Monday | March 23, 2026 |

6 ಸಚಿವರು ಸೇರಿ 94 ಶಾಸಕರು ಆಸ್ತಿ ವಿವರ ಸಲ್ಲಿಸುವಲ್ಲಿ ವಿಫಲ; ಲೋಕಾ ಸೂಚನೆಗೂ ಕಿಮ್ಮತ್ತಿಲ್ಲ

Support THE-FILE

spot_img

ಬೆಂಗಳೂರು; ನಿಗದಿತ ಕಾಲಾವಧಿಯೊಳಗೆ ಆಸ್ತಿ ದಾಯಿತ್ವ ಪಟ್ಟಿ ಸಲ್ಲಿಸಬೇಕು ಎಂದು ಕರ್ನಾಟಕ ಲೋಕಾಯುಕ್ತ ಸಂಸ್ಥೆಯು ಸೂಚಿಸಿದ್ದರೂ ಸಹ 6 ಸಚಿವರು ಸೇರಿದಂತೆ ಒಟ್ಟಾರೆ 94 ಮಂದಿ ಶಾಸಕರು 2024-25ನೇ ಸಾಲಿಗೆ ಸಂಬಂಧಿಸಿದ ಆಸ್ತಿ ವಿವರಗಳನ್ನು ಸಲ್ಲಿಸಿಯೇ ಇಲ್ಲ. ಲೋಕಾಯುಕ್ತ ಸಂಸ್ಥೆಯು ಈ ಎಲ್ಲಾ ಸಚಿವರು, ಶಾಸಕರಿಗೆ ಪ್ರತ್ಯೇಕವಾಗಿ ಜಾರಿಗೊಳಿಸಿದ್ದ ನೋಟೀಸ್‌ನ್ನು ಸಚಿವರು ಸೇರಿದಂತೆ ಶಾಸಕರು ಕಸದ ಬುಟ್ಟಿ ಎಸೆದಿರುವುದು ಬಹಿರಂಗವಾಗಿದೆ.

 

ಆಸ್ತಿ ವಿವರ ಪಟ್ಟಿ ಸಲ್ಲಿಸದೇ ಇರುವ ಸಚಿವರು ಮತ್ತು ಶಾಸಕರ ಪಟ್ಟಿಯನ್ನು ಕರ್ನಾಟಕ ಲೋಕಾಯುಕ್ತ ಸಂಸ್ಥೆಯು 2025ರ ನವೆಂಬರ್ 4ರಂದು ಬಿಡುಗಡೆಗೊಳಿಸಿದೆ. ಈ ಪಟ್ಟಿಯು ದಿ ಫೈಲ್ ಗೆ ಲಭ್ಯವಾಗಿದೆ.

ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 ಅಧಿನಿಯಮ ಕಲಂ 22 (1)ರ ಕಲಂ ಉಪ ಕಲಂ (1)ರ ಪ್ರಕಾರ ಸರ್ಕಾರಿ ನೌಕರನಲ್ಲದ ಪ್ರತಿಯೊಬ್ಬ ಸಾರ್ವಜನಿಕ ನೌಕರನು 30ನೇ ಜೂನ್‌ಗಿಂತ ಮುಂಚಿತವಾಗಿ ಪ್ರತಿ ರ್ಷವೂ ತನ್ನ ಮತ್ತು ತನ್ನ ಕುಟುಂಬದ ಆಸ್ತಿ ಮತ್ತು ದಾಯಿತ್ವಗಳ ವಿವರಣಾ ಪಟ್ಟಿಯನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತರಿಗೆ ಸಲ್ಲಿಸಬೇಕು.

 

ಅಧಿನಿಯಮದಲ್ಲಿ ನಿಗದಿಪಡಿಸಿರುವಂತೆ ಆಸ್ತಿ ಮತ್ತು ದಾಯಿತ್ವಗಳ ವಿವರಣಾ ಪಟ್ಟಿ ಸಲ್ಲಿಸದಿರುವಿಕೆಯ ಬಗ್ಗೆ ಸಕ್ಷಮ ಪ್ರಾಧಿಕಾರಕ್ಕೆ ಲೋಕಾಯುಕ್ತರು ವರದಿ ಮಾಡಬೇಕು. ಸಂಬಂಧಪಟ್ಟ ಸಾರ್ವಜನಿಕ ನೌಕರನಿಗೆ ಅಧಿನಿಯಮದ ಕಲಂ 22(1)ರಲ್ಲಿರುವಂಗೆ ವರದಿಯನ್ನು ಕಳಿಸಲಾಗಿತ್ತು. ಈ ವರದಿಯನ್ನು ಕಳಿಸಿದ ಎರಡು ತಿಂಗಳೊಳಗೆ ಸಂಬಂಧಪಟ್ಟ ಸಾರ್ವಜನಿಕ ನೌಕರರು ಅಧಿನಿಯಮ ಕಲಂ 22(2)ನ್ನು ಪಾಲಿಸುವಲ್ಲಿ ವಿಫಲನಾದಲ್ಲಿ ಲೋಕಾಯುಕ್ತರು ಅಂತಹ ತಪ್ಪಿತಸ್ಥ ಸಾರ್ವಜನಿಕ ನೌಕರರ ಹೆಸರುಗಳನ್ನು ರಾಜ್ಯದಲ್ಲಿ ಪ್ರಚಲಿತವಾಗಿರುವ ಮೂರು ವೃತ್ತಿಪತ್ರಿಕೆಗಳಲ್ಲಿ ಪ್ರಕಟಿಸಲಿದೆ.

 

 

ಸಾರ್ವಜನಿಕ ನೌಕರ ಎಂಬ ವ್ಯಾಖ್ಯಾನದ ಅಡಿಯಲ್ಲಿ ವಿದಾನಸಭಾ ಮತ್ತು ವಿಧಾನ ಪರಿಷತ್‌ ಎಲ್ಲಾ ಸದಸ್ಯರೂ ಸೇರಿರುತ್ತಾರೆ. ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಿರುವ 2025ರ ಆಗಸ್ಟ್‌ 28ರಂದೇ ವರದಿಯನ್ನು ಸಚಿವರು, ಶಾಸಕರಿಗೆ ಜಾರಿಯಾಗಿತ್ತು. ಆಧರೂ ಸಹ ಆಸ್ತಿ ಮತ್ತು ದಾಯಿತ್ವದ ವಿವರಣಾ ಪಟ್ಟಿಯನ್ನು ಸಲ್ಲಿಸುವಲ್ಲಿ ವಿಫಲರಾಗಿರುವುದು ಪಟ್ಟಿಯಿಂದ ತಿಳಿದು ಬಂದಿದೆ.

 

ಆಸ್ತಿ ಮತ್ತು ದಾಯಿತ್ವ ವಿವರಗಳನ್ನು ಸಲ್ಲಿಸದೇ ಇರುವ ಸಚಿವರ ಪಟ್ಟಿ

 

ಕೆ ಹೆಚ್‌ ಮುನಿಯಪ್ಪ, ದಿನೇಶ್‌ ಗುಂಡೂರಾವ್‌, ಬಿ ಝಡ್‌ ಜಮೀರ್‍‌ ಅಹಮದ್‌ ಖಾನ್‌, ರಹೀಂ ಖಾನ್‌, ಕೆ ವೆಂಕಟೇಶ್‌, ಕೆ ಎನ್‌ ರಾಜಣ್ಣ

 

 

ವಿಧಾನಸಭೆ ಸದಸ್ಯರ ಪಟ್ಟಿ

 

ಲಕ್ಷ್ಮಣ ಸವದಿ, ಅಶೋಕ್ ಮಹಾದೇವಪ್ಪ ಪಟ್ಟಣ, ಹೆಚ್‌ ವಾಯ್‌ ಮೇಟಿ, ವಿಜಯಾನಂದ ಕಾಶಪ್ಪನವರ, ಕಟಕದೊಂಡ ವಿಠಲ ದೊಂಡಿಬಾ, ಎಂ ವೈ ಪಾಟೀಲ್‌, ಅಲ್ಲಮ ಪ್ರಭು ಪಾಟೀಲ್‌, ಕನೀಝ್‌ ಫಾತಿಮಾ, ಶರಣು ಸಲಗರ, ಸಿದ್ದಪಾಟೀಲ, ಬಸನಗೌಡ ತುರವಿಹಾಳ, ಜಿ ಜನಾರ್ದನ ರೆಡ್ಡಿ, ಬಸವರಾಜ ರಾಯರೆಡ್ಡಿ, ಕೆ ರಾಘವೇಂದ್ರ ಹಿಟ್ನಾಳ್‌, ಗುರುಪಾದಗೌಡ ಸಂಗನಗೌಡ ಪಾಟೀಲ್‌, ಎನ್‌ ಹೆಚ್‌ ಕೋನರೆಡ್ಡಿ, ವಿನಯ ಕುಲಕರ್ಣಿ, ಸತೀಶ್‌ ಸೈಲ್, ದಿನಕರ್ ಕೇಶವ್ ಶೆಟ್ಟಿ, ಬಸವರಾಜ ನೀಲಪ್ಪ ಶಿವಣ್ಣನವರ್‍‌, ಜೆ ಎನ್‌ ಗಣೇಶ್‌, ಎನ್‌ ವೈ ಗೋಪಾಲಕೃಷ್ಣ, ಎಂ ಚಂದ್ರಪ್ಪ, ಲತಾ ಮಲ್ಲಿಕಾರ್ಜುನ, ಕೆ ಎಸ್ ಬಸವಂತಪ್ಪ,

 

 

ಶಾರದಾ ಪೂರ್ಯನಾಯಕ್, ಬಿ ಕೆ ಸಂಗಮೇಶ್ವರ್‍‌, ಟಿ ಡಿ ರಾಜೇಗೌಡ, ನಯನಾ ಮೋಟಮ್ಮ, ಜಿ ಹೆಚ್‌ ಶ್ರೀನಿವಾಸ್‌, ಆನಂಧ್ ಕೆ ಎಸ್‌, ಸಿ ಬಿ ಸುರೇಶ್‌ ಬಾಭು, ಡಾ ಹೆಚ್‌ ಡಿ ರಂಗನಾಥ್, ಬಿ ಸುರೇಶ್‌ ಗೌಡ, ಹೆಚ್‌ ವಿ ವೆಂಕಟೇಶ್‌, ಕೆ ಹೆಚ್‌ ಪುಟ್ಟಸ್ವಾಮಿಗೌಡ, ಎಸ್‌ ಎನ್ ಸುಬ್ಬಾರೆಡ್ಡಿ, ಬಿ ಎನ್ ರವಿಕುಮಾರ್, ಜಿ ಕೆ ವೆಂಕಟಶಿವರೆಡ್ಡಿ, ಸಮೃದ್ಧಿ ವಿ ಮಂಜುನಾಥ್‌, ರೂಪಕಲಾ ಎಂ, ಕೆ ವೈ ನಂಜೇಗೌಡ, ಕೆ ಗೋಪಾಲಯ್ಯ, ಎ ಸಿ ಶ್ರೀನಿವಾಸ, ಎನ್ ಎ ಹ್ಯಾರೀಸ್‌, ಬಿ ಶಿವಣ್ಣ, ಶ್ರೀನಿವಾಸಯ್ಯ ಎನ್‌, ಹೆಚ್‌ ಸಿ ಬಾಲಕೃಷ್ಣ,

 

 

ಸಿ ಪಿ ಯೋಗೇಶ್ವರ, ಉದಯ ಕೆ ಎಂ, ದರ್ಶನ ಪುಟ್ಟಣ್ಣಯ್ಯ, ರವಿಕುಮಾರ್ ಗಣಿಗ, ಎ ಬಿ ರಮೇಶ್‌ ಬಂಡಿಸಿದ್ದೇಗೌಡ, ಸಿ ಎನ್ ಬಾಲಕೃಷ್ಣ, ಹೆಚ್‌ ಕೆ ಸುರೇಶ್‌, ಹೆಚ್‌ ಡಿ ರೇವಣ್ಣ, ಎ ಮಂಜು, ಸಿಮೆಂಟ್‌ ಮಂಜು, ಡಾ ಭರತ್‌ ಶೆಟ್ಟಿ ವೈ, ಭಾಗೀರಥಿ ಮುರುಳ್ಯ, ರವಿಶಂಕರ್ ಡಿ , ಅನಿಲ್ ಚಿಕ್ಕಮಾದು, ಕೆ ಹರೀಶ್‌ ಗೌಡ, ಎಂ ಆರ್‍‌ ಮಂಜುನಾಥ್‌, ಎ ಆರ್ ಕೃಷ್ಣಮೂರ್ತಿ, ಸಿ ಪುಟ್ಟರಂಗಶೆಟ್ಟಿ ಅವರು ಆಸ್ತಿ ದಾಯಿತ್ವ ಪಟ್ಟಿಯನ್ನು ಸಲ್ಲಿಸದೇ ಇರುವುದು ಪಟ್ಟಿಯಿಂದ ಗೊತ್ತಾಗಿದೆ.

 

ವಿಧಾನ ಪರಿಷತ್‌ ಸದಸ್ಯರ ಪಟ್ಟಿ

 

ಸಲೀಂ ಅಹ್ಮದ್‌, ಎಚ್‌ ವಿಶ್ವನಾಥ್‌ , ಕೆ ಅಬ್ದುಲ್‌ ಜಬ್ಬಾರ್, ಎಂ ಎಲ್ ಅನಿಲ್‌ ಕುಮಾರ್, ಬಸನಗೌಡ ಬಾದರ್ಲಿ, ಗೋವಿಂದರಾಜು, ಐವನ್ ಡಿಸೋಜಾ, ಟಿ ಎನ್ ಜವರಾಯಿಗೌಡ, ಸಿ ಎನ್‌ ಮಂಜೇಗೌಡ, ಡಾ ಎಂ ಜಿ ಮುಳೆ, ಎಂ ಟಿ ಬಿ ನಾಗರಾಜು, ನಸೀರ್‍‌ ಅಹ್ಮದ್‌, ಕೆ ಎಸ್‌ ನವೀನ್,

 

ಪ್ರದೀಪ್ ಶೆಟ್ಟರ್‍‌, ಪಿ ಹೆಚ್‌ ಪೂಜಾರ್‍‌, ರಾಜೇಂದ್ರ ರಾಜಣ್ಣ, ರಾಮೋಜಿಗೌಡ, ಶಶಿಲ್ ಜಿ ನಮೋಶಿ, ಎಸ್‌ ವಿ ಸಂಕನೂರ, ಸುನೀಲ್‌ ವಲ್ಯಾಪೂರ್, ಸುನೀಲ್ ಗೌಡ ಪಾಟೀಲ್‌, ಶರವಣ ಟಿ ಎ, ವೈ ಎಂ ಸತೀಶ್‌, ಸೂರಜ್ ರೇವಣ್ಣ, ಹೆಚ್‌ ಪಿ ಸುಧಾಮ ದಾಸ್‌, ತಿಪ್ಪಣ್ಣಪ್ಪ ಕಮಕನೂರ, ಡಾ ಡಿ ತಿಮ್ಮಯ್ಯ, ಕೆ ವಿವೇಕಾನಂದ ಅವರು ಆಸ್ತಿ ವಿವರಗಳನ್ನು ಸಲ್ಲಿಸುವಲ್ಲಿ ವಿಫಲರಾಗಿದ್ದಾರೆ.

 

 

ಸಚಿವ ಡಿ ಸುಧಾಕರ್ ಅವರು ಆಸ್ತಿ ದಾಯಿತ್ವ ಪಟ್ಟಿ ಸಲ್ಲಿಸಿದ್ದಾರೆ. ಅದೇ ರೀತಿ ಬಿ ಎಂ ನಾಗರಾಜು, ಎಂ ಟಿ ಕೃಷ್ಣಪ್ಪ, ಪಠಾಣ್‌ ಯಾಸೀರ್ ಅಹ್ಮದ್‌ ಖಾನ್‌, ವಿಧಾನ ಪರಿಷತ್‌ ಸದಸ್ಯ ಚಿದಾನಂದ ಎಂ ಗೌಡ ಅವರು ನಿಗದಿತ ಕಾಲಾವಧಿ ಮುಗಿದ ನಂತರ ಆಸ್ತಿ ವಿವರ ಸಲ್ಲಿಸಿದ್ದಾರೆ.

Hot this week

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

Topics

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

Related Articles

Popular Categories

error: Content is protected !!