Saturday | May 2, 2026 |

ಪಂಪ್ಡ್‌ ಸ್ಟೋರೇಜ್‌ ಘಟಕ; ಎಸ್ಕಾಂಗಳಿಗೆ ನಷ್ಟ ಎಂದಿದ್ದರೂ 5,000 ಕೋಟಿ ವೆಚ್ಚದ ಯೋಜನೆಗೆ ಸಮರ್ಥನೆ

ಬೆಂಗಳೂರು; ಖಾಸಗಿ ಸಹಭಾಗಿತ್ವದಲ್ಲಿ 1000 ಮೆಗಾ ವ್ಯಾಟ್‌ ಸಾಮರ್ಥ್ಯದ ಮತ್ತೊಂದು ಪಂಪ್ಡ್‌ ಸ್ಟೋರೇಜ್‌ ಘಟಕ ನಿರ್ಮಾಣ ಕೈಗೆತ್ತಿಕೊಂಡರೆ ಎಸ್ಕಾಂಗಳ ನಷ್ಟಕ್ಕೂ ಇದು ದಾರಿಮಾಡಿಕೊಡಲಿದೆ ಎಂದು ಆರ್ಥಿಕ ಇಲಾಖೆ ಸ್ಪಷ್ಟವಾಗಿ ಅಭಿಪ್ರಾಯ ನೀಡಿದ್ದರೂ ಕರ್ನಾಟಕ ವಿದ್ಯುತ್‌ ನಿಗಮವು ಈ ಯೋಜನೆಯಿಂದ ಯಾವುದೇ ಆರ್ಥಿಕ ಹೊರೆಯಾಗುವುದಿಲ್ಲ ಎಂದು ಯೋಜನೆಯನ್ನು ಸಮರ್ಥಿಸಿಕೊಂಡಿದೆ.

 

ಎಸ್ಕಾಂಗಳಿಗೆ ನಷ್ಟ ಹೊರಡಿಸುವ 5,000 ಕೋಟಿ ವೆಚ್ಚದ ಪಂಪ್ಡ್‌ ಸ್ಟೋರೇಜ್‌ ಘಟಕ ನಿರ್ಮಾಣ ಯೋಜನೆ ಕುರಿತು ‘ದಿ ಫೈಲ್‌’-ವಾರ್ತಾಭಾರತಿ ಪ್ರಕಟಿಸಿದ್ದ ವರದಿಗೆ ನಿಗಮವು ನೀಡಿರುವ ಸ್ಪಷ್ಟನೆಯಲ್ಲಿ ಆರ್ಥಿಕ ಇಲಾಖೆ ನೀಡಿರುವ ಅಭಿಪ್ರಾಯವನ್ನು ಉಲ್ಲೇಖಿಸದಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

 

‘2000 ಮೆಗಾ ವ್ಯಾಟ್‌ನ ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಯನ್ನು ಕೆಪಿಸಿಎಲ್‌ ಕೈಗೆತ್ತಿಕೊಂಡಿರುವುದರಿಂದ ಹೆಚ್ಚುವರಿ ಹಣದ ಹೂಡಿಕೆ ಮಾಡಲು ನಿಗಮಕ್ಕೆ ಆರ್ಥಿಕವಾಗಿ ಹೊರೆಯಾಗಲಿದೆ. ಸರ್ಕಾರವು ಖಾಸಗಿ ಸಹಭಾಗಿತ್ವದಲ್ಲಿ 1000 ಮೆ.ವ್ಯಾ ಪಂಪ್ಡ್‌ ಸ್ಟೋರೇಜ್ ಯೋಜನೆಯನ್ನು ಜಾರಿಗೊಳಿಸಲು 2021-22ನೇ ಸಾಲಿನ ಮುಂಗಡ ಪತ್ರದಲ್ಲಿ ಘೋಷಿಸಿರುತ್ತದೆ. ಪ್ರಸ್ತುತ ಯೋಜನೆಯಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ಇರುವುದಿಲ್ಲ,’ ಎಂದು ಸ್ಪಷ್ಟನೆ ನೀಡಿದೆ.

 

ಅಲ್ಲದೆ 2021ರಲ್ಲೇ 14,367 ಮೆಗಾ ವ್ಯಾಟ್‌ ಸಾಮರ್ಥ್ಯದ ಗರಿಷ್ಠ ಬೇಡಿಕೆಯನ್ನು ಪೂರೈಸಲು ಸಮರ್ಥವಾಗಿದೆ. ಅಲ್ಲದೆ ಪಿಆರ್‌ಡಿಸಿಎಲ್‌ನ ಅಧ್ಯಯನದ ಪ್ರಕಾರ 2024ರವರೆಗೂ ಗರಿಷ್ಠ ಬೇಡಿಕೆಯನ್ನು ಪೂರೈಸಲಿದೆ ಎಂದು ಅಭಿಪ್ರಾಯದಲ್ಲಿ ಆರ್ಥಿಕ ಇಲಾಖೆಯು ವಿವರಿಸಿತ್ತು. ಇಂಧನ ಇಲಾಖೆಯ ಸ್ಪಷ್ಟನೆಯಲ್ಲಿ ಪಿಆರ್‌ಡಿಸಿಎಲ್‌ ಅಧ್ಯಯನ ಕುರಿತು ಪ್ರಸ್ತಾಪವಾಗಿದೆಯಾದರೂ ಬೇಡಿಕೆಯನ್ನು ಪೂರೈಸಲು ನವೀಕರಿಸಬಹುದಾದ ಇಂಧನ ಮೂಲದಿಂದ 6396 ಮೆ.ವ್ಯಾ, ಸ್ಟೋರೇಜ್‌ ಸಾಮರ್ಥ್ಯ 3000 ಮೆ.ವ್ಯಾ ಹಾಗೂ ನಿರಂತರ ಸಾಮರ್ಥ್ಯ 1950 ಮೆ.ವ್ಯಾ ನಷ್ಟು ಹೆಚ್ಚುವರಿ ವಿದ್ಯುತ್ ಸಾಮರ್ಥ್ಯದ ಅವಶ್ಯಕತೆ ಇರುತ್ತದೆಯೆಂದು ಅಂದಾಜಿಸಿದೆ ಎಂದು ಹೇಳಿದೆ.

 

ಆರ್ಥಿಕ ಇಲಾಖೆ ತಕರಾರೇನಿತ್ತು?

 

ಇಂಧನ ಇಲಾಖೆಯು ಸಲ್ಲಿಸಿರುವ ಪ್ರಸ್ತಾವನೆಗೆ (FD 491 Exp-1/2021, EN 27 PPT 2021-DATE-21-07-2022)ಆರ್ಥಿಕ ಇಲಾಖೆಯು ತಕರಾರು ಎತ್ತಿದೆ. ‘ಕೆಪಿಸಿಎಲ್‌ ಈಗಾಗಲೇ 2000 ಮೆಗಾವ್ಯಾಟ್‌ ಸಾಮರ್ಥ್ಯದ ಪಂಪ್ಡ್‌ ಸ್ಟೋರೇಜ್‌ ಘಟಕ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಕರ್ನಾಟಕದಲ್ಲಿ ಹೆಚ್ಚುವರಿ ವಿದ್ಯುತ್‌ ಉತ್ಪಾದನೆಯಾಗಿದ್ದರೂ ತಕ್ಷಣವೇ 1000 ಮೆಗಾ ವ್ಯಾಟ್‌ ಸಾಮರ್ಥ್ಯದ ಮತ್ತೊಂದು ಪಂಪ್ಡ್‌ ಸ್ಟೋರೇಜ್‌ ಘಟಕ ನಿರ್ಮಾಣ ಯೋಜನೆಯನ್ನು ಖಾಸಗಿ ಸಹಭಾಗಿತ್ವದಡಿಯಲ್ಲಿ ಕೈಗೆತ್ತಿಕೊಳ್ಳುವುದು ಅಗತ್ಯವಿಲ್ಲ,’ ಎಂದು ಆರ್ಥಿಕ ಇಲಾಖೆಯು 2022ರ ಜುಲೈ 21ರಂದು ತನ್ನ ಅಭಿಪ್ರಾಯ ನೀಡಿತ್ತು.

 

ಖಾಸಗಿ ವಲಯವು 5000 ಕೋಟಿ ರು. ವೆಚ್ಚದಲ್ಲಿ ಪಂಪ್ಡ್ ಸ್ಟೋರೇಜ್‌ ಘಟಕವನ್ನು ಸ್ಥಾಪಿಸುತ್ತಿದ್ದರೂ ರಾಜ್ಯ ಸರ್ಕಾರವು ಸಂಬಂಧಪಟ್ಟ ಖಾಸಗಿ ಪಾಲುದಾರರೊಂದಿಗೆ 25 ವರ್ಷಗಳ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿರಬೇಕಾಗುತ್ತದೆ. ಖಾಸಗಿ ಪಾಲುದಾರರು ಮಾಡಿದ ಹೂಡಿಕೆಯ ಸುಮಾರು 50 ಪ್ರತಿಶತವನ್ನು ಕರ್ನಾಟಕ ಸರ್ಕಾರ/ ಎಸ್ಕಾಂಗಳು ಮೊದಲ ವರ್ಷದಲ್ಲಿಯೇ ಪಾವತಿಸಬೇಕಾಗುತ್ತದೆ ಎಂದೂ ಆರ್ಥಿಕ ಇಲಾಖೆಯು ತನ್ನ ಅಭಿಪ್ರಾಯವನ್ನು ತಿಳಿಸಿತ್ತು.

 

ಆರ್ಥಿಕ ಇಲಾಖೆಯು ನೀಡಿರುವ ಅಭಿಪ್ರಾಯದ ಪ್ರತಿ

 

ವಿಶೇಷವಾಗಿ ಈ ಘಟಕದ ಮೂಲಕ ಸೌರ ಮತ್ತು ಗಾಳಿ ವಿದ್ಯುತ್‌ನ್ನು ಗರಿಷ್ಟ ಸಮಯವಲ್ಲದವರೆಗೆ ಸಂಗ್ರಹಿಸುವುದು ಮತ್ತು ಈ ಸಂಗ್ರಹವಾಗಿರುವ ವಿದ್ಯುತ್‌ನ್ನು ಗರಿಷ್ಠ ಅವಧಿಯಲ್ಲಿ ಬಳಸುವ ಮೂಲ ಉದ್ದೇಶ ಹೊಂದಿದೆ. ಆದರೂ ಕರ್ನಾಟಕದಲ್ಲಿ 2021ರಲ್ಲೇ 14,367 ಮೆಗಾ ವ್ಯಾಟ್‌ ಸಾಮರ್ಥ್ಯದ ಗರಿಷ್ಠ ಬೇಡಿಕೆಯನ್ನು ಪೂರೈಸಲು ಸಮರ್ಥವಾಗಿದೆ. ಅಲ್ಲದೆ ಪಿಆರ್‌ಡಿಸಿಎಲ್‌ನ ಅಧ್ಯಯನದ ಪ್ರಕಾರ 2024ರವರೆಗೂ ಗರಿಷ್ಠ ಬೇಡಿಕೆಯನ್ನು ಪೂರೈಸಲಿದೆ ಎಂದು ಅಭಿಪ್ರಾಯದಲ್ಲಿ ಆರ್ಥಿಕ ಇಲಾಖೆಯು ವಿವರಿಸಿತ್ತು.

 

ವಿದ್ಯುತ್ ಶೇಖರಣಾ ತಂತ್ರಜ್ಞಾನದಲ್ಲಿ ಕ್ಷಿಪ್ರಗತಿಯಲ್ಲಿ ಬದಲಾವಣೆಗಳಾಗುತ್ತಿವೆ. ಮತ್ತು ಇಂಧನ ವಲಯದಲ್ಲಿ ದಕ್ಷತೆ ಜೊತೆಗೆ ಕೈಗಾರಿಕೆಗಳು ಮುಕ್ತ ಮಾರುಕಟ್ಟೆಯಿಂದ ನೇರವಾಗಿ ವಿದ್ಯುತ್ ಪಡೆಯುವ ಪ್ರವೃತ್ತಿಯನ್ನು ರೂಢಿಸಿಕೊಂಡಿವೆ. ಹೀಗಾಗಿ ಎಸ್ಕಾಂಗಳು ಸರಬರಾಜು ಮಾಡುವ ವಿದ್ಯುತ್‌ಗೆ ಹೆಚ್ಚಿನ ಬೇಡಿಕೆ ಕಾರ್ಯರೂಪಕ್ಕೆ ಬರುವುದಿಲ್ಲ. ಆದರೂ ಖಾಸಗಿ ಸಹಭಾಗಿತ್ವದಲ್ಲಿ ಮತ್ತೊಂದು ಪಂಪ್ಡ್‌ ಸ್ಟೋರೇಜ್‌ ಘಟಕ ನಿರ್ಮಾಣ ಕೈಗೆತ್ತಿಕೊಂಡರೆ ಎಸ್ಕಾಂಗಳ ನಷ್ಟವನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದೂ ಆರ್ಥಿಕ ಇಲಾಖೆಯು ಹೇಳಿತ್ತು.

 

ಉದ್ದೇಶಿತ ಯೋಜನೆ ಅನುಷ್ಠಾನದ ಬಗ್ಗೆ ಆರ್ಥಿಕ ಇಲಾಖೆಯು ನೀಡಿದ್ದ ಒಟ್ಟಾರೆ ಅಭಿಪ್ರಾಯದ ಕುರಿತು ಇಂಧನ ಇಲಾಖೆಯು ನೀಡಿರುವ ಸ್ಪಷ್ಟನೆಯಲ್ಲಿ ಎಲ್ಲಿಯೂ ಉಲ್ಲೇಖಿಸಿಯೂ ಇಲ್ಲ, ಪ್ರಸ್ತಾಪಿಸಿಯೂ ಇಲ್ಲ.
ಕರ್ನಾಟಕ ವಿದ್ಯುತ್‌ ನಿಗಮವು 2000 ಮೆಗಾ ವ್ಯಾಟ್‌ ಸಾಮರ್ಥ್ಯದ ಪಂಪ್ಡ್‌ ಸ್ಟೋರೇಜ್‌ ಘಟಕವನ್ನು ಸ್ಥಾಪಿಸಲು ಯೋಜನೆಯ ಡಿಪಿಆರ್ ಅನ್ನು ಈಗಾಗಲೇ M/s.WAPCOS ಮೂಲಕ ತಯಾರಿಸಿದೆ. ಅಂದಾಜು ವೆಚ್ಚ ಸುಮಾರು ರೂ.7,500 ಕೋಟಿಯಷ್ಟು ಹೂಡಿಕೆ ಮಾಡಬೇಕಿದೆ ಎಂದು ಸ್ಪಷ್ಟನೆಯಲ್ಲಿ ವಿವರಿಸಿದೆ.

Hot this week

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

Topics

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು...

Related Articles

Popular Categories

error: Content is protected !!