Friday | August 21, 2026 |

ಬೆಳೆ ಸಮೀಕ್ಷೆ; ಬಿಎಸ್‌ವೈ, ನಟ ದರ್ಶನ್‌, ಬಿ ಸಿ ಪಾಟೀಲ್‌ ವಿಡಿಯೋ ತುಣುಕು ಪ್ರಸಾರಕ್ಕೆ 62 ಲಕ್ಷ ವೆಚ್ಚ

ಬೆಂಗಳೂರು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಬಿ ಸಿ ಪಾಟೀಲ್‌ ಮತ್ತು ಕೃಷಿ ಇಲಾಖೆ ರಾಯಭಾರಿ ನಟ ದರ್ಶನ್‌ ಅವರು ಬೆಳೆ ಸಮೀಕ್ಷೆ ಕುರಿತು ವಿಡಿಯೋ ತುಣಕುಗಳನ್ನು ಪ್ರಸಾರ ಮಾಡಿದ್ದ 11 ಸುದ್ದಿವಾಹಿನಿಗಳಿಗೆ 62.62 ಲಕ್ಷ ರು. ವೆಚ್ಚವಾಗಿದೆ.

 

ಕೃಷಿ ಇಲಾಖೆಗೆ ರಾಯಭಾರಿಯಾಗಿರುವ ನಟ ದರ್ಶನ್‌ ಅವರು ಯಾವುದೇ ಸಂಭಾವನೆ ಪಡೆದುಕೊಳ್ಳದಿದ್ದರೂ ಬೆಳೆ ಸಮೀಕ್ಷೆ ಕುರಿತು ಮಾಡಿದ್ದ ವಿಡಿಯೋ ತುಣುಕುಗಳ ಪ್ರಸಾರಕ್ಕೆ 62.62 ಲಕ್ಷ ರು ವೆಚ್ಚವಾಗಿರುವುದು ತಿಳಿದು ಬಂದಿದೆ. ಈ ಸಂಬಂಧ ಹಣ ಬಿಡುಗಡೆ ಮಾಡಲು ಕೃಷಿ ಇಲಾಖೆ ಆಯುಕ್ತರು ಅನುಮೋದನೆ ಕೋರಿ 2021ರ ಡಿಸೆಂಬರ್‌ 7ರಂದು ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

2021-22ನೇ ಸಾಲಿನ ಬೆಳೆ ಸಮೀಕ್ಷೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ ಸಿ ಪಾಟೀಲ್‌, ಕೃಷಿ ಇಲಾಖೆ ರಾಯಭಾರಿ ಹಾಗೂ ನಟ ದರ್ಶನ್‌ ಅವರು 40 ಸೆಕೆಂಡುಗಳ ವಿಡಿಯೋ ತುಣಕುಗಳನ್ನು ಸುದ್ದಿವಾಹಿನಿಗಳಲ್ಲಿ 2021ರ ಸೆಪ್ಟಂಬರ್‌ 27ರಿಂದ ಡಿಸೆಂಬರ್‌ 3ರವರೆಗೆ ಬಿತ್ತರಿಸಲಾಗಿತ್ತು. ಯಕ್ಷಿ ಕಮ್ಯುನಿಕೇಷನ್‌ ಮತ್ತು ಎಂಸಿ ಅಂಡ್‌ ಎ ಮೂಲಕ ಸುದ್ದಿವಾಹಿನಿಗಳಿಗೆ ಜಾಹೀರಾತು ಬಿಡುಗಡೆ ಮಾಡಲಾಗಿತ್ತು ಎಂಬುದು ಕೃಷಿ ಆಯುಕ್ತರ ಪತ್ರದಿಂದ ಗೊತ್ತಾಗಿದೆ.

 

ಟಿ ವಿ 9 ಕನ್ನಡ, ನ್ಯೂಸ್‌ 18 ಕನ್ನಡ, ಸುವರ್ಣ ನ್ಯೂಸ್‌, ಟಿ ವಿ 5 ಕನ್ನಡ, ಪವರ್‌ ಟಿವಿ, ಪಬ್ಲಿಕ್‌ ಟಿವಿಗೆ ಯಕ್ಷಿ ಕಮ್ಯುನಿಕೇಷನ್‌ ಮೂಲಕ ಬಿಡುಗಡೆಯಾಗಿದ್ದ ಜಾಹೀರಾತಿಗೆ 30,77,440 ರು., ಎಂ ಸಿ ಅಂಡ್‌ ಎ ಮೂಲಕ ಪಬ್ಲಿಕ್‌ ಟಿವಿ, ದಿಗ್ವಿಜಯ ನ್ಯೂಸ್‌ ಟಿವಿ, ಬಿ ಟಿ ವಿ ನ್ಯೂಸ್‌, ನ್ಯೂಸ್‌ ಫಸ್ಟ್‌, ಪ್ರಜಾ ಟಿವಿ ಮತ್ತು ರಾಜ್‌ ನ್ಯೂಸ್‌ಗೆ ಬಿಡುಗಡೆಯಾಗಿದ್ದ ಜಾಹೀರಾತಿಗೆ 31, 85,056 ರು. ವೆಚ್ಚವಾಗಿತ್ತು.

 

ಕೃಷಿ ಇಲಾಖೆ ಆಯುಕ್ತರು ಪ್ರಧಾನ ಕಾರ್ಯದರ್ಶಿಗೆ ಬರೆದಿರುವ ಪತ್ರ

 

2021-22ನೇ ಸಾಲಿನ ಬೆಳೆ ಸಮೀಕ್ಷೆ ಕುರಿತು ರಾಜ್ಯದ ರೈತರಲ್ಲಿ ಅರಿವು ಮೂಡಿಸಲು 40 ಸೆಕೆಂಡುಗಳ ವಿಡಿಯೋ ತುಣುಕುಗಳನ್ನು ರಾಜ್ಯದ 11 ಸುದ್ದಿವಾಹಿನಿಗಳಿಗೆ ಪ್ರಚಾರ ಪಡಿಸಿರುವ ಸಂಬಂಧ ತಗುಲಿರುವ 62,62,496 ರುಗ.ಳನ್ನು ಸಂಬಂಧಿಸಿದ ಸಂಸ್ಥೆಗಳಿಗೆ ಪಾವತಿಸುವ ಪ್ರಸ್ತಾವನೆಗೆ ಆಂತರಿಕ ಆರ್ಥಿಕ ಸಲಹೆಗಾರರ ಅಭಿಪ್ರಾಯ ಕೋರಿ ಕಡತವನ್ನು 2022ರ ಜನವರಿ 13ರಂದು ಸಲ್ಲಿಸಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

 

2020-21ರ ಸಾಲಿನಲ್ಲಿ ಸುಮಾರು 256. 77 ಲಕ್ಷ ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗಿದೆ. ಈವರೆಗೂ ಒಟ್ಟು 228.05 ಲಕ್ಷ ತಾಲೂಕುಗಳ ಶೇ.88.81ರಷ್ಟು ಬೆಳೆ ಸಮೀಕ್ಷೆ ಮಾಡಲಾಗಿದೆ. 2020-21ರ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಒಟ್ಟು 12.80 ಲಕ್ಷ ರೈತರು ಬೆಳೆ ವಿಮೆಗೆ ನೋಂದಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

Hot this week

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....
Please Scan to make Your Contribution

Topics

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

Related Articles

Popular Categories

error: Content is protected !!