Wednesday | July 22, 2026 |

ಸೌಭಾಗ್ಯ ವಿದ್ಯುತ್‌ ಯೋಜನೆ ಕಾಮಗಾರಿಗೆ ಅನುಮೋದನೆ ಇರದಿದ್ದರೂ ಅನುಷ್ಠಾನ;ಗುತ್ತಿಗೆದಾರರಿಗೆ ಅಧಿಕ ಪಾವತಿ

ಬೆಂಗಳೂರು; ಸೌಭಾಗ್ಯ ಯೋಜನೆಯಡಿ 4.75 ಕೋಟಿ ರು ಮೊತ್ತದ ಗ್ರಾಮೀಣ ವಿದ್ಯುದ್ದೀಕರಣ ಕಾಮಗಾರಿಗಳನ್ನು ಅನುಮೋದನೆ ಇಲ್ಲದೆಯೇ ಕಾರ್ಯಗತಗೊಳಿಸಿದ್ದ ಇಂಧನ ಇಲಾಖೆಯು ಲೆಕ್ಕಪತ್ರಗಳ ಕೈಪಿಡಿಯನ್ನು ಉಲ್ಲಂಘಿಸಿತ್ತು ಎಂಬುದನ್ನು ಸಿಎಜಿ ವರದಿಯು ಬಹಿರಂಗಗೊಳಿಸಿದೆ.

 

ಪೂರ್ವಭಾವಿ ಯೋಜನೆ ಹಾಗೂ ಅಂದಾಜುಗಳನ್ನು ಸಕ್ಷಮ ಪ್ರಾಧಿಕಾರವು ಅನುಮೋದಿಸಬೇಕು. ಅನುಮೋದಿಸದ ಹೊರತು ಯಾವುದೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬಾರದು. ಅನುಮೋದಿತ ಅಂದಾಜಿನಲ್ಲಿ ನಿರ್ದಿಷ್ಟವಾಗಿ ಅನುವು ಮಾಡದಿರುವ ಕಾಮಗಾರಿಗಳ ಐಟಂಗಳನ್ನು ಪರಿಷ್ಕೃತ ಅಂದಾಜು ಅಥವಾ ಪೂರಕ ಅಂದಾಜನ್ನು ಅನುಮೋದಿಸದ ಹೊರತು ಕೈಗೆತ್ತಿಕೊಳ್ಳಬಾರದು ಎಂದು ಲೆಕ್ಕಪತ್ರಗಳ ಕೈಪಿಡಿ ಸಂಪುಟ 2ರಲ್ಲಿ ಸ್ಪಷ್ಟವಾಗಿ ಸೂಚಿಸಲಾಗಿದೆ. ಆದರೆ ಇದನ್ನು ಇಂಧನ ಇಲಾಖೆಯು ನೇರಾನೇರ ಉಲ್ಲಂಘಿಸಿದೆ ಎಂದು ಸಿಎಜಿ ವರದಿಯಲ್ಲಿ ವಿವರಿಸಲಾಗಿದೆ.

 

‘ರಾಯಚೂರು ಜಿಲ್ಲೆಯ ಮಾನ್ವಿ, ರಾಯಚೂರು, ದೇವದುರ್ಗ, ಸಿಂಧನೂರು ತಾಲೂಕು ವ್ಯಾಪ್ತಿಯಲ್ಲಿ ಸೌಭಾಗ್ಯ ಯೋಜನೆ ಅಡಿಯಲ್ಲಿ ಗ್ರಾಮೀಣ ವಿದ್ಯುದ್ದೀಕರಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ 4.75 ಕೋಟಿ ರು ಅನುದಾನ ಒದಗಿಸಲಾಗಿತ್ತು. ಈ ಕಾಮಗಾರಿಗಳಿಗೆ ಕಾರ್ಯನಿರ್ವಾಹಕ ಇಂಜಿನಿಯರ್‌, ಅಧೀಕ್ಷಕ ಇಂಜಿನಿಯರ್‌ ಮತ್ತು ಮುಖ್ಯ ಇಂಜಿನಿಯರ್‌ರಿಂದ ಅಂದಾಜುಗಳಿಗೆ ಪೂರ್ವಾನುಮೋದನೆ ಪಡೆದುಕೊಳ್ಳದೆಯೇ ಕಾರ್ಯಗತಗೊಳಿಸಲಾಗಿತ್ತು,’ ಎಂಬುದು ಲೆಕ್ಕಪರಿಶೋಧನೆ ವೇಳೆ ಪತ್ತೆಯಾಗಿದೆ.

 

ಅದೇ ರೀತಿ ಬೀದರ್‌ ಜಿಲ್ಲೆಯಲ್ಲಿಯೂ ಸೌಭಾಗ್ಯ ಯೋಜನೆಯಡಿಯಲ್ಲಿ 9,432 ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ವಿದ್ಯುದ್ದೀಕರಣಗೊಳಿಸಲು 17.17 ಕೋಟಿ ರು. ಮೌಲ್ಯಕ್ಕೆ ಮಹದೇವ್‌ ಪ್ರೀಸ್ಪೆಸ್ಸ್‌ಡ್‌ ಪ್ರಾಡಕ್ಟ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ ಗುತ್ತಿಗೆ ನೀಡಲಾಗಿತ್ತು. ಕಾಮಗಾರಿ ಆದೇಶ ಪಡೆದ ಮೂರು ತಿಂಗಳ ಒಳಗೇ ಈ ಕುಟುಂಬಗಳಿಗೆ ಅಂದರೆ 2019ರ ಫೆಬ್ರುವರಿ ಅಂತ್ಯಕ್ಕೆ ವಿದ್ಯುದ್ದೀಕರಣ ಸೌಲಭ್ಯವನ್ನು ಪೂರ್ಣಗೊಳಿಸಬೇಕಿತ್ತು. ಆದರೆ ಈ ಕಾಮಗಾರಿಗಳು ವಿಳಂಬವಾಗಿದ್ದರಿಂದ 2020ರ ಮಾರ್ಚ್‌ನಲ್ಲಿ 9.78 ಕೋಟಿ ರು.ವೆಚ್ಚದಲ್ಲಿ ಪೂರ್ಣಗೊಂಡಿದ್ದವು.

 

ಆದರೆ ಗುತ್ತಿಗೆದಾರರು ಮತ್ತು ಸಂಬಂಧಿತ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಸಹಿ ಮಾಡಿದ್ದ ಜಂಟಿ ಸರಕು ಸಾಮಗ್ರಿಗಳು ಮತ್ತು ಮುಖ್ಯ ಇಂಜಿನಿಯರ್‌ ಅವರು ಅನುಮೋದಿಸಿದ್ದಂತಹ (ಜನವರಿ 2021) ದಾಖಲೆಗಳಲ್ಲಿ ವ್ಯತ್ಯಯವಾಗಿದ್ದವು. ಇದು ಗುತ್ತಿಗೆದಾರರಿಗೆ ಅಧಿಕ ಪ್ರಮಾಣದಲ್ಲಿ ಪಾವತಿಗೆ ಕಾರಣವಾಗಿತ್ತು ಎಂಬುದನ್ನು ಸಾಬೀತುಪಡಿಸುತ್ತದೆ ಎಂದು ಸಿಎಜಿ ವರದಿಯಲ್ಲಿ ವಿವರಿಸಲಾಗಿದೆ.

 

242 ಕುಟುಂಬಗಳಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ 23,34,993 ರು. ಮೊತ್ತವನ್ನು ಅಧಿಕವಾಗಿ ಪಾವತಿಸಲಾಗಿತ್ತು. ಅಲ್ಲದೆ ಪ್ರಮಾಣೀಕರಿಸಿದ್ದ 9,426 ಕುಟುಂಬಗಳಿಗೆ ಪ್ರತಿಯಾಗಿ 9,668 ಕುಟುಂಬಗಳು ಎಂದು ನಮೂದಿಸಲಾಗಿತ್ತು. ಆದರೆ ಮುಖ್ಯ ಇಂಜನಿಯರ್‌ ಅವರು ಯಾವುದೇ ಅಧಿಕ ಪ್ರಮಾಣದಲ್ಲಿ ಪಾವತಿಯಾಗಿರಲಿಲ್ಲ ಎಂದು ಸಮಜಾಯಿಷಿ ನೀಡಿದ್ದರೂ ಸಹ ಲೆಕ್ಕಪರಿಶೋಧನೆಯಲ್ಲಿ ಗಮನಿಸಿದ್ದ ಅಂಶಗಳಿಗೆ ಯಾವುದೇ ಉತ್ತರಗಳನ್ನು ನೀಡಿರಲಿಲ್ಲ.

Hot this week

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೇರದ ಭದ್ರಾ ಮೇಲ್ದಂಡೆ ಯೋಜನೆ; ಸಹಾಯಧನ ಬಿಡುಗಡೆ ವಿಳಂಬಕ್ಕೆ ನೆಪವೊಡ್ಡಿದ ಕೇಂದ್ರ

ಬೆಂಗಳೂರು; ರಾಜ್ಯದ ಮಹತ್ವಾಕಾಂಕ್ಷೆ ನೀರಾವರಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆಯ ಅಂದಾಜು...

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ವಸತಿ ಬಡಾವಣೆ ನಿರ್ಮಾಣ, ಅಭಿವೃದ್ಧಿ ಕಾಮಗಾರಿ, ಬಡ್ಡಿ ಪಾವತಿ; ಲೆಕ್ಕಪತ್ರವನ್ನೇ ನಿರ್ವಹಿಸಿಲ್ಲ, ದಾಖಲೆಗಳನ್ನೂ ಒದಗಿಸಿಲ್ಲ, ಮುಡಾ ದುರಾಡಳಿತ

ಮಂಗಳೂರು: ಕುಂಜತ್‌ ಬೈಲ್ ಸೇರಿದಂತೆ ಹಲವೆಡೆ ವಸತಿ ಬಡಾವಣೆಗಳನ್ನು ರಚಿಸುವ ಉದ್ದೇಶದಿಂದ...
Please Scan to make Your Contribution

Topics

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೇರದ ಭದ್ರಾ ಮೇಲ್ದಂಡೆ ಯೋಜನೆ; ಸಹಾಯಧನ ಬಿಡುಗಡೆ ವಿಳಂಬಕ್ಕೆ ನೆಪವೊಡ್ಡಿದ ಕೇಂದ್ರ

ಬೆಂಗಳೂರು; ರಾಜ್ಯದ ಮಹತ್ವಾಕಾಂಕ್ಷೆ ನೀರಾವರಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆಯ ಅಂದಾಜು...

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...

Related Articles

Popular Categories

error: Content is protected !!