತ್ತಿನ ಸದಸ್ಯ ಸಿ ಟಿ ರವಿ ಅವರು ಸಹ ಚುಕ್ಕೆ ಗುರುತಿನ ಪಶ್ನೆ (34) ಕೇಳಿದ್ದಾರೆ. ಇದಕ್ಕೆ ಇಂಧನ ಇಲಾಖೆಯು ಈಗಾಗಲೇ ಉತ್ತರ ಸಲ್ಲಿಸಿದೆ.

 

‘ಸ್ಮಾರ್ಟ್‌ ಮೀಟರ್‍‌ ಅಳವಡಿಕೆ ಟೆಂಡರ್‍‌ನ್ನು ನಿಯಮಾನುಸಾರ ಪಾರದರ್ಶಕವಾಗಿಯೇ ನಡೆಸಲಾಗಿದೆ. ಇದರಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಮತ್ತು ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ. ಹೀಗಾಗಿ ಸ್ಮಾರ್ಟ್‌ ಮೀಟರ್‍‌ ಅಳವಡಿಕೆ ಉದ್ದೇಶವನ್ನು ಹಿಂದಕ್ಕೆ ಪಡೆಯುವ ಉದ್ದೇಶವೇ ಇಲ್ಲ,’ ಎಂದು ಉತ್ತರದಲ್ಲಿ ವಿವರಿಸಿದೆ.

 

ಇಂಧನ ಇಲಾಖೆಯು ನೀಡಿರುವ ಉತ್ತರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಹಾಗೆಯೇ ಸಿಂಗಲ್‌ ಫೇಸ್‌, ತ್ರೀ ಫೇಸ್‌ ಸ್ಮಾರ್ಟ್‌ ಮೀಟರ್‍‌ ಅಳವಡಿಕೆ ಸಂಬಂಧ ವಿದ್ಯುತ್‌ ಸರಬರಾಜು ಕಂಪನಿಗಳು ಆಹ್ವಾನಿಸಿದ್ದ ಟೆಂಡರ್‍‌ನಲ್ಲಿ ಭಾಗವಹಿಸಿದ್ದ ಕಂಪನಿಗಳ ವಿವರ ಮತ್ತು ಬಿಡ್‌ನಲ್ಲಿ ನಮೂದಿಸಿದ್ದ ಮೊತ್ತದ ವಿವರಗಳನ್ನೂ ಉತ್ತರದಲ್ಲಿ ಒದಗಿಸಿರುವುದು ಗೊತ್ತಾಗಿದೆ.

 

ಸ್ಮಾರ್ಟ್‌ ಮೀಟರ್‍‌ಗೆ ವಿಧಿಸಿದ್ದ ದುಬಾರಿ ದರದ ಬಗ್ಗೆಯೂ ರಾಜ್ಯ ಉಚ್ಛ ನ್ಯಾಯಾಲಯವು ಖಾರವಾಗಿ ಕಟುವಾಗಿ ಪ್ರತಿಕ್ರಿಯಿಸಿತ್ತು. ಈ ಬಗ್ಗೆ ನ್ಯಾಯಾಲಯವು ನೀಡಿದ್ದ ಅಭಿಪ್ರಾಯದ ಕುರಿತು ಸರ್ಕಾರದ ನಿಲುವೇನು ಎಂದು ಶಾಸಕ ಸಿ ಟಿ ರವಿ ಅವರು ಕೇಳಿದ್ದ ಪ್ರಶ್ನೆಗೆ ಸರ್ಕಾರವು ತನ್ನ ನಿಲುವನ್ನು ತಿಳಿಸಿಲ್ಲ. ಬದಲಿಗೆ ಈ ಪ್ರಕರಣದ ಕುರಿತು ನ್ಯಾಯಾಲಯದಲ್ಲಿ ವಿಚಾರಣೆಗೆ ದಿನಾಂಕ ನಿಗದಿಪಡಿಸಿರುವ ಬಗ್ಗೆ ಮಾಹಿತಿ ಒದಗಿಸಿ ಕೈತೊಳೆದುಕೊಂಡಿರುವುದು ಉತ್ತರದಿಂದ ತಿಳಿದು ಬಂದಿದೆ.

 

 

ನ್ಯಾಯಾಲಯ ಪ್ರಶ್ನೆಯಲ್ಲೇನಿತ್ತು?

 

ನೆರೆ ರಾಜ್ಯಗಳಲ್ಲಿ ಕಡಿಮೆ ದರ ಇದ್ದರೂ, ಕರ್ನಾಟಕದಲ್ಲಿ ದುಬಾರಿ ಬೆಲೆಗೆ ಏಕೆ ನಿಗದಿಪಡಿಸಲಾಗಿದೆ ಎಂದು ಖಾರವಾಗಿ ಪ್ರಶ್ನಿಸಿತ್ತು. ಗ್ರಾಹಕರಿಗೆ ಗೊಂದಲ ಉಂಟುಮಾಡುವ ನೀತಿಗಳನ್ನು ರೂಪಿಸದಂತೆ ನ್ಯಾಯಾಲಯವು ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಕೆಲ ಕಾಲ ವಾದ ಆಲಿಸಿದ್ದ ನ್ಯಾಯಪೀಠವು ‘ಕೆಇಆರ್‌ಸಿ ಮಾರ್ಗಸೂಚಿಗಳಿಗೆ ಅನುಗುಣವಾಗಿ ಯಾವ ರೀತಿ ಸ್ಮಾರ್ಟ್‌ ಮೀಟರ್‌ಗಳನ್ನು ಅಳವಡಿಸಬೇಕೋ ಅದೇ ರೀತಿ ಅಳವಡಿಸಲು ಮುಂದಾಗಿ. ಅದು ಬಿಟ್ಟು ಪ್ರೀ ಪೇಯ್ಡ್‌, ಪೋಸ್ಟ್‌ ಪೇಯ್ಡ್‌ ಎಂದು ಅನಗತ್ಯವಾಗಿ ಗ್ರಾಹಕರನ್ನು ಗೊಂದಲದ ಗೂಡಿಗೆ ತಳ್ಳುವ ಕೆಲಸ ಮಾಡಬೇಡಿ’ ಎಂದು ಹೇಳಿತ್ತು.

 

ಹಾಗೆಯೇ ಅನ್ಯ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಿಮ್ಮ ಸ್ಮಾರ್ಟ್‌ ಮೀಟರ್‌ ದರ ಹೆಚ್ಚಾಗಿ ನಿಗದಿ ಮಾಡಿದ್ದೀರಲ್ಲಾ ಎಂದು ನ್ಯಾಯಾಲಯವು ಪ್ರಶ್ನಿಸಿತ್ತು. ಪ್ರೀ ಪೇಯ್ಡ್‌ ಅಥವಾ ಪೋಸ್ಟ್‌ ಪೇಯ್ಡ್‌ ಯಾವುದೇ ರೀತಿಯ ಶುಲ್ಕ ಪಾವತಿಯಾದರೂ ಸರಿಯೇ. ಸ್ಮಾರ್ಟ್‌ ಮೀಟರ್‌ ಅಳವಡಿಕೆ ಕಡ್ಡಾಯ ಎಂಬ ನಿಮ್ಮ ನಿಲುವು ಮಾತ್ರ ಗ್ರಾಹಕರಿಗೆ ಹೊರೆಯಾಗುವಂತಿದೆಯೆಲ್ಲಾ. ಈ ರೀತಿಯ ಕ್ರಮಗಳಿಂದಾಗಿ ಸಾರ್ವಜನಿಕರು ಹೊರೆಯಿಂದ ನರಳುವಂತೆ ಮಾಡಬೇಡಿ,” ಎಂದು ಹೇಳಿತ್ತು.

 

ನ್ಯಾಯಾಲಯವು ಹೀಗೆ ಖಾರವಾಗಿ ಪ್ರಶ್ನಿಸಿದ್ದರೂ ಸಹ ಸರ್ಕಾರವು ಈ ಬಗ್ಗೆ ತನ್ನ ನಿಲುವೇನು ಎಂದು ವಿಧಾನ ಮಂಡಲಕ್ಕೆ ಸ್ಪಷ್ಟವಾಗಿ ತಿಳಿಸಿಲ್ಲ.

 

ನಿಲುವು ತಿಳಿಸದೇ ಕೈತೊಳೆದುಕೊಂಡಿತೇ ಸರ್ಕಾರ?

 

ಸ್ಮಾರ್ಟ್‌ ಮೀಟರ್‍‌ಗಳನ್ನು ಹೊಸ ಗ್ರಾಹಕರಿಗೆ ಅಳವಡಿಸಲು ಕೇಂದ್ರೀಯ ವಿದ್ಯುಚ್ಛಕ್ತಿ ಪ್ರಾಧಿಕಾರವು ಕಡ್ಡಾಯ ಮಾಡಿದೆ. ಇದನ್ನು ಪ್ರಶ್ನಿಸಿ ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ ವ್ಯಾಪ್ತಿಯ ಮೂವರು ಗ್ರಾಹಕರು ಉಚ್ಛ ನ್ಯಾಯಾಲಯದಲ್ಲಿ ಪ್ರತ್ಯೇಕವಾಗಿ ರಿಟ್‌ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಅರ್ಜಿದಾರರು ಹೊಸ ಗ್ರಾಹಕರಲ್ಲ. ಬದಲಿಗೆ ಸ್ಟಾಟಿಕ್‌ ಮೀಟರ್‍‌ ಹೊಂದಿರುವ ಗ್ರಾಹಕರಾಗಿದ್ದಾರೆ.

 

ಇದರಲ್ಲಿ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಅರ್ಜಿದಾರರುಗಳಿಗೆ ಸೀಮಿತಗೊಳಿಸಿ ಸ್ಮಾರ್ಟ್‌ ಮೀಟರ್‍‌ ಅಳವಡಿಕೆಗೆ ನ್ಯಾಯಾಲಯದಿಂದ ತಡೆ ನೀಡಲಾಗಿದೆ. ಈ ಅರ್ಜಿಗಳ ವಿಚಾರಣೆಯನ್ನು ವಿವಿಧ ದಿನಾಂಕಗಳಂದು ನಡೆಸಿದೆ. ಆದೇಶವನ್ನು ಕಾಯ್ದಿರಿಸಿದೆ. ರಿಟ್‌ ಅರ್ಜಿ 1865/2025 ಇನ್ನೂ ವಿಚಾರಣೆಗೆ ಬಂದಿಲ್ಲ. ಮುಂದುವರೆದು ಸ್ಮಾರ್ಟ್‌ ಮೀಟರ್‍‌ ಅಳವಡಿಕೆ ಪ್ರಶ್ನಿಸಿ ಮೂರು ಸಾರ್ವಜನಿಕ ಅರ್ಜಿಗಳು ದಾಖಲಾಗಿವೆ. ಈ ಎಲ್ಲಾ ಅರ್ಜಿಗಳನ್ನು ಒಟ್ಟುಗೂಡಿ ವಿಚಾರಣೆ ಕೈಗೆತ್ತಿಕೊಂಡಿದೆ. 2025ರ ಆಗಸ್ಟ್‌ 19ಕ್ಕೆ ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ ಎಂದು ಉತ್ತರದಲ್ಲಿ ಸಚಿವ ಕೆ ಜೆ ಜಾರ್ಜ್‌ ಅವರು ಮಾಹಿತಿ ಒದಗಿಸಿರುವುದು ಗೊತ್ತಾಗಿದೆ.

 

ನಿಯಮ ಉಲ್ಲಂಘನೆಯಾಗಿಲ್ಲವೆಂದ ಸರ್ಕಾರ

 

ಸರ್ಕಾರಿ ಗುತ್ತಿಗೆಯ ಟೆಂಡರ್‍‌ಗಳಲ್ಲಿ ಭಾಗಿಯಾಗದಂತೆ ನಿಷೇಧಕ್ಕೆ ಗುರಿಯಾಗಿರುವ ಕಂಪನಿಗೆ ಸ್ಮಾರ್ಟ್‌ ಮೀಟರ್‍‌ನ ತಂತ್ರಾಂಶ ಮತ್ತು ಕಾರ್ಯನಿರ್ವಹಣೆ ವ್ಯವಸ್ಥೆ ಪೂರೈಕೆಮಾಡುವ ಹೊಣೆ ನೀಡಿರುವುದು, ನಿಷೇಧಕ್ಕೆ ಒಳಗಾಗಿರುವ ಕಂಪನಿಯ ಜತೆ ವ್ಯವಹಾರ ನಡೆಸುವ ಕುರಿತು ಕೆಟಿಪಿಪಿ ನಿಯಮವೇನು ಎಂದು ಸಿ ಟಿ ರವಿ ಅವರು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿರುವ ಸರ್ಕಾರವು ಇಡೀ ಪ್ರಕ್ರಿಯೆಯಲ್ಲಿ ಯಾವುದೇ ನಿಯಮಗಳು ಉಲ್ಲಂಘನೆಯಾಗಿಲ್ಲ ಎಂದು ಪ್ರತಿಪಾದಿಸಿದೆ.

 

 

ಸರ್ಕಾರದ ಪ್ರತಿಪಾದನೆಯೇನು?

 

ಸ್ಮಾರ್ಟ್‌ ಮೀಟರ್‍‌ ಸೇವೆ ಒದಗಿಸಲು ಭಾಗವಹಿಸುವ ಬಿಡ್‌ದಾರರು, ಸ್ಮಾರ್ಟ್‌ ಮೀಟರ್‍‌ನಿಂದ ಸಂವಹನವನ್ನು ಕಂಟ್ರೋಲ್‌ ರೂಂಗೆ ಹಾಗೂ ಗ್ರಾಹಕರಿಗೆ ಒದಗಿಸಲು ಎಎಂಐ ಸಾಫ್ಟ್‌ವೇರ್‍‌ ಒದಗಿಸಲು ಅರ್ಹ ಸಂಸ್ಥೆ ಜತೆ ಒಡಂಬಡಿಕೆ ಮಾಡಲು ಅವಕಾಶ ಕಲ್ಪಿಸಿಕೊಂಡಿದೆ. ಈ ಪ್ರಕರಣದಲ್ಲಿ ಎಲ್‌ 1 ಬಿಡ್‌ದಾರರಾದ ರಾಜಶ್ರೀ ಎಲೆಕ್ಟ್ರಿಕಲ್‌ ಸಂಸ್ಥೆಯವರು ಸಾಫ್ಟ್‌ವೇರ್‍‌ ಸೇವೆ ಪಡೆಯಲು ಬಿಸಿಐಟಿಎಸ್‌ ಹಾಗೂ ಜೀನಸ್‌ ಸಂಸ್ಥೆಯ ವಿವರಗಳನ್ನು ಟೆಂಡರ್‍‌ ದಸ್ತಾವೇಜಿನಲ್ಲಿ ಸಲ್ಲಿಸಿದ್ದರು. ಟೆಂಡರ್‍‌ ಪರಿಶೀಲನೆ ನಂತರ ಈ ಎರಡೂ ಸಂಸ್ಥೆಗಳಿಂದ ಸೇವೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ಒದಗಿಸಿರುವುದು ತಿಳಿದು ಬಂದಿದೆ.

 

ರಾಜಶ್ರೀ ಎಲೆಕ್ಟ್ರಿಕಲ್‌ ಸಂಸ್ಥೆಯವರು ಬಿಸಿಐಟಿಎಸ್‌ ಸಂಸ್ಥೆಯೊಂದಿಗೆ 2025ರ ಜನವರಿ 22ರಂದು ಒಡಂಬಡಿಕೆ ಮಾಡಿಕೊಂಡಿದ್ದಾರೆ. ಬಿಸಿಐಟಿಎಸ್‌ ಸಂಸ್ಥೆಯು ದೇಶದ 11 ರಾಜ್ಯಗಳ 18 ವಿದ್ಯುತ್ ಸರಬರಾಜು ಸಂಸ್ಥೆಗಳಲ್ಲಿ ಎಎಂಐ ಸಾಫ್ಟ್‌ವೇರ್‍‌ ಸೇವೆ ಒದಗಿಸುತ್ತಿದೆ. ಈ ಸಂಸ್ಥೆಯನ್ನು ಪೂರ್ವಾಂಚಲ ವಿದ್ಯುತ್‌ ವಿತರಣಾ ನಿಗಮದಿಂದ 2023ರ ಜನವರಿ 6ರಿಂದ 2 ವರ್ಷಗಳ ಅವಧಿಗೆ ಕಂಪನಿಯ ವ್ಯಾಪ್ತಿಯಲ್ಲಿ ಯಾವುದೇ ಟೆಂಡರ್‍‌ನಲ್ಲಿ ಭಾಗವಹಿಸದಂತೆ ನಿರ್ಬಂಧ ಹೇರಲಾಗಿತ್ತು. ಈ ನಿರ್ಬಂಧ ಅವಧಿಯು 2025ರ ಜನವರಿ 5ರಂದು ಮುಕ್ತಾಯಗೊಂಡಿದೆ ಎಂದು ವಿವರಿಸಿರುವುದು ಗೊತ್ತಾಗಿದೆ.

 

ಅಲ್ಲದೇ ರಾಜಶ್ರೀ ಎಲೆಕ್ಟ್ರಿಕಲ್‌ ಸಂಸ್ಥೆಯವರು ಬಿಸಿಐಟಿಎಸ್‌ ಸಂಸ್ಥೆಯೊಂದಿಗೆ 2025ರ ಜನವರಿ 22ರಂದು ಒಡಂಬಡಿಕೆ ಮಾಡಿಕೊಂಡಿದೆ. ನಿರ್ಬಂಧ ಅವಧಿ ಮುಕ್ತಾಯಗೊಂಡ ನಂತರ ಒಡಂಬಡಿಕೆ ಮಾಡಿಕೊಂಡಿರುವುದರಿಂದ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ ಎಂದು ಸಮರ್ಥಿಸಿಕೊಂಡಿರುವುದು ಉತ್ತರದಿಂದ ತಿಳಿದು ಬಂದಿದೆ.

 

 

‘ಕೆಟಿಪಿಪಿ ಕಾಯ್ದೆ ಸೆಕ್ಷನ್‌ 14 ಎ ರಂತೆ ನಿಷೇಧಿತ ಕಂಪನಿಯೊಂದಿಗೆ ಟೆಂಡರ್ ವ್ಯವಹಾರ ನಡೆಸುವಂತಿಲ್ಲ. ಆದರೆ ಈ ಒಡಂಬಡಿಕೆಯನ್ನು ನಿರ್ಬಂಧದ ಅವಧಿ ಮುಕ್ತಾಯಗೊಂಡ ನಂತರ ಎಲ್‌ ಬಿಡ್‌ದಾರರಾದ ರಾಜಶ್ರಿ ಎಲೆಕ್ಟ್ರಿಕಲ್ಸ್‌ ಸಂಸ್ಥೆಯವರು ಮಾಡಿಕೊಂಡಿದ್ದಾರೆ. ಹೀಗಾಗಿ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ. ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ ಮತ್ತು ಸಾಫ್ಟ್‌ವೇರ್‍‌ ಸೇವೆ ಒದಗಿಸುತ್ತಿರುವ ಬಿಸಿಐಟಿಎಸ್‌ ಸಂಸ್ಥೆಯೊಂದಿಗೆ ಯಾವುದೇ ಒಡಂಬಡಿಕೆ ಮಾಡಿಕೊಂಡಿಲ್ಲ,’ ಎಂದು ಸಚಿವ ಕೆ ಜೆ ಜಾರ್ಜ್‌ ಅವರು ವಿವರಿಸಿರುವುದು ಗೊತ್ತಾಗಿದೆ.

Hot this week

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

Topics

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

Related Articles

Popular Categories

error: Content is protected !!