Saturday | March 21, 2026 |

ಗ್ಯಾರಂಟಿ ದುಂದುವೆಚ್ಚ; 20ರಿಂದ 60 ಸೆಕೆಂಡ್‌ 480 ರೀಲ್ಸ್‌ಗಳಿಗೆ 94.40 ಲಕ್ಷ ವೆಚ್ಚ, ಟೆಂಡರ್‍‌ನಿಂದಲೇ ವಿನಾಯ್ತಿ

Support THE-FILE

spot_img

ಬೆಂಗಳೂರು; ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂದರ್ಶನ ಮಾಡಿ ರೀಲ್ಸ್‌ ಮುಖಾಂತರ ಪ್ರಚಾರ ಮಾಡಲು ರಾಜ್ಯ ಕಾಂಗ್ರೆಸ್‌ ಸರ್ಕಾರವು 94.90 ಲಕ್ಷ ರು ಖರ್ಚು ಮಾಡಿದೆ. ಅಲ್ಲದೇ ರೀಲ್ಸ್‌ ಮಾಡುವುದರಲ್ಲಿ ಹಲವು ಕಂಪನಿಗಳು ಇದ್ದರೂ ಸಹ ಐಡಿಯಾ ಲ್ಯಾಬ್‌ ಗೆ ನೇರವಾಗಿ 4 (ಜಿ) ವಿನಾಯಿತಿ ನೀಡಿರುವುದು ಇದೀಗ ಬಹಿರಂಗವಾಗಿದೆ.

 

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ 35 ಕೋಟಿಗೂ ಹೆಚ್ಚು ಖರ್ಚು ಮಾಡಿರುವ ಸರ್ಕಾರವು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂದರ್ಶನಗಳ ರೀಲ್ಸ್‌ಗಳಿಗೆ 94 ಲಕ್ಷ ಖರ್ಚು ಮಾಡಿರುವುದು ಮುನ್ನೆಲೆಗೆ ಬಂದಿದೆ.

 

ಇದಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’, ಆರ್‍‌ಟಿಐ ಅಡಿಯಲ್ಲಿ ಕಡತವನ್ನು ಪಡೆದುಕೊಂಡಿದೆ.

 

20 ಸಕೆಂಡ್‌ನಿಂದ 60 ಸೆಕೆಂಡ್‌ ಅವಧಿಗೆ ತಿಂಗಳಿಗೆ 60 ರೀಲ್ಸ್‌ ವಿಡಿಯೋ ತುಣುಕುಗಳನ್ನು ನಿರ್ಮಾಣ ಮಾಡಲು ಟೆಂಡರ್‍‌ ಆಹ್ವಾನಿಸಿಲ್ಲ. ಮತ್ತು ಟೆಂಡರ್‍‌ ಆಹ್ವಾನಿಸಲು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಎಲ್‌ ಕೆ ಅತೀಕ್‌ ಅವರೂ ಸಹ ಒಲವು ತೋರಿಲ್ಲ. ಬದಲಿಗೆ ಇದೊಂದು ಸೃಜನಾತ್ಮಕ ಕೆಲಸ. ಹೀಗಾಗಿ ಟೆಂಡರ್‍‌ ಕರೆಯುವುದು ಕಷ್ಟಕರ. ಹೀಗಾಗಿ 4 ಜಿ ವಿನಾಯಿತಿಯನ್ನು ಕೊಡಬಹುದು ಎಂದು ಕಡತದಲ್ಲಿ ಒಕ್ಕಣೆ ಹಾಕಿರುವುದು ತಿಳಿದು ಬಂದಿದೆ.

 

ಗ್ಯಾರಂಟಿ ರೀಲ್ಸ್‌ ಮಾಡಿಕೊಡಲು ಐಡಿಯಾ ಲ್ಯಾಬ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಪ್ರಸ್ತಾವ ಸಲ್ಲಿಸಿತ್ತು.

 

 

ಈ ಪ್ರಸ್ತಾವ ಆಧರಿಸಿ 4 ಜಿ ವಿನಾಯಿತಿಯನ್ನೂ ಇಲಾಖೆ ಕೋರಿತ್ತು. ಇದನ್ನು ಪರಿಶೀಲಿಸಿದ್ದ ಆರ್ಥಿಕ ಇಲಾಖೆಯು ಆರಂಭದಲ್ಲಿ ಆಕ್ಷೇಪ ವ್ಯಕ್ತಪಡಿಸಿತ್ತು.

 

 

ಪ್ರಸ್ತಾವಿತ ಸೇವೆಯನ್ನು ಐಡಿಯಾ ಲ್ಯಾಬ್‌ ಇವರಿಂದಲೇ ಏಕೆ ಪಡೆಯಲು ಉದ್ದೇಶಿಸಲಾಗಿದೆ, ಇಂತಹ ಸೇವೆಯನ್ನು ಒದಗಿಸಲು ಯಾವುದೇ ಸಂಸ್ಥೆಗಳು ಲಭ್ಯವಿಲ್ಲವೇ, ಪ್ರಸ್ತಾಪಿತ 94.40 ಲಕ್ಷ ರು.ಗಳ ವೆಚ್ಚವು ಸಮಂಜಸವಾಗಿದೆ ಎಂಬುದನ್ನು ಹೇಗೆ ದೃಢಪಡಿಸಿಕೊಳ್ಳಲಾಗಿದೆ, ಟೆಂಡರ್‍‌ ಪ್ರಕ್ರಿಯೆ ಮೂಲಕ ಪ್ರಸ್ತಾವಿತ ಸೇವೆಯನ್ನು ಪಡೆಯಲು ಇರುವ ತೊಂದರೆಗಳೇನು, ಪ್ರಸ್ತಾಪಿತ 4 ಜಿ ವಿನಾಯಿತಿಯಿಂದ ಆಗುವಂತಹ ಪ್ರಯೋಜನೆಗಳಾದರೂ ಏನು ಎಂದು ಆರ್ಥಿಕ ಇಲಾಖೆಯು, ಸ್ಷಷ್ಪತೆ ಬಯಸಿತ್ತು ಎಂಬುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

 

 

ವಿಶೇಷವೆಂದರೇ ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ತಮ್ಮ ಹಂತದಲ್ಲೇ ಶಿಫಾರಸ್ಸು ಮಾಡಿದ್ದರು. ಇದೊಂದು ಸೃಜನಾತ್ಮಕ ಕೆಲಸ. ಹೀಗಾಗಿ ಟೆಂಡರ್‍‌ ಕರೆಯಲು ಕಷ್ಟಕರವಾಗಬಹುದು. ಹೀಗಾಗಿ 4 ಜಿ ವಿನಾಯಿತಿಯನ್ನು ನೀಡಬಹುದು ಎಂದು ಷರಾ ಬರೆದಿದ್ದರು. ಅಲ್ಲದೇ ಮುಖ್ಯಮಂತ್ರಿಗಳು ಇದನ್ನು ಅನುಮೋದಿಸಬಹುದು ಎಂದು ಅಭಿಪ್ರಾಯಿಸಿದ್ದರು. ಅತೀಕ್‌ ಅವರ ಅಭಿಪ್ರಾಯದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಇದನ್ನು ಅನುಮೋದಿಸಿದ್ದರು.

 

ವಾಸ್ತವದಲ್ಲಿ ಈ ಕಾರ್ಯಕ್ಕೆ ಕ್ರಿಯಾ ಯೋಜನೆಯಲ್ಲಿ ಯಾವುದೇ ಅನುದಾನವೇ ಇರಲಿಲ್ಲ.

 

 

ಬದಲಿಗೆ 2023-24ನೇ ಸಾಲಿನ ಆಯವ್ಯಯ (ಲೆಕ್ಕ ಶೀರ್ಷಿಕೆ; 2220-60-106-0-05) ಅಡಿ ಸರ್ಕಾರಿ ಕಾರ್ಯಕ್ರಮಗಳ ಪ್ರಚಾರ, ಮಾಹಿತಿ ಮತ್ತು ಸಂವಹನ ಅಡಿಯಲ್ಲಿ ಒಟ್ಟು 5000 ಲಕ್ಷ ರು ಅನುದಾನ ಒದಗಿಸಿತ್ತು. ಈ ಅನುದಾನದಿಂದಲೇ ಗ್ಯಾರಂಟಿ ರೀಲ್ಸ್‌ ನಿರ್ಮಾಣಕ್ಕೆ 1 ಕೋಟಿ ರು ಭರಿಸಬಹುದು ಎಂದು ಇಲಾಖೆಯು ಸಮರ್ಥಿಸಿಕೊಂಡಿತ್ತು.

 

 

ತಿಂಗಳಿಗೆ 60 ರೀಲ್ಸ್‌

 

ವಾರ್ತಾ ಸಾರ್ವಜನಿಕ ಸಂಪರ್ಕ ಇಲಾಖೆಯು ಸಲ್ಲಿಸಿದ್ದ ಪ್ರಸ್ತಾವದ ಪ್ರಕಾರ ಐಡಿಯಾ ಲ್ಯಾಬ್‌ ಕಂಪನಿಯು ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಂದರ್ಶನವನ್ನು ಮಾಡಲಿದೆ. ಈ ಕಂಪನಿಯಲ್ಲಿ ಮೂಲಭೂತ ಸೌಕರ್ಯಗಳು ಮತ್ತು ತಾಂತ್ರಿಕ ಸಿಬ್ಬಂದಿ ಹೊಂದಿದೆ. ತಿಂಗಳಿಗೆ 60 ಸೆಕೆಂಡ್‌ ಅವಧಿಯ 60 ರೀಲ್ಸ್‌ಗಳನ್ನು ನಿರ್ಮಾಣ ಮಾಡಿಕೊಡಲಿದೆ. ತಿಂಗಳಿಗೆ 11.80 ಲಕ್ಷ ರು ಆಗಲಿದೆ. ಒಟ್ಟು 8 ತಿಂಗಳ ಅವಧಿಗೆ 94.40 ಲಕ್ಷ ರು ವೆಚ್ಚವಾಗಲಿದೆ ಎಂದು ಪ್ರಸ್ತಾವನೆಯಲ್ಲಿ ತಿಳಿಸಿತ್ತು.

 

ಈ ಕಡತವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಗಿತ್ತು. ಈ ಕಡತದಲ್ಲಿ -ಸರ್ಕಾರದ 5 ಖಾತರಿಗಳು ಮತ್ತು ಸಕಾರ್ಶರದ ಮುಂದಿನ ಯೋಜನೆಗಳಿಗೆ ಸಂಬಂಧಿಸಿದ ಉಪ ಕ್ರಮಗಳಿಗೆ ಪ್ರಚಾರ ಪ್ರಸ್ತಾವನೆಯನ್ನು ಸಾಮಾಜಿಕ ಮಾಧ್ಯಮ ಮತ್ತು ಟಿ ವಿ ಫ್ಲಾಟ್‌ಫಾರ್ಮ್‌ಗಳಲ್ಲಿ ಪ್ರಸಾರ ಮಾಡಲು ವಿಡಿಯೋ ಕ್ರಿಯೇಟಿವ್‌ಗಳು ಮತ್ತು ಇತರ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು 94.40 ಲಕ್ಷ ರು. ವೆಚ್ಚದಲ್ಲಿ ಐಡಿಯಾ ಲ್ಯಾಬ್‌ ಸೇವೆಗಳನ್ನು ನೇಮಿಸಿಕೊಳ್ಳಲು ವಾರ್ತಾ ಸಾರ್ವಜನಿಕ ಸಂಪರ್ಕ ಇಲಾಖೆಗೆ 4 ಜಿ ವಿನಾಯಿತಿ ನೀಡುವ ಪ್ರಸ್ತಾವನೆಯನ್ನು ಮುಖ್ಯಮಂತ್ರಿಯವರು ಅನುಮೋದಿಸಬಹುದು ಎಂದು,’ ಎಂದು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಎಲ್‌ ಕೆ ಅತೀಕ್‌ ಅವರು ಶಿಫಾರಸ್ಸು ಮಾಡಿದ್ದರು.

 

ಈ ಶಿಫಾರಸ್ಸನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಅನುಮೋದಿಸಿದ್ದರು.

 

 

ಗ್ಯಾರಂಟಿ ಯೋಜನೆಗಳಿಗಾಗಿ ಹಣ ಹೊಂದಿಸಲು ಏದುಸಿರು ಬಿಟ್ಟಿದ್ದ ರಾಜ್ಯ ಕಾಂಗ್ರೆಸ್‌ ಸರ್ಕಾರವು ಇದಕ್ಕಾಗಿ 60 ಸಾವಿರ ಕೋಟಿಗೂ ಹೆಚ್ಚು ಮೊತ್ತವನ್ನು ಸಾಲ ಮಾಡಿತ್ತು. ಇದನ್ನು ಸಿಎಜಿಯು ಬಲವಾಗಿ ಆಕ್ಷೇಪಿಸಿದ್ದನ್ನು ಸ್ಮರಿಸಬಹುದು.

Hot this week

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

Topics

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

Related Articles

Popular Categories

error: Content is protected !!