Friday | June 19, 2026 |

ಹಾಸಿಗೆ, ದಿಂಬು ಖರೀದಿ ಹಗರಣ; ವರದಿ ನೀಡಿ 4 ವರ್ಷವಾದರೂ ಕ್ರಮವಿಲ್ಲ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿನ ವಸತಿ ಶಾಲೆಗಳ ವಿದ್ಯಾರ್ಥಿ ನಿಲಯಗಳಿಗೆ ಹಾಸಿಗೆ, ದಿಂಬು ಖರೀದಿಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ ಎನ್ನಲಾದ ಅಧಿಕಾರಿಗಳ ವಿರುದ್ಧ 4 ವರ್ಷಗಳಾದರೂ ಒಂದೇ ಒಂದು ಕ್ರಮ ಜರುಗಿಸಿಲ್ಲ. ಹಾಸಿಗೆ, ದಿಂಬು, ಸೊಳ್ಳೆ ಪರದೆ, ಹೊದಿಕೆ, ಜಮಖಾನಗಳನ್ನು ಖಾಸಗಿ ಸಂಸ್ಥೆಗಳ ಮೂಲಕ ಪೂರೈಕೆ ಮಾಡಿ 19 ಕೋಟಿಗೂ ಅಧಿಕ ಮೊತ್ತದಲ್ಲಿ ಭ್ರಷ್ಟಾಚಾರ ನಡೆದಿದ್ದರೂ ಸಮಾಜ ಕಲ್ಯಾಣ ಇಲಾಖೆ ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಕಾರ್ಯವೈಖರಿ ಬಗ್ಗೆ 14ನೇ ವಿಧಾನಸಭೆಯ ಸಮಿತಿಯು ಈ ಪ್ರಕರಣದ ಕುರಿತು 2017ರ ಮಾರ್ಚ್‌ 27ರಂದು ವರದಿಯನ್ನು ಮಂಡಿಸಿತ್ತು. ವರದಿ ಮಂಡನೆಯಾಗಿ 4 ವರ್ಷಗಳಾದರೂ ವರದಿಯ ಪೂರ್ಣ ಪ್ರಮಾಣದಲ್ಲಿ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿಲ್ಲ ಎಂದು ತಿಳಿದು ಬಂದಿದೆ.

ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಕಾರ್ಯವೈಖರಿ ಕುರಿತು 14ನೇ ವಿಧಾನಸಭೆ ಸಮಿತಿ 7ನೇ ವರದಿ ಶಿಫಾರಸ್ಸುಗಳ ಅನುಷ್ಠಾನದ ಕುರಿತು 2022ರ ಜನವರಿ 18ರಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಪರಿಶೀಲನೆಗೆ ಕೈಗೆತ್ತಿಕೊಂಡಿದೆ. ಸಮಿತಿಯ ಸಭೆಯ ಕಾರ್ಯಸೂಚಿಯಲ್ಲಿ ಈ ವಿಷಯವನ್ನು ಸೇರ್ಪಡೆಗೊಳಿಸಲಾಗಿದೆ.


ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಾಸಿಗೆ, ದಿಂಬು ಖರೀದಿ ಹಗರಣ ಕುರಿತು ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿದ್ದ ವರದಿಯನ್ನು ಸಮಿತಿಯ ಹಾಲಿ ಅಧ್ಯಕ್ಷ ಕೃಷ್ಣಬೈರೇಗೌಡ ಅವರು ಕೈಗೆತ್ತಿಕೊಂಡಿರುವುದು ಹಗರಣಕ್ಕೆ ಮತ್ತೊಮ್ಮೆ ಮಹತ್ವ ಬಂದಂತಾಗಿದೆ.

ವಸತಿ ಶಾಲೆಗಳಿಗೆ ಬೇಕಾಗುವ ಹಾಸಿಗೆ, ದಿಂಬು, ಮಂಚ, ಊಟದ ಟೇಬಲ್‌ನ್ನು ಒದಗಿಸುವ ಉದ್ದೇಶದಿಂದ 27.16 ಕೋಟಿ ಬಿಡುಗಡೆ ಮಾಡಲಾಗಿತ್ತು. ಆದರೆ ಜಿಲ್ಲಾಧಿಕಾರಿಗಳ ಬಳಿ 3.47 ಕೋಟಿ ಉಳಿದಿತ್ತು. ಇಲಾಖೆ ಟಿಪ್ಪಣಿ ಪ್ರಕಾರ 25.06 ಕೋಟಿ ರು.ಗಳನ್ನು ಉಪಯೋಗಿಸಿ 4.07 ಕೋಟಿ ರು.ಗಳನ್ನು ಹಿಂದಿರುಗಿಸಲಾಗಿತ್ತು. ಈ ಮಾಹಿತಿಯು ಬಿಡುಗಡೆಯಾದ ಅನುದಾನಕ್ಕೆ ಹೊಂದಿಕೆಯಾಗದ ಕಾರಣ ಇದನ್ನು ಮರು ತಪಾಸಣೆ ನಡೆಸಬೇಕು ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಶಿಫಾರಸ್ಸು ಮಾಡಿತ್ತು.

‘ಅನುದಾನ ಬಿಡುಗಡೆ ಮಾಡಿದರೂ ಮೂಲಸೌಕರ್ಯವನ್ನು ಒದಗಿಸುವ ಬಗ್ಗೆ ಗಮನಹರಿಸದೇ ಹಣವನ್ನು ಉಳಿತಾಯವಾಗಿ ಇಟ್ಟಿರುವುದು ಸರಿಯಲ್ಲ. ಖರೀದಿಸಿದ್ದ ಸಾಮಗ್ರಿಗಳು ಉತ್ತಮವಾಗಿಲ್ಲ. ಖರೀದಿಯನ್ನು ಸಮಗ್ರವಾಗಿ ಮತ್ತೊಮ್ಮೆ ಪರಿಶೀಲಿಸಿ ಲೋಪ ಕಂಡು ಬಂದಲ್ಲಿ ನಿರ್ದಾಕ್ಷ್ಯಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿತ್ತು.

ಹಾಸಿಗೆ, ದಿಂಬುಗಳನ್ನು ವಿದ್ಯಾರ್ಥಿಗಳ ದಾಖಲಾತಿಗೆ ಅನುಗುಣವಾಗಿ ಖರೀದಿಸದೇ ಮಂಜೂರಾದ ಸಂಖ್ಯೆಯ ಮೇಲೆ ಖರೀದಿ ಮಾಡಿ ಅಧಿಕ ಪ್ರಮಾಣದಲ್ಲಿ ದಾಸ್ತಾನು ಮಾಡಲಾಗಿತ್ತು. ಹಾಸಿಗೆ, ದಿಂಬುಗಳನ್ನು ಹೆಚ್ಚುವರಿ ಹಣದ ಮೇಲೆ ಖರೀದಿಸಿ ಈ ಖರೀದಿಯ ವೇಳೆ ಕೆಟಿಪಿಪಿ ಅಧಿನಿಯಮ ಉಲ್ಲಂಘನೆ ಮಾಡಲಾಗಿತ್ತು. ಅಲ್ಲದೆ ಈ ಖರೀದಿಯಲ್ಲಿ ವ್ಯಾಟ್‌ ತೆರಿಗೆಯನ್ನು ಶೇ. 14.5ರಂತೆ ನೀಡಿರುವ ಕುರಿತು ಇಲಾಖೆಯ ಗಮನ ಸೆಳೆದಿತ್ತು. ಖರೀದಿಯಲ್ಲಿ ಅಕ್ರಮ ಕಂಡು ಬಂದಲ್ಲಿ ತಪ್ಪಿತಸ್ಥ ಅಧಿಕಾರಿಗಳನ್ನು ಗುರುತಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಮಿತಿಯು ಶಿಫಾರಸ್ಸು ಮಾಡಿತ್ತು.

ಹಾಸಿಗೆ, ದಿಂಬು ಖರೀದಿಯಲ್ಲಿ ನಡೆದಿದೆ ಎನ್ನಲಾಗಿದ್ದ ಅಕ್ರಮಗಳ ಕುರಿತು 2017ರಲ್ಲಿ ಪ್ರತಿಪಕ್ಷ ಬಿಜೆಪಿಯು ಸದನದ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸಿತ್ತು. ವಿದ್ಯಾರ್ಥಿ ನಿಲಯಗಳಿಗೆ ಪೂರೈಸಲು ಎಂಟು ವಿವಿಧ ವಸ್ತುಗಳನ್ನು ₹2,715 ದರದಲ್ಲಿ ಖರೀದಿ ಮಾಡಲಾಗಿದೆ. ಮಾರುಕಟ್ಟೆಯಲ್ಲಿ ಈ ವಸ್ತುಗಳ ಬೆಲೆ ₹1,800 ಇದೆ. ದುಬಾರಿ ದರ ನೀಡಿ ಖರೀದಿ ಮಾಡಿರುವುದರಿಂದ ದೊಡ್ಡ ಮಟ್ಟದ ಅವ್ಯವಹಾರ ಆಗಿದೆ ಎಂದು ಬಿಜೆಪಿಯ ಹಿಂದಿನ ವಕ್ತಾರ ಅಶ್ವತ್ಥನಾರಾಯಣ (ಹಾಲಿ ಸಚಿವ) ಆರೋಪಿಸಿದ್ದರು.

ಹಾಸಿಗೆ, ದಿಂಬು, ಸೊಳ್ಳೆಪರದೆ, ಹೊದಿಕೆ, ಜಮಖಾನಗಳನ್ನು ಕೈಮಗ್ಗ ಅಭಿವೃದ್ಧಿ ನಿಗಮದ ಮೂಲಕ ಖರೀದಿ ಪ್ರಕ್ರಿಯೆ ನಡೆಸಿತ್ತಾದರೂ ಖಾಸಗಿ ಸಂಸ್ಥೆಗಳ ಮೂಲಕ ಇದನ್ನು ಪೂರೈಸಲು ಅವಕಾಶ ಕಲ್ಪಿಸಿ, ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು.

ಖಾಸಗಿ ಸಂಸ್ಥೆ ಮೂಲಕ ದುಬಾರಿ ದರದಲ್ಲಿ ಖರೀದಿಸುವ ಮೂಲಕ ಬೊಕ್ಕಸಕ್ಕೆ ₹ 8ಕೋಟಿಯಿಂದ ₹ 10 ಕೋಟಿ ನಷ್ಟ ಉಂಟು ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ವಿತರಿಸಿದ ಸಮವಸ್ತ್ರ ಕೂಡ ಕಳಪೆಯಾಗಿದ್ದು, ಅಲ್ಲಿಯೂ ಅವ್ಯವಹಾರ ನಡೆದಿರುವ ಸಾಧ್ಯತೆ ಇದೆ. ಎರಡೂ ಹಗರಣಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕು ಎಂಬ ಒತ್ತಾಯವೂ ಕೇಳಿ ಬಂದಿತ್ತು.

ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿ ವಸತಿ ನಿಲಯಗಳ ಹಾಸಿಗೆ ಹಾಗೂ ದಿಂಬು ಖರೀದಿಯಲ್ಲಿ ಪ್ರಕರಣದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಸರ್ಕಾರವು ಉಪ ಕಾರ್ಯದರ್ಶಿ ನೇತೃತ್ವದಲ್ಲಿ ತನಿಖೆ ನಡೆಸುತ್ತಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಅಂದಿನ ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ಅವರು ಹೇಳಿದ್ದರು.

ಪ್ರಕರಣದಲ್ಲಿ ಅಧಿಕಾರಿಗಳೇ ತಪ್ಪೆಸಗಿದ್ದಾರೆ ಎಂಬುದಾಗಿ ಖುದ್ದು ಸಮಾಜ ಕಲ್ಯಾಣ ಸಚಿವ ಆಂಜನೇಯ ಅವರೇ ಒಪ್ಪಿಕೊಂಡಿದ್ದರು. ಆಡಳಿತ ಪಕ್ಷದ ಸದಸ್ಯರಾಗಿದ್ದ ಪರಿಷತ್‌ನ ಮಾಜಿ ಸದಸ್ಯ ವಿ ಎಸ್ ಉಗ್ರಪ್ಪನವರೂ ಕೂಡ ಪ್ರಕರಣದಲ್ಲಿ ಅಧಿಕಾರಿಗಳೇ ತಪ್ಪೆಸಗಿದ್ದಾರೆ ಎಂದು ಪ್ರಸ್ತಾಪಿಸಿದ್ದರು.

Hot this week

ಈಶಾ ಫೌಂಡೇಷನ್, ಯೋಗ ಕೇಂದ್ರಕ್ಕೆ ಜಮೀನು ಭೂ ಪರಿವರ್ತನೆಯಲ್ಲಿ ನಿಯಮ ಉಲ್ಲಂಘನೆ ಆರೋಪ; ತಹಶೀಲ್ದಾರ್‍‌ಗಳಿಂದಲೇ ಅಕ್ರಮ ಲಾಭ, ಸರ್ಕಾರಕ್ಕೆ ವಂಚನೆಯಾಗಿದೆಯೇ?

ಬೆಂಗಳೂರು; ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದಲ್ಲಿನ ವಿವಿಧ ಸರ್ವೇ ನಂಬರ್‍‌ಗಳಲ್ಲಿ ಒಟ್ಟಾರೆ...

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹೊಸ ಹಾಸ್ಟೆಲ್‌ಗಳ ಮಂಜೂರಾತಿಗೆ ನಕಾರ; ವಿದ್ಯಾರ್ಥಿ ನಿಲಯಗಳ ವಿಲೀನಕ್ಕೆ ಮುಂದಾಯಿತೇ ಸರ್ಕಾರ?

ಬೆಂಗಳೂರು; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಹೊಸದಾಗಿ ಮೆಟ್ರಿಕ್‌ ಪೂರ್ವ...

ಮುಖ್ಯಮಂತ್ರಿ ಮೂಲಸೌಕರ್ಯ ಯೋಜನೆ ಉದ್ದೇಶಕ್ಕೆ ಧಕ್ಕೆ ; ನ್ಯಾಯಾಂಗ ಬಡಾವಣೆ ಪ್ರತಿಷ್ಠಿತರ ಒತ್ತಡಕ್ಕೆ ಮಣಿದು ಹೆಬ್ಬಾಗಿಲು ನಿರ್ಮಾಣ?

ಬೆಂಗಳೂರು; ಮುಖ್ಯಮಂತ್ರಿಗಳ ಮೂಲಸೌಕರ್ಯ ಯೋಜನೆಯಡಿ ಒದಗಿಸಿದ್ದ ಅನುದಾನವನ್ನು ಅಧಿಕಾರಿವರ್ಗವು ಪ್ರಭಾವಿಗಳ ಒತ್ತಡಕ್ಕೆ...
Please Scan to make Your Contribution

Topics

ಈಶಾ ಫೌಂಡೇಷನ್, ಯೋಗ ಕೇಂದ್ರಕ್ಕೆ ಜಮೀನು ಭೂ ಪರಿವರ್ತನೆಯಲ್ಲಿ ನಿಯಮ ಉಲ್ಲಂಘನೆ ಆರೋಪ; ತಹಶೀಲ್ದಾರ್‍‌ಗಳಿಂದಲೇ ಅಕ್ರಮ ಲಾಭ, ಸರ್ಕಾರಕ್ಕೆ ವಂಚನೆಯಾಗಿದೆಯೇ?

ಬೆಂಗಳೂರು; ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದಲ್ಲಿನ ವಿವಿಧ ಸರ್ವೇ ನಂಬರ್‍‌ಗಳಲ್ಲಿ ಒಟ್ಟಾರೆ...

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹೊಸ ಹಾಸ್ಟೆಲ್‌ಗಳ ಮಂಜೂರಾತಿಗೆ ನಕಾರ; ವಿದ್ಯಾರ್ಥಿ ನಿಲಯಗಳ ವಿಲೀನಕ್ಕೆ ಮುಂದಾಯಿತೇ ಸರ್ಕಾರ?

ಬೆಂಗಳೂರು; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಹೊಸದಾಗಿ ಮೆಟ್ರಿಕ್‌ ಪೂರ್ವ...

ಮುಖ್ಯಮಂತ್ರಿ ಮೂಲಸೌಕರ್ಯ ಯೋಜನೆ ಉದ್ದೇಶಕ್ಕೆ ಧಕ್ಕೆ ; ನ್ಯಾಯಾಂಗ ಬಡಾವಣೆ ಪ್ರತಿಷ್ಠಿತರ ಒತ್ತಡಕ್ಕೆ ಮಣಿದು ಹೆಬ್ಬಾಗಿಲು ನಿರ್ಮಾಣ?

ಬೆಂಗಳೂರು; ಮುಖ್ಯಮಂತ್ರಿಗಳ ಮೂಲಸೌಕರ್ಯ ಯೋಜನೆಯಡಿ ಒದಗಿಸಿದ್ದ ಅನುದಾನವನ್ನು ಅಧಿಕಾರಿವರ್ಗವು ಪ್ರಭಾವಿಗಳ ಒತ್ತಡಕ್ಕೆ...

ಸಿದ್ದರಾಮಯ್ಯರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್‌ನಲ್ಲಿ ಲೋಪ!; ಬಹಿರಂಗವಾಗದ ಹೈಕ್ರಾಫ್ಟ್ ಏವಿಯೇಷನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್‌ನ ವರದಿ

ಬೆಂಗಳೂರು; ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‍‌, ಅನುಮೋದಿತ ಸ್ಥಳದಲ್ಲಿ ಇಳಿಯದೇ ಬೇರೆ...

Related Articles

Popular Categories

error: Content is protected !!