Monday | August 24, 2026 |

ವಿಧಾನಸೌಧ, ವಿಕಾಸಸೌಧ ಆವರಣದಲ್ಲೇ ಧಾರ್ಮಿಕ ಚಟುವಟಿಕೆ; ಆದೇಶ ಹೊರಡಿಸಿಲ್ಲವೆಂದ ಸರ್ಕಾರ

ಬೆಂಗಳೂರು;  ವಿಧಾನಸೌಧ ಮತ್ತು ವಿಕಾಸಸೌಧ ಆವರಣದಲ್ಲಿರುವ ಅರಳಿಮರದ ಬಳಿ ಧಾರ್ಮಿಕ ಕಾರ್ಯ ಚಟುವಟಿಕೆ ನಡೆಸಲು ಯಾವುದೇ ಆದೇಶ ಹೊರಡಿಸಿಲ್ಲ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯಕಾರಿ ಶಾಖೆಯು ಆರ್‌ಟಿಐ ಅರ್ಜಿಗೆ ಉತ್ತರ ಒದಗಿಸಿದೆ.

 

ತುಮಕೂರು ಮೂಲದ ಸಾಮಾಜಿಕ ಕಾರ್ಯಕರ್ತ ನರಸಿಂಹಮೂರ್ತಿ ಅವರು ಮಾಹಿತಿ ಹಕ್ಕು ಅಧಿನಿಯಮ 2005ರ ಅಡಿ ಕೇಳಿದ್ದ ಪ್ರಶ್ನೆಗೆ ‘ ವಿಧಾನಸೌಧ ಮತ್ತು ವಿಕಾಸ ಸೌಧ ಮಧ್ಯೆ ಇರುವ ಅರಳಿ ಮರದ ಬಳಿ ಧಾರ್ಮಿಕ ಕಾರ್ಯ ಚಟುವಟಿಕೆ ನಡೆಸಲು ಯಾವುದೇ ಆದೇಶವಾಗಿರುವುದಿಲ್ಲ,’ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯಕಾರಿ ಶಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎನ್‌ ನರಸಿಂಹಯ್ಯ ಅವರು 2022ರ ಫೆ.22ರಂದು ಉತ್ತರ ಒದಗಿಸಿದ್ದಾರೆ.

 

ವಿಧಾನಸೌಧ ಮತ್ತು ವಿಕಾಸಸೌಧ ಆವರಣದೊಳಗೇ ಇರುವ ಅರಳಿಮರಕ್ಕೆ ಹೊಂದಿಕೊಂಡಂತೆ ಶ್ರೀ ಅರಳಿಕಟ್ಟೆ ಮುನೇಶ್ವರಸ್ವಾಮಿ ಹೆಸರಿನಲ್ಲಿ ದೇಗುಲ ಹಲವು ವರ್ಷಗಳಿಂದಲೂ ಪೂಜೆ, ಪುನಸ್ಕಾರ ಸೇರಿದಂತೆ ಧಾರ್ಮಿಕ ಚಟುವಟಿಕೆಗಳು ಹಲವು ವರ್ಷಗಳಿಂದಲೂ ನಡೆಯುತ್ತಿವೆ ಎಂದು ತಿಳಿದು ಬಂದಿದೆ.

 

ಅದೇ ರೀತಿ ಇದೇ ದೇಗುಲದ ಮುಂಭಾಗದಲ್ಲಿ ಧಾರ್ಮಿಕ ಗುರುತುಗಳನ್ನು ಬಿಂಬಿಸುವ ತ್ರಿಶೂಲ, ಗಂಟೆಗಳನ್ನು ಇರಿಸಲಾಗಿದೆ. ಪ್ರತಿ ದಿನವೂ ಒಂದಲ್ಲ ಒಂದು ಧಾರ್ಮಿಕ ಪೂಜಾ ಕಾರ್ಯ ಚಟುವಟಿಕೆಗಳು ನಡೆಯುತ್ತಿವೆ. ಸರ್ಕಾರದ ಯಾವುದೇ ಆದೇಶವಿಲ್ಲದೆ ಕಳೆದ ಹಲವು ವರ್ಷಗಳಿಂದಲೂ ಧಾರ್ಮಿಕ ಚಟುವಟಿಕೆ ನಡೆಯುತ್ತಿದ್ದರೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯಕಾರಿ ಶಾಖೆ ಮತ್ತು ಲೋಕೋಪಯೋಗಿ ಇಲಾಖೆಯು ಯಾವುದೇ ಕ್ರಮ ವಹಿಸಿಲ್ಲ ಎಂದು ಗೊತ್ತಾಗಿದೆ.

 

ಈ ಕುರಿತು ‘ದಿ ಫೈಲ್‌’ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (ಕಾರ್ಯಕಾರಿ ಶಾಖೆ) ಉಪ ಕಾರ್ಯದರ್ಶಿಯನ್ನು ಭೇಟಿ ಮಾಡಿತು. ಈ ಸಂಬಂಧ ಪ್ರತಿಕ್ರಿಯಿಸಿದ ಉಪ ಕಾರ್ಯದರ್ಶಿ ಶಶಿಧರ್‌ ಅವರು ‘ ಅರಳಿಕಟ್ಟೆ ಬಳಿ ಧಾರ್ಮಿಕ ಚಟುವಟಿಕೆ ನಡೆಸಲು ನಮ್ಮ ಶಾಖೆಯಿಂದ ಯಾವುದೇ ಆದೇಶ ಹೊರಡಿಸಿಲ್ಲ. ಈ ಸಂಬಂಧ ಆರ್‌ಟಿಐಗೆ ಉತ್ತರ ಒದಗಿಸಲಾಗಿದೆ,’ ಎಂದಷ್ಟೇ ಪ್ರತಿಕ್ರಿಯಿಸಿದರು.

 

ವಿಕಾಸ ಸೌಧ ನಿರ್ಮಾಣವಾಗುವ ಮುನ್ನ ಅರಳಿ ಮರವೊಂದು ರಸ್ತೆ ಬದಿಯಲ್ಲಿದ್ದ ಬಸ್‌ ನಿಲ್ದಾಣಕ್ಕೆ ಹೊಂದಿಕೊಂಡಿತ್ತು. ಇದಕ್ಕೆ ಹೊಂದಿಕೊಂಡಂತೆ ಸರ್ಕಾರಿ ಮುದ್ರಣಾಲಯವೂ ಇತ್ತು. ವಿಕಾಸ ಸೌಧ ನಿರ್ಮಾಣವಾದ ನಂತರ ಅರಳಿಕಟ್ಟೆ ಮರ ಮತ್ತು ಸುತ್ತಮುತ್ತಲಿನ ಜಾಗವು ವಿಕಾಸಸೌಧದ ಆವರಣದೊಳಗೆ ಸೇರ್ಪಡೆಯಾಯಿತು. ಆರಂಭದಲ್ಲಿ ಯಾವುದೇ ದೇಗುಲವಿರಲಿಲ್ಲ. ಕ್ರಮೇಣ ಅರಳಿ ಮರಕ್ಕೆ ಸುತ್ತಲೂ ಕಟ್ಟೆ ಕಟ್ಟಲಾಯಿತಲ್ಲದೆ ಅರಳಿಕಟ್ಟೆ ಮುನೇಶ್ವರಸ್ವಾಮಿ ಎಂಬ ದೇಗುಲವೂ ಎದ್ದಿತು ಎನ್ನುತ್ತಾರೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಯೊಬ್ಬರು.

 

ಸರ್ಕಾರಿ ಕಟ್ಟಡವಾಗಿರುವ ವಿಧಾನಸೌಧ ಮತ್ತು ವಿಕಾಸಸೌಧದ ಆವರಣದಲ್ಲಿ ಒಂದು ಧರ್ಮಕ್ಕೆ ಸೀಮಿತವಾದ ಗುಡಿಯಲ್ಲಿ ಧಾರ್ಮಿಕ ಚಟುವಟಿಕೆ ನಡೆಸುತ್ತಿರುವುದು ಸಂವಿಧಾನದ ಜಾತ್ಯಾತೀತ ತತ್ವಗಳಿಗೆ ವಿರುದ್ಧವಾದ ನಿಲುವಾಗಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

Hot this week

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...
Please Scan to make Your Contribution

Topics

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

Related Articles

Popular Categories

error: Content is protected !!