Tuesday | May 12, 2026 |

ಅಂಬೇಡ್ಕರ್, ಜಗಜೀವನ್ ರಾಂ ಪ್ರಶಸ್ತಿಗೆ ಲಾಬಿ!; ಸರಜೂ ಕಾಟ್ಕರ್ ಸೇರಿ ಹಲವರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯು ಪ್ರತೀ ಏಪ್ರಿಲ್ ತಿಂಗಳಲ್ಲಿ ನೀಡುವ ಡಾ ಬಿ ಆರ್ ಅಂಬೇಡ್ಕರ್ ಮತ್ತು ಡಾ ಬಾಬುಜಗಜೀವನ ರಾಂ ಪ್ರಶಸ್ತಿಗಳಿಗೆ ಲಾಬಿ ಶುರುವಾಗಿದೆ. ಆಕಾಂಕ್ಷಿಗಳ ಹೆಸರಿನಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿಗಳು, ದಲಿತ ಸಮುದಾಯಕ್ಕೆ ಸೇರಿದ ವಿವಿಧ ಸಂಘಟನೆಗಳು, ಮುಖಂಡರು ಮತ್ತು ಆಕಾಂಕ್ಷಿಗಳೇ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಸೇರಿದಂತೆ ಹಲವರಿಗೆ ವೈಯಕ್ತಿಕವಾಗಿ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ. ಹಲವರು ತೆರೆಮರೆಯಲ್ಲಿ ಲಾಬಿ ಆರಂಭಿಸಿದ್ದಾರೆ.

ಈ ಪೈಕಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯು ಹಿರಿಯ ಸಾಹಿತಿ ಡಾ ಸರಜೂ ಕಾಟ್ಕರ್ ಅವರಿಗೆ ಪ್ರಶಸ್ತಿ ನೀಡಬೇಕು ಎಂದು ಮನವಿ ಮಾಡಿದೆ. ಅಲ್ಲದೇ ದಲಿತ ಸಮುದಾಯದ ವಿಠಲ್ ವಗ್ಗನ್ ಸೇರಿದಂತೆ 13 ಮಂದಿಗೆ ಪ್ರಶಸ್ತಿ ಕೊಡಿಸಲು ವಿವಿಧ ಮುಖಂಡರು ಸರ್ಕಾರದ ಕದ ತಟ್ಟಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಕೆಯಾಗಿರುವ ಈ ಎಲ್ಲಾ ಅರ್ಜಿಗಳನ್ನು ಕ್ರೋಢೀಕರಿಸಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಯು 2026ರ ಮಾರ್ಚ್‌ 31ರಂದು ಇಲಾಖೆಯ ಆಯುಕ್ತರಿಗೆ ಕಳಿಸಿದ್ದಾರೆ. ಈ ಪತ್ರ ಮತ್ತು ವಿವಿಧ ಮುಖಂಡರು ಸಲ್ಲಿಸಿರುವ ಶಿಫಾರಸ್ಸು ಪತ್ರಗಳು ‘ದಿ ಫೈಲ್’ಗೆ ಲಭ್ಯವಾಗಿವೆ.

ಸರಜೂ ಕಾಟ್ಕರ್ ಅವರಿಂದ ಅರ್ಜಿ ಸಲ್ಲಿಕೆ

ಡಾ ಸರಜೂ ಕಾಟ್ಕರ್ ಅವರು ಡಾ ಅಂಬೇಡ್ಕರ್ ಪ್ರಶಸ್ತಿಗಾಗಿ ವೈಯಕ್ತಿಕವಾಗಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ಜತೆ ತಮ್ಮ ಸ್ವವಿವರಗಳನ್ನೂ ಸಲ್ಲಿಸಿದ್ದಾರೆ.

 

 

‘ಕರ್ನಾಟಕ ಸರ್ಕಾರವು ಭಾರತ ರತ್ನ ಡಾ ಬಿ ಆರ್ ಅಂಬೇಡ್ಕರ್ ಅವರ ಹೆಸರಿನ ಪ್ರಶಸ್ತಿಯನ್ನು ಸ್ಥಾಪಿಸಿ ಅವರ ವಿಚಾರಗಳಿಗೆ ಗೌರವ ನೀಡಿದೆ. ಈ ಪ್ರಶಸ್ತಿಗೆ ಭಾಜನನಾಗಬೇಕು ಎಂದು ನಾನು ಆಕಾಂಕ್ಷಿಯಾಗಿದ್ದೇನೆ,’ ಎಂದು ವೈಯಕ್ತಿಕ ಸಾಧನೆಯ ವಿವರಗಳನ್ನೂ ಸಲ್ಲಿಸಿರುವುದು ಗೊತ್ತಾಗಿದೆ.

 

ಅಲ್ಲದೇ ಸರಜೂ ಕಾಟ್ಕರ್ ಅವರ ಪರವಾಗಿ ಬೆಳಗಾವಿಯ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಅನಂತಕುಮಾರ್ ಬ್ಯಾಕೂಡ ಅವರು ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ. ಹಿರಿಯ ಸಾಹಿತಿ ಮತ್ತು ಸಮಾಜ ಚಿಂತಕ ಡಾ ಸರಜೂ ಕಾಟ್ಕರ್ ಅವರಿಗೆ 2026ನೇ ಸಾಲಿನ ಅಂಬೇಡ್ಕರ್ ಪ್ರಶಸ್ತಿಯನ್ನು ನೀಡಬೇಕು ಕೋರಿರುವುದು ತಿಳಿದು ಬಂದಿದೆ.

 

 

ಈ ಮನವಿಯನ್ನು ಪರಿಶೀಲಿಸಿರುವ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಡಾ ವೆಂಕಟೇಶಯ್ಯ ಅವರು ಈ ಕೋರಿಕೆಯನ್ನು ಪರಿಶೀಲಿಸಿ ನಿಯಮಾನುಸಾರ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಇಲಾಖೆಯ ಸರ್ಕಾರದ ಕಾರ್ಯದರ್ಶಿಗೆ 2026ರ ಮಾರ್ಚ್‌ 13ರಂದೇ ಟಿಪ್ಪಣಿ ಹೊರಡಿಸಿದ್ದಾರೆ.

 

 

ಡಾ ಸರಜೂ ಕಾಟ್ಕರ್ ಅವರು ಹಿಂದುಳಿದ ಮರಾಠ ಜಾತಿಗೆ ಸೇರಿದವರಾಗಿದ್ದಾರೆ. ಬಸವಲಿಂಗಪ್ಪ ಅವರು ನೀಡಿದ್ದ ಬೂಸಾ ಹೇಳಿಕೆ ಪರವಾಗಿ ಹುಬ್ಬಳ್ಳಿಯಲ್ಲಿ ವಿಚಾರ ಸಂಕಿರಣ ಏರ್ಪಡಿಸಿದ್ದರು. ಮರಾಠಿ ಭಾಷೆಯಲ್ಲಿ ಪ್ರಕಟಗೊಂಡಿದ್ದ ಅಂಬೇಡ್ಕರ್ ಸಾಹಿತ್ಯ ಅಥವಾ ದಲಿತ ಸಾಹಿತ್ಯ ಅಭ್ಯಸಿಸಿ ಅಮರಶೇಖ, ಉತ್ತಮ ಕಾಂಬಳೆ ಮುಂತಾದವರ ಕವಿತೆಗಳನ್ನು ಕನ್ನಡಕ್ಕೆ ಮೊಟ್ಟ ಮೊದಲ ಬಾರಿಗೆ ಅನುವಾದಿಸಿದ್ದಾರೆ ಎಂದು ಪಟ್ಟಿಯನ್ನು ನೀಡಿರುವುದು ಗೊತ್ತಾಗಿದೆ.

 

 

ಮರಾಠಿ ದಲಿತ ಕಾವ್ಯ ಕೃತಿ, ದಸಂಸದ ಜತೆಗೆ ಆತ್ಮೀಯ ಸಂಬಂಧ ಮತ್ತು ಡಿಎಸ್‌ಎಸ್‌ ಹೋರಾಟಗಳಲ್ಲಿ ಭಾಗಿಯಾಗಿರುವುದು, ಕೋರೆಗಾಂವ ಯುದ್ದದ ಬಗ್ಗೆ ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಜಾಗೃತಿ ಮೂಡಿಸಿರುವುದು, ಅಲ್ಲದೇ ಕೋರೆಗಾಂವ ಕೃತಿ ಪ್ರಕಟಿಸಿರುವುದು, ಬೆಂಡಿಗೇರಿ ಎಂಬ ಗ್ರಾಮದಲ್ಲಿ ದಲಿತ ಯುವಕರಿಗೆ ಮಲ ತಿನ್ನಿಸಿದ ಪ್ರಕರಣವನ್ನು ಮೊಟ್ಟಮೊದಲ ಬಾರಿಗೆ ಭೇದಿಸಿರುವುದು ಸೇರಿದಂತೆ ಹಲವು ಕೃತಿಗಳ ಪಟ್ಟಿಯನ್ನು ಮನವಿಯಲ್ಲಿ ಗಮನ ಸೆಳೆದಿರುವುದು ತಿಳಿದು ಬಂದಿದೆ.

ವಿಠಲ ವಗ್ಗನ್ ಎಂಬುವರು ಸಹ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಹೆಚ್‌ ಸಿ ಮಹದೇವಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.

 

 

‘ಇಲ್ಲಿಯವರೆಗೆ 8 ಕೃತಿಗಳನ್ನು ರಚನೆ ಮಾಡಿದ್ದು ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರ ಕುರಿತು ದಾಖಲೆ ಸಹಿತ ವಿಷಯ ಮಂಡಿಸುವ ಸಮರ್ಥ ಹೊಂದಿದ್ದೇನೆ. ಇಡೀ ರಾಜ್ಯಾದ್ಯಂತ ಈಗಲೂ ಎಲ್ಲಾ ಜಿಲ್ಲೆಗಳಿಗೂ ಮುಖ್ಯ ಭಾಷಣಕಾರನಾಗಿ ಹೋಗಿ ವಿಷಯಗಳನ್ನು ಮಂಡಿಸಿ ಬಂದಿದ್ದೇನೆ. ಈಗಲೂ ಕೂಡ ನಾಲ್ಕು ಸಂಶೋಧನಾ ಕೃತಿಗಳು ಮುದ್ರಣದ ಹಂತದಲ್ಲಿವೆ. ನನ್ನ ಸಾಮಾಜಿಕ ಸೇವೆಯನ್ನು ಪರಿಗಣಿಸಿ 2025-26ನೇ ಸಾಲಿನ ಡಾ ಅಂಬೇಡ್ಕರ್ ಪ್ರಶಸ್ತಿಗೆ ನನ್ನನ್ನು ಆಯ್ಕೆ ಮಾಡಬೇಕು,’ ಎಂದು ಕೋರಿರುವುದು ಗೊತ್ತಾಗಿದೆ.

ಅದೇ ರೀತಿ ಮಾಜಿ ದೇವದಾಸಿ ಮಹಿಳೆ ಐರಾವತಿ ರಾಮಪ್ಪ ಮಾಂಗ, ಸಿ ಕೆ ಶಿವರತ್ನ, ಹಾಸನ ಜಿಲ್ಲೆಯ ಜಾನಪದ ಕಲಾವಿದ ಶಿವಣ್ಣ ಎಸ್, ಪದ್ಮಶ್ರೀ ಪುರಸ್ಕೃತೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ, ಪರಶುರಾಮ ಮಾರುತಿ ಕರನಿಂಗ, ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ ಸಿ ಎಸ್‌ ಟಿ ನೌಕರರ ಸಮನ್ವಯ ಸಮಿತಿಯ ಅಧ್ಯಕ್ಷ ಡಿ ಶಿವಶಂಕರ್ ಅವರು ಸಹ ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಸಲ್ಲಿಸಿರುವುದು ತಿಳಿದು ಬಂದಿದೆ.

 

 

 

ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಯು ಸಾಮಾಜಿಕ ಸಮಾನತೆ, ನ್ಯಾಯ ಮತ್ತು ರಾಷ್ಟ್ರೀಯ ಏಕತೆಗಾಗಿ ಶ್ರಮಿಸುವ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ನೀಡಲಾಗುವ ಪ್ರತಿಷ್ಠಿತ ಗೌರವವಾಗಿದೆ. ಭಾರತ ಸರ್ಕಾರವು 1992 ರಲ್ಲಿ ಸ್ಥಾಪಿಸಿದ ಈ ರಾಷ್ಟ್ರೀಯ ಪ್ರಶಸ್ತಿಯು ₹10 ಲಕ್ಷ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಇದಲ್ಲದೆ, ಕರ್ನಾಟಕ ಸರ್ಕಾರವು ಪ್ರತಿವರ್ಷ ರಾಜ್ಯ ಮಟ್ಟದ ಅಂಬೇಡ್ಕರ್ ಪ್ರಶಸ್ತಿಗಳನ್ನು ಸಾಧಕರಿಗೆ ನೀಡುತ್ತದೆ.

ಈ ಪ್ರಶಸ್ತಿಯು ತಲಾ 5 ಲಕ್ಷ ನಗದು, 20 ಗ್ರಾಂ ಚಿನ್ನದ ಪದಕ ಮತ್ತು ಫಲಕವನ್ನು ಹೊಂದಿದೆ. 2023ನೇ ಸಾಲಿನಲ್ಲಿ ಹರಿಹರನಂದ ಸ್ವಾಮಿ, ಇಂಧೂದರ ಹೊನ್ನಾಪುರ, ರುದ್ರಪ್ಪ ಹನಗವಾಡಿ, ಸೀತವ್ವ ಜೋಡಟ್ಟಿ, ಕೆ ಪುಂಡಲೀಕರರಾವ್ ಶೆಟ್ಟಿ ಬಾ ಅವರಿಗೆ ಅಂಬೇಡ್ಕರ್ ಪ್ರಶಸ್ತಿಗೆ ಭಾಜನರಾಗಿದ್ದರು.

2024ನೇ ಸಾಲಿನಲ್ಲಿ ಶ್ರೀಧರ ಕಲಿವೀರ, ಮಲ್ಲಾಜಮ್ಮ, ರಾಮದೇವ ರಾಕೆ, ವೈ ಬಿ ಹಿಮ್ಮಡಿ, ಲಕ್ಷ್ಮೀಪತಿ ಕೋಲಾರ ಇವರು ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತರಾಗಿದ್ದರು. 2025ನೇ ಸಾಲಿನಲ್ಲಿ ದತ್ತಾತ್ರೈ ಇಕ್ಕಳಗಿ, ಮಾವಳ್ಳಿ ಶಂಕರ್, ಎಫ್ ಎಚ್‌ ಜಕ್ಕಪ್ಪನವರ್, ಹೊನ್ನೂರು ಗೌರಮ್ಮ, ಈರಪ್ಪ ಇವರನ್ನು ಅಂಬೇಡ್ಕರ್ ಪ್ರಶಸ್ತಿಗೆ ಆಯ್ಕೆಯಾಗಿದ್ದರು.

ಬಾಬು ಜಗಜೀವನ್ ರಾಂ ಪ್ರಶಸ್ತಿಗೆ  ಕೆ ಶಿವಲಿಂಗಪ್ಪ, ಕಾರ್ಮಿಕ ಖಾತೆಯ ಮಾಜಿ ಸಚಿವ ಎಸ್‌ ಕೆ ಕಾಂತಾ ಅವರು ಭೀಮರಾಯ ಅವರಿಗೆ ನೀಡಬೇಕು ಎಂದು ಶಿಫಾರಸ್ಸು ಪತ್ರ ನೀಡಿದ್ದಾರೆ.

Hot this week

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...
Please Scan to make Your Contribution

Topics

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

Related Articles

Popular Categories

error: Content is protected !!