Friday | March 6, 2026 |

ಅನುಭವವಿಲ್ಲದ ಕಂಪನಿಗೆ 65 ಲಕ್ಷ ರು. ಮೊತ್ತದ ಯೋಜನೆ; ಐಎಂಎಸ್‌ ಟೆಂಡರ್‍‌ನಲ್ಲಿ ಅಕ್ರಮ?

Support THE-FILE

spot_img

ಬೆಂಗಳೂರು; ಡಾ ಬಾಬು ಜಗಜೀವನರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮವು ವಾಣಿಜ್ಯ ಅಭಿವೃದ್ಧಿ ತಾಂತ್ರಿಕ ಮತ್ತು ಹಣಕಾಸು ಚಟುವಟಿಕೆಗಳ ನಿರ್ವಹಣೆಗೆ ಐಎಂಎಸ್‌ ಸಾಫ್ಟ್‌ವೇರ್‍‌ ಅಭಿವೃದ್ಧಿ ಪಡಿಸುವ ಅನುಭವ ಹೊಂದಿರದೇ ಕಂಪನಿಗೆ ಕರಾರು ಒಪ್ಪಂದ ಮಾಡಿಕೊಂಡಿರುವುದು ಇದೀಗ ಬಹಿರಂಗವಾಗಿದೆ.

 

ವಿಶೇಷವೆಂದರೇ ಐಎಎಂಎಸ್‌ (INFORMATION MANAGEMENT SYSTEM) ಸಾಫ್ಟ್‌ವೇರ್‍‌ ಅಭಿವೃದ್ಧಿಪಡಿಸುವಲ್ಲಿ ಯಾವುದೇ ಅನುಭವ ಹೊಂದಿಲ್ಲ ಎಂದು ಹೇಳಲಾಗಿರುವ ಕಂಪನಿಯನ್ನೇ ಟೆಂಡರ್‍‌ನಲ್ಲಿ ಎಲ್‌ 1 ಆಗಿ ಆಯ್ಕೆ ಮಾಡಲಾಗಿತ್ತು. ಅಲ್ಲದೆ ಟೆಂಡರ್‍‌ದಾರರು ನಿಗದಿಪಡಿಸಿದ್ದ ಮೊತ್ತವೂ ಸಮರ್ಪಕವಾಗಿರಲಿಲ್ಲ. ಆದರೂ ಇಲಾಖೆಯು ಅದೇ ಕಂಪನಿಯೊಂದಿಗೇ ಕರಾರು ಒಪ್ಪಂದವನ್ನು ಮಾಡಿಕೊಂಡಿತ್ತು. ಇಲಾಖೆಯ ಈ ನಡೆಯು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

 

ಇದಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ಗೆ ದಾಖಲೆಗಳು (BJLIDC/ADMN/ADOT/49/2024-MD)  ಲಭ್ಯವಾಗಿವೆ.

 

ಲಿಡ್ಕರ್‍‌ನ ಪ್ರಧಾನ ಕಚೇರಿ, ಕೇಂದ್ರ ಉಗ್ರಾಣ, ಮಾರಾಟ ಮಳಿಗೆಗಳು, ವಾಣಿಜ್ಯ ವಿಭಾಗದ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಮಗ್ರವಾದ ಬಿಲ್ಲಿಂಗ್‌ ಮತ್ತು ಇನ್‌ವಂಟ್ರಿ ನಿರ್ವಹಣೆ ತಂತ್ರಾಂಶ ಅಳವಡಿಸಲು ಸಚಿವ ಡಾ ಹೆಚ್‌ ಸಿ ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ 2024ರ ಜನವರಿ 31ರಂದು ನಡೆದಿದ್ದ ಸಭೆಯು ತೀರ್ಮಾನಿಸಿತ್ತು. ಸಭೆಯ ತೀರ್ಮಾನದಂತೆ ಟೆಂಡರ್‍‌ ಆಹ್ವಾನಿಸಲಾಗಿತ್ತು.

 

 

ಈ ಟೆಂಡರ್‍‌ನಲ್ಲಿ ಭಾಗವಹಿಸಿದ್ದ ಕಂಪನಿಗಳ ಪೈಕಿ ಸನ್‌ ಪ್ಲಸ್‌ ಸಾಫ್ಟ್‌ವೇರ್‍‌ ಟೆಕ್ನಾಲಜೀಸ್‌ ಪ್ರೈ ಜಿಎಸ್‌ಟಿ ಒಳಗೊಂಡಂತೆ ನಮೂದಿಸಿದ್ದ ದರದೊಂದಿಗೆ ಸಂಧಾನ ನಡೆಸಿದ ನಂತರ 65.00 ಲಕ್ಷ ರು.ಗೆ ಒಪ್ಪಿತ್ತು. ಭಾಗವಹಿಸಿದ್ದ ಇತರೆ ಕಂಪನಿಗಳಿಗೆ ಹೋಲಿಸಿದರೆ ಸನ್‌ ಪ್ಲಸ್‌ ಸಾಫ್ಟ್‌ವೇರ್‍‌ ಟೆಕ್ನಾಲಜೀಸ್‌ ಪ್ರೈ ಲಿಮಿಟೆಡ್‌ ಕಡಿಮೆ ದರ ನಮೂದಿಸಿದ್ದ ಕಾರಣ ಟೆಂಡರ್‍‌ನಲ್ಲಿ ಎಲ್‌ 1 ಆಗಿ ಹೊರಹೊಮ್ಮಿತ್ತು.

 

 

ಈ ಕಂಪನಿಗೆ 2024ರ ಮಾರ್ಚ್‌ 15ರಂದು ಕಾರ್ಯಾದೇಶವನ್ನೂ ನೀಡಲಾಗಿತ್ತು ಎಂಬುದು ದಾಖಲೆಯಿಂದ ತಿಳಿದು ಬಂದಿದೆ.

 

 

ಕಾರ್ಯಾದೇಶ ಪಡೆದುಕೊಂಡಿದ್ದ ಈ ಕಂಪನಿಯೊಂದಿಗೆ ಲಿಡ್ಕರ್‍‌ ಒಡಂಬಡಿಕೆಯನ್ನೂ ಮಾಡಿಕೊಂಡಿತ್ತು. ಈ ಕಂಪನಿಗೆ Design, Development, Deployment and Maintenance Of Information Management System (IMS) ಗೆ ಮಾತ್ರ ಸೀಮಿತವಾಗಿತ್ತು. ಆದರೆ ಈ ಕ್ಷೇತ್ರದಲ್ಲಿಯೂ ಸನ್‌ ಪ್ಲಸ್‌ ಸಾಫ್ಟ್‌ವೇರ್‍‌ ಟೆಕ್ನಾಲಜೀಸ್‌ ಪ್ರೈ ಲಿ ಗೆ ಯಾವುದೇ ಅನುಭವ ಹೊಂದಿರಲಿಲ್ಲ ಎಂಬುದು ಗೊತ್ತಾಗಿದೆ.

 

‘ಐಎಂಎಸ್‌ ಸಾಫ್ಟ್‌ವೇರ್‍‌ ಅಭಿವೃದ್ಧಿಪಡಿಸಲು ಎಲ್‌ 1 ಆಗಿ ಆಯ್ಕೆಯಾದ ಸಂಸ್ಥೆಯು ಸಪ್ಲೈ ಚೈನ್‌ ಮ್ಯಾನೇಜ್‌ಮೆಂಟ್‌ (SCM) ಅಭಿವೃದ್ಧಿಪಡಿಸುವಲ್ಲಿ ಯಾವುದೇ ಅನುಭವ ಹೊಂದಿರುವುದಿಲ್ಲ. ಅಲ್ಲದೇ ಎಸ್‌ಸಿಎಂ ಗೆ ಟೆಂಡರ್‍‌ನಲ್ಲಿ ಟೆಂಡರ್‍‌ದಾರರು ಮತ್ತು ಎಲ್‌-1 ಆಗಿ ಹೊರಹೊಮ್ಮಿದ ಟೆಂಡರ್‍‌ದಾರರು ನಿಗದಿಪಡಿಸಿದ ಮೊತ್ತವೂ ಸಮರ್ಪಕವಾಗಿರುವುದಿಲ್ಲ,’ ಎಂದು ಇಲಾಖೆಯ ಐಟಿ ಸಲಹೆಗಾರರು ಅಭಿಪ್ರಾಯ ನೀಡಿದ್ದರು ಎಂಬುದು ತಿಳಿದು ಬಂದಿದೆ.

 

 

ಇ-ಕಾಮರ್ಸ್‌ನಲ್ಲಿ ವಾಣಿಜ್ಯ ಚಟುವಟಿಕೆ ನಡೆಯಲು ಈ ತಂತ್ರಾಂಶವು ನಿರ್ಣಾಯವಾಗಿದೆ. ಆದರೂ ಈ ವಿಚಾರದಲ್ಲಿ ತುಂಬಾ ವಿಳಂಬವಾಗಿತ್ತು. ಇದೊಂದು ಗಂಭೀರವಾದ ವಿಷಯವಾಗಿದ್ದರೂ ಸಹ ಇಲಾಖೆಯ ಉನ್ನತ ಅಧಿಕಾರಿಗಳು, ಅನುಭವವನ್ನೇ ಹೊಂದಿರದ ಕಂಪನಿಗೆ ಆದೇಶ ನೀಡಿದಲ್ಲದೇ ಕರಾರು ಒಡಂಬಡಿಕೆ ಮಾಡಿಕೊಂಡಿದ್ದರು. ಇದು ಹಲವು ಸಂಶಯಗಳಿಗೆ ದಾರಿಮಾಡಿಕೊಟ್ಟಂತಾಗಿದೆ.

 

ಈ ಎಲ್ಲಾ ಬೆಳವಣಿಗಳ ಕುರಿತು ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇಜರ್‍‌ ಮಣಿವಣ್ಣನ್‌ ಅವರೂ ಸಹ ಅಧಿಕಾರಿಗಳೊಂದಿಗೆ ಚರ್ಚಿಸಿದ್ದರು ಎಂದು ಗೊತ್ತಾಗಿದೆ.

 

ಚರ್ಮೋತ್ಪನ್ನಗಳ ವಹಿವಾಟು ನಿರ್ವಹಣೆ, ಬಳಕೆದಾರರ, ಗ್ರಾಹಕ ಸ್ನೇಹಿ ಮತ್ತು ವಹಿವಾಟಿನಲ್ಲಿ ಹೆಚ್ಚು ಪಾರದರ್ಶಕ ಹಾಗೂ ದಕ್ಷತೆ ಸಾಧಿಸಲು ನಿಗಮವು ಹೊಂದಿತ್ತು. ಪ್ರಧಾನ ಕಚೇರಿ, ಆಡಳಿತ ವಿಭಾಗ, ವಾಣಿಜ್ಯ ವಿಭಾಗ, ಲೆಕ್ಕಪತ್ರ ವಿಭಾಗ, ಕೇಂದ್ರ ಉಗ್ರಾಣ, ಮಾರಾಟ ಮಳಿಗೆಗಳ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಮಗ್ರವಾದ ಬಿಲ್ಲಿಂಗ್‌ ಮತ್ತು ಇನ್‌ವೆಂಟ್ರಿ ನಿರ್ವಹಣೆ ತಂತ್ರಾಂಶಕ್ಕೆ ಮೊರೆ ಹೋಗಿದ್ದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img
error: Content is protected !!