Thursday | June 11, 2026 |

ಅಕ್ರಮ ಬಾಂಗ್ಲಾ ವಲಸಿಗರ ನಿರ್ವಹಣೆ, ಊಟೋಪಚಾರ; 1.11 ಕೋಟಿ ಅನುದಾನ ಕೋರಿದ ಪೊಲೀಸ್‌ ಇಲಾಖೆ, ಹಿಂದುಳಿದ ವರ್ಗ ಇಲಾಖೆಯತ್ತ ಕೈ ತೋರಿಸಿದ ಸಮಾಜ ಕಲ್ಯಾಣ

ಬೆಂಗಳೂರು; ಬೆಂಗಳೂರು ನಗರದಲ್ಲಿ ನೆಲೆಸಿದ್ದರು ಎನ್ನಲಾಗಿರುವ ಬಾಂಗ್ಲಾ ದೇಶದ ಒಟ್ಟು 124 ಅಕ್ರಮವಾಸಿಗಳನ್ನು ವಶಕ್ಕೆ ಪಡೆದಿದ್ದ ಪೊಲೀಸ್‌ ಇಲಾಖೆಯು ಇದೀಗ ಈ 124 ಅಕ್ರಮವಾಸಿಗಳ ವಸತಿ, ನಿರ್ವಹಣೆ, ಊಟೋಪಚಾರಕ್ಕೆ 1.11 ಕೋಟಿ ರು ಅನುದಾನ ಕೋರಿದೆ. ಈ ಅನುದಾನವನ್ನು ಯಾರು ಭರಿಸಬೇಕು ಎಂಬ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆಗಳು ಆರಂಭವಾಗಿವೆ.

ಅನುದಾನಕ್ಕಾಗಿ ಪೊಲೀಸ್‌ ಇಲಾಖೆಯು ಸಮಾಜ ಕಲ್ಯಾಣ ಇಲಾಖೆಗೆ ಪ್ರಸ್ತಾವ ಸಲ್ಲಿಸಿತ್ತು. ಆದರೆ ಈ ಪ್ರಸ್ತಾವಕ್ಕೆ ಸಮಾಜ ಕಲ್ಯಾಣ ಇಲಾಖೆಯು ಇನ್ನೂ ಒಪ್ಪಿಲ್ಲ. ಸಮಾಜ ಕಲ್ಯಾಣ ಇಲಾಖೆಯು ಈಗಾಗಾಲೇ ವಿವಿಧ ವಸತಿ ನಿಲಯಗಳಿಗೆ ಹಣ ಹೊಂದಿಸಬೇಕಿದೆ. ಹೀಗಾಗಿ ಈ ಬಾರಿ ಹಿಂದುಳಿದ ವರ್ಗ ಕಲ್ಯಾಣ ಇಲಾಖೆಯತ್ತ ಕೈ ತೋರಿಸಿದೆ.

ಕೇಂದ್ರ ಅಪರಾಧ ವಿಭಾಗವು (ಸಿಸಿಬಿ) 2026ರ ಮಾರ್ಚ್‌ 5ರಂದು ಕಾರ್ಯಾಚರಣೆ ನಡೆಸಿತ್ತಲ್ಲದೇ ಬಾಂಗ್ಲಾ ದೇಶದ ಒಟ್ಟು 124 ಅಕ್ರಮವಾಸಿಗಳನ್ನು ವಶಕ್ಕೆ ಪಡೆದಿತ್ತು. ಅಲ್ಲದೇ ಬೆಂಗಳೂರು ನಗರದ ಹೈಗ್ರೌಂಡ್ಸ್‌ ಪೊಲೀಸ್ ಠಾಣೆ ವ್ಯಾಪ್ತಿಯ ವಸಂತನಗರದ ಸರ್ದಾರ್ ವಲ್ಲಭಬಾಯ್ ಪಟೇಲ್‌ ಸಭಾಂಗಣದಲ್ಲಿ ಇರಿಸಲಾಗಿದೆ. ಈ ಪ್ರಜೆಗಳಿಗೆ ಊಟೋಪಚಾರ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್‌ ಆಯಕ್ತರು ಪತ್ರ ಬರೆದಿದ್ದರು.

ಬೆಂಗಳೂರು ನಗರ ಪೊಲೀಸ್ ಆಯುಕ್ತರು 2026ರ ಮಾರ್ಚ್ 6ರಂದು ಸಮಾಜ ಕಲ್ಯಾಣ ಇಲಾಖೆಗೆ ಪತ್ರ ಬರೆದಿದ್ದರು.

 

 

ಈ ಪತ್ರ ಬರೆದು ಮೂರು ತಿಂಗಳಾದರೂ ಸಹ ಪೊಲೀಸ್‌ ಇಲಾಖೆಯು ಕೋರಿರುವ 1.11 ಕೋಟಿ ರು ಅನುದಾನ ಬಿಡುಗಡೆ ಕುರಿತು ಇಲಾಖೆಯಲ್ಲಿ ಅಧಿಕಾರಗಳ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಈ ಸಂಬಂಧ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರೊಂದಿಗೂ ಇಲಾಖೆ ಅಧಿಕಾರಿಗಳು ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದಂತೆ ದಿ ಫೈಲ್‌ ಗೆ ಕೆಲವು ಟಿಪ್ಪಣಿ ಹಾಳೆಗಳು ಲಭ್ಯವಾಗಿವೆ.

ನೆಲಮಂಗಲ-ತಾವರೆಕೆರೆ ರಸ್ತೆಯ್ಲಿರುವ ಸೊಂಡೆಕೊಪ್ಪದ ಮೆಟ್ರಿಕ್‌ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡದಲ್ಲಿ ನಡೆಯುತ್ತಿರುವ ವಿದೇಶಿಯರ ಬಂಧನ ಕೇಂದ್ರದಲ್ಲಿರುವ ವಿದೇಶಿ ನಾಗರೀಕರ ನಿರ್ವಹಣೆ, ಈ ಕೇಂದ್ರದ ಸಿಬ್ಬಂದಿ ವೇತನ ಮತ್ತು ಇತರೆ ಖರ್ಚುಗಳಿಗಾಗಿ ಈಗಾಗಲೇ 81,11,559 ರು ಪಾವತಿಸಬೇಕಾಗಿದೆ. ಹಾಗೂ ಮುಂದಿನ 6 ತಿಂಗಳಿಗೆ 30,00,000 ಸೇರಿದಂತೆ ಒಟ್ಟಾರೆ 1.11 ಕೋಟಿ ರು ಅನುದಾನ ಬಿಡುಗಡೆ ಮಾಡಬೇಕಿರುವುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

 

 

ಅಲ್ಲದೇ ಯಲಹಂಕ ವ್ಯಾಪ್ತಿಯ ಹೆಸರುಘಟ್ಟ ಹೋಬಳಿಯ ಮುತ್ತುಗದ ಹಳ್ಳಿಯಲ್ಲಿ 2022ರಲ್ಲೇ ವಿದೇಶಿ ನಾಗರೀಕರ ಕೇಂದ್ರ ಆರಂಭವಾಗಿತ್ತು.

 

ಈ ಕೇಂದ್ರಕ್ಕೂ ಸಹ 2022ರ ಅಕ್ಟೋಬರ್‍‌ನಿಂದ 2023ರ ಮಾರ್ಚ್‌ವರೆಗೆ 43,51,000 ರು ಮತ್ತು 2023ರ ಏಪ್ರಿಲ್‌ನಿಂದ ಇಲ್ಲಿಯವರೆಗೆ ಭರಿಸಿರುವ ಖರ್ಚನ್ನು ಬಿಡುಗಡೆಗೆ ಬಾಕಿ ಉಳಿಸಿಕೊಂಡಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಇಲಾಖೆಯ ಆಯುಕ್ತರಿಗೆ 2026ರ ಮಾರ್ಚ್‌ 3ರಂದು ಪತ್ರ ಬರೆದಿದ್ದರು. ಅನುದಾನ ಬಿಡುಗಡೆ ಸಂಬಂಧ ಆಯುಕ್ತರ ಮಾರ್ಗದರ್ಶನ ಕೋರಿದ್ದರು.

 

 

ಅನುದಾನ ಯಾರು ಭರಿಸಬೇಕು?- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯತ್ತ ಕೈ ತೋರಿಸಿದ್ದೆಕೆ?

ಪೊಲೀಸ್‌ ಇಲಾಖೆಯು ಸಲ್ಲಿಸಿರುವ ಈ ಪ್ರಸ್ತಾವದ ಕುರಿತು ಸಮಾಜ ಕಲ್ಯಾಣ ಇಲಾಖೆಯು ಪರಿಶೀಲಿಸಿದೆ. ಈ ಅನುದಾನವನ್ನು ಯಾರು ಭರಿಸಬೇಕು, ಸಮಾಜ ಕಲ್ಯಾಣ ಇಲಾಖೆಯೇ ಭರಿಸಬೇಕೇ ಎಂಬ ಬಗ್ಗೆ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ಈ ಮಧ್ಯೆ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ರಾಕೇಶ್‌ ಕುಮಾರ್, ಅನುದಾನ ಪಡೆಯಲು ಹಿಂದುಳಿದ ವರ್ಗದ ಇಲಾಖೆಯತ್ತ ಕೈ ತೋರಿಸಿರುವುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

 

 

 

‘ಸಮಾಜ ಕಲ್ಯಾಣ ಇಲಾಖೆಯು ಹಲವು ಸಂಸ್ಥೆಗಳನ್ನು ನಡೆಸಿ ನಿರ್ವಹಿಸುತ್ತಿದೆ. ಈ ಸಂಸ್ಥೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಈ ಬಾಬ್ತುಗಳಿಗೆ ಅನುದಾನ ಹೊಂದಿಸುವುದು ಕಷ್ಟಕರವಾಗಲಿದೆ. ಹೀಗಾಗಿ ಈ ಬಾರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೂಲಕ ಅನುದಾನ ಬಿಡುಗಡೆ ಮಾಡಬಹುದು. ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆಯಬಹುದು,’ ಎಂದು ಇಲಾಖೆಯ ಆಯುಕ್ತ ರಾಕೇಶ್‌ ಕುಮಾರ್ ಅವರು ಸೂಚಿಸಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

ಪೊಲೀಸ್‌ ಇಲಾಖೆಯು ಸಲ್ಲಿಸಿದ್ದ ಪ್ರಸ್ತಾವನೆ ಮತ್ತು ಮಾರ್ಗದರ್ಶನ ಕೋರಿದ್ದ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಪತ್ರ ಆಧರಿಸಿ ಇಲಾಖೆಯ ಆಯುಕ್ತ ರಾಕೇಶ್‌ ಕುಮಾರ್ ಅವರು 2026ರ ಮಾರ್ಚ್‌ 24ರಂದು ಇಲಾಖೆಯ ಸರ್ಕಾರದ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.

 

 

ರಾಜ್ಯದ ಗುಪ್ತಚರ ಇಲಾಖೆ ಅಥವಾ ಕೇಂದ್ರ ಸಂಸ್ಥೆಗಳ ವರದಿಗಳ ಅನ್ವಯ ರಾಜ್ಯದ ಬೆಂಗಳೂರು ಮತ್ತು ಇತರೆ ಮಹಾನಗರಗಳ್ಲಲಿ ಕಳೆದ ಎರಡು ವರ್ಷಗಳಲ್ಲಿ ಪೊಲೀಸ್‌ ಇಲಾಖೆಯು ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಒಟ್ಟು 320 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ಚಿತ್ತು. ಈ ಕುರಿತು ರಾಜಾಜಿನಗರ ಶಾಸಕ ಬಿಜೆಪಿಯ ಎಸ್‌ ಸುರೇಶ್‌ ಕುಮಾರ್‍‌ ಅವರು 2026ರ ಮಾರ್ಚ್‌ 10ರಂದು ಕೇಳಿದದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಗೃಹ ಸಚಿವರಾಗಿದ್ದ ಡಾ ಜಿ ಪರಮೇಶ್ವರ್ ಅವರು ಮಾಹಿತಿ ನೀಡಿದ್ದರು.

 

 

ಈ ಮಾಹಿತಿ ಪ್ರಕಾರ ಬೆಂಗಳೂರು ನಗರ ಜಿಲ್ಲೆಯಲ್ಲಿ 243, ಬೆಂಗಳೂರು ಜಿಲ್ಲೆಯಲ್ಲಿ 29, ಚಿತ್ರದುರ್ಗದಲ್ಲಿ 06, ಧಾರವಾಡದಲ್ಲಿ 2, ಹಾಸನದಲ್ಲಿ 4, ಕೋಲಾರದಲ್ಲಿ f12, ಮಂಗಳೂರು ನಗರದಲ್ಲಿ 2, ಶಿವಮೊಗ್ಗದಲ್ಲಿ 12, ಉಡುಪಿಯಲ್ಲಿ 10 ಮಂದಿ ಸೇರಿ ಒಟ್ಟಾರೆ 320 ಮಂದಿಯನ್ನು ಪತ್ತೆ ಹಚ್ಚಿತ್ತು.

 

 

ಪತ್ತೆ ಹಚ್ಚಲಾಗಿದ್ದ ಈ ಅಕ್ರಮ ಬಾಂಗ್ಲಾ ವಲಸಿಗರ ಪೈಕಿ ಕಳೆದ 02 ವರ್ಷಗಳಲ್ಲಿ ಒಟ್ಟು 219 ಮಂದಿಯನ್ನು ಕಾನೂನುಬದ್ಧವಾಗಿ ಗಡಿಪಾರು ಮಾಡಲಾಗಿತ್ತು. ಈ ಪಟ್ಟಿಯ ಪ್ರಕಾರ ಬೆಂಗಳೂರು ನಗರದಿಂದ 164, ಬೆಂಗಳೂರು ಜಿಲ್ಲೆಯಿಂದ 20, ಚಿತ್ರದುರ್ಗದಿಂದ 06, ಧಾರವಾಡದಿಂದ 02, ಹಾಸನದಿಂದ 03, ಕೋಲಾರದಿಂದ 12, ಶಿವಮೊಗ್ಗದಿಂದ 12 ಮಂದಿ ಸೇರಿದ್ದರು.

ಈ ಅಕ್ರಮ ವಲಸಿಗರು ನಕಲಿ ದಾಖಲೆ ಸೃಷ್ಟಿಸಿರುವ ಆರೋಪಕ್ಕೂ ಗುರಿಯಾಗಿದ್ದರು. ಈ ಪೈಕಿ ಬೆಂಗಳೂರು ನಗರದಲ್ಲಿ -1, ಬೆಂಗಳೂರು ಜಿಲ್ಲೆಯಲ್ಲಿ 01, ಉಡುಪಿಯಲ್ಲಿ 01 ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ ಒಟ್ಟು 4 ಮಂದಿ ಭಾಗಿಯಾಗಿದ್ದರು ಎಂದು ಗೃಹ ಸಚಿವರಾಗಿದ್ದ ಡಾ ಜಿ ಪರಮೇಶ್ವರ್ ಅವರು ಸದನಕ್ಕೆ ಲಿಖಿತ ಮಾಹಿತಿ ನೀಡಿದ್ದರು.

 

 

ಇತ್ತೀಚಿಗೆ ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ದಾಳಿ ನಡೆಸಿತ್ತು. ಈ ಪೈಕಿ ಉಗ್ರ ಸಂಪರ್ಕ ಜಾಲದಲ್ಲಿ ಅಕ್ರಮ ವಲಸಿಗರು ಸೇರಿದ್ದರು ಮತ್ತು ಉಗ್ರಗಾಮಿ ಚಟುವಟಿಕೆಗಳಲ್ಲಿ ಅವರು ಪಾತ್ರವಹಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಇದಕ್ಕೆ ಸಂಬಂಧಿಸಿದಂತೆ ಸುರೇಶ್‌ ಕುಮಾರ್ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಡಾ ಜಿ ಪರಮೇಶ್ವರ್ ಅವರು ಉಗ್ರರ ಸಂಪರ್ಕ ಹೊಂದಿರುವ ಅಕ್ರಮ ವಲಸಿಗರು ಕಂಡು ಬಂದಿರುವುದಿಲ್ಲ ಎಂದು ಉತ್ತರಿಸಿದ್ದರು.

ಬೆಂಗಳೂರು ನಗರದಲ್ಲಿ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲು ಪೊಲಿಸ್‌ ಠಾಣೆ ಮಟ್ಟದಲ್ಲಿ ಗುಪ್ತಚರ ಸಿಬ್ಬಂದಿ ಹಾಗೂ ಕ್ರೈಂ ಸಿಬ್ಬಂದಿಗಳು ವಿದೇಶಿಯರ ಚಲನವಲನಗಳ ಮೇಲೆ ನಿಗಾ ವಹಿಸುತ್ತಾರೆ. ಬೆಂಗಳೂರು ನಗರದಲ್ಲಿ ಠಾಣಾ ಮಟ್ಟದಲ್ಲಿ ಚಿಂದಿ ಆಯುವ ಕೆಲಸ ಮಾಡುವ ವ್ಯಕ್ತಿಗಳ ಮೇಲೆ ಹಾಗೂ ಇವರುಗಳು ನೆಲೆಸಿರುವ ಸ್ಥಳಗಳ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತದೆ. ಬೆಂಗಳೂರು ನಗರದಲ್ಲಿ ಹೆಚ್ಚು ವಿದೇಶಿ ಪ್ರಜೆಗಳು ವಾಸಿಸುವ ಸ್ಥಳಗಳ ಬಳ ಸತತವಾಗಿ ನಿಗಾ ವಹಿಸಲಾಗುತ್ತಿದೆ. ವಿದೇಶಿ ಪ್ರಜೆಗಳು ಅಕ್ರಮವಾಗಿ ನೆಲೆಸಲು ಸಹಕಾರ ನೀಡುವವರು ಮತ್ತು ಶೈಕ್ಷಣಿಕ ಸಂಸ್ಥೆಗಳ ವಿರುದ್ಧವೂ ಸಹ ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಗೃಹ ಸಚಿವರಾಗಿದ್ದ ಡಾ ಜಿ ಪರಮೇಶ್ವರ್ ಅವರು ಉತ್ತರದಲ್ಲಿ ವಿವರಿಸಿದ್ದರು.

ಬೆಂಗಳೂರು ನಗರದಲ್ಲಿ ಅವಧಿ ಮೀರಿ ವಾಸವಾಗಿರುವ ಹಾಗೂ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳು ಪತ್ತೆಯಾದಲ್ಲಿ ಅಂತಹ ಆರೋಪಿಗಳನ್ನು ಅವರ ದೇಶದ ವಿದೇಶಿ ಮಂತ್ರಾಲಯದ ಮೂಲಕ ಆಯಾ ದೇಶಗಳಿಗೆ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಕ ಮಾಹಿತಿ ನೀಡಲಾಗುತ್ತಿದೆ.

 

 

ಬೆಂಗಳೂರು ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯದಲ್ಲಿ ಇತ್ಯರ್ಥವಾಗುವವರೆಗೂ ಸಂಬಂಧಪಟ್ಟ ಇಲಾಖೆಯಿಂದ ನಿರ್ಗಮನ ಪರವಾನಿಗೆ ಪಡೆಯುವವರೆಗೆ ಇವರನ್ನ ಎಫ್‌ಆರ್‍‌ಸಿಯಲ್ಲಿ ಇರಿಸಲಾಗುತ್ತದೆ.

 

ನಂತರ ವಿದೇಶಿ ಪ್ರಜೆಯ ಗಡಿಪಾರು ನಿಯಮ ಪಾಲಿಸಲಾಗುತ್ತದೆ ಎಂದು ಗೃಹ ಸಚಿವರಾಗಿದ್ದ ಡಾ ಜಿ ಪರಮೇಶ್ವರ್ ಅವರು ವಿವರಿಸಿದ್ದರು.

Hot this week

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...
Please Scan to make Your Contribution

Topics

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಈಗಲ್‌ಟನ್‌ ರೆಸಾರ್ಟ್‌ನಿಂದ ಸರ್ಕಾರಿ ಜಮೀನು ಒತ್ತುವರಿ; 29 ವರ್ಷಗಳಾದರೂ ಪ್ರಕರಣ ಇತ್ಯರ್ಥವಾಗಿಲ್ಲ, 982 ಕೋಟಿಯೂ ವಸೂಲಾಗಿಲ್ಲ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ, ಬಾನಂದೂರು ಗ್ರಾಮದ...

Related Articles

Popular Categories

error: Content is protected !!