Saturday | August 22, 2026 |

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ ಸಂಸ್ಥೆಯಾಗಿರುವ ಜನಸೇವಾ ವಿಶ್ವಸ್ತ ಮಂಡಳಿ, ಜನಸೇವಾ ಟ್ರಸ್ಟ್‌ಗೆ ಸರ್ಕಾರವು ಗೋಮಾಳ ಸೇರಿದಂತೆ ಇನ್ನಿತರೆ ಸ್ವರೂಪದಲ್ಲಿರುವ ಜಮೀನುಗಳ ಪೈಕಿ ಸರ್ಕಾರವು  ಒಟ್ಟಾರೆ 121 ಎಕರೆ  ಮಂಜೂರು ಮಾಡಿದೆ.

ಇದಲ್ಲದೆ ಕಾಂಗ್ರೆಸ್‌ ಭವನ ಟ್ರಸ್ಟ್‌, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ವಿವೇಕಾನಂದ ವಿದ್ಯಾವರ್ಧಕ ಸಂಘ, ಆದಮಾರು ಮಠ ವಿದ್ಯಾ ಸಂಸ್ಥೆ, ಕೃಷ್ಣ ಸೇವಾಶ್ರಮ ಟ್ರಸ್ಟ್‌, ಆದಿಚುಂಚನಗಿರಿ, ಹಿಂದುಳಿದ ವರ್ಗದ ವಿವಿಧ ಸಮುದಾಯಗಳ ಸಂಘ, ಸಂಸ್ಥೆ, ಚಾರಿಟೆಬಲ್ ಟ್ರಸ್ಟ್‌, ವಿಶ್ವವಿದ್ಯಾಲಯ, ಮಾತಾ ಅಮೃತಾನಂದಮಯಿ, ಸಂಸ್ಕೃತ ವಿಶ್ವವಿದ್ಯಾಲಯ, ಕುವೆಂಪು ವಿಶ್ವವಿದ್ಯಾಲಯ, ಸರ್ಕಾರಿ ನೌಕರರ ಸಮುದಾಯ ಭವನ, ಅಂಬೇಡ್ಕರ್ ಸೇವಾ ಸಂಘ, ರಾಜ್ಯ ಸರ್ಕಾರಿ ನೌಕರರ ಸಂಘ, ಬಾಪೂಜಿ ವಿದ್ಯಾಸಂಸ್ಥೆ ಸೇರಿದಂತೆ ಇನ್ನಿತರೆ ಶೈಕ್ಷಣಿಕ ಮತ್ತು ಧಾರ್ಮಿಕ ಉದ್ದೇಶದ ಸಂಘ ಸಂಸ್ಥೆಗಳಿಗೆ ಜಮೀನು ಮಂಜೂರು ಮಾಡಿದೆ.

ಈ ಎಲ್ಲಾ ಸಂಘ ಸಂಸ್ಥೆಗಳಿಗೆ ಕಳೆದ 16 ವರ್ಷಗಳಲ್ಲಿ (2010-2026)  ಒಟ್ಟಾರೆ 1,945 ಎಕರೆ 31 ಗುಂಟೆ ವಿಸ್ತೀರ್ಣದ ಜಮೀನುಗಳನ್ನು  ಮಂಜೂರು ಮಾಡಿರುವ ಪಟ್ಟಿಯನ್ನು  ಸರ್ಕಾರವು ಸದನಕ್ಕೆ ಮಂಡಿಸಿದೆ.  ಕಂದಾಯ ಸಚಿವ ಡಾ ಜಿ ಪರಮೇಶ್ವರ್ ಅವರು ಸದನಕ್ಕೆ ನೀಡಿರುವ  ಲಿಖಿತ ಉತ್ತರದಲ್ಲಿ ಈ ಮಾಹಿತಿ ಇದೆ.

ಬೆಂಗಳೂರು ಪೂರ್ವ, ಉತ್ತರ, ಯಲಹಂಕ, ದಕ್ಷಿಣ ಆನೇಕಲ್, ಹಾರೋಹಳ್ಳಿ, ಮಾಗಡಿ, ಕನಕಪುರ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ, ಹೊಸಕೋಟೆ ವ್ಯಾಪ್ತಿಯಲ್ಲಿ ವಿವಿಧ ಶೈಕ್ಷಣಿಕ ಮತ್ತು ಧಾರ್ಮಿಕ ಸಂಘ ಸಂಸ್ಥೆಗಳಿಗೆ 498 ಎಕರೆಗೂ ಮೀರಿ ಅಧಿಕ ವಿಸ್ತೀರ್ಣದ ಜಮೀನುಗಳನ್ನು ಸರ್ಕಾರವು ಮಂಜೂರು ಮಾಡಿದೆ.

 

 

ಈ ಪೈಕಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಜನಸೇವಾ ಟ್ರಸ್ಟ್‌, ಜನಸೇವಾ ವಿಶ್ವಸ್ಥ ಮಂಡಳಿಯು ಸಿಂಹಪಾಲು ಪಡೆದಿದೆ. ಕಳೆದ 16 ವರ್ಷಗಳಲ್ಲಿ ಸಂಘಪರಿವಾರಕ್ಕೆ ಸೇರಿರುವ ಸಂಸ್ಥೆಗಳಿಗೆ ಒಟ್ಟಾರೆ 121.43 ಎಕರೆ ಜಮೀನುಗಳನ್ನು ಸರ್ಕಾರವು ಮಂಜೂರು ಮಾಡಿರುವುದು ಉತ್ತರದಿಂದ ತಿಳಿದು ಬಂದಿದೆ.

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ ಮಂಡಳಿ ಮತ್ತು ಜನಸೇವಾ ಟ್ರಸ್ಟ್‌ಗೆ ಯಲಹಂಕ ವಿಧಾನಸಭೆ ಕ್ಷೇತ್ರಕ್ಕೆ ಸೇರಿರುವ ಹುರುಳಿಚಿಕ್ಕನಹಳ್ಳಿ ಸರ್ವೇ ನಂಬರ್‍‌ 69ರಲ್ಲಿ 9 ಎಕರೆ 32 ಗುಂಟೆ, ಬೆಂಗಳೂರು ದಕ್ಷಿಣ ತಾಲೂಕಿನ ಚನ್ನೇನಹಳ್ಳಿ ಗ್ರಾಮದಲ್ಲಿ 6 ಎಕರೆ , ಕುರುಬರಹಳ್ಳಿಯಲ್ಲಿ 35 ಎಕರೆ 33 ಗುಂಟೆ, ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ತಾಲೂಕಿನ ಕೆಳಗಿನನಾಯ್ಕರಾಂಡಹಳ್ಳಿಯಲ್ಲಿ 6 ಎಕರೆ 20 ಗುಂಟೆ, 36.00 ಎಕರೆ, ಮೇಲಿನಜೋಗನಹಳ್ಳಿಯಲ್ಲಿ 7 ಎಕರೆ 20 ಗುಂಟೆ ವಿಸ್ತೀರ್ಣದ ಜಮೀನುಗಳು ಮಂಜೂರಾಗಿರುವುದು ಗೊತ್ತಾಗಿದೆ.

ಅದೇ ರೀತಿ ಮೈಸೂರಿನ ಬೆಳವಾಡಿಯಲ್ಲಿ 9 ಎಕರೆ 38 ಎಕರೆ, ಚಾಮರಾಜನಗರದ ಯಡಪುರದಲ್ಲಿ 5 ಎಕರೆ, ಕಲ್ಬುರ್ಗಿಯ ಶರಣಸಿರಸಗಿಯಲ್ಲಿ 7 ಎಕರೆ ವಿಸ್ತೀರ್ಣದ ಜಮೀನುಗಳನ್ನು ರಾಷ್ಟ್ರೋತ್ಥಾನ ಪರಿಷತ್‌ ಹೆಸರಿಗೆ ಜಮೀನು ಮಂಜೂರಾಗಿರುವುದು ತಿಳಿದು ಬಂದಿದೆ.

 

 

ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿ 8.34 ಎಕರೆ, ಬೆಂಗಳೂರು ದಕ್ಷಿಣ ತಾಲೂಕಿನ ಕಂಬಿಪುರದಲ್ಲಿ 35 ಎಕರೆ, ನೆಲಮಂಗಲದ ಹಂಚಿಪುರದಲ್ಲಿ 12ಎಕರೆ, ಹಾಸನದ ಚನ್ನರಾಯಪಟ್ಟಣದಲ್ಲಿ 22 ಎಕರೆ 36 ಗುಂಟೆ ಸೇರಿ ಒಟ್ಟಾರೆ 77 ಎಕರೆ ಜಮೀನನ್ನು ಸರ್ಕಾರವು ಮಂಜೂರು ಮಾಡಿದೆ.

 

 

ಆದಿಚುಂಚನಗಿರಿ ಟ್ರಸ್ಟ್‌ಗೆ ಬೆಂಗಳೂರು ನಗರೂರು ಗ್ರಾಮದಲ್ಲಿ 16 ಎಕರೆ, ಬೆಂಗಳೂರು ದಕ್ಷಿಣ ತಾಲೂಕಿನ ಕಂಬೀಪುರದಲ್ಲಿ 35 ಎಕರೆ, ಭದ್ರಾವತಿಯ ಕಾರೇಹಳ್ಳಿಯಲ್ಲಿ 20 ಎಕರೆ, ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ 3 ಎಕರೆ 10 ಗುಂಟೆ ಸೇರಿ ಒಟ್ಟಾರೆ 74 ಎಕರೆ 1 ಗುಂಟೆ ವಿಸ್ತೀರ್ಣದ ಜಮೀನನ್ನು ಸರ್ಕಾರವು ಮಂಜೂರು ಮಾಡಿರುವುದು ಗೊತ್ತಾಗಿದೆ.

ಮಾತಾ ಅಮೃತಾನಂದಮಯಿ ವಿದ್ಯಾಸಂಸ್ಥೆಗೆ ಆನೇಕಲ್‌ನ ಚೂಡಸಂದ್ರ ಗ್ರಾಮದಲ್ಲಿ 5 ಎಕರೆ 18 ಗುಂಟೆ, ಬೆಂಗಳೂರು ದಕ್ಷಿಣ ತಾಲೂಕಿನ ಕಣಿಮಿಣಿಕೆ ಗ್ರಾಮದಲ್ಲಿ 25 ಎಕರೆ ಜಮೀನು ಮಂಜೂರಾಗಿದೆ. ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಯೋಜನೆಗಾಗಿ ಶಿವಮೊಗ್ಗದ ಉರಗಡೂರಿನಲ್ಲಿ 19 ಎಕರೆ, ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಷನಲ್ ಸೊಸೈಟಿಗೆ ಬೆಳ್ತಂಗಡಿಯ ಉಜಿರೆಯಲ್ಲಿ 21 ಗುಂಟೆ ಜಮೀನು ಮಂಜೂರಾಗಿದೆ.

 

 

ವಿಶೇಷವೆಂದರೇ ಮಂಡ್ಯದ ಹೆಚ್‌ ಮಲ್ಲಿಗೆರೆ, ಮಾದೇಪುರ, ಜವರನಹಳ್ಳಿ, ಚುಂಚನಹಳ್ಳಿ, ನಾಗಮಂಗಲದ ಬ್ಯಾಲದಕೆರೆಯಲ್ಲಿ ಒಟ್ಟಾರೆ 102 ಎಕರೆ 34 ಗುಂಟೆ ಜಮೀನನ್ನು ಶೈಕ್ಷಣಿಕ ಉದ್ದೇಶ ಮತ್ತು ಆಸ್ಪತ್ರೆ ಉದ್ದೇಶಕ್ಕೆ ಮಂಜೂರಾಗಿದೆ ಎಂದು ಉತ್ತರದಲ್ಲಿ ಮಾಹಿತಿ ಇದೆ. ಆದರೆ ಈ ಜಮೀನುಗಳನ್ನು ಯಾವ ಶೈಕ್ಷಣಿಕ ಸಂಸ್ಥೆಗಳಿಗೆ ಮಂಜೂರಾಗಿದೆ ಎಂಬ ಹೆಸರುಗಳನ್ನು ಒದಗಿಸಿಲ್ಲ.

 

 

ಮೈಸೂರಿನ ಜೆಎಸ್‌ಎಸ್‌ ವಿದ್ಯಾಪೀಠಕ್ಕೆ ವಿಜಯಪುರ ಜಿಲ್ಲೆಯ ಭೂತನಾಳ ಗ್ರಾಮದಲ್ಲಿ 21 ಎಕರೆ 8 ಗುಂಟೆ ವಿಸ್ತೀರ್ಣದ ಜಮೀನನ್ನು ಶೈಕ್ಷಣಿಕ ಉದ್ದೇಶಕ್ಕೆ ಮಂಜೂರು ಮಾಡಿತ್ತು. ಆದರೆ ಈ ಪ್ರಕರಣವು ನ್ಯಾಯಾಲಯದ ಮೆಟ್ಟಿಲೇರಿದೆ. ಹೈಕೋರ್ಟ್‌ನಲ್ಲಿ ಈ ಕುರಿತು ರಿಟ್‌ ಅರ್ಜಿ ಸಲ್ಲಿಕೆಯಾಗಿದೆ. ಕಾಗಿನೆಲೆ ಮಹಾಸಂಸ್ಥಾನ, ಕನಕಗುರುಪೀಠ, ಕುಂಚಿಟಿಗ ಮಹಾಸಭಾ, ಮಹರ್ಷಿ ವಾಲ್ಮೀಕಿ ಗುರುಪೀಠ,

ನಾರಾಯಣಗುರು ಮಹಾಸಂಸ್ಥಾನ, ಮಾಚಿದೇವ ಮಹಾಸಂಸ್ಥಾನ, ಮೇದರ ಕೇತೇಶ್ವರ ಗುರುಪೀಠ, ಕುರುಬರ ಸಂಘ, ಆದಿಜಾಂಬವ ಮಹಾಸಂಸ್ಥಾನ, ಬಲಿಜ, ಕುಂಚಿಟಿಗರ ಸಂಘ, ಸಿದ್ದಗಂಗಾ ಮಠ ಟ್ರಸ್ಟ್‌, ವಾಲ್ಮೀಕಿ ನಾಯಕ ಸಭೆ, ಸಿದ್ದಗಂಗಾ ಮಠ, ಆರ್ಯ ಈಡಿಗರ ಸಂಘ, ಕರ್ನಾಟಕ ಪ್ರದೇಶ ಕುರುಬರ ಸಂಘ, ದೈವಜ್ಞ ಬ್ರಾಹ್ಮಣ ಸಂಘ,

 

 

ಕನಕ ಸೇವಾ ಸಂಸ್ಥೆ, ಶಾರದಾ ಪೀಠ, ಕ್ಷತ್ರಿಯ ಮರಾಠ ಯುವ ವೇದಿಕೆ, ಬೋವಿ ಸಮಾಜ, ಜಿಲ್ಲಾ ಕೊಠಾರಿ ಸಂಘ, ಕೊಠಾರಿ ಸೇವಾ ಸಂಘ, ಮಡಿವಾಳ, ದೀನಬಂಧು ಟ್ರಸ್ಟ್‌, , ಆದಮಾರು ಮಠ ವಿದ್ಯಾಸಂಸ್ಥೆ ಸೇರಿದಂತೆ ಹಲವು ಸಂಘ ಸಂಸ್ಥೆಗಳಿಗೂ ಸಹ ಸರ್ಕಾರಿ ಜಮೀನು ಮಂಜೂರಾಗಿರುವುದು ತಿಳಿದು ಬಂದಿದೆ.

 

ರಾಷ್ಟ್ರೋತ್ಥಾನ ಪರಿಷತ್‌, ಬಿಜೆಪಿ ಕಚೇರಿಗೆ ಗೋಮಾಳ, ಜಮೀನು ಹಂಚಿಕೆ ಸುತ್ತ ‘ದಿ ಫೈಲ್‌’ನ 13 ವರದಿಗಳು

 

ರಾಷ್ಟ್ರೋತ್ಥಾನ ಪರಿಷತ್‌ ಗೆ ಗೋಮಾಳ ಹಂಚಿಕೆ ಮಾಡಿರುವ ಕುರಿತು ದಿ ಫೈಲ್‌ ಸರಣಿ ವರದಿಗಳನ್ನು ಪ್ರಕಟಿಸಿತ್ತು.

 

4 ವರ್ಷದಲ್ಲಿ 212.83 ಎಕರೆ ಗೋಮಾಳ ಹಂಚಿಕೆ; ರಾಷ್ಟ್ರೋತ್ಥಾನ, ಇಸ್ಕಾನ್‌, ಆದಿಚುಂಚನಗಿರಿ ಸಿಂಹಪಾಲು

 

ಕಳೆದ ನಾಲ್ಕು ವರ್ಷಗಳಲ್ಲಿ  ಧಾರ್ಮಿಕ ಸಂಘ ಸಂಸ್ಥೆಗಳಿಗೆ ಜಮೀನು ಮಂಜೂರು ಮಾಡಿರುವ ಕುರಿತು ದಿ ಫೈಲ್‌ ವರದಿಗಳನ್ನು ಪ್ರಕಟಿಸಿತ್ತು.

 

ಗೋಮಾಳ ಮಂಜೂರಿಗೆ ತಡೆ; ಜನಸೇವಾ ಟ್ರಸ್ಟ್‌ಗೆ 35.33 ಎಕರೆ ಮಂಜೂರು ಸುತ್ತ ‘ದಿ ಫೈಲ್‌’ನ 11 ವರದಿಗಳು

 

ಜನಸೇವಾ ಟ್ರಸ್ಟ್‌ ಗೂ ನಿಯಮಗಳನ್ನು ಉಲ್ಲಂಘಿಸಿ ಚಿಲ್ಲರೆ ದರದಲ್ಲಿ ಜಮೀನು ಮಂಜೂರು ಮಾಡಿದ್ದನ್ನು ದಿ ಫೈಲ್‌ ಸರಣಿ ವರದಿಗಳನ್ನು ಪ್ರಕಟಿಸಿತ್ತು.

Hot this week

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....
Please Scan to make Your Contribution

Topics

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

Related Articles

Popular Categories

error: Content is protected !!