Friday | March 27, 2026 |

ಇತ್ಯರ್ಥವಾಗದ 6,474 ಸಾರ್ವಜನಿಕರ ಮನವಿ; ಗೃಹ ಇಲಾಖೆಯಲ್ಲಿಯೇ ಅತೀ ಹೆಚ್ಚು ಬಾಕಿ

Support THE-FILE

spot_img

ಬೆಂಗಳೂರು; ಸಾರ್ವಜನಿಕರು ಕೇಂದ್ರೀಕೃತ ಸಾರ್ವಜನಿಕ ಕುಂದುಕೊರತೆ ಪರಿಹಾರ ಮತ್ತು ಮೇಲ್ವಿಚಾರಣಾ ವ್ಯವಸ್ಥೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡರಲ್ಲೂ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದಂತೆ ಸಲ್ಲಿಸುವ ಕುಂದುಕೊರತೆಗಳ ಅರ್ಜಿಗಳು ಸಕಾಲದಲ್ಲಿ ವಿಲೇವಾರಿ ಆಗುತ್ತಿಲ್ಲ. 2026ರ ಜನವರಿ 12ರ ಅಂತ್ಯಕ್ಕೆ ರಾಜ್ಯದಲ್ಲಿ ಒಟ್ಟಾರೆ 6,474 ಸಾರ್ವಜನಿಕರ ಮನವಿಗಳು ಇತ್ಯರ್ಥವಾಗದೇ ಬಾಕಿ ಉಳಿದಿವೆ.

 

ಸಾರ್ವಜನಿಕರು ಕೇಂದ್ರೀಕೃತ ಸಾರ್ವಜನಿಕ ಕುಂದುಕೊರತೆ ಪರಿಹಾರ ಮತ್ತು ಮೇಲ್ವಿಚಾರಣಾ ವ್ಯವಸ್ಥೆ ಮೂಲಕ ಸಲ್ಲಿಕೆಯಾಗಿರುವ ಸಾರ್ವಜನಿಕರ ಮನವಿಗಳನ್ನು ಶೀಘ್ರಗತಿಯಲ್ಲಿ ಇತ್ಯರ್ಥಗೊಳಿಸಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಸರ್ಕಾರದ ಎಲ್ಲಾ ಇಲಾಖೆಗಳ ಸಾರ್ವಜನಿಕ ಮನವಿಗಳ ನಿರ್ವಾಹಣಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.

 

2026ರ ಜನವರಿ 14ರಂದು ನೀಡಿರುವ ನಿರ್ದೇಶನದ ಪ್ರತಿಯು ‘ದಿ ಫೈಲ್’ಗೆ ಲಭ್ಯವಾಗಿದೆ.

 

ಇತ್ಯರ್ಥವಾಗದೇ ಬಾಕಿ ಇರುವ 6,474 ಮನವಿಗಳ ಪೈಕಿ ಗೃಹ ಇಲಾಖೆಯಲ್ಲಿಯೇ ಅತೀ ಹೆಚ್ಚು ಎಂದರೇ 1,729 ಮನವಿಗಳು ಇತ್ಯರ್ಥಕ್ಕಾಗಿ ಬಾಕಿ ಇವೆ. ಅಲ್ಲದೇ ಉಳಿದ ಇಲಾಖೆಗಳಿಗಿಂತಲೂ ಗೃಹ ಇಲಾಖೆಯಲ್ಲಿಯೇ ಅತೀ ಹೆಚ್ಚು ಬಾಕಿ ಇರುವುದು ಪತ್ರದಿಂದ ತಿಳಿದು ಬಂದಿದೆ.

 

 

ಇತ್ಯರ್ಥವಾಗದ ಮನವಿಗಳ ಸಂಖ್ಯೆ

 

ಕಂದಾಯ ಇಲಾಖೆಯಲ್ಲಿ 654, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯಲ್ಲಿ 592, ನಗರಾಭಿವೃದ್ಧಿಯಲ್ಲಿ 461, ಆರೋಗ್ಯ ಕುಟುಂಬ ಕಲ್ಯಾಣದಲ್ಲಿ 411, ಸಾರಿಗೆಯಲ್ಲಿ 252, ಕೃಷಿಯಲ್ಲಿ 226, ಶಾಲಾ ಶಿಕ್ಷಣ, ಸಾಕ್ಷರತೆಯಲ್ಲಿ 212, ಉನ್ನತ ಶಿಕ್ಷಣದಲ್ಲಿ 194, ಕಾರ್ಮಿಕ ಇಲಾಖೆಯಲ್ಲಿ 159, ಕೈಗಾರಿಕೆ ವಾಣಿಜ್ಯದಲ್ಲಿ 143, ಲೋಕೋಪಯೋಗಿಯಲ್ಲಿ 140, ಸಹಕಾರದಲ್ಲಿ 121, ಇಂಧನದಲ್ಲಿ 120, ಆರ್ಥಿಕ ಇಲಾಖೆಯಲ್ಲಿ 82 ಮನವಿಗಳು ಇತ್ಯರ್ಥಕ್ಕೆ ಬಾಕಿ ಉಳಿದಿವೆ.

 

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿಯಲ್ಲಿ 79, ವಸತಿಯಲ್ಲಿ 75, ಅರಣ್ಯ, ಜೀವಿ ಪರಿಸರದಲ್ಲಿ 55, ಸಮಾಜ ಕಲ್ಯಾಣದಲ್ಲಿ 47, ವೈದ್ಯಕೀಯ ಶಿಕ್ಷಣದಲ್ಲಿ 31, ಕಾನೂನು ಇಲಾಖೆಯಲ್ಲಿ 29, ಕೌಶಲ್ಯ, ಜೀವನೋಪಾಯ ಇಲಾಖೆಯಲ್ಲಿ 28, ಆಹಾರ, ನಾಗರಿಕ ಸರಬರಾಜು ಇಲಾಖೆಯಲ್ಲಿ 24, ಪಶುಸಂಗೋಪನೆ ಇಲಾಖೆಯಲ್ಲಿ 22, ಡಿಪಿಎಆರ್‍‌ನಲ್ಲಿ 14, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 11, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯಲ್ಲಿ 11 ಮನವಿಗಳು ಇತ್ಯರ್ಥಕ್ಕೆ ಕಾದು ಕುಳಿತಿವೆ.

 

 

ತೋಟಗಾರಿಕೆಯಲ್ಲಿ 10, ಅಲ್ಪಸಂಖ್ಯಾತರ ಇಲಾಖೆಯಲ್ಲಿ 9, ಕನ್ನಡ ಸಂಸ್ಕೃತಿಯಲ್ಲಿ 8, ಡಿಪಿಎಆರ್ ( ಇ ಆಡಳಿತ) ನಲ್ಲಿ 8, ಡಿಪಿಎಆರ್‍‌ ಆಡಳಿತ ಸುಧಾರಣೆಯಲ್ಲಿ 7, ಯುವ ಸಬಲೀಕರಣ ಕ್ರೀಡಾ ಇಲಾಖೆಯಲ್ಲಿ 6, ಸಾರ್ವಜನಿಕ ಉದ್ದಿಮೆಗಳ ಇಲಾಖೆಯಲ್ಲಿ 5, ಪ್ರವಾಸೋದ್ಯಮದಲ್ಲಿ 4, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿ 4, ಮಾಹಿತಿ ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ 3, ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ 1, ಸಣ್ಣ ನೀರಾವರಿಯಲ್ಲಿ 3 ಮನವಿಗಳು ಇತ್ಯರ್ಥವಾಗಿಲ್ಲ.

 

ಏನಿದು ಸಿಪಿಗ್ರಾಮ್ಸ್‌?

 

ಸಾರ್ವಜನಿಕರು ಈ ಹಿಂದೆ ಸರ್ಕಾರದ ಸೇವೆಗಳನ್ನು ಪಡೆಯಲು ಸಾಧ್ಯವಾಗದೇ ಇದ್ದಾಗ ಅಥವಾ ಯೋಜನೆಯ ಫಲಾನುಭವ ತಲುಪದೇ ಇದ್ದ ಸಂದರ್ಭದಲ್ಲಿ ಕುಂದುಕೊರತೆಯನ್ನ ಅಧಿಕಾರಿಗಳ ಬಳಿ ಹೇಳಿಕೊಂಡು ಅದಕ್ಕೆ ಪರಿಹಾರ ಕಂಡುಕೊಳ್ಳುವುದಕ್ಕೆ ಹರ ಸಾಹಸ ಪಡಬೇಕಾದ ಪರಿಸ್ಥಿತಿ ಇದೆ. ಇಂತಹ ಪರಿಸ್ಥಿತಿಯನ್ನು ಕೊನೆಗಾಣಿಸಲು ಆನ್‌ಲೈನ್‌ನಲ್ಲಿಯೇ ದೂರು, ಮನವಿ ಸಲ್ಲಿಸಲು ಸಿಪಿ ಗ್ರಾಮ್ಸ್‌ ಪೋರ್ಟಲ್‌ ಅಭಿವೃದ್ಧಿಪಡಿಸಿದೆ.

 

ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡರಲ್ಲೂ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ಸಾರ್ವಜನಿಕರು 24/7 ಸಲ್ಲಿಸಲು ಅನುವು ಮಾಡಿಕೊಡುವ ಆನ್‌ಲೈನ್ ವೇದಿಕೆಯಾಗಿದೆ. ರಸ್ತೆಗಳಲ್ಲಿನ ಗುಂಡಿಗಳನ್ನು ಸರಿಪಡಿಸುವುದು, ವಿದ್ಯುತ್ ಸಮಸ್ಯೆಗಳು, ಪಾಸ್‌ಪೋರ್ಟ್ ವಿಳಂಬಗಳು ಮತ್ತು ಗಮನ ಅಗತ್ಯವಿರುವ ಇತರ ಸರ್ಕಾರಿ ಸಂಬಂಧಿತ ಸೇವೆಗಳಂತಹ ಕುಂದುಕೊರತೆಗಳಿಗಾಗಿ ನಾಗರಿಕರು, ಕೇಂದ್ರೀಕೃತ ಸಾರ್ವಜನಿಕ ಕುಂದುಕೊರತೆ ಪರಿಹಾರ ಮತ್ತು ಮೇಲ್ವಿಚಾರಣಾ ವ್ಯವಸ್ಥೆಯ ಪೋರ್ಟಲ್‌ನಲ್ಲಿ ಆನ್‌ಲೈನ್‌ನಲ್ಲಿ ದೂರು ಸಲ್ಲಿಸಬಹುದು.

 

ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳನ್ನು ಸಂಪರ್ಕಿಸುವ ಏಕೈಕ ವೇದಿಕೆಯಾಗಿದೆ. ನಾಗರಿಕರು ಸೇವೆಗಳ ವಿತರಣೆಗೆ ಸಂಬಂಧಿಸಿದ ದೂರುಗಳನ್ನು ಸಲ್ಲಿಸಲು, ಅವುಗಳ ಪ್ರಗತಿಯನ್ನು ಟ್ರ್ಯಾಕ್ ಮಾಡಲು ಮತ್ತು ಪರಿಹಾರ ತೃಪ್ತಿದಾಯಕವಾಗಿಲ್ಲದಿದ್ದರೆ ಮೇಲ್ಮನವಿ ಸಲ್ಲಿಸಲು ಸಹ ಅವಕಾಶವಿದೆ. ಕರ್ನಾಟಕ ರಾಜ್ಯದ ವಿವಿಧ ಇಲಾಖೆಗಳ ಸೇವೆಗಳಿಗೆ ಮತ್ತು ಯೋಜನೆಗಳಿಗೆ ಸಂಬಂಧಿಸಿದ ಸಾರ್ವಜನಿಕ ಕುಂದುಕೊರತೆಗಳ/ ದೂರುಗಳ ದಾಖಲಾತಿಗಾಗಿ ನಾಗರಿಕರು ಅಲೆದಾಡುವ ಅವಶ್ಯಕತೆ ಇರುವುದಿಲ್ಲ.

 

ಇದನ್ನು ಸುಲಭಗೊಳಿಸಲು, ಕರ್ನಾಟಕ ಸರ್ಕಾರವು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಇ-ಆಡಳಿತ) ಇಲಾಖೆಯ ಅಧೀನ ಸಂಸ್ಥೆಯಾದ ಇ-ಆಡಳಿತ ಕೇಂದ್ರದಡಿಯಲ್ಲಿ ʼಜನಸ್ಪಂದನʼ ಕರ್ನಾಟಕ ಸರ್ಕಾರದ ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ (iPGRS) ಎಂಬ ಬಹು-ಮುಖಿಯಾದ, ದತ್ತಾಂಶ-ಆಧಾರಿತ ಮತ್ತು ಕಾಗದರಹಿತ ತಂತ್ರಾಂಶ ವ್ಯವಸ್ಥೆಯನ್ನು ರೂಪಿಸಿದೆ. ನಾಗರಿಕರಿಂದ ಕುಂದುಕೊರತೆಗಳನ್ನು / ದೂರುಗಳನ್ನು ಸ್ವೀಕರಿಸಲು 3ನೇ ಸೆಪ್ಟೆಂಬರ್ 2021 ರಿಂದ ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ ಸಹಾಯವಾಣಿ 1902 ಕಾರ್ಯನಿರ್ವಹಿಸುತ್ತಿದೆ.

 

ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆಯಲ್ಲಿ ತುರ್ತು ಸೇವೆಗಳಾದ ಪೊಲೀಸ್ / ಅಗ್ನಿಶಾಮಕ /ಆಂಬ್ಯುಲೆನ್ಸ್ / ವಿಕೋಪ ಪರಿಹಾರ ಸೇವೆಗಳ ಸಹಾಯವಾಣಿ (ಸಂಖ್ಯೆ: 100, 101, 108, 1912 )ಇತ್ಯಾದಿ ಹಾಗೂ ವಾಣಿಜ್ಯ ಸೇವಾ ಭಾಗವಾಗಿ ನಿರ್ವಹಿಸಲ್ಪಡುತ್ತದೆ. ಸಹಾಯವಾಣಿ / ದೂರು ನಿರ್ವಹಣಾ ವ್ಯವಸ್ಥೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ರೀತಿಯ ಸಾರ್ವಜನಿಕರಿಂದ ದಾಖಲಿಸಲಾಗುವ ಸಾಮಾನ್ಯ ಕುಂದುಕೊರತೆ / ದೂರುಗಳನ್ನು ಸ್ವೀಕರಿಸುತ್ತದೆ.

 

ಕುಡಿಯುವ ನೀರಿನ ಸಮಸ್ಯೆ, ಸಾರ್ವಜನಿಕ ಶೌಚಾಲಯ, ಸಾರ್ವಜನಿಕ ಸಾರಿಗೆ ಸಂಪರ್ಕ, ವಿದ್ಯುತ್‌ ದೀಪ, ಕಸ ವಿಲೇವಾರಿ, ಒಳ ಚರಂಡಿ ನಿರ್ವಹಣೆ ಹಾಗೂ ಇತರೆ ಸಂಬಂಧಿತ ಸಮಸ್ಯೆಗಳ ಕುರಿತು ದೂರು ನೀಡಬಹುದು. ಕರ್ನಾಟಕ ಸರ್ಕಾರದ 3,000 ಕ್ಕೂ ಹೆಚ್ಚಿನ ಸಂಭವನೀಯ ಕುಂದುಕೊರತೆಗಳನ್ನು ಮತ್ತು ಕ್ಷೇತ್ರದ ಅಧಿಕಾರಿಗಳನ್ನು ಈ ಕಾರ್ಯಕ್ಕೆ ನಿಯೋಜಿಸಿದೆ.

 

45 ಸರ್ಕಾರಿ ಇಲಾಖೆಗಳ ಸುಮಾರು 1300 ಕ್ಕೂ ಹೆಚ್ಚು ವಿವಿಧ ಯೋಜನೆಗಳು ಮತ್ತು ಸೇವೆಗಳನ್ನು ಐಪಿಜಿಎಆರ್‍‌ಸ್‌ ನಲ್ಲಿ ಅಳವಡಿಸಲಾಗಿದೆ. ಇಲ್ಲಿಯವರೆಗೆ 45 ಇಲಾಖೆಗಳ 270 ಉಪ ಇಲಾಖೆಗಳನ್ನು iಐಪಿಜಿಎಆರ್‍‌ಸ್‌ನಲ್ಲಿ ಆನ್‌ಬೋರ್ಡ್ ಮಾಡಿದೆ.

 

ನಾಗರಿಕರು ಜಾಲತಾಣಕ್ಕೆ ಭೇಟಿ ನೀಡಿ, ತಮ್ಮ ವಿಳಾಸ ಮತ್ತು ಮೊಬೈಲ್ ಸಂಖ್ಯೆ ಉಪಯೋಗಿಸಿ ಒಮ್ಮೆ ಆತನ/ಆಕೆಯ ಮೊಬೈಲ್ ಗೆ ಒಂದು ಬಾರಿ ಬರುವ ಓ.ಟಿ.ಪಿ ಉಪಯೋಗಿಸಿ ನೋಂದಾಯಿಸಿಕೊಳ್ಳಬಹುದು. ನಂತರ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ದೂರು/ಕುಂದುಕೊರತೆಗಳನ್ನು ದಾಖಲಿಸಬಹುದು.

 

ದೂರು/ಕುಂದುಕೊರತೆಗಳ ನಿವಾರಣೆ ನಂತರ ನಾಗರಿಕರಿಗೆ ಕರೆ ಮಾಡುವ ಮೂಲಕ ಪ್ರತಿಕ್ರಿಯೆ ಪಡೆದ ನಂತರವೇ ದೂರನ್ನು ಅಂತಿಮವಾಗಿ ಮುಕ್ತಾಯಗೊಳಿಸಲಾಗುವುದು. ಇನ್ನೂ ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ನಾಗರಿಕರು ಸಹಾಯವಾಣಿ ಸಂಖ್ಯೆ 1902 ಅನ್ನು ಸಂಪರ್ಕಿಸಲು ಅವಕಾಶ ಕಲ್ಪಿಸಿದೆ.

Hot this week

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

Topics

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

Related Articles

Popular Categories

error: Content is protected !!