Saturday | August 29, 2026 |

ಸಾಲದ ಹೊಣೆಗಾರಿಕೆ ಹೆಚ್ಚಳ; ಇಂಧನ ಯೋಜನೆಯಲ್ಲಿ ಕಾರ್ಯನಿರ್ವಹಿಸದ ವಿದೇಶಿ ಕಂಪನಿಯಿಂದ ಸಾಲ!

ಬೆಂಗಳೂರು; ವಿದ್ಯುತ್‌ ವಲಯದ ಹಲವು ಯೋಜನೆಗಳಿಗೆ ವಿದೇಶಿ ಸೇರಿದಂತೆ ಇನ್ನಿತರೆ ಹಣಕಾಸು ಸಂಸ್ಥೆಗಳಿಂದ ಅಪಾರ ಪ್ರಮಾಣದಲ್ಲಿ ಈಗಾಗಲೇ ಸಾಲ ಎತ್ತಿರುವ ಕರ್ನಾಟಕ ವಿದ್ಯುತ್‌ ನಿಗಮವು ಇಂಧನ ಯೋಜನೆಗಳಲ್ಲಿ ಕಾರ್ಯನಿರ್ವಹಿಸದ ಇಸ್ರೇಲ್‌ ಮೂಲದ ವಿದೇಶಿ ಕಂಪನಿಯಿಂದ 10,500 ಕೋಟಿ ರು. ಸಾಲ ಮತ್ತು ತಾಂತ್ರಿಕ ಪರಿಹಾರ ಪಡೆಯುವ ಪ್ರಸ್ತಾವನೆಯನ್ನು ಸರ್ಕಾರದ ಮುಂದಿರಿಸಿದೆ. ಒಂದೊಮ್ಮೆ ಈ ಪ್ರಸ್ತಾವನೆಯನ್ನು ಒಪ್ಪಿದ್ದೇ ಆದಲ್ಲಿ ಸರ್ಕಾರದ ಮೇಲೆ ಸಾಲದ ಹೊಣೆಗಾರಿಕೆ ಹೆಚ್ಚಲಿದೆ.

 

ಕೆಪಿಸಿಎಲ್‌ ಈಗಾಗಲೇ ವಿವಿಧ ಹಣಕಾಸು ಸಂಸ್ಥೆಗಳಿಂದ ಮತ್ತು ವಾಣಿಜ್ಯ ಬ್ಯಾಂಕ್‌ಗಳಿಂದ ಸಾಲ ಪಡೆದಿದೆ. ಹೀಗಾಗಿ ಮುಂಬರುವ ಯೋಜನೆಗಳಿಗೆ ಮತ್ತಷ್ಟು ಸಾಲಗಳನ್ನು ಪಡೆಯಲು ನಿಗಮಕ್ಕೆ ಕಷ್ಟವಾಗುತ್ತಿದೆ. ಅಲ್ಲದೆ ಇತ್ತೀಚೆಗಷ್ಟೇ ಕೆಪಿಸಿಎಲ್‌ಗೆ 2500 ಕೋಟಿ ರು.ಗಳಿಗೆ ಸರ್ಕಾರದ ಖಾತರಿ ನೀಡಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ನಿಗಮವು ಇಸ್ರೇಲ್‌ನ ಸಿಂಬಾ ಮಜ್‌ ವ್ಯಾಪಾರ ಒಕ್ಕೂಟದಿಂದ 10,500 ಕೋಟಿ ಸಾಲ ಪಡೆಯಲು ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಯು ಮುನ್ನೆಲೆಗೆ ಬಂದಿದೆ.

 

ಈ ಪ್ರಸ್ತಾವನೆಗೆ ಕೆಪಿಸಿಎಲ್‌ನ ಉಪಾಧ್ಯಕ್ಷ ಹಾಗೂ ಇಂಧನ ಸಚಿವ ವಿ ಸುನೀಲ್‌ಕುಮಾರ್‌ ಅವರು ಅನುಮೋದಿಸಿದ್ದಾರೆ ಎಂದು ಗೊತ್ತಾಗಿದೆ. ಈ ಸಂಬಂಧ ಕೆಲ ಟಿಪ್ಪಣಿ ಹಾಳೆಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ವೇಸ್ಟ್‌ ಟು ಎನರ್ಜಿ (ಬಿಡದಿ) ಮತ್ತು ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆ (ಯೋಜನಾ ವರದಿ ಮುಕ್ತಾಯಗೊಂಡಿದೆ) ಮತ್ತು ವಾರಾಹಿ, ನೇತ್ರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಗಳಿಗೆ ಆರ್ಥಿಕ ಮತ್ತು ತಾಂತ್ರಿಕ ಪರಿಹಾರಗಳನ್ನು ಒದಗಿಸಲು ಮುಂದಾಗಿರುವ ಇಸ್ರೇಲ್‌ನ ಸಿಂಬಾ ಮಜ್‌ ಲಿಮಿಟೆಡ್‌ (SYMBA-MAZ Ltd) ಸ್ಪರ್ಧಾತ್ಮಕ ಬಡ್ಡಿದರಗಳಲ್ಲಿ ಸಾಲ ಒದಗಿಸಲು ಭರವಸೆ ನೀಡಿದೆ. ಈ ಕುರಿತು ಇಂಧನ ಇಲಾಖೆಯ ಅಭಿಪ್ರಾಯವನ್ನು ಕೋರಿತ್ತು. ಈ ಪ್ರಸ್ತಾವನೆಯನ್ನು ಒಪ್ಪಿದಲ್ಲಿ ಮತ್ತೆ ಸಾಲದ ಹೊಣೆಗಾರಿಕೆ ಸರ್ಕಾರದ ಮೇಲೆ ಬೀಳುತ್ತದೆ ಎಂಬುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

 

 

ಅಲ್ಲದೆ  ಈ ಕಂಪನಿಯು ಪಂಪ್ಡ್‌ ಹೈಡ್ರೋ ಸ್ಟೋರೇಜ್‌ ಪ್ಲಾಂಟ್‌ ಅಥವಾ ನವೀಕರಿಸಬಹುದಾದ ಇಂಧನ ಯೋಜನೆಗಳಲ್ಲಿ ಕಾರ್ಯನಿರ್ವಹಿಸಿಲ್ಲ. ಆದರೂ ಇದೇ ಕಂಪನಿಯಿಂದ ಸಾಲ ಪಡೆಯಲು ಪ್ರಸ್ತಾವನೆ ಸಲ್ಲಿಸಿರುವುದು ಟಿಪ್ಪಣಿ ಹಾಳೆಗಳಿಂದ ಗೊತ್ತಾಗಿದೆ.

 

ಅದೇ ರೀತಿ ಸಾಲ ನೀಡುವ ಯಾವುದೇ ಒಂದು ವಿದೇಶಿ ಸಂಸ್ಥೆಯು ಮೊದಲು ಭಾರತ ಸರ್ಕಾರದ ಆರ್ಥಿಕ ವ್ಯವಹಾರಗಳ ಸಚಿವಾಲಯದೊಂದಿಗೆ ಚರ್ಚೆ ನಡೆಸಬೇಕು. ಸಂಸ್ಥೆಯ ವಿವರಣೆ, ಉದ್ದೇಶ, ಸಾಲ ನೀಡಿಕೆಯ ವಿವರಣೆಗಳೊಂದಿಗೆ ಒಂದು ಸುತ್ತಿನ ಚರ್ಚೆ ನಡೆಸಬೇಕು. ನಂತರ ಸಾಲ ಪಡೆಯಲು ಉತ್ಸುಕವಾಗಿರುವ ಇಲಾಖೆಯೊಂದಿಗೆ ಚರ್ಚಿಸಿ ಜಾರಿಯಲ್ಲಿರುವ ಮಾರ್ಗಸೂಚಿಗಳ ಅನುಸಾರ ಕ್ರಮ ಕೈಗೊಳ್ಳಬೇಕು. ಆದರೆ ನಿಗಮಕ್ಕೆ ಸಾಲ ನೀಡಲು ಮುಂದಾಗಿರುವ ಇಸ್ರೇಲ್‌ನ ಕಂಪನಿಯು ಈ ಪ್ರಕ್ರಿಯೆಗಳನ್ನು ನಡೆಸಿಲ್ಲ. ಆದರೂ ನಿಗಮವು ಈ ಕಂಪನಿಯ ಪ್ರಸ್ತಾವನೆಯನ್ನು ಸರ್ಕಾರದ ಮುಂದಿರಿಸಿ ಅನುಮೋದನೆ ಕೋರಿದೆ.

 

ಇಸ್ರೇಲ್‌ ಮೂಲದ ವಿದೇಶಿ ಕಂಪನಿಯಿಂದ ಸಾಲ ಪಡೆದರೆ ನಿಗಮವು ಹೇಗೆ ಮತ್ತು ಯಾವ ವಿಧಾನದಲ್ಲಿ ಸಾಲವನ್ನು ಹಿಂದಿರುಗಿಸಲಿದೆ ಎಂಬ ಮಾಹಿತಿಯನ್ನು ಸರ್ಕಾರಕ್ಕೆ ಇಂಧನ ಇಲಾಖೆಯು ಒದಗಿಸಿದೆ.

 

ವಿವರಣೆಯಲ್ಲೇನಿದೆ?

 

ಪಂಪ್ಡ್‌ ಸ್ಟೋರೇಜ್‌ ವಿದ್ಯುತ್‌ ಘಟಕ ಮತ್ತು ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಂದಾಜು 15,000 ಕೋಟಿ ರು. ವೆಚ್ಚವಾಗಲಿದೆ. ಸಾಲದ ಅನುಪಾತ 70;30 ಅನುಪಾತದಂತೆ 10,500 ಕೋಟಿ ರು. ಅಂದಾಜಿಸಿದೆ. ವಿದೇಶಿ ಕಂಪನಿಯಿಂದ ಪಡೆಯುವ ಈ ಸಾಲವನ್ನು ಮುಂದಿನ 20 ರಿಂದ 25 ವರ್ಷಗಳ ಅವಧಿಯೊಳಗೆ ಸ್ಪರ್ಧಾತ್ಮಕ ಬಡ್ಡಿ ದರದಲ್ಲಿ ಹಿಂದಿರುಗಿಸಬಹುದು ಎಂದು ಇಂಧನ ಇಲಾಖೆಯು ಸರ್ಕಾರಕ್ಕೆ 2022ರ ಮೇ 21ರಂದು ವಿವರಣಾತ್ಮಕ ಮಾಹಿತಿಯನ್ನು ಒದಗಿಸಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

 

ಸಿಂಬಾ ಮಜ್‌ ಲಿಮಿಟೆಡ್‌ ಮೂಲತಃ ಇಸ್ರೇಲ್‌ನ ವ್ಯಾಪಾರ ಒಕ್ಕೂಟವಾಗಿದೆ. 2 ದಶಕಗಳಿಗೂ ಹೆಚ್ಚು ಕಾಲ ಕಾರ್ಯಿನಿರ್ವಹಿಸುತ್ತಿರುವ ಈ ಕಂಪನಿಯ ಪ್ರಧಾನ ಕಚೇರಿ ನ್ಯೂಯಾರ್ಕ್‌ ನಗರದಲ್ಲಿದೆ. ಯುರೋಪ್‌, ರಷ್ಯಾ ಮತ್ತು ಸಿಇಎಸ್‌, ಆಫ್ರಿಕಾ, ಏಷ್ಯಾ ಮತ್ತು ಲ್ಯಾಟಿನ್‌ ಅಮೇರಿಕಾದಲ್ಲಿ ಪ್ರಾದೇಶಿಕ ಮತ್ತು ಸ್ಥಳೀಯ ಕಚೇರಿಗಳನ್ನು ಹೊಂದಿದೆ ಎಂದು ನಿಗಮವು ಟಿಪ್ಪಣಿಯಲ್ಲಿ ವಿವರಿಸಿದೆ.

 

ಕೆಪಿಸಿಎಲ್‌ ಈಗಾಗಲೇ ವೇಸ್ಟ್‌ ಟು ಎನರ್ಜಿ (ಬಿಡದಿ) ಮತ್ತು ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆ (ಯೋಜನಾ ವರದಿ ಮುಕ್ತಾಯಗೊಂಡಿದೆ) ಮತ್ತು ವಾರಾಹಿ, ನೇತ್ರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಮುಂದಾಗಿದೆ. ಅಲ್ಲದೆ ರಾಜ್ಯದಲ್ಲಿ ಹೊಸ ನವೀಕರಿಸಬಹುದಾದ ವಿದ್ಯುತ್‌ ಯೋಜನೆಗಳ ಬಿಡ್‌ನಲ್ಲಿ ಇಸ್ರೆಲ್‌ ಮೂಲದ ಕಂಪನಿಯು ಭಾಗವಹಿಸಲು ಪ್ರಸ್ತಾಪಿಸಿದೆ.

 

ಕರ್ನಾಟಕ ವಿದ್ಯುತ್‌ ನಿಗಮವು (ಕೆಪಿಸಿಎಲ್‌) 5,000 ಕೋಟಿ ರು. ವೆಚ್ಚದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಂಡಿರುವ 1000 ಮೆಗಾ ವ್ಯಾಟ್‌ ಸಾಮರ್ಥ್ಯದ ಪಂಪ್ಡ್‌ ಸ್ಟೋರೇಜ್‌ ಘಟಕ ನಿರ್ಮಾಣವು ಎಸ್ಕಾಂಗಳ ನಷ್ಟಕ್ಕೆ ದಾರಿಮಾಡಿಕೊಡಲಿದೆ ಎಂದು ಆರ್ಥಿಕ ಇಲಾಖೆ ನೀಡಿರುವ ಅಭಿಪ್ರಾಯವನ್ನು ಸ್ಮರಿಸಬಹುದು.

Hot this week

ಬೇನಾಮಿ ಆಸ್ತಿ ಹೊಂದಿದ ಆರೋಪ; ವಿಟಿಯು ಕುಲಪತಿ ವಿದ್ಯಾಶಂಕರ್ ಗೆ ಆದಾಯ ತೆರಿಗೆ ಇಲಾಖೆ ನೋಟೀಸ್‌

ಬೆಂಗಳೂರು;  ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕುರಿತು ಆದಾಯ...

‘ಅದಾನಿ ಕಂಪನಿಯಿಂದಲೇ ವಿವಾದ, 850 ಕೋಟಿ ರು ಪಾವತಿಸುವ ಲಕ್ಷಣಗಳೂ ಗೋಚರಿಸುತ್ತಿಲ್ಲ, ಅಧಿಕಾರಿಗಳ ಕೈ ಕಟ್ಟಿ ಹಾಕಿದೆ’; ಸರ್ಕಾರದ ಅಸಹಾಯಕತೆ ಬಹಿರಂಗ

ಬೆಂಗಳೂರು;  'ಕಲ್ಬುರ್ಗಿಯ ವಾಡಿಯಲ್ಲಿ  ಸುಣ್ಣದ ಕಲ್ಲು ಗಣಿ ಗುತ್ತಿಗೆ ಪ್ರದೇಶದಲ್ಲಿ ಗಣಿಗಾರಿಕೆ...

ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?

ಬೆಂಗಳೂರು;  ಕೃಷ್ಣಭಾಗ್ಯ ಜಲನಿಗಮ ಸೇರಿದಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ಅನುಷ್ಠಾನಗೊಳಿಸುತ್ತಿರುವ...

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...
Please Scan to make Your Contribution

Topics

ಬೇನಾಮಿ ಆಸ್ತಿ ಹೊಂದಿದ ಆರೋಪ; ವಿಟಿಯು ಕುಲಪತಿ ವಿದ್ಯಾಶಂಕರ್ ಗೆ ಆದಾಯ ತೆರಿಗೆ ಇಲಾಖೆ ನೋಟೀಸ್‌

ಬೆಂಗಳೂರು;  ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕುರಿತು ಆದಾಯ...

‘ಅದಾನಿ ಕಂಪನಿಯಿಂದಲೇ ವಿವಾದ, 850 ಕೋಟಿ ರು ಪಾವತಿಸುವ ಲಕ್ಷಣಗಳೂ ಗೋಚರಿಸುತ್ತಿಲ್ಲ, ಅಧಿಕಾರಿಗಳ ಕೈ ಕಟ್ಟಿ ಹಾಕಿದೆ’; ಸರ್ಕಾರದ ಅಸಹಾಯಕತೆ ಬಹಿರಂಗ

ಬೆಂಗಳೂರು;  'ಕಲ್ಬುರ್ಗಿಯ ವಾಡಿಯಲ್ಲಿ  ಸುಣ್ಣದ ಕಲ್ಲು ಗಣಿ ಗುತ್ತಿಗೆ ಪ್ರದೇಶದಲ್ಲಿ ಗಣಿಗಾರಿಕೆ...

ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?

ಬೆಂಗಳೂರು;  ಕೃಷ್ಣಭಾಗ್ಯ ಜಲನಿಗಮ ಸೇರಿದಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ಅನುಷ್ಠಾನಗೊಳಿಸುತ್ತಿರುವ...

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

Related Articles

Popular Categories

error: Content is protected !!