Friday | May 22, 2026 |

ಭೂಸ್ವಾಧೀನ; ಸರ್ಕಾರದ ಅನುಮತಿಯೇ ಇಲ್ಲ, ಆದರೂ ಅಂತಿಮ ಅಧಿಸೂಚನೆ, ಪರಿಹಾರ ಮೊತ್ತ ಠೇವಣಿ ದಾಖಲೆಯೂ ಇಲ್ಲ, ನ್ಯಾಯಾಲಯಕ್ಕೆ ತಪ್ಪು ಮಾಹಿತಿ ಕೊಟ್ಟಿದ್ದೇಕೆ?

ಬೆಂಗಳೂರು; ಭೂ ಸ್ವಾಧೀನ ಪ್ರಕ್ರಿಯೆ ಮುಂದುವರೆಸಲು ಸರ್ಕಾರವು ಅನುಮತಿ ನೀಡದೇ ಇದ್ದರೂ ಸಹ ಅಂತಿಮ ಅಧಿಸೂಚನೆ ಹೊರಡಿಸಿದ್ದಲ್ಲದೇ ನ್ಯಾಯಾಲಯಕ್ಕೂ ತಪ್ಪು  ಮಾಹಿತಿ ನೀಡಿರುವ ಪ್ರಕರಣವನ್ನು ದಿ ಫೈಲ್ ಇದೀಗ ಹೊರಗೆಡವುತ್ತಿದೆ.

ಕಲ್ಬುರ್ಗಿ ಜಿಲ್ಲೆ ಕಲ್ಬುರ್ಗಿ ತಾಲೂಕಿನ ಕವಲಗಾ (ಕೆ) ಗ್ರಾಮದ ಒಟ್ಟು 3 ಎಕರೆ 25 ಗುಂಟೆ ವಿಸ್ತೀರ್ಣದ ಜಮೀನನ್ನು ಭೂ ಸ್ವಾಧೀನಪಡಿಸಿಕೊಳ್ಳದೆಯೇ ಸೇತುವೆ-ಕಂ- ಬ್ಯಾರೇಜ್ ನಿರ್ಮಾಣ ಮಾಡಿರುವ ಪ್ರಕರಣದ ಕುರಿತು ಉಚ್ಛ ನ್ಯಾಯಾಲಯದಲ್ಲಿ ರಿಟ್‌ ಅರ್ಜಿ ಸಂಬಂಧ ನ್ಯಾಯಾಲಯವು ನೀಡಿದ್ದ ಆದೇಶವನ್ನು ಸರ್ಕಾರವು  ಪಾಲಿಸಿರಲಿಲ್ಲ. ಭೂ ಸ್ವಾಧೀನ ಪ್ರಕರಣಗಳಲ್ಲಿನ  ಅನೇಕ ಲೋಪಗಳ ಕುರಿತು ನ್ಯಾಯಾಲಯದಲ್ಲಿ ಹಲವಾರು ಅರ್ಜಿಗಳ ವಿಚಾರಣೆ ನಡೆಯುತ್ತಿರುವ ಹೊತ್ತಿನಲ್ಲೇ ಕವಲಗಾ ಪ್ರಕರಣವು ಮುನ್ನೆಲೆಗೆ ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆಯು (ಭೂ ಸ್ವಾಧೀನ) ಬೆಣ್ಣೆತೋರಾ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್‌ ಜಾರಿಗೊಳಿಸಿದೆ. ಈ ನೋಟೀಸ್‌ಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಸಚಿವ ಕೃಷ್ಣ ಬೈರೇಗೌಡ ಅವರೊಂದಿಗೆ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

2026ರ ಏಪ್ರಿಲ್‌ನಲ್ಲಿಯೇ ಹೊರಡಿಸಿರುವ ನೋಟೀಸ್‌ನ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

ಪ್ರಕರಣದ ವಿವರ

ಕಲ್ಬುರ್ಗಿ ಜಿಲ್ಲೆ ಹಾಗೂ ತಾಲೂಕಿನ ಫರತಾಹಬಾದದ ಕವಲಗಾ (ಕೆ) ಗ್ರಾಮದಲ್ಲಿ ಸಾರ್ವಜನಿಕ ಉದ್ದೇಶಿತ ಸೇತುವೆ-ಕಂ- ಬ್ಯಾರೇಜ್‌ ನಿರ್ಮಾಣಕ್ಕೆ ಜಮೀನುಗಳ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿತ್ತು. ಗೀನಾಬಾಯಿ ಹೆಸರಿನಲ್ಲಿ 0-15, ಹಜರತಗೌಮ ಅಲಿ ಪೀಠ ದರ್ಗಾದ ಹೆಸರಿನಲ್ಲಿ 0-35, ಸತೀಶ್ ಹೆಸರಿನಲ್ಲಿ 0-20, ಪರ್ವತ @ಪರ್ವತರೆಡ್ಡಿ ಎಂಬುವರ ಹೆಸರಿನಲ್ಲಿ 1-10 ಸೇರಿ ಒಟ್ಟಾರೆ 3 ಎಕರೆ 25 ಗುಂಟೆ ಜಮೀನಿತ್ತು.

 

 

ಭೂ ಸ್ವಾಧೀನ ಕಾಯ್ದೆ ಕಲಂ 19)1) ಅನ್ವಯ 19(2)ರ ಅನ್ವಯ ಈ ಬಗ್ಗೆ ಇಲಾಖೆಯು ಘೋಷಣೆ ಮಾಡಿತ್ತು. ಈ ಬಗ್ಗೆ 2025ರ ಜನವರಿ 17ರಂದು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿತ್ತು. ಆದರೆ ಕಲಂ 15(1)ರ ಅನ್ವಯ ಯಾವುದೇ ಆಕ್ಷೇಪಣೆಗಳು ಸ್ವೀಕೃತವಾಗಿರಲಿಲ್ಲ.

 

 

 

ನಂತರ ಸೂಕ್ತ ವಿಚಾರಣೆ ನಡೆಸಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ಮುಂದುವರೆಸಲು ವಿಚಾರಣೆ ವರದಿ ಅನುಸಾರ ಕಂದಾಯ ಇಲಾಖೆಯು 2026ರ ಏಪ್ರಿಲ್‌ 21ರಂದು ಭೂ ಸ್ವಾಧೀನ ಪ್ರಕ್ರಿಯೆ ಮುಂದುವರೆಸಲು ನಿರ್ದೆಶನ ನೀಡಲಾಗಿತ್ತು. ಅಲ್ಲದೇ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಸೂಕ್ತ ಪರಿಹಾರದ ಹಕ್ಕು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ 2013ರ ಕಲಂ 19(1)ರ ಅಡಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುವುದು ಅಗತ್ಯ ಎಂದು ನಿರ್ಧರಿಸಿತ್ತು. ಅದರ ಪ್ರಕಾರ ಅಧಿನಿಯಮ 19(1)ನೇ ಪ್ರಕರಣದಂತೆ ಭೂ ಸ್ವಾಧೀನವನ್ನು ಘೋಷಿಸಿತ್ತು.

 

 

ಈ ಮಧ್ಯೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನ ಕಲ್ಬುರ್ಗಿ ಪೀಠದಲ್ಲಿ ಭೂ ಮಾಲೀಕರು ರಿಟ್‌ ಅರ್ಜಿ (ಸಂಖ್ಯೆ; 202731/2023) ಸಲ್ಲಿಸಿದ್ದರು. ಈ ಅರ್ಜಿಯನ್ನು ಆಲಿಸಿದ್ದ ಪೀಠವು ಅರ್ಜಿದಾರರಿಗೆ 2 ವಾರದೊಳಗಾಗಿ ಮನವಿ ಸಲ್ಲಿಸಬೇಕು ಮತ್ತು ಈ ಮನವಿಗಳನ್ನು 6 ವಾರದೊಳಗಾಗಿ ಪರಿಗಣಿಸಬೇಕು ಎಂದು ಹೈಕೋರ್ಟ್‌ನ ಕಲ್ಬುರ್ಗಿ ಪೀಠವು 2023ರ ಅಕ್ಟೋಬರ್‍‌ 5ರಂದು ನಿರ್ದೇಶನ ನೀಡಿತ್ತು.

ಪ್ರಸ್ತಾವಿತ ಜಮೀನನ್ನು ಭೂ ಸ್ವಾಧೀನಪಡಿಸಿಕೊಳ್ಳಲು ಒಂದು ವರ್ಷ 6 ತಿಂಗಳ ಕಾಲ ವಿಳಂಬವಾಗಿತ್ತು. ಅಲ್ಲದೇ ಭೂ ಸ್ವಾಧೀನ ಪ್ರಕರಣದಲ್ಲಿ ಸಾಮಾಜಿಕ ಪರಿಣಾಮದ ಅಧ್ಯಯನ ಮಾಡುವುದರಿಂದ ವಿನಾಯಿತಿ ನೀಡಬೇಕು ಎಂದು 2025ರ ಏಪ್ರಿಲ್‌ 8ರಂದು ಸರ್ಕಾರಕ್ಕೆ ಪ್ರಸ್ತಾವನೆಯು ಸ್ವೀಕೃತವಾಗಿತ್ತು.

ಈ ಬೆಳವಣಿಗೆ ನಡುವೆಯೇ ಭೂ ಮಾಲೀಕರು ಸಲ್ಲಿಸಿದ್ದ ರಿಟ್‌ ಅರ್ಜಿ (ಸಂಖ್ಯೆ; 202731/2023) ಗೆ ಸಂಬಂಧಿಸಿದಂತೆ ಹೈಕೋರ್ಟ್‌ನ ಕಲ್ಬುರ್ಗಿ ಪೀಠವು ನೀಡಿದ್ದ ಆದೇಶವನ್ನು ಪಾಲಿಸಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದರು. ಅಲ್ಲದೇ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ (200215/2024) ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ವಿಶೇಷ ಭೂ ಸ್ವಾಧೀನಾಧಿಕಾರಿಯು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿನ ಮೂರನೇ ಪ್ರತಿವಾದಿಯಾಗಿದ್ದ ಪರ್ವತ ರೆಡ್ಡಿ ಅವರಿಗೆ ಜಮೀನಿಗೆ ಸಂಬಂಧಿಸಿದಂತೆ ಭೂ ಸ್ವಾಧೀನಕಕ್ಕೆ ಕಲಂ 15(2)(3) ಅನ್ವಯ ಅನುಮತಿ ಪಡೆದಿದ್ದರು. ನಂತರ ಕಲಂ 19(1)ರ ಅಡಿ ಅಂತಿಮ ಅಧಿಸೂಚನೆ ಹೊರಡಿಸಲು ಕರಡನ್ನು ಸಿದ್ಧಪಡಿಸಿದ್ದರು.

ನಿಯಮಾನುಸಾರ ಐ ತೀರ್ಪು ಸಿದ್ಧಪಡಿಸಿ ಪರಿಹಾರ ಪಾವತಿಸಲು ಕ್ರಮ ವಹಿಸಲಾಗುವುದು ಎಂದು ಅಫಿಡೆವಿಟ್ ಸಲ್ಲಿಸಲಾಗಿತ್ತು. ಹೀಗಾಗಿ ನ್ಯಾಯಾಲಯವು 2025ರ ಏಪ್ರಿಲ್ 16ರಂದು ಪ್ರಕರಣವನ್ನು ಕೈ ಬಿಟ್ಟಿತ್ತು. ಆದರೆ ಪ್ರತಿವಾದಿಗಳು ಅಫಿಡವಿಟ್‌ನಲ್ಲಿ ಹೇಳಿರುವಂತೆ ಕ್ರಮವಹಿಸಲು ವಿಫಲವಾದಲ್ಲಿ ಅರ್ಜಿದಾರರು ಹೊಸದಾಗಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿತ್ತು.

ಈ ಪ್ರಕರಣದಲ್ಲಿ ಕಲಂ 15(2)(3)ರಡಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ಮುಂದುವರೆಸಲು ಸರ್ಕಾರದಿಂದ ಅನುಮತಿಯನ್ನು ಪಡೆಯದೆ ಇದ್ದರೂ ಸಹ ಕಲಂ 19(1)ರಡಿ ಅಂತಿಮ ಅಧಿಸೂಚನೆ ಹೊರಡಿಸಿ, ನಿಯಮಾನುಸಾರ ಐ ತೀರ್ಪು ಸಿದ್ಧಪಡಿಸಿ ಪರಿಹಾರ ಪಾವತಿಸಲು ಕ್ರಮವಹಿಸಲಾಗುವುದು ಎಂದು ಹೇಳಿದ್ದ ವಿಶೇಷ ಭೂ ಸ್ವಾಧೀನಾಧಿಕಾರಿಯು ಕರ್ತವ್ಯ ನಿರ್ಲಕ್ಷ್ಯ ವಹಿಸಿದ್ದರು. ಅಲ್ಲದೇ ಸರ್ಕಾರದ ಪರವಾಗಿ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ನೀಡುವ ಮೂಲಕ ಕ್ರಿಮಿನಲ್ ಕ್ರಮವಾಗಿತ್ತು ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.

ಅದೇ ರೀತಿ ಈ ಪ್ರಸ್ತಾವನೆಗೆ ಕಲಂ 10(3)ರಡಿ ಸಾಮಾಜಿಕ ಪರಿಣಾಮ ಅಧ್ಯಯನದಿಂದ ವಿನಾಯಿತಿ ನೀಡಿತ್ತು. ಕಲಂ 11(1)ರಡಿ 2025ರ ಜನವರಿ 17ರಂದು ಪ್ರಾಥಮಿಕ ಅಧಿಸೂಚನೆಯನ್ನು ರಾಜ್ಯಪತ್ರದಲ್ಲಿಯೂ ಹೊರಡಿಸಿತ್ತು. ಸುಮಾರು 1 ವರ್ಷ 3 ತಿಂಗಳುವರೆಗೆ ಕಲಂ 15(3)ರಡಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ಮುಂದುವರೆಸಲು ಸರ್ಕಾರದ ಅನುಮತಿ ಪಡೆಯಲು ಪ್ರಸ್ತಾವ ಸಲ್ಲಿಸಿರಲಿಲ್ಲ. ಈ ಬಗ್ಗೆ ವಿಳಂಬ ಮಾಡಿದ್ದ ವಿಶೇಷ ಭೂ ಸ್ವಾಧೀನಾಧಿಕಾರಿಯು 2026ರ ಫೆ.17ರಂದು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದರು.

ಈ ಪ್ರಸ್ತಾವನೆಯಲ್ಲಿಯೂ ಸಹ ಸರ್ಕಾರದ ಮಾರ್ಗಸೂಚಿ ಅನ್ವಯ ಭೂ ಕೋರಿಕಾ ಇಲಾಖೆಯು ಶೇ. 50ರಷ್ಟು ಪರಿಹಾರ ಮೊತ್ತವನ್ನು ಠೇವಣಿಕರಿಸಿರುವ ಬಗ್ಗೆ ದಾಖಲೆ ಸಲ್ಲಿಸಿರಲಿಲ್ಲ. ಹೀಗಾಗಿ ಇದೊಂದು ಅಪೂರ್ಣ ಪ್ರಸ್ತಾವವಾಗಿತ್ತು. ಇದು ವಿಶೇಷ ಭೂ ಸ್ವಾಧೀನಾಧಿಕಾರಿಯ ಕರ್ತವ್ಯಲೋಪಕ್ಕೆ ಹಿಡಿದ ಕೈಗನ್ನಡಿಯಾಗಿತ್ತು.

 

 

‘ಈ ಪ್ರಕರಣದಲ್ಲಿ ಕಲಂ 11(1)ರ ಅನ್ವಯ ಅಧಿಸೂಚನೆಯು 2026ರ ಜನವರಿ 17ಕ್ಕೆ ಅಸಿಂಧುಗೊಂಡು ಸುಮಾರು 1 ವರ್ಷ 2 ತಿಂಗಳು ಕಳೆದರೂ ಸಹ ಕಲಂ 19(7)ರಡಿ ಕಾಲಾವಧಿ ವಿಸ್ತರಣೆ ಕೋರಿ ಪ್ರಸ್ತಾವನೆಯನ್ನು ಸಲ್ಲಿಸದೇ ಇರುವುದು, ಕಲಂ 15(3) ಅನುಮೋದನೆ ಪಡೆಯದೇ ಇರುವುದು, ನ್ಯಾಯಾಲಯದ ಆದೇಶವನ್ನು ನಿಗದಿತ ಅವಧಿಯಲ್ಲಿ ಪಾಲಿಸದೇ ಇರುವುದು, ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿರುವುದು ಕರ್ತವ್ಯಲೋಪವಾಗಿರುತ್ತದೆ,’ ಎಂದು ಕಂದಾಯ ಇಲಾಖೆಯು ಬೆಣ್ಣೆತೋರಾ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿಗೆ ನೋಟೀಸ್‌ನಲ್ಲಿ ವಿವರಿಸಿರುವುದು ಗೊತ್ತಾಗಿದೆ.

Hot this week

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...

‘ನಾನು ಹೇಳೋವರೆಗೂ ಕೂಡಂಗಿಲ್ಲ, ಗೆಟ್‌ ಔಟ್‌, ಗೆಟ್‌ ಔಟ್’; ಮಂಡಳಿ ಕಾರ್ಯದರ್ಶಿಯಿಂದಲೇ ಪ್ರಾಜೆಕ್ಟ್ ಇಂಜಿನಿಯರ್ ಸಮೀರ್ ಗೆ ಅವಮಾನ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು...

52 ಕ್ರಿಮಿನಲ್ ಪ್ರಕರಣಗಳ ಹಿಂತೆಗೆತಕ್ಕೆ ಮತ್ತೆ ಚಾಲನೆ; ಡಿಜಿಐಜಿಪಿ, ಕಾನೂನು ಇಲಾಖೆ ಅಸಮ್ಮತಿ ನಡುವೆಯೂ ಪ್ರಸ್ತಾವ

ಬೆಂಗಳೂರು; ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ  ಜನಪ್ರತಿನಿಧಿಗಳ ವಿರುದ್ಧ  ದಾಖಲಾಗಿರುವ ಮತ್ತು...
Please Scan to make Your Contribution

Topics

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...

‘ನಾನು ಹೇಳೋವರೆಗೂ ಕೂಡಂಗಿಲ್ಲ, ಗೆಟ್‌ ಔಟ್‌, ಗೆಟ್‌ ಔಟ್’; ಮಂಡಳಿ ಕಾರ್ಯದರ್ಶಿಯಿಂದಲೇ ಪ್ರಾಜೆಕ್ಟ್ ಇಂಜಿನಿಯರ್ ಸಮೀರ್ ಗೆ ಅವಮಾನ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು...

52 ಕ್ರಿಮಿನಲ್ ಪ್ರಕರಣಗಳ ಹಿಂತೆಗೆತಕ್ಕೆ ಮತ್ತೆ ಚಾಲನೆ; ಡಿಜಿಐಜಿಪಿ, ಕಾನೂನು ಇಲಾಖೆ ಅಸಮ್ಮತಿ ನಡುವೆಯೂ ಪ್ರಸ್ತಾವ

ಬೆಂಗಳೂರು; ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ  ಜನಪ್ರತಿನಿಧಿಗಳ ವಿರುದ್ಧ  ದಾಖಲಾಗಿರುವ ಮತ್ತು...

ಸ್ವಚ್ಛ ನಗರಿಯ ಕಸದ ಕರಾಳತೆ; ಪರೀಕ್ಷೆಯಿಲ್ಲದೇ ವಿಷಕಾರಿ ತ್ಯಾಜ್ಯ ನಿರ್ವಹಣೆ, ಸಿಎಂ ತವರಿನಲ್ಲೇ ಅವೈಜ್ಞಾನಿಕ ವಿಲೇವಾರಿ?

ಬೆಂಗಳೂರು;  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ  ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ ...

Related Articles

Popular Categories

error: Content is protected !!