Thursday | July 16, 2026 |

ಗೃಹಲಕ್ಷ್ಮಿ; ಒಂದೇ ತಿಂಗಳಲ್ಲಿ ಒಂದು ಫಲಾನುಭವಿಗೆ ಒಂದಕ್ಕಿಂತ ಹೆಚ್ಚು ಖಾತೆಗೆ ಹಣ ಜಮೆಯಾಗಿಲ್ಲ, ಬ್ಯಾಂಕ್‌ನ ತಾಂತ್ರಿಕ ದೋಷವೇ ಕಾರಣ, ಸಿಎಜಿ ಆಕ್ಷೇಪಣೆ ತಳ್ಳಿ ಹಾಕಿದ ಸರ್ಕಾರ

ಬೆಂಗಳೂರು; ಗೃಹಲಕ್ಷ್ಮಿ ಯೋಜನೆಯಡಿ ಧನಸಹಾಯ ಪಾವತಿ ಪ್ರಕ್ರಿಯೆಯು ಎಬಿಪಿಎಸ್‌ ಆಗಿರುವುದರಿಂದ ಫಲಾನುಭವಿಗಳಿಗೆ ಒಂದು ತಿಂಗಳಿಗೆ ಒಂದಕ್ಕಿಂತ ಹೆಚ್ಚು ಸಲ ಧನಸಹಾಯ ಪಾವತಿಯಾಗಿಲ್ಲ. ಅದೇ ರೀತಿ ಒಂದೇ ತಿಂಗಳಲ್ಲಿ ಒಂದು ಫಲಾನುಭವಿಗೆ ಒಂದಕ್ಕಿಂತ ಹೆಚ್ಚು ಖಾತೆಗೆ ಹಣ ಜಮೆಯಾಗಿರುವುದಿಲ್ಲ ಎಂದು ಸಮಜಾಯಿಷಿ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಇದರಲ್ಲಿ ಯಾವುದೇ ಲೋಪಗಳು ನಡೆದಿಲ್ಲ ಎಂದು ಪ್ರತಿಪಾದಿಸಿದೆ.

ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಹಣ ಪಾವತಿಯಲ್ಲಿನ ಲೋಪಗಳಿಗೆ ಸಂಬಂಧಿಸಿದಂತೆ ಸಿಎಜಿಯ ಪತ್ರ ಆಧರಿಸಿ 225 ಕೋಟಿ ಅಕ್ರಮವಾಗಿದೆ ಎಂದು ಹಲವು ಮಾಧ್ಯಮಗಳು ವರದಿಗಳನ್ನು ಪ್ರಕಟಿಸಿದ್ದವು. ಮಾಧ್ಯಮಗಳಲ್ಲಿ ಈ ಕುರಿತಾದ ವರದಿಗಳು ಪ್ರಕಟಗೊಳ್ಳುತ್ತಿದ್ದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಸಿಎಜಿ ಪತ್ರ ಆಧರಿಸಿ ವಿವಿಧ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಳ್ಳುತ್ತಿದ್ದಂತೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಚರ್ಚಿಸಿದ್ದರು. ಈ ಚರ್ಚೆಯ ನಂತರ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಹೇಳಿಕೆಯಲ್ಲೇನಿದೆ?

ಎಬಿಪಿಎಸ್‌ (ಆಧಾರ್ ಆಧಾರಿತ ಪಾವತಿ ವ್ಯವಸ್ಥೆ) ವ್ಯವಸ್ಥೆಯಲ್ಲಿ ಅಧಾರ್ ಸಂಖ್ಯೆಯನ್ನು ಹಣಕಾಸಿನ ವಿಳಾಸವಾಗಿ ಬಳಸಲಾಗುತ್ತದೆ. ಪಾವತಿ ಕಡತದಲ್ಲಿರುವ ಆಧಾರ್ ಸಂಖ್ಯೆಯನ್ನು ಎನ್‌ಪಿಸಿಐ ಮ್ಯಾಪರ್‍‌ನಲ್ಲಿ ಪರಿಶೀಲಿಸಿದ ನಂತರ ಸಂಬಂಧಿತ ಬ್ಯಾಂಕ್‌ಗೆ ಕಳುಹಿಸಬಹುದು. ಈ ಕುರಿತು ಪರಿಶೀಲನೆ ನಡೆಸಿದಾಗ ನಂತರದ ತಿಂಗಳುಗಳಲ್ಲಿ ಬ್ಯಾಂಕ್‌ ಖಾತೆ ವಿವರಗಳೊಂದಿಗೆ ಪ್ರತಿಕ್ರಿಯೆ ಕಡತವನ್ನು ಬ್ಯಾಂಕ್ ಒದಗಿಸಿರುವುದು ಕಂಡು ಬಂದಿದೆ.

ಹೀಗಾಗಿ ಗೃಹಲಕ್ಷ್ಮಿ ಯೋಜನೆಯಡಿ ಧನಸಹಾಯ ಪಾವತಿ ಪ್ರಕ್ರಿಯೆಯು ಎಬಿಪಿಎಸ್‌ ಆಗಿರುವುದರಿಂದ ಫಲಾನುಭವಿಗಳಿಗೆ ಒಂದು ತಿಂಗಳಿಗೆ ಒಂದಕ್ಕಿಂತ ಹೆಚ್ಚು ಸಲ ಧನ ಸಹಾಯ ಪಾವತಿಯಾಗಿಲ್ಲ. ಅದೇ ರೀತಿ ಒಂದೇ ತಿಂಗಳಲ್ಲಿ ಒಂದು ಫಲಾನುಭವಿಗೆ ಒಂದಕ್ಕಿಂತ ಹೆಚ್ಚು ಖಾತೆಗೆ ಹಣ ಜಮೆಯಾಗಿರುವುದಿಲ್ಲ ಎಂದು ಪ್ರತಿಪಾದಿಸಿದೆ.

 

 

ಕೆಲವೊಮ್ಮೆ ಫಲಾನುಭವಿಗಳ ಬ್ಯಾಂಕ್‌ನ ತಾಂತ್ರಿಕ ಸಮಸ್ಯೆಯಿಂದ ಖಾತೆ ವಿವರಗಳಿಲ್ಲದ ಪ್ರತಿಕ್ರಿಯೆ ಲಭ್ಯವಾಗಿರುವುದರಿಂದ ಬ್ಯಾಂಕ್‌ ಖಾತೆ ತೋರಿಸುತ್ತಿರುವುದಿಲ್ಲ. ಆದರೆ ಈ ಖಾತೆಗಳಿಗೆ ಧನ ಸಹಾಯ ಜಮೆಯಾಗಿರುತ್ತದೆ. ಇದನ್ನು ಪರಿಶೀಲನೆ ನಡೆಸಿದಾಗ ನಂತರ ತಿಂಗಳುಗಳಲ್ಲಿ ಪ್ರತಿಕ್ರಿಯೆ ಕಡತವನ್ನು ಕಡತವನ್ನು ಬ್ಯಾಂಕ್‌ ಒದಗಿಸಿರುವುದು ಕಂಡುಬಂದಿದೆ ಎಂದು ಇಲಾಖೆಯು ವಿವರಿಸಿದೆ.

‘ಯೋಜನೆಯು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿದ್ದು ಅನರ್ಹರನ್ನು ಹೊರತುಪಡಿಸಿ ಅರ್ಹ ಫಲಾನುಭವಿಗಳಿಗೆ ನಿಯಮಾನುಸಾರ ಧನಸಹಾಯ ಪಾವತಿಯಾಗುತ್ತಿದೆ,’ ಎಂದು ಸಮರ್ಥಿಸಿಕೊಂಡಿದೆ.

ಬಹು ಫಲಾನುಭವಿಗಳು ಒಂದೇ ಬ್ಯಾಂಕ್‌ ಖಾತೆ ಸಂಖ್ಯೆಯನ್ನು ಹೊಂದಿದ್ದಾರೆ ಎಂದು ಸಿಎಜಿಯು ಆಕ್ಷೇಪ ವ್ಯಕ್ತಪಡಿಸಿತ್ತು. ಇಲಾಖೆಯು ಈ ಅಂಶವನ್ನು ಒಪ್ಪಿಲ್ಲ.

ಎಬಿಪಿಎಸ್‌ (ಆಧಾರ್ ಆಧಾರಿತ ಪಾವತಿ ವ್ಯವಸ್ಥೆ) ವ್ಯವಸ್ಥೆಯಲ್ಲಿ ಅಧಾರ್ ಸಂಖ್ಯೆಯನ್ನು ಹಣಕಾಸಿನ ವಿಳಾಸವಾಗಿ ಬಳಸಲಾಗುತ್ತದೆ. ಪಾವತಿ ಕಡತದಲ್ಲಿರುವ ಆಧಾರ್ ಸಂಖ್ಯೆಯನ್ನು ಎನ್‌ಪಿಸಿಐ ಮ್ಯಾಪರ್‍‌ನಲ್ಲಿ ಪರಿಶೀಲಿಸಿದ ನಂತರ ಸಂಬಂಧಿತ ಬ್ಯಾಂಕ್‌ಗೆ ಕಳಿಸಲಾಗುತ್ತದೆ. ಸಂಬಂಧಿತ ಬ್ಯಾಂಕ್‌ ತನ್ನ ಸಿಬಿಎಸ್‌ (ಕೋರ್‍‌ ಬ್ಯಾಂಕಿಂಗ್ ಸಿಸ್ಟಂ) ವ್ಯವಸ್ಥೆಯಲ್ಲಿ ಆಧಾರ್ ಜೋಡಣೆಯನ್ನು ಪರಿಶೀಲಿಸಿ ಫಲಾನುಭವಿಯ ಖಾತೆಗೆ ಹಣವನ್ನು ಜಮಾ ಮಾಡಿ ಪ್ರತಿಕ್ರಿಯೆ ಕಡತದ ಭಾಗವಾಗಿ ಬ್ಯಾಂಕ್‌ ಖಾತೆಗಳ ವಿವರಗಳನ್ನು ಹಂಚಿಕೊಳ್ಳುತ್ತದೆ ಎಂದು ವಿವರಿಸಿದೆ.

 

ಒಂದೇ ಬ್ಯಾಂಕ್‌ ಖಾತೆಯಡಿ ಸಂಖ್ಯೆಯಡಿ ಬಹು ಫಲಾನುಭವಿಗಳು ಕಂಡು ಬರುವುದಕ್ಕೆ ಎರಡು ಕಾರಣಗಳನ್ನು ನೀಡಿರುವ ಇಲಾಖೆಯು ಜಂಟಿ ಬ್ಯಾಂಕ್‌ ಖಾತೆಯಿದ್ದಲ್ಲಿ ಒಂದೇ ಬ್ಯಾಂಕ್ ಖಾತೆಗೆ ಒಂದಕ್ಕಿಂತ ಹೆಚ್ಚು ಫಲಾನುಭವಿಗಳ ಸರ್ಕಾರಿ ಸೌಲಭ್ಯ ಜಮೆಯಾಗಿರಬಹುದು ಎಂದು ಹೇಳಿದೆ.

ಅದೇ ರೀತಿ ಫಲಾನುಭವಿಯು ಖಾತೆ ಹೊಂದಿರುವ ಬ್ಯಾಂಕ್‌ನ ತಾಂತ್ರಿಕ ದೋಷದಿಂದ ತಪ್ಪಾದ ಬ್ಯಾಂಕ್‌ ಖಾತೆ ವಿವರಗಳು ಪ್ರತಿಕ್ರಿಯಾ ಕಡತದಲ್ಲಿ ಹಂಚಿಕೆಯಾಗಿರಬಹುದು ಎಂದು ಹೇಳಿಕೆಯಲ್ಲಿ ವಿವರಿಸಿದೆ.

‘ಈ ಎರಡೂ ಕಾರಣಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಜಿಲ್ಲಾ ಹಾಗೂ ತಾಲೂಕುಮಟ್ಟದಲ್ಲಿ ಇಂತಹ ಪ್ರಕರಣಗಳ ಕುರಿತು ಅಧಿಕಾರಿಗಳ ಮೂಲಕ ಭೌತಿಕವಾಗಿ ಕ್ಷೇತ್ರ ಭೇಟಿ ನಡೆಸಿ, ಪರಿಶೀಲನೆ ನಡೆಸಲಾಗಿದೆ. ಜಂಟಿ ಖಾತೆ ಇರುವಂತಹ ಫಲಾನುಭವಿಗಳ (ಅತ್ತೆ-ಸೊಸೆ, ತಾಯಿ-ಮಗಳು) ಬ್ಯಾಂಕ್‌ ಖಾತೆಗೆ ಅನುದಾನ ಪಾವತಿಯಾಗಿರುವುದು ಕಂಡು ಬಂದಿರುತ್ತದೆ,’ ಎಂದು ಸ್ಪಷ್ಟೀಕರಣ ನೀಡಿದೆ.

ಈ ಫಲಾನಭವಿಗಳು ಬೇರೆ ಬೇರೆ ಪಡಿತರ ಚೀಟಿ ಹೊಂದಿದ್ದು ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿರುವುದರಿಂದ ಎರಡೂ ಫಲಾನುಭವಿಗಳ ಧನಸಹಾಯ ಮೊತ್ತವು ಒಂದೇ ಖಾತೆಗೆ ಪಾವತಿಯಾಗಿರುತ್ತದೆ. ಬ್ಯಾಂಕ್‌ ಖಾತೆಗೆ ಆಧಾರ್ ಜೋಡಣೆ ಮಾಡಿಸುವ ಜವಾಬ್ದಾರಿಯು ಸಂಪೂರ್ಣವಾಗಿ ಫಲಾನುಭವಿಯದ್ದಾಗಿದೆ. ಫಲಾನುಭವಿಯು ಸರ್ಕಾರಿ ಸೌಲಭ್ಯ ಪಡೆಯಲು ತಾನು ಬಯಸುವ ಯಾವುದೇ ಬ್ಯಾಂಕ್‌ ಖಾತೆಯನ್ನು ಆಯ್ಕೆ ಮಾಡಬಹುದು. ಅಗತ್ಯವಿದ್ದಲ್ಲಿ ಲಿಖಿತ ಒಪ್ಪಿಗೆ ಮೂಲಕ ಆಧಾರ್ ಜೋಡಣೆಯನ್ನು ಮತ್ತೊಂದು ಬ್ಯಾಂಕ್ ಖಾತೆಗೆ ಬದಲಾಯಿಸಬಹುದು.

 

 

ಎನ್‌ಪಿಸಿಐ ಮ್ಯಾಪರ್‍‌ನಲ್ಲಿ ಈ ಬದಲಾವಣೆ ನವೀಕರಿಸಿದ ನಂತರ ಸರ್ಕಾರಿ ಸೌಲಭ್ಯ ಹೊಸದಾಗಿ ಜೋಡಿಸಲಾದ ಬ್ಯಾಂಕ್‌ ಖಾತೆಗೆ ಜಮೆಯಾಗುತ್ತದೆ. ಬ್ಯಾಂಕ್‌ ಈ ಆಧಾರ್ ಜೋಡಣೆ ಪ್ರಕ್ರಿಯೆಯನ್ನು ಅನುಸರಿಸಿ ಈ ಬದಲಾವಣೆ ಮಾಡುತ್ತದೆ. ಈ ಸಂದರ್ಭದಲ್ಲಿ ಸರ್ಕಾರ ಅಥವಾ ಇಲಾಖೆಯ ಯಾವುದೇ ಪಾತ್ರ ಇರುವುದಿಲ್ಲ. ಒಂದೇ ಫಲಾನುಭವಿಯ ವಿವಿಧ ಖಾತೆಗಳಿಗೆ ಬೇರೆ ಬೇರೆ ತಿಂಗಳ ಧನಸಹಾಯ ಪಾವತಿ ಅವಕಾಶವಿದೆ. ಆದರೆ ಒಂದೇ ತಿಂಗಳಲ್ಲಿ ಒಂದು ಫಲಾನುಭವಿಗೆ ಒಂದಕ್ಕಿಂತ ಹೆಚ್ಚು ಖಾತೆಗೆ ಹಣ ಜಮೆಯಾಗಿರುವುದಿಲ್ಲ ಎಂದು ವಿವರಿಸಿದೆ.

ಬ್ಯಾಂಕ್‌ ಖಾತೆ ವಿವರಗಳಿಲ್ಲದ ಫಲಾನುಭವಿಗಳಿಗೆ ಪಾವತಿ

ಎಬಿಪಿಎಸ್‌ (ಆಧಾರ್ ಆಧಾರಿತ ಪಾವತಿ ವ್ಯವಸ್ಥೆ) ವ್ಯವಸ್ಥೆಯಲ್ಲಿ ಅಧಾರ್ ಸಂಖ್ಯೆಯನ್ನು ಹಣಕಾಸಿನ ವಿಳಾಸವಾಗಿ ಬಳಸಲಾಗುತ್ತದೆ. ಪಾವತಿ ಕಡತದಲ್ಲಿರುವ ಆಧಾರ್ ಸಂಖ್ಯೆಯನ್ನು ಎನ್‌ಪಿಸಿಐ ಮ್ಯಾಪರ್‍‌ನಲ್ಲಿ ಪರಿಶೀಲಿಸಿದ ನಂತರ ಸಂಬಂಧಿತ ಬ್ಯಾಂಕ್‌ಗೆ ಕಳುಹಿಸಬಹುದು. ಈ ಕುರಿತು ಪರಿಶೀಲನೆ ನಡೆಸಿದಾಗ ನಂತರದ ತಿಂಗಳುಗಳಲ್ಲಿ ಬ್ಯಾಂಕ್‌ ಖಾತೆ ವಿವರಗಳೊಂದಿಗೆ ಪ್ರತಿಕ್ರಿಯೆ ಕಡತವನ್ನು ಬ್ಯಾಂಕ್ ಒದಗಿಸಿರುವುದು ಕಂಡು ಬಂದಿದೆ.

ಹೀಗಾಗಿ ಗೃಹಲಕ್ಷ್ಮಿ ಯೋಜನೆಯಡಿ ಧನಸಹಾಯ ಪಾವತಿ ಪ್ರಕ್ರಿಯೆಯು ಎಬಿಪಿಎಸ್‌ ಆಗಿರುವುದರಿಂದ ಫಲಾನುಭವಿಗಳಿಗೆ ಒಂದು ತಿಂಗಳಿಗೆ ಒಂದಕ್ಕಿಂತ ಹೆಚ್ಚು ಸಲ ಧನಸಹಾಯ ಪಾವತಿಯಾಗಿಲ್ಲ. ಅದೇ ರೀತಿ ಒಂದೇ ತಿಂಗಳಲ್ಲಿ ಒಂದು ಫಲಾನುಭವಿಗೆ ಒಂದಕ್ಕಿಂತ ಹೆಚ್ಚು ಖಾತೆಗೆ ಹಣ ಜಮೆಯಾಗಿರುವುದಿಲ್ಲ.

 

 

ಕೆಲವೊಮ್ಮೆ ಫಲಾನುಭವಿಗಳ ಬ್ಯಾಂಕ್‌ನ ತಾಂತ್ರಿಕ ಸಮಸ್ಯೆಯಿಂದ ಖಾತೆ ವಿವರಗಳಿಲ್ಲದ ಪ್ರತಿಕ್ರಿಯೆ ಲಭ್ಯವಾಗಿರುವುದರಿಂದ ಬ್ಯಾಂಕ್‌ ಖಾತೆ ತೋರಿಸುತ್ತಿರುವುದಿಲ್ಲ ಆದರೆ ಸದರಿ ಖಾತೆಗಳಿಗೆ ಧನ ಸಹಾಯ ಜಮೆಯಾಗಿರುತ್ತದೆ. ಪರಿಶೀಲನೆ ನಡೆಸಿದಾಗ ನಂತರ ತಿಂಗಳುಗಳಲ್ಲಿ ಪ್ರತಿಕ್ರಿಯೆ ಕಡತವನ್ನು ಕಡತವನ್ನು ಬ್ಯಾಂಕ್‌ ಒದಗಿಸಿರುವುದು ಕಂಡುಬಂದಿದೆ.. ಯೋಜನೆಯು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿದ್ದು ಅನರ್ಹರನ್ನು ಹೊರತುಪಡಿಸಿ ಅರ್ಹ ಫಲಾನುಭವಿಗಳಿಗೆ ನಿಯಮಾನುಸಾರ ಧನಸಹಾಯ ಪಾವತಿಯಾಗುತ್ತಿದೆ ಎಂದು ಹೇಳಿಕೆಯಲ್ಲಿ ವಿವರಿಸಿದೆ.

Hot this week

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಎಬಿ-ಎಆರ್‍‌ಕೆ ಯೋಜನೆಯಲ್ಲಿ ಅಕ್ರಮ; ಜಿಮ್ಸ್‌ ಸಿಬ್ಬಂದಿ, ಖಾಸಗಿ ಆಸ್ಪತ್ರೆ ಶಾಮೀಲು, ರಾಜೀನಾಮೆ ನೀಡಿದ್ದ ವೈದ್ಯರ ಹೆಸರಿನಲ್ಲೂ ನಕಲಿ ಓಆರ್‍‌ಎಸ್‌ ಸೃಜನೆ; ತನಿಖಾ ವರದಿ

ಬೆಂಗಳೂರು; ಆಯುಷ್ಮಾನ್‌ ಭಾರತ್ ಮತ್ತು  ಎಆರ್‍‌ಕೆ ಯೋಜನೆಯಡಿಯಲ್ಲಿ  ಕಲ್ಬುರ್ಗಿ ಜಿಲ್ಲಾ  ಆಸ್ಪತ್ರೆಯಿಂದ...
Please Scan to make Your Contribution

Topics

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದ ಮೊದಲನೇ ಆರ್ಥಿಕ...

Related Articles

Popular Categories

error: Content is protected !!