Wednesday | August 26, 2026 |

ಮತಾಂತರ ನಿಷೇಧ ವಿಧೇಯಕಕ್ಕೆ ರಾಜ್ಯಪಾಲರ ಒಪ್ಪಿಗೆ; ಅಧಿಸೂಚನೆ ಪ್ರಕಟ

ಬೆಂಗಳೂರು; ಆಮಿಷ, ಬಲವಂತ ಮತ್ತು ಒತ್ತಾಯದ ಮತಾಂತರ ತಡೆಯುವುದಕ್ಕಾಗಿ ರಾಜ್ಯ ಸರ್ಕಾರ ರೂಪಿಸಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ವಿಧೇಯಕಕ್ಕೆ ರಾಜ್ಯಪಾಲರು ಸೆ. 28ರಂದು ಒಪ್ಪಿಗೆ ನೀಡಿದ್ದಾರೆ.

 

ಈ ಕುರಿತು ರಾಜ್ಯ ಸರ್ಕಾರವು 2022ರ ಸೆ.30ರಂದು ಅಧಿಸೂಚನೆಯನ್ನೂ ಹೊರಡಿಸಿದೆ. ಅಧಿಸೂಚನೆಯ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ, 2022 ಇದಕ್ಕೆ 202ರ ಸೆಪ್ಟಂಬರ್‌ 28ರಂದು ರಾಜ್ಯಪಾಲರ ಒಪ್ಪಿಗೆ ದೊರೆತಿದೆ,’ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

 

ಸಂಖ್ಯಾಬಲದ ಕೊರತೆ ಕಾರಣ ವಿಧಾನಪರಿಷತ್ತಿನಲ್ಲಿ ಈ ವಿಧೇಯಕಕ್ಕೆ ಅಂಗೀಕಾರ ಪಡೆಯಲಾಗಿರಲಿಲ್ಲ. ಹೀಗಾಗಿ, ಈ ಬಗ್ಗೆ ರಾಜ್ಯ ಸರ್ಕಾರ ಕಳೆದ ಮೇ ನಲ್ಲಿ ಸುಗ್ರೀವಾಜ್ಞೆ ಜಾರಿಗೊಳಿಸಿತ್ತು. ಸುಗ್ರೀವಾಜ್ಞೆಯ ಅವಧಿ ಆರು ತಿಂಗಳು ಮಾತ್ರ ಇದ್ದದ್ದರಿಂದ ಅಷ್ಟರೊಳಗೆ ಉಭಯ ಸದನಗಳಲ್ಲಿ ಮತ್ತೊಮ್ಮೆ ಮಂಡಿಸಿ ಅಂಗೀಕಾರ ಪಡೆಯಬೇಕಿತ್ತು.

 

ಮತಾಂತರ ನಿಷೇಧ ವಿಧೇಯಕ ಜಾರಿಗೊಳಿಸಲು ಸುಗ್ರೀವಾಜ್ಞೆಗೆ ಅಂತಿಮ ಸ್ವರೂಪ ನೀಡಿದ ಸರ್ಕಾರ

 

ವಿಧಾನಪರಿಷತ್ತಿನಲ್ಲಿ ಆಡಳಿತಾರೂಢ ಬಿಜೆಪಿ ಸ್ಪಷ್ಟಬಹುಮತ ಸಾಧಿಸಿರುವ ಹಿನ್ನೆಲೆಯಲ್ಲಿ ಈಗ ವಿಧೇಯಕಕ್ಕೆ 2022ರ ಸೆಪ್ಟಂಬರ್‌ನಲ್ಲಿ ನಡೆದ ವಿಧಾನಪರಿಷತ್‌ನಲ್ಲಿ ಧ್ವನಿ ಮತದ ಮುಖಾಂತರ ಒಪ್ಪಿಗೆ ದೊರೆತಿತ್ತು.

 

ಗೃಹಸಚಿವ ಆರಗ ಜ್ಞಾನೇಂದ್ರ ಅವರು ಮತಾಂತರ ನಿಷೇಧ ವಿಧೇಯಕ ಮಂಡಿಸುತ್ತಿದ್ದಂತೆ ಆಡಳಿತಾರೂಢ ಬಿಜೆಪಿ ಮತ್ತು ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್‌ ನಡುವೆ ತೀವ್ರ ವಾಕ್ಸಮರಕ್ಕೆ ನಾಂದಿ ಹಾಡಿತು. ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಬಿಲ್‌ನ ಪ್ರತಿಯನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು.

 

ಕಾಯ್ದೆಯಲ್ಲೇನಿದೆ?

ಬಲವಂತ, ಆಮಿಷ ಮತ್ತು ಮದುವೆಯಾಗುವ ಭರವಸೆ ನೀಡಿ ನಡೆಸುವ ಮತಾಂತರಕ್ಕೆ ನಿಷೇಧ

 

ಮತಾಂತರಗೊಂಡ ವ್ಯಕ್ತಿಯ ಮನೆಯವರು, ಆಪ್ತರು ದೂರು ನೀಡಿದರೆ ಎಫ್‌ಐಆರ್‌ ದಾಖಲು

 

ಬಲವಂತದ ಮತಾಂತರಕ್ಕೆ 3ರಿಂದ 5 ವರ್ಷ ಜೈಲು ಶಿಕ್ಷೆ ಮತ್ತು 25 ಸಾವಿರ ರು.ವರೆಗೆ ದಂಡ

 

ಮತಾಂತರವಾಗಲು ಮುಂದಾಗಿರುವ ವ್ಯಕ್ತಿ 2 ತಿಂಗಳು ಮೊದಲು ಜಿಲ್ಲಾಧಿಕಾರಿಗೆ ತಿಳಿಸಬೇಕು

 

ಈ ಮಾಹಿತಿಯನ್ನು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್‌ ಕಚೇರಿ ಸೂಚನಾ ಫಲಕದಲ್ಲಿ ಹಾಕಬೇಕು

 

ಇದಕ್ಕೆ 30 ದಿನಗಳ ಒಳಗಾಗಿ ಆಕ್ಷೇಪಣೆ ಬಂದರೆ ಕಂದಾಯ ಇಲಾಖೆ ವಿಚಾರಣೆ ನಡೆಸಬೇಕು

 

ತಪ್ಪು ಕಂಡುಬಂದಲ್ಲಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಲು ಪೊಲೀಸರಿಗೆ ಅಧಿಕಾರವನ್ನು ನೀಡಲಾಗಿದೆ.

Hot this week

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...
Please Scan to make Your Contribution

Topics

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

Related Articles

Popular Categories

error: Content is protected !!