Wednesday | September 16, 2026 |

ಎನ್‌ಇಪಿ ಹೆಸರಿನಲ್ಲಿ ರಾಷ್ಟ್ರೋತ್ಥಾನಕ್ಕೆ ಮತ್ತಷ್ಟು ಗೋಮಾಳ; ನೀರಿನ ಮೂಲವಲ್ಲವೆಂದು ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು; ರಾಷ್ಟ್ರೀಯ ನೂತನ ಶೈಕ್ಷಣಿಕ ನೀತಿಯನ್ನು ವಿಸ್ತರಿಸುವ ಹೆಸರಿನಲ್ಲಿ ಆನೇಕಲ್‌ ತಾಲೂಕು ಮತ್ತು ಚಿಕ್ಕಮಗಳೂರು ತಾಲೂಕಿನ ವಿವಿಧೆಡೆ ಗೋಮಾಳ, ಸರ್ಕಾರಿ ಜಾಗಗಳ ಮಂಜೂರಾತಿಗೆ ರಾಷ್ಟ್ರೋತ್ಥಾನ ಪರಿಷತ್‌ ಸಲ್ಲಿಸಿರುವ ಪ್ರಸ್ತಾವನೆಯನ್ನು ಪುರಸ್ಕರಿಸಿರುವ ಕಂದಾಯ ಇಲಾಖೆಯು ಸಚಿವ ಸಂಪುಟಕ್ಕೆ ಮಂಡಿಸಿದೆ.

 

ಇಂದು  ನಡೆಯಲಿರುವ ಸಚಿವ ಸಂಪುಟಕ್ಕೆ ಕಡತವನ್ನು ಮಂಡಿಸಿರುವ ಕಂದಾಯ ಇಲಾಖೆಯು ಕಾನೂನು ಮತ್ತು ಆರ್ಥಿಕ ಇಲಾಖೆಯು ನೀಡಿದ್ದ ಅಭಿಪ್ರಾಯವನ್ನು ಬದಿಗೆ ಸರಿಸಿರುವುದು ಗೊತ್ತಾಗಿದೆ.

 

ಬೆಂಗಳೂರು ನಗರ ಜಿಲ್ಲೆ ಆನೇಕಲ್‌ ತಾಲೂಕಿನ ಜಿಗಳಿ ಹೋಬಳಿಯ ಹುಲಿಮಂಗಲ ಗ್ರಾಮದ ಸರ್ವೆ ನಂಬರ್‌ 155ರ ಬ್ಲಾಕ್‌ ನಂ ಬಿ 23ರಲ್ಲಿ 1-36 ಎಕರೆ ಜಾಗವಿರುವುದು ನಮ್ಮ ಗಮನಕ್ಕೆ ಬಂದಿದೆ. ಆದ್ದರಿಂದ ಈ ಜಾಗವನ್ನು ನಮ್ಮ ಸಂಸ್ಥೆಗೆ ಮಂಜೂರು ಮಾಡಿ ನಮ್ಮ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ರಾಷ್ಟ್ರೋತ್ಥಾನ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ನಾ ದಿನೇಶ್ ಹೆಗ್ಡೆ ಅವರು 2022ರ ಫೆ.2ರಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಹಾಗೆಯೇ ರಾಷ್ಟ್ರೋತ್ಥಾನ ಪರಿಷತ್‌ ಈಗಾಗಲೇ ರಾಜ್ಯದ ವಿವಿಧೆಡೆ ಹೊಂದಿರುವ ಜಮೀನುಗಳ ಕುರಿತಾದ ವಿವರವನ್ನು ಪ್ರಸ್ತಾವನೆಯಲ್ಲಿ ನಮೂದಿಸಿರಲಿಲ್ಲ.

 

ಈ ಪ್ರಸ್ತಾವನೆಯನ್ನು ಪುರಸ್ಕರಿಸಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ ಮಂಜುನಾಥ್‌ ಅವರು ‘ಪ್ರಸ್ತಾಪಿತ ಜಮೀನು ಸರ್ಕಾರಿ ಗೋಮಾಳ ಜಮೀನಾಗಿದ್ದು ಯಾವುದೇ ನೀರಿನ ಮೂಲವಾಗಿರುವುದಿಲ್ಲ,’ ಎಂದು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ವರದಿ ಸಲ್ಲಿಸಿದ್ದರು. ನೀರಿನ ಮೂಲವಾಗಿಲ್ಲ ಎಂಬುದನ್ನೇ ನೆಪವಾಗಿರಿಸಿಕೊಂಡಿದ್ದ ಜಿಲ್ಲಾಧಿಕಾರಿಯು ರಾಷ್ಟ್ರೋತ್ಥಾನ ಪರಿಷತ್‌ಗೆ ಗೋಮಾಳ ಜಮೀನನ್ನು ಮಂಜೂರು ಮಾಡಲು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಶಿಫಾರಸ್ಸು ಮಾಡಿದ್ದರು. ಈ ಶಿಫಾರಸ್ಸನ್ನಾಧರಿಸಿ ಸಚಿವ ಸಂಪುಟಕ್ಕೆ ಮಂಡಿಸಲು ಸಚಿವ ಆರ್‌ ಅಶೋಕ್‌ ಅವರು ಅನುಮೋದಿಸಿದ್ದರು.

 

ಅಲ್ಲದೆ ಇದೇ ಜಮೀನನ್ನು ಮಂಜೂರು ಮಾಡುವ ಸಂಬಂಧ ತಯಾರಿಸಿದ್ದ ಚೆಕ್‌ಲಿಸ್ಟ್‌ನಲ್ಲಿ ಈ ಗ್ರಾಮದಲ್ಲಿ ಎಷ್ಟು ಜಾನುವಾರುಗಳಿವೆ ಮತ್ತು ಗೋಮಾಳ ಜಮೀನು ಮಂಜೂರು ಮಾಡುವುದರಿಂದ ಮೇವಿನ ಕೊರತೆ ಉಂಟಾಗಲಿದೆಯೆ ಎಂಬ ಕುರಿತು ಯಾವುದೇ ಮಾಹಿತಿಯನ್ನೂ ನೀಡಿರಲಿಲ್ಲ ಎಂಬುದು ಲಭ್ಯವಿರುವ ಚೆಕ್‌ಲಿಸ್ಟ್‌ನಿಂದ ತಿಳಿದು ಬಂದಿದೆ.

 

ಆದರೂ ರಾಷ್ಟ್ರೋತ್ಥಾನ ಪರಿಷತ್‌ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಜೆ ಮಂಜುನಾಥ್‌ ಅವರು 2022ರ ಏಪ್ರಿಲ್‌ 30ರಂದು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ರಾಷ್ಟ್ರೋತ್ಥಾನ ಪರಿಷತ್‌ ಪ್ರಸ್ತಾಪಿಸಿರುವ ಗೋಮಾಳ ಸರ್ವೆನಂಬರ್‌ 155ರಲ್ಲಿನ ಜಮೀನುಗಳಿಗೆ ಸಂಬಂಧಿಸಿದಂತೆ ವಿಧಾನಮಂಡಲದ ಅರ್ಜಿಗಳ ಸಮಿತಿ ಮುಂದೆ ವಿಚಾರಣೆಯಲ್ಲಿದೆ. ಈ ಅರ್ಜಿಯು ಇನ್ನೂ ಇತ್ಯರ್ಥಗೊಳಿಸಿಲ್ಲ. ಸದ್ಯ ವಿಚಾರಣೆ ಹಂತದಲ್ಲಿದ್ದರೂ ಬೆಂಗಳೂರು ನಗರ ಜಿಲ್ಲಾಧಿಕಾರಿಯು ರಾಷ್ಟ್ರೋತ್ಥಾನ ಪರಿಷತ್‌ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸ್ವೀಕರಿಸಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

 

ಜಿಲ್ಲಾಧಿಕಾರಿ ಪತ್ರದಲ್ಲೇನಿದೆ?

 

ಆನೇಕಲ್‌ ತಾಲೂಕು ಜಿಗಣಿ ಹೋಬಳಿಯ ಹುಲಿಮಂಗಲ ಗ್ರಾಮದ ಸರ್ವೆ ನಂಬರ್‌ 155 ಮೂಲತಃ ಸರ್ಕಾರಿ ಗೋಮಾಳ ಜಮೀನಾಗಿದ್ದು ಮೂಲ ವಿಸ್ತೀರ್ಣ 185-04 ಎಕರೆ ಜಮೀನಿನ ಪೈಕಿ ಈ ಹಿಂದೆ ಪೋಡಿ ದುರಸ್ತಿ ಆಗಿ ಉಳಿಕೆ ಆಕಾರ್‌ ಬಂದ್‌ ನಂತೆ 68-30 ಎಕರೆ ಇದೆ. ಈ ಸರ್ವೆ ನಂಬರ್‌ನ ಜಮೀನುಗಳಿಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನಮಂಡಲದ ಅರ್ಜಿ ಸಮಿತಿಯ ವಿಚಾರಣೆ ಹಂತದಲ್ಲಿದೆ. ಇದು ಇತ್ಯರ್ಥಕ್ಕೆ ಬಾಕಿ ಇದೆ. ಈ ಜಮೀನಿನ ಸರ್ಕಾರಿ ಮಾರ್ಗಸೂಚಿ ದರ ಎಕರೆಯೊಂದಕ್ಕೆ 95 ಲಕ್ಷ ರು., ಮಾರುಕಟ್ಟೆ ಮೌಲ್ಯ ಎಕರೆಗೆ 2.50 ಕೋಟಿ ರು ಇದೆ ಎಂದು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಗಮನಕ್ಕೆ ತಂದಿರುವುದು ಪತ್ರದಿಂದ ಗೊತ್ತಾಗಿದೆ.

 

ಅದೇ ರೀತಿ ಚಿಕ್ಕಮಗಳೂರು ಕಸಬಾ ಹೋಬಳಿಯ ಹಿರೇಮಗಳೂರು ಗ್ರಾಮದಲ್ಲಿಯೂ ಅಂದಾಜು 6 ಎಕರೆ ವಿಸ್ತೀರ್ಣದ ಗೋಮಾಳವನ್ನು ಮಂಜೂರು ಮಾಡಲು ಕಂದಾಯ ಇಲಾಖೆಯು ಕಡತವನ್ನು ಸಚಿವ ಸಂಪುಟದ ಮುಂದಿರಿಸಿದೆ ಎಂದು ಗೊತ್ತಾಗಿದೆ.

 

ರಾಷ್ಟ್ರೀಯ ನೂತನ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ಮುಂದಿರಿಸಿಕೊಂಡು ಶೈಕ್ಷಣಿಕ ಕೇಂದ್ರಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಗೋಮಾಳ ಜಮೀನು ಮಂಜೂರಿಗಾಗಿ ವಿವಿಧ ಜಿಲ್ಲಾಧಿಕಾರಿಗಳ ಬಳಿ ಇರುವ ಪ್ರಸ್ತಾವನೆಗಳನ್ನು ಸಚಿವ ಸಂಪುಟದ ಮುಂದೆ ಮಂಡಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಧಾನ ಕಾರ್ಯದರ್ಶಿ ಎನ್‌ ಮಂಜುನಾಥ್‌ ಪ್ರಸಾದ್‌ ಅವರು ಕಂದಾಯ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಒತ್ತಡ ಹೇರುತ್ತಿದ್ದಾರೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

 

ಈ ಸಂಬಂಧ ಎನ್‌ ಮಂಜುನಾಥ್‌ ಪ್ರಸಾದ್‌ ಅವರು 2022ರ ಏಪ್ರಿಲ್‌ 21ರಂದು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಟಿಪ್ಪಣಿ ಹೊರಡಿಸಿದ್ದರು. ‘ರಾಷ್ಟ್ರೋತ್ಥಾನ ಪರಿಷತ್‌ನ ವಿವಿಧ ಪ್ರಸ್ತಾವನೆಗಳು ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಬಳಿ ಬಾಕಿ ಇದ್ದು ಸದರಿ ಪ್ರಸ್ತಾವನೆಗಳನ್ನು ಕೂಡಲೇ ಜಿಲ್ಲಾಧಿಕಾರಿಯವರಿಂದ ಪಡೆದು ತುರ್ತಾಗಿ ಪಡೆದು ಸಚಿವ ಸಂಪುಟದ ಮುಂದೆ ಮಂಡಿಸಬೇಕು ಎಂದು ಮುಖ್ಯಮಂತ್ರಿಯವರು ನಿರ್ದೇಶಿಸಿದ್ದಾರೆ,’ ಎಂದು ಟಿಪ್ಪಣಿಯಲ್ಲಿ ವಿವರಿಸಲಾಗಿದೆ.

Hot this week

ಭೂಗತ ಸುರಂಗ ಮಾರ್ಗ; ರಿಯಾಯಿತಿ ಅವಧಿಯಲ್ಲೇ ಗರಿಷ್ಠ ಟೋಲ್‌ ಸಂಗ್ರಹಣೆ, ದರ ಪರಿಷ್ಕರಣೆಯ ಹಿಂದಿನ ರಹಸ್ಯ ಬಯಲು

ಬೆಂಗಳೂರು; ಭೂಗತ ಸುರಂಗ ಮಾರ್ಗದಲ್ಲಿ ರಿಯಾಯಿತಿ ಅವಧಿಯಲ್ಲಿ ಗರಿಷ್ಠ ಟೋಲ್‌ ಸಂಗ್ರಹಣೆ...

ಕೋವಿಡ್ ವೆಚ್ಚದಲ್ಲಿ ಅಕ್ರಮ ಆರೋಪ; ಐಎಎಸ್‌ ಗೌರವ್ ಗುಪ್ತಾ, ರಾಜೇಂದ್ರ ಚೋಳನ್ ಆರೋಪ ಮುಕ್ತ, ಕುನ್ಹಾ ವರದಿಗಿಲ್ಲ ಕಿಮ್ಮತ್ತು

ಬೆಂಗಳೂರು;  ಕೋವಿಡ್‌ 19ರ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೆಯೇ,...

ಶಿವಮೊಗ್ಗ ಜಿಲ್ಲೆಯಿಂದ ಅತೀ ಹೆಚ್ಚು, ಕಲ್ಬುರ್ಗಿ ಜಿಲ್ಲೆಯಿಂದ ಅತೀ ಕಡಿಮೆ ಅನುದಾನಕ್ಕೆ ಬೇಡಿಕೆ; ಜಿಲ್ಲಾಡಳಿತ ನಿಷ್ಕ್ರೀಯವಾಯಿತೇ?

ಬೆಂಗಳೂರು;  ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿಯ ಅನುದಾನ ಬೇಡಿಕೆ ಮುಂದಿರಿಸಿರುವ ಇಲಾಖೆಗಳ ...

ಅದಾನಿ ಎಸಿಸಿ ಸಮೂಹಕ್ಕೆ ವಿಧಿಸಿದ್ದ 482.69 ಕೋಟಿ ರು ದಂಡದ ಬೇಡಿಕೆ ರದ್ದು; ರಾಜ್ಯದ ಅರ್ಜಿಯೂ ವಜಾ, ಪರಿಣಾಮಕಾರಿಯಾಗಿ ವಾದ ಮಂಡಿಸುವಲ್ಲಿ ವಿಫಲವಾಯಿತೇ ರಾಜ್ಯ?

ಬೆಂಗಳೂರು; ಕಲಬುರಗಿ ಜಿಲ್ಲೆಯ ಇಂಗಳಗಿ ಮತ್ತು ರಾವೂರ್ ಗ್ರಾಮಗಳಲ್ಲಿ ಗಣಿಗಾರಿಕೆ ನಡೆಸುತ್ತಿದ್ದ...
Please Scan to make Your Contribution

Topics

ಭೂಗತ ಸುರಂಗ ಮಾರ್ಗ; ರಿಯಾಯಿತಿ ಅವಧಿಯಲ್ಲೇ ಗರಿಷ್ಠ ಟೋಲ್‌ ಸಂಗ್ರಹಣೆ, ದರ ಪರಿಷ್ಕರಣೆಯ ಹಿಂದಿನ ರಹಸ್ಯ ಬಯಲು

ಬೆಂಗಳೂರು; ಭೂಗತ ಸುರಂಗ ಮಾರ್ಗದಲ್ಲಿ ರಿಯಾಯಿತಿ ಅವಧಿಯಲ್ಲಿ ಗರಿಷ್ಠ ಟೋಲ್‌ ಸಂಗ್ರಹಣೆ...

ಕೋವಿಡ್ ವೆಚ್ಚದಲ್ಲಿ ಅಕ್ರಮ ಆರೋಪ; ಐಎಎಸ್‌ ಗೌರವ್ ಗುಪ್ತಾ, ರಾಜೇಂದ್ರ ಚೋಳನ್ ಆರೋಪ ಮುಕ್ತ, ಕುನ್ಹಾ ವರದಿಗಿಲ್ಲ ಕಿಮ್ಮತ್ತು

ಬೆಂಗಳೂರು;  ಕೋವಿಡ್‌ 19ರ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೆಯೇ,...

ಶಿವಮೊಗ್ಗ ಜಿಲ್ಲೆಯಿಂದ ಅತೀ ಹೆಚ್ಚು, ಕಲ್ಬುರ್ಗಿ ಜಿಲ್ಲೆಯಿಂದ ಅತೀ ಕಡಿಮೆ ಅನುದಾನಕ್ಕೆ ಬೇಡಿಕೆ; ಜಿಲ್ಲಾಡಳಿತ ನಿಷ್ಕ್ರೀಯವಾಯಿತೇ?

ಬೆಂಗಳೂರು;  ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿಯ ಅನುದಾನ ಬೇಡಿಕೆ ಮುಂದಿರಿಸಿರುವ ಇಲಾಖೆಗಳ ...

ಪೆರಿಫೆರಲ್ ರಿಂಗ್‌ ರೋಡ್‌- 2; 4,500 ಕೋಟಿ ಭೂ ಪರಿಹಾರ, 15,450 ಕೋಟಿ ಅಂದಾಜು ವೆಚ್ಚ, ಸರ್ಕಾರಕ್ಕೆ ಪರಿಷ್ಕೃತ ಯೋಜನೆ ಸಲ್ಲಿಕೆ

ಬೆಂಗಳೂರು; ರೈತರು ಮತ್ತು  ಸ್ಥಳೀಯರ ವಿರೋಧದ ನಡುವೆಯೂ ಫೆರಿಫೆರಲ್ ರಿಂಗ್‌ ರಸ್ತೆ (ಭಾಗ...

Related Articles

Popular Categories

error: Content is protected !!