Thursday | April 30, 2026 |

ಶುದ್ದ ಕುಡಿಯುವ ನೀರಿಲ್ಲ, ಹಾಸಿಗೆಯಿಲ್ಲ, ಬಿಸಿ ನೀರೂ ಇಲ್ಲ; ಮಕ್ಕಳ ರಕ್ಷಣಾ ಆಯೋಗದ ವರದಿಗೆ ಮೆತ್ತಿಕೊಂಡ ಧೂಳು

ಬೆಂಗಳೂರು; ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮತ್ತು ವಸತಿ ನಿಲಯಗಳು ಶಿಥಿಲಗೊಂಡಿವೆ. ಈ ಶಾಲೆಗಳಲ್ಲಿ ಶುದ್ದ ಕುಡಿಯುವ ನೀರೂ ಇಲ್ಲ, ಅಷ್ಟೇ ಏಕೆ ಮಕ್ಕಳಿಗೆ ಸ್ನಾನಕ್ಕಾಗಿ ಬಿಸಿ ನೀರೂ ಇಲ್ಲ.

 

ಹೀಗೆಂದು 2024ರ ಸೆ 30ರಂದೇ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸರ್ಕಾರಕ್ಕೆ ಬರೆದಿರುವ ಪತ್ರದಲ್ಲಿ ವಸತಿ ಶಾಲೆಗಳ ನೈಜ ಸ್ಥಿತಿಯನ್ನು ಅನಾವರಣಗೊಳಿಸಿತ್ತು. ಆಯೋಗವು ವರ್ಷದ ಹಿಂದೆಯೇ ನೀಡಿದ್ದ ವರದಿಯ  ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ವಸತಿ ಶಾಲೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋವು 2024ರ ಮೇ 18ರಂದೇ ತನ್ನ ವರದಿಯನ್ನು ನೀಡಿದೆ. ಈ ವರದಿ ಸಲ್ಲಿಕೆಯಾಗಿ ವರ್ಷ ಕಳೆದರೂ ಇದುವರೆಗೂ ಇಲಾಖೆಯು ಯಾವುದೇ ಕ್ರಮವಹಿಸಿಲ್ಲ ಎಂದು ಗೊತ್ತಾಗಿದೆ.

 

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ವಸತಿ ಶಾಲೆ, ಕಾಲೇಜುಗಳಲ್ಲಿನ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮುರುಕು ಡೆಸ್ಕ್‌, ಹರಿದ, ಧೂಳು ಹಿಡಿದ ಹಾಸಿಗೆ, ದಿಂಬು, ಜಮಖಾನಾಗಳಲ್ಲೇ  ದಿನ ದೂಡುತ್ತಿದ್ದಾರೆ. ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ವಿದ್ಯಾರ್ಥಿಗಳು ಹಲವೆಡೆ ಪ್ರತಿಭಟನೆಗಿಳಿದಿರುವ ನಡುವೆಯೇ  ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ವರ್ಷದ ಹಿಂದೆಯೇ  ಸಲ್ಲಿಸಿದ್ದ  ವರದಿಯು ಮುನ್ನೆಲೆಗೆ ಬಂದಿದೆ.

 

ವರದಿಯಲ್ಲೇನಿದೆ?

 

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಸೆಕ್ಷನ್‌ 13ರ ಅನ್ವಯ ದೂರುಗಳನ್ನು ವಿಚಾರಣೆಗೊಳಪಡಿಸುವ ಮತ್ತು ಸೆಕ್ಷನ್‌ 14 ಅಡಿಯಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತಗೆ ಸಿವಿಲ್‌ ನ್ಯಾಯಾಲಯದ ಸೆಕ್ಷನ್‌ 5ರಂತೆ ಕಾರ್ಯನಿರ್ವಹಿಸುತ್ತಿದೆ. ಹಾಗೆಯೇ ಮಕ್ಕಳ ಹಕ್ಕುಗಳ ಉಲ್ಲಂಘನೆಯಾದ ಪ್ರಕರಣಗಳನ್ನು ಆಯೋಗವು ಸ್ವಯಂ ಪ್ರೇರಣೆಯಿಮದ ದೂರು ದಾಖಲಿಸಿಕೊಂಡು ಕ್ರಮಗಳನ್ನು ಕೈಗೊಳ್ಳುವ ಅಧಿಕಾರ ಹೊಂದಿದೆ.

 

ಅಲ್ಲದೇ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಉಚಿತ ಮತ್ತು ಕಡ್ಡಾಯ ಶಿಕ್ಷಣ, ಪೋಕ್ಸೋ ಕಾಯ್ದೆ ಮತ್ತು ಬಾಲ ನ್ಯಾಯ 2015 ಕಾಯ್ದೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.

 

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಾ ಆಯೋಗದ ತಂಡವು ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳ ಇಲಾಖೆಯು ನಡೆಸುತ್ತಿರುವ ವಸತಿ ಶಾಲೆ, ವಸತಿ ನಿಲಯಗಳಿಗೆ ಭೇಟಿ ನೀಡಿತ್ತು. ಈ ಸಮಯದಲ್ಲಿ ವಸತಿ ಶಾಲೆಗಳು ಶಿಥಿಲಗೊಂಡಿರುವುದು ಕಂಡು ಬಂದಿದೆ. ಶುದ್ಧ ಕುಡಿಯುವ ನೀರು ಇಲ್ಲ, ಮಕ್ಕಳಿಗೆ ಸ್ನಾನಕ್ಕಾಗಿ ಬಿಸಿ ನೀರಿನ ಕೊರತೆ ಇದೆ. ಮಲಗಲು ಕಾಟ್‌, ಬೆಡ್‌ಗಳಿಲ್ಲ. ತರಗತಿಯಲ್ಲಿ ಮಕ್ಕಳಿಗೆ ಡೆಸ್ಕ್‌ ಸಮಸ್ಯೆಗಳಿರುವುದನ್ನು ಆಯೋಗವು ಗಮನಿಸಿದೆ ಎಂದು ವರದಿಯಲ್ಲಿ ತಿಳಿಸಿರುವುದು ಗೊತ್ತಾಗಿದೆ.

 

 

 

 

ಸರ್ಕಾರದ ವಿವಿಧ ಇಲಾಖೆಗಳ ಅಡಿಯಲ್ಲಿ ವಸತಿ ನಿಲಯಗಳಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವ ಮಕ್ಕಳಿಗೆ ಸೌಲಭ್ಯಗಳು ನಿಗದಿತ ಸಮಯದಲ್ಲಿ ತಲುಪುತ್ತಿದೆಯೇ ಸೌಲಭ್ಯಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿದೆಯೇ ಎಂಬ ಕುರಿತು ಪರಿಶೀಲನೆ, ಸಂಯೋಜನೆ ನಡೆಸಲು ಇಲಾಖೆಯ ಸಿಬ್ಬಂದಿ ಅಧಿಕಾರಿ ಅವಶ್ಯಕತೆ ಇದೆ ಎಂದು ವರದಿಯಲ್ಲಿ ವಿವರಿಸಿರುವುದು ತಿಳಿದು ಬಂದಿದೆ.

 

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡವು ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ನಿಲಯಗಳಿಗೆ ಭೇಟಿ ನೀಡಿ ಸಲ್ಲಿಕೆ ಮಾಡಿದ್ದ ವರದಿಗೂ ಈಗ ಧೂಳು ಮೆತ್ತಿಕೊಂಡಿದೆ.

 

ವಸತಿ ಶಾಲೆಗಳ ಮೂಲಭೂತ ಸೌಕರ್ಯಗಳಿಗಾಗಿ 2024-25ನೇ ಸಾಲಿನ ಆಯವ್ಯಯದಲ್ಲಿ ಬಿಡಿಗಾಸಿನ ಅನುದಾನವನ್ನೇ ಒದಗಿಸಿಲ್ಲ.  ಹಾಸಿಗೆ, ದಿಂಬು, ತಟ್ಟೆ, ಲೋಟ, ಡೆಸ್ಕ್‌, ಟ್ರಂಕ್‌ ಸೇರಿದಂತೆ ಇನ್ನಿತರೆ 30 ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಪ್ರಾಂಶುಪಾಲರುಗಳು 464.60 ಕೋಟಿ ರು. ಅನುದಾನ ಕೋರಿದ್ದರು. ಆದರೆ 2024-25ನೇ ಸಾಲಿನ ಆಯವ್ಯಯದಲ್ಲಿ ಈ ಸಂಬಂಧ ನಯಾಪೈಸೆಯನ್ನೂ ನೀಡಿರಲಿಲ್ಲ.

 

 

ಪ.ಜಾತಿ ಮತ್ತು ಪ.ಪಂಗಡ ವಸತಿ ಶಾಲೆ, ಕಾಲೇಜುಗಳಿಗೆ ಹಾಸಿಗೆ, ದಿಂಬು, ತಟ್ಟೆ, ಲೋಟ, ಬಕೆಟ್‌, ಜಗ್ಗು, ಡಸ್ಟ್‌ ಬಿನ್‌, ಜಮಖಾನಾ, ಶಾಲಾ ಬ್ಯಾಗ್‌, ಪಾಠೋಪಕರಣ, ಕಂಪ್ಯೂಟರ್‍‌ ಟೇಬಲ್‌ಗಳು ಸೇರಿದಂತೆ ಒಟ್ಟಾರೆ 30 ಬಗೆಯಲ್ಲಿ 5,96,318 ಪರಿಕರಗಳ ಬೇಡಿಕೆ ಇದೆ. 2024-25ನೇ ಸಾಲಿಗೆ ಈ ಸೌಕರ್ಯಗಳಿಗೆ ಅನುದಾನ ಒದಗಿಸಬೇಕು ಎಂದು ಇಲಾಖೆಯು ಪ್ರಸ್ತಾವನೆ ಸಲ್ಲಿಸಿದ್ದರೂ ಸಹ ಆಯವ್ಯಯದಲ್ಲಿ ಬಿಡಿಗಾಸಿನ ಅನುದಾನವನ್ನೂ ನೀಡಿರಲಿಲ್ಲ.

 

ಮೂಲಸೌಕರ್ಯಗಳಿಗಿಲ್ಲ ಅನುದಾನ; ಹಾಸಿಗೆ, ದಿಂಬು, ತಟ್ಟೆ, ಲೋಟ ಖರೀದಿಗೂ ಹಣವಿಲ್ಲವಾಯಿತೇ?

 

ಪರಿಶಿಷ್ಟ ಜಾತಿಯ ವಸತಿ ಶಾಲೆ, ಕಾಲೇಜುಗಳಲ್ಲಿ 19.603 ಡೆಸ್ಕ್‌ ಕಮ್‌ ಬೆಂಚ್‌ ಗಳಿವೆ. ಇನ್ನೂ 4,601 ಡೆಸ್ಕ್‌ ಕಮ್‌ ಬೆಂಚ್‌ಗಳ ಬೇಡಿಕೆ ಇದೆ. ಪರಿಶಿಷ್ಟ ವರ್ಗ ವಸತಿ ಶಾಲೆ, ಕಾಲೇಜುಗಳಲ್ಲಿ 6,044 ಡೆಸ್ಕ್‌ ಕಮ್‌ ಬೆಂಚ್‌ಗಳಿವೆ. ಇನ್ನೂ 316 ಬೇಡಿಕೆ ಇದೆ. ಒಟ್ಟಾರೆ ಈ ಎರಡೂ ವರ್ಗಗಳ ವಸತಿ ಶಾಲೆ, ಕಾಲೇಜುಗಳಿಗೆ 4,917 ಡೆಸ್ಕ್‌ ಕಮ್‌ ಬೆಂಚ್‌ಗಳ ಬೇಡಿಕೆ ಇರುವುದು ವರದಿಯಿಂದ ಗೊತ್ತಾಗಿದೆ.

 

ಅದೇ ರೀತಿ ಪರಿಶಿಷ್ಟ ಜಾತಿಯ ವಸತಿ ಶಾಲೆ, ಕಾಲೇಜುಗಳಲ್ಲಿ 27,381 ಹಾಸಿಗೆ, 22,643 ದಿಂಬುಗಳಿವೆ. ಆದರೆ ಸದ್ಯದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ 76,214 ಹಾಸಿಗೆ, 95,237 ದಿಂಬುಗಳ ಬೇಡಿಕೆ ಇದೆ. ಅದೇ ರೀತಿ ಪರಿಶಿಷ್ಟ ವರ್ಗಗಳ ವಸತಿ ಶಾಲೆಗಳಲ್ಲಿ 12,609 ಹಾಸಿಗೆ, 17,625 ದಿಂಬುಗಳಿವೆ. ವಾಸ್ತವದಲ್ಲಿ 93,839 ಹಾಶಿಗೆ, 1,13, 877 ದಿಂಬುಗಳ ಬೇಡಿಕೆ ಇದ್ದವು.

Hot this week

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

Topics

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು...

ಈಜಿಪುರ ಮೇಲ್ಸೇತುವೆ ಕಾಮಗಾರಿ; ಪರಿಷ್ಕೃತ ಅಂದಾಜಿನಲ್ಲಿಯೇ ಲೋಪ ಪತ್ತೆ, 8.80 ಕೋಟಿ ಮೊತ್ತಕ್ಕೆ ಲೆಕ್ಕ ಪರಿಶೋಧಕರ ಆಕ್ಷೇಪಣೆ

ಬೆಂಗಳೂರು;  ಈಜಿಪುರ ಎಲಿವೇಟೆಡ್ ಕಾಮಗಾರಿಗೆ ಸಂಬಂಧಿಸಿದಂತೆ ಬೃಹತ್‌ ಬೆಂಗಳೂರು ಮಹಾನಗರಪಾಲಿಕೆಯು ಮಾಡಿದ್ದ...

Related Articles

Popular Categories

error: Content is protected !!