Sunday | August 30, 2026 |

ಪ್ರತ್ಯೇಕ ರಾಜ್ಯದ ಗುಂಗಿನಲ್ಲೇ ಮುಳುಗಿದ ಕತ್ತಿ;ಅರಣ್ಯ ಇಲಾಖೆಯಲ್ಲೇ 4,199 ಕಡತಗಳು ವಿಲೇವಾರಿಗೆ ಬಾಕಿ

ಬೆಂಗಳೂರು; ಪ್ರತ್ಯೇಕ ರಾಜ್ಯದ ಬಗ್ಗೆ ಆಗಾಗ್ಗೆ ಹೂಂಕರಿಸುವ ಸಚಿವ ಉಮೇಶ್‌ ವಿ ಕತ್ತಿ ಅವರು ನಿಭಾಯಿಸುತ್ತಿರುವ ಅರಣ್ಯ ಇಲಾಖೆಯಲ್ಲಿ ಕಡತಗಳು ವಿಲೇವಾರಿಯಾಗದೇ ಧೂಳಿಡಿದು ಕೂತಿವೆ. ಸಚಿವಾಲಯ ವಾಹಿನಿ, ಇ-ಆಫೀಸ್‌ ಸೇರಿ ಒಟ್ಟು 4,199 ಕಡತಗಳು ವಿಲೇವಾರಿಯಾಗದೇ ಬಾಕಿ ಇರುವುದು ಇದೀಗ ಬಹಿರಂಗವಾಗಿದೆ.

 

ಅರಣ್ಯ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ 2022ರ ಜೂನ್‌ 23ರಂದು ನಡೆದ ಸಭೆಯಲ್ಲಿ ಕಡತಗಳು ವಿಲೇವಾರಿಯಾಗದೇ ಕುರಿತು ಚರ್ಚೆಯಾಗಿದೆ. ಅದರಲ್ಲೂ ತುಂಬಾ ಮುಖ್ಯವಾಗಿ ನ್ಯಾಯಾಲಯದ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಲೇವಾರಿಯಾಗದೇ ಇರುವ ಕಡತಗಳ ಸಂಖ್ಯೆಯೂ ಹೆಚ್ಚಿನ ಸಂಖ್ಯೆಯಲ್ಲಿವೆ. ಸಭೆ ನಡವಳಿಗಳ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

 

ಕಡತ ವಿಲೇವಾರಿ ಕುರಿತು ಸಚಿವ ಉಮೇಶ್‌ ಕತ್ತಿ ಅವರು ನಿಯಮಿತವಾಗಿ ಸಭೆ ನಡೆಸದಿರುವುದೇ 4,199 ಕಡತಗಳು ಬಾಕಿ ಇರುವುದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಪ್ರತಿ ತಿಂಗಳೂ ನಡೆಯುವ ಕೆಡಿಪಿ ಸಭೆಯಲ್ಲಿಯೂ ಎಲ್ಲಾ ಇಲಾಖೆಗಳ ಕಡತಗಳ ವಿಲೇವಾರಿ ಕುರಿತು ಚರ್ಚೆ ನಡೆಯುತ್ತಾದರೂ ಅರಣ್ಯ ಇಲಾಖೆಯಲ್ಲಿ ಮಾತ್ರ ವಿಲೇವಾರಿಯಾಗದ ಕಡತಗಳು ಬೆಟ್ಟದಂತೆ ಏರುತ್ತಿದೆ.

 

2022ರ 16ರಿಂದ ಜೂನ್‌ 15ರವರೆಗಿನ ಅಂಕಿ ಅಂಶಗಳ ಪ್ರಕಾರ ಸಚಿವಾಲಯ ವಾಹಿನಿಯಲ್ಲಿ 2,399 ಮತ್ತು ಇ-ಆಫೀಸ್‌ನಲ್ಲಿ 1,800 ಕಡತಗಳು ಸೇರಿ ಒಟ್ಟು 4,199 ಕಡತಗಳು ಬಾಕಿ ಇವೆ. ಈ ಪೈಕಿ 03 ವರ್ಷಗಳಿಗಿಂತ ಹಳೆಯದಾದ ಕಡತಗಳ ಸಂಖ್ಯೆ 1,069ರಷ್ಟಿದೆ. ಇದರಲ್ಲಿ ನ್ಯಾಯಾಲಯ, ಲೋಕಾಯುಕ್ತ, ಕರ್ನಾಟಕ ಆಡಳಿತ ನ್ಯಾಯಮಂಡಳಿ, ಇಲಾಖೆ ವಿಚಾರಣೆ, ಅರಣ್ಯ ವಿಮೋಚನಾ ಪ್ರಕರಣಗಳಿಗೆ ಸಂಬಂಧಿಸಿದ ಕಡತಗಳೇ ಹೆಚ್ಚಿರುವುದು ನಡವಳಿಯಿಂದ ತಿಳಿದು ಬಂದಿದೆ.

 

ಕರ್ತವ್ಯಲೋಪ, ಭ್ರಷ್ಟಾಚಾರ, ಅಧಿಕಾರ ದುರುಪಯೋಗ, ಹಣಕಾಸು ದುರುಪಯೋಗ ಸೇರಿದಂತೆ ಇನ್ನಿತರೆ ಲೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ವಿಚಾರಣೆಗೆ ಗುರಿಯಾಗಿರುವ ಅಧಿಕಾರಿ, ನೌಕರರ ವಿರುದ್ಧವೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ವಿಭಾಗದಲ್ಲಿ ಇದುವರೆಗೆ ಒಟ್ಟು 25 ಕಡತಗಳು ಬಾಕಿ ಇವೆ. ಕಾರಣ ಕೇಳುವ ನೋಟೀಸ್‌ಗೆ ಆಪಾದಿತರೆಂದು ಹೇಳಲಾಗಿರುವ ಬಹುತೇಕ ಅಧಿಕಾರಿಗಳಿಂದ ಉತ್ತರವೂ ಇಲಾಖೆಗೆ ಸ್ವೀಕೃತವಾಗಿಲ್ಲ ಎಂದು ಗೊತ್ತಾಗಿದೆ.

 

ಇನ್ನು ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯಲ್ಲಿ ನ್ಯಾಯಾಲಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 797 ಪ್ರಕರಣಗಳು ಚಾಲ್ತಿಯಲ್ಲಿವೆ. ಈ ಪೈಕಿ ಸರ್ವೋಚ್ಛ ನ್ಯಾಯಾಲಯದಲ್ಲಿ 70, ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ 493, ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ 138, ಇತರೆ ನ್ಯಾಯಾಲಯಗಳಲ್ಲಿ 96 ಪ್ರಕರಣಗಳು ಬಾಕಿ ಇವೆ.

 

ಅರಣ್ಯ ಇಲಾಖೆಯಲ್ಲಿ ಕಡತ ವಿಲೇವಾರಿ ಮತ್ತು ವಿವಿಧ ಪ್ರಕರಣಗಳು ಬಾಕಿ ಇದ್ದರೂ ಸಚಿವ ಉಮೇಶ್‌ ಕತ್ತಿ ಅವರು ನಿಯಮಿತವಾಗಿ ಸಭೆ ನಡೆಸುತ್ತಿಲ್ಲ. ಬದಲಿಗೆ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇರಿಸುವುದರಲ್ಲಿಯೇ ಕಾಲಹರಣ ಮಾಡುತ್ತಿರುವ ಕಾರಣ ಅಧಿಕಾರಿಶಾಹಿಯೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.

Hot this week

ಬೇನಾಮಿ ಆಸ್ತಿ ಹೊಂದಿದ ಆರೋಪ; ವಿಟಿಯು ಕುಲಪತಿ ವಿದ್ಯಾಶಂಕರ್ ಗೆ ಆದಾಯ ತೆರಿಗೆ ಇಲಾಖೆ ನೋಟೀಸ್‌

ಬೆಂಗಳೂರು;  ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕುರಿತು ಆದಾಯ...

‘ಅದಾನಿ ಕಂಪನಿಯಿಂದಲೇ ವಿವಾದ, 850 ಕೋಟಿ ರು ಪಾವತಿಸುವ ಲಕ್ಷಣಗಳೂ ಗೋಚರಿಸುತ್ತಿಲ್ಲ, ಅಧಿಕಾರಿಗಳ ಕೈ ಕಟ್ಟಿ ಹಾಕಿದೆ’; ಸರ್ಕಾರದ ಅಸಹಾಯಕತೆ ಬಹಿರಂಗ

ಬೆಂಗಳೂರು;  'ಕಲ್ಬುರ್ಗಿಯ ವಾಡಿಯಲ್ಲಿ  ಸುಣ್ಣದ ಕಲ್ಲು ಗಣಿ ಗುತ್ತಿಗೆ ಪ್ರದೇಶದಲ್ಲಿ ಗಣಿಗಾರಿಕೆ...

ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?

ಬೆಂಗಳೂರು;  ಕೃಷ್ಣಭಾಗ್ಯ ಜಲನಿಗಮ ಸೇರಿದಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ಅನುಷ್ಠಾನಗೊಳಿಸುತ್ತಿರುವ...
Please Scan to make Your Contribution

Topics

ಬೇನಾಮಿ ಆಸ್ತಿ ಹೊಂದಿದ ಆರೋಪ; ವಿಟಿಯು ಕುಲಪತಿ ವಿದ್ಯಾಶಂಕರ್ ಗೆ ಆದಾಯ ತೆರಿಗೆ ಇಲಾಖೆ ನೋಟೀಸ್‌

ಬೆಂಗಳೂರು;  ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕುರಿತು ಆದಾಯ...

‘ಅದಾನಿ ಕಂಪನಿಯಿಂದಲೇ ವಿವಾದ, 850 ಕೋಟಿ ರು ಪಾವತಿಸುವ ಲಕ್ಷಣಗಳೂ ಗೋಚರಿಸುತ್ತಿಲ್ಲ, ಅಧಿಕಾರಿಗಳ ಕೈ ಕಟ್ಟಿ ಹಾಕಿದೆ’; ಸರ್ಕಾರದ ಅಸಹಾಯಕತೆ ಬಹಿರಂಗ

ಬೆಂಗಳೂರು;  'ಕಲ್ಬುರ್ಗಿಯ ವಾಡಿಯಲ್ಲಿ  ಸುಣ್ಣದ ಕಲ್ಲು ಗಣಿ ಗುತ್ತಿಗೆ ಪ್ರದೇಶದಲ್ಲಿ ಗಣಿಗಾರಿಕೆ...

ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?

ಬೆಂಗಳೂರು;  ಕೃಷ್ಣಭಾಗ್ಯ ಜಲನಿಗಮ ಸೇರಿದಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ಅನುಷ್ಠಾನಗೊಳಿಸುತ್ತಿರುವ...

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

Related Articles

Popular Categories

error: Content is protected !!