Wednesday | August 26, 2026 |

ಐಎಎಸ್‌, ಕೆಎಎಸ್‌ ಅಧಿಕಾರಿಗಳಿಗೆ ಹೊಸ ವಾಹನ ಖರೀದಿಯ ಆರ್ಥಿಕ ಮಿತಿ ಹೆಚ್ಚಳ; ಬೊಕ್ಕಸಕ್ಕೆ ಹೊರೆ?

ಬೆಂಗಳೂರು; ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ, ಸಾಮಾಜಿಕ ಭದ್ರತೆ ಯೋಜನೆಗಳು, ನೆರೆ ಪರಿಹಾರ, ಶಾಲಾ ಮಕ್ಕಳಿಗೆ ಗರಿಷ್ಠ ದಿನಗಳವರೆಗೆ ಮೊಟ್ಟೆ ವಿತರಣೆ, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ, ವೈದ್ಯಕೀಯ ಪರಿಹಾರ ಭತ್ಯೆ ವಿಸ್ತರಣೆ ಸೇರಿದಂತೆ ಇನ್ನಿತರೆ ಯೋಜನೆಗಳಿಗೆ ಆರ್ಥಿಕ ನೆರವು ನೀಡಲು ಆರ್ಥಿಕ ಮಿತವ್ಯಯ, ಆರ್ಥಿಕ ಹೊರೆ ನೆಪವೊಡ್ಡಿ ಕೊಕ್ಕೆ ಹಾಕುವ ಐಎಎಸ್‌ ಅಧಿಕಾರಿಗಳು ಇದೀಗ ಹೊಸ ವಾಹನ ಖರೀದಿಗಿದ್ದ ಆರ್ಥಿಕ ಮಿತಿಯನ್ನು ಹೆಚ್ಚಿಸಿಕೊಂಡಿದ್ದಾರೆ.

 

ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು,ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರುಗಳಿಗೆ ಹೊಸ ವಾಹನ ಖರೀದಿಸಲು ಈ ಇಂದೆ ನಿಗದಿಪಡಿಸಿದ್ದ ಆರ್ಥಿಕ ಮಿತಿಯನ್ನು ಸಡಿಲಗೊಳಿಸಿದೆ. ಈ ಸಂಬಂಧ 2022ರ ಆಗಸ್ಟ್‌ 18ರಂದು ಆದೇಶ ಹೊರಡಿಸಲಾಗಿದೆ. ವಿತ್ತ ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರ್ಥಿಕ ಇಲಾಖೆಯ ಅಭಿಪ್ರಾಯವನ್ನು ಅನುಮೋದಿಸಿದ್ದಾರೆ.  ಆದೇಶದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರುಗಳು (ಕಾರ್ಯದರ್ಶಿ ಶ್ರೇಣಿಯ ಅಧಿಕಾರಿಗಳಾಗಿದ್ದಲ್ಲಿ) ವಾಹನ ಖರೀದಿಸಲು ಈ ಹಿಂದೆ ನಿಗದಿಪಡಿಸಿದ್ದ ಆರ್ಥಿಕ ಮಿತಿಯನ್ನು 14.00 ಲಕ್ಷ ರು.ಗಳಿಂದ 20 ಲಕ್ಷ ರು.ಗಳಿಗೆ ಹೆಚ್ಚಿಸಿರುವುದು ಆದೇಶದಿಂದ ತಿಳಿದು ಬಂದಿದೆ.

 

ಅದೇ ರೀತಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರುಗಳಿಗೆ 9.00 ಲಕ್ಷ ರು.ಗಳಿಂದ 18.00 ಲಕ್ಷ ರು.ಗಳಿಗೆ ಹೆಚ್ಚಿಸಲಾಗಿದೆ. ಹಾಗೆಯೇ ಜಿಲ್ಲಾ ಹಂತದ ಇತರ ಅಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ಡಿವೈಎಸ್ಪಿಗಳಿಗೆ 6.50 ಲಕ್ಷ ರು ಗಳಿಂದ 12.50 ಲಕ್ಷ ರುಗ.ಳಿಗೆ ಹೆಚ್ಚಿಸಲಾಗಿದೆ. ತಹಶೀಲ್ದಾರ್‌ ಮತ್ತು ತಾಲೂಕು ಮಟ್ಟದ ಇತರ ಅಧಿಕಾರಿಗಳೀಗೆ 9.00 ಲಕ್ಷ ರು.ಗಳ ಮಿತಿಯಲ್ಲಿಯೇ ಹೊಸ ವಾಹನ ಖರೀದಿಸಲು ಆರ್ಥಿಕ ಮಿತಿ ನಿಗದಿಪಡಿಸಿದೆ.

 

 

ಹೊಸ ವಾಹನ ಖರೀದಿಸುವ ಸಂಬಂಧ 2019ರಲ್ಲಿಯೂ ಅರ್ಥಿಕ ಮಿತಿ ನಿಗದಿಗೊಳಿಸಿತ್ತು. ಇದರ ಪ್ರಕಾರ ಇಲಾಖಾ ಮುಖ್ಯಸ್ಥರುಗಳಿಗೆ ವಾಹ ಖರೀದಿಸಲು 6.50 ಲಕ್ಷ ರು ಗಳಿಂದ 9.00 ಲಕ್ಷ ರು.ಗಳಿಗೆ ಹೆಚ್ಚಿಸಲಾಗಿತ್ತು. ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು (ಕಾರ್ಯದರ್ಶಿ ಶ್ರೇಣಿ)ಗಳಿಗೆ 9.00 ಲಕ್ಷ ರು.ಗಳಿಂದ 14.00 ಲಕ್ಷ ರು.ಗಳಿಗೆ ಹೆಚ್ಚಿಸಲಾಗಿತ್ತು.

Hot this week

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...
Please Scan to make Your Contribution

Topics

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

Related Articles

Popular Categories

error: Content is protected !!