Saturday | September 5, 2026 |

ಮಾಜಿ ಸೈನಿಕರ ಕೋಟಾದಡಿ ನಕಲಿ ದಾಖಲೆ ಸೃಷ್ಟಿಸಿ ಶಿಕ್ಷಕರ ನೇಮಕ; ಬಡ್ತಿ ಕಡಿತಗೊಳಿಸಿ ಕೈತೊಳೆದುಕೊಂಡ ಸರ್ಕಾರ

ಬೆಂಗಳೂರು; ಆಯ್ಕೆಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ವಾಮಮಾರ್ಗದಲ್ಲಿ ಆದೇಶ ಪಡೆದಿದ್ದ ಪ್ರೌಢಶಾಲಾ ಶಿಕ್ಷಕರ ನೇಮಕ ಪ್ರಕರಣವನ್ನು ಸಿಐಡಿ ತನಿಖೆ ನಡೆಸುತ್ತಿರುವ ಬೆನ್ನಲ್ಲೇ ಮಾಜಿ ಸೈನಿಕರ ಮತ್ತು ಅವರ ಅವಲಂಬಿತರ ಖೋಟಾದಡಿಯಲ್ಲಿಯೂ ನಕಲಿ ದಾಖಲೆ ಸೃಷ್ಟಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿಯೂ ಅಕ್ರಮ ನಡೆದಿರುವುದು ಇದೀಗ ಬಹಿರಂಗವಾಗಿದೆ.

 

2006-07ರಿಂದ 2009-10ನೇ ಸಾಲಿನಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರ ಖೋಟಾದಡಿ ನಕಲಿ ದಾಖಲೆ ಸೃಷ್ಟಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆಸಿರುವುದು ಗಂಭೀರ ಅಪರಾಧ ಮಾತ್ರವಲ್ಲದೇ ಸಕಾರ್ಶರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ್ದರೂ ಇನ್ನೂ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಂಡಿಲ್ಲ. ಬದಲಿಗೆ ಆರೋಪಿತರ ಎರಡು ವಾರ್ಷಿಕ ವೇತನ ಬಡ್ತಿಗಳನ್ನು ತಡೆಹಿಡಿದು ಇಲಾಖೆಯು ಕೈಕೊಳೆದುಕೊಂಡಿದೆ.

 

ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ 2022ರ ಜುಲೈ 30ರಂದೇ ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಯಾದಗಿರಿ ಪ್ರಕರಣದ ವಿವರ

 

2006-07ರಿಂದ 2009-10ನೇ ಸಾಲಿನಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಮಾಜಿ ಸೈನಿಕರ/ಅವಲಂಬಿತರ ಖೋಟಾದಡಿಇಯಲ್ಲಿ ನಕಲಿ ಸೃಷ್ಟಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ಎಸಗಿರುವ ಆರೋಪದಡಿಯಲ್ಲಿ ಯಾದಗಿರಿಯ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯ ಪ್ರಾಂಶುಪಾಲರೂ ಸೇರಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ,ನೌಕರರೂ ಗುರಿಯಾಗಿದ್ದಾರೆ.

 

ಸಾರ್ವಜನಿಕ ಶಿಕ್ಷಣ ಇಲಾಖೆಯ ಹೊಸದುರ್ಗ ಉಪನಿರ್ದೇಶಕರ ಕಚೇರಿಯಲ್ಲಿನ ಹಿಂದಿನ ಪ್ರಥಮದರ್ಜೆ ಸಹಾಯಕ ಶ್ರೀಕಾಂತ( ಯಾದಗಿರಿಯಲ್ಲಿ ಪ್ರಸ್ತುತ ಸೇವೆ) ಮತ್ತು ಶಹಾಪೂರ ತಾಲೂಕಿನ ದೋರನಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಪ್ರಥಮದರ್ಜೆ ಸಹಾಯಕರ ಅವರ ಮುಂದಿನ ಎರಡು ವಾರ್ಷಿಕ ವೇತನ ಬಡ್ತಿಗಳನ್ನು ತಡೆಹಿಡಿದು ದಂಡನೆ ವಿಧಿಸಿರುವುದು ಪತ್ರದಿಂದ ತಿಳಿದು ಬಂದಿದೆ.

 

ಅಲ್ಲದೆ ಈ ಪ್ರಕರಣದ ಕುರಿತು ಆಪಾದಿತರಿಗೆ ಕಠಿಣ ದಂಡನೆ ವಿಧಿಸಲು ಯಾವುದೇ ಹೊಸ ಅಂಶಗಳನ್ನೂ ಅಧಿಕಾರಿಗಳು ಸರ್ಕಾರಕ್ಕೆ ಮಂಡಿಸಿಲ್ಲ. ವಿಚಾರಣೆ ವರದಿಯಲ್ಲಿನ ಅಂಶಗಳನ್ನು ಹೊರತುಪಡಿಸಿ ದಂಡನೆ ಪರಿಷ್ಕರಣೆ ಮಾಡಲು ಹೊಸ ಅಂಶಗಳನ್ನೂ ಸಲ್ಲಿಸಿಲ್ಲ.

 

ಆದರೆ ಈ ಪ್ರಕರಣವನ್ನು ಪುನರ್‌ ಪರಿಶೀಲಿಸಿಲು ವಿಚಾರಣೆ ವರದಿಯಲ್ಲಿನ ಅಂಶಗಳನ್ನು ಹೊರತುಪಡಿಸಿ ಕರ್ನಾಟಕ ನಾಗರಿಕ ಸೇವಾ(ಸಿಸಿಎ) ನಿಇಯಮಗಳು 1957ರ ನಿಯಮ 26ರಲ್ಲಿ ಹೇಳಿರುವಂತೆ ದಂಡನಾ ಆದೇಶವನ್ನು ಪುನರಾವಲೋಕಿಸಲು ಯಾವುದೇ ಸೂಕ್ತ ದಾಖಲೆಗಳು, ಪುರಾವೆಗಳು, ಹೊಸ ಅಂಶಗಳು ಮತ್ತು ಸಾಕಷ್ಟು ಸಕಾರಣಗಳು ಕಂಡುಬರುತ್ತಿಲ್ಲ ಎಂದೂ ಸಚಿವಾಲಯದ ಅಧಿಕಾರಿಗಳು ನಿಲುವು ತಳೆದಿರುವುದು ಪತ್ರದಿಂದ ಗೊತ್ತಾಗಿದೆ.

 

‘ಈ ಪ್ರಕರಣದ ಕುರಿತು ಆಪಾದಿತರಿಗೆ ಕಠಿಣ ದಂಡನೆ ವಿಧಿಸಲು ವಿಚಾರಣಾಧಿಕಾರಿಗಳ ವಿಚಾರನೆ ವರದಿಯಲ್ಲಿನ ಅಂಶಗಳನ್ನು ಹೊರತುಪಡಿಸಿ ಈ ಪ್ರಕರಣವನ್ನು ಪುನರ್‌ ಪರಿಶೀಲಿಸಲು ಕರ್ನಾಟಕ ನಾಗರೀಕ ಸೇವಾ (ಸಿಸಿಎ) ನಿಯಮಗಳು 1957ರ ನಿಯಮ 26ರಲ್ಲಿ ತಿಳಿಸಿರುವಂತೆ ತಮ್ಮ ಶಿಫಾರಸ್ಸಿಗೆ ಪೂರಕವಾದ ಹೊಸ ಅಂಶ, ಪುರಾವೆಗಳೊಂದಿಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಲ್ಲಿ ನಿಯಮಾನುಸಾರ ಪರಿಶೀಲಿಸಲಾಗುವುದು,’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಕಲ್ಬುರ್ಗಿಯ ಹೆಚ್ಚುವರಿ ಆಯುಕ್ತರಿಗೆ ನಿರ್ದೇಶಿಸಿರುವುದು ಪತ್ರದಿಂದ ತಿಳಿದು ಬಂದಿದೆ.

 

ತುಮಕೂರು, ಕೋಲಾರ ಜಿಲ್ಲೆಯಲ್ಲಿನ ಶಿಕ್ಷಕರ ನೇಮಕಾತಿಯಲ್ಲಿನ ಅಕ್ರಮವನ್ನು ಹೊರಗೆಳೆದಿದ್ದ ಲಂಚಮುಕ್ತ ನಿರ್ಮಾಣ ಕರ್ನಾಟಕ ವೇದಿಕೆಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಭಟ್ಟರಹಳ್ಳಿ ಅವರು ಮುಖ್ಯಮಂತ್ರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ, ಪ್ರಧಾನ ಕಾರ್ಯದರ್ಶಿಗಳಿಗೆ ಲಿಖಿತ ದೂರು ನೀಡಿದ್ದರು. ಇದೀಗ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯು ಸರ್ಕಾರಕ್ಕೆ ಮತ್ತಷ್ಟು ಮಾಹಿತಿಗಳನ್ನು ಹಂಚಿಕೊಂಡಿದ್ದನ್ನು ಸ್ಮರಿಸಬಹುದು. ಈ ದೂರನ್ನಾಧರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ ಸಿ ನಾಗೇಶ್‌ ಅವರು ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿದ್ದನ್ನು ಸ್ಮರಿಸಬಹುದು.

 

ಕೋಲಾರ ಜಿಲ್ಲೆಯೊಂದರಲ್ಲೇ 9 ಮಂದಿ ಶಿಕ್ಷಕರು ಅಕ್ರಮವಾಗಿ ನೇಮಕವಾಗಿದ್ದಾರೆ ಎಂದು ಲಂಚಮುಕ್ತ ನಿರ್ಮಾಣ ಕರ್ನಾಟಕ ವೇದಿಕೆಯು ಸರ್ಕಾರಕ್ಕೆ ಪಟ್ಟಿಯನ್ನು ಒದಗಿಸಿದೆ. ಈ ಶಿಕ್ಷಕರ ಸೇವಾ ಹಿರಿತನಕ್ಕೆ ಸಂಬಂಧಿಸಿದಂತೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಶಿಕ್ಷಕರ ಹೆಸರುಗಳಿರಲಿಲ್ಲ ಎಂದು ವೇದಿಕೆಯು ಸರ್ಕಾರದ ಗಮನಕ್ಕೆ ತಂದಿತ್ತು.

Hot this week

2,500 ಕೋಟಿ ರು ಮೂಲ ಬೆಲೆಯ ಮೇಲೆ 350 ಕೋಟಿ ಪ್ರೀಮಿಯಂ; ನಾಗರೀಕರ ಮೇಲೆ ಹೊರೆ ಸೃಷ್ಟಿಸಿತೇ ಬಿಎಸ್‌ಡಬ್ಲ್ಯೂಎಂಎಲ್?

ಬೆಂಗಳೂರು;  ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯುಎಂಎಲ್‌...

ಬುಕ್ ಬ್ರಹ್ಮ ಸಾಹಿತ್ಯ ಉತ್ಸವಕ್ಕೆ 5 ಲಕ್ಷ ರು ಅನುದಾನ; ನೋಂದಣಿಯಾಗಿ 3 ವ‍ರ್ಷ ಪೂರೈಸದ ಬುಕ್‌ ಬ್ರಹ್ಮ ಫೌಂಡೇಷನ್‌ಗೆ ಒಂದು ಬಾರಿ ವಿನಾಯಿತಿ

ಬೆಂಗಳೂರು;  ಅನುದಾನ ಪಡೆಯುವ ಸಂಘ, ಸಂಸ್ಥೆಗಳು ನೋಂದಣಿಯಾಗಿ  3 ವರ್ಷಗಳನ್ನು ಪೂರೈಸಿರಬೇಕು...

ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ ...

ಕನ್ಸೋರ್ಟಿಯಂ ಷರತ್ತು, ಸದಸ್ಯರ ಷೇರು; ಅಂಜುಂ ಪರ್ವೇಜ್ ಸಮಿತಿಯ ಆಕ್ಷೇಪಣೆ ತಳ್ಳಿ ಹಾಕಿದ ಘನತ್ಯಾಜ್ಯ ನಿರ್ವಹಣೆ ಮಂಡಳಿ

ಬೆಂಗಳೂರು; ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ 21 ಪ್ಯಾಕೇಜ್‌ಗಳಲ್ಲಿ ರೂಪಿಸಿರುವ  ಕನ್ಸೋರ್ಟಿಯಂನಲ್ಲಿ...
Please Scan to make Your Contribution

Topics

2,500 ಕೋಟಿ ರು ಮೂಲ ಬೆಲೆಯ ಮೇಲೆ 350 ಕೋಟಿ ಪ್ರೀಮಿಯಂ; ನಾಗರೀಕರ ಮೇಲೆ ಹೊರೆ ಸೃಷ್ಟಿಸಿತೇ ಬಿಎಸ್‌ಡಬ್ಲ್ಯೂಎಂಎಲ್?

ಬೆಂಗಳೂರು;  ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯುಎಂಎಲ್‌...

ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ ...

ಕನ್ಸೋರ್ಟಿಯಂ ಷರತ್ತು, ಸದಸ್ಯರ ಷೇರು; ಅಂಜುಂ ಪರ್ವೇಜ್ ಸಮಿತಿಯ ಆಕ್ಷೇಪಣೆ ತಳ್ಳಿ ಹಾಕಿದ ಘನತ್ಯಾಜ್ಯ ನಿರ್ವಹಣೆ ಮಂಡಳಿ

ಬೆಂಗಳೂರು; ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ 21 ಪ್ಯಾಕೇಜ್‌ಗಳಲ್ಲಿ ರೂಪಿಸಿರುವ  ಕನ್ಸೋರ್ಟಿಯಂನಲ್ಲಿ...

Related Articles

Popular Categories

error: Content is protected !!