Saturday | May 2, 2026 |

2 ವರ್ಷದಲ್ಲೇ 736 ಭ್ರಷ್ಟಾಚಾರ ಪ್ರಕರಣ; ಸಿಎಂ ಒದಗಿಸಿದ ಪಟ್ಟಿಯಲ್ಲಿವೆ ಬಿಎಸ್‌ವೈ ಸೇರಿ ಹಲವರ ಹೆಸರು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕೆ ಬೇಡಿಕೆ ಸೇರಿದಂತೆ ಭ್ರಷ್ಟಾಚಾರದ ಆರೋಪಗಳಡಿಯಲ್ಲಿ ಹಿಂದಿನ ಭ್ರಷ್ಟಾಚಾರ ನಿಗ್ರಹ ದಳ ಮತ್ತು ಲೋಕಾಯುಕ್ತದಲ್ಲಿ ಕಳೆದ 7 ವರ್ಷದಲ್ಲಿ ಒಟ್ಟಾರೆ 2, 248 ಪ್ರಕರಣಗಳು ದಾಖಲಾಗಿವೆ.

 

ವಿಧಾನಪರಿಷತ್‌ ಸದಸ್ಯ  ಶಶಿಲ್‌ ನಮೋಶಿ ಅವರು ಕೇಳಿದ್ದ ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 334 ಪುಟಗಳ ಮಾಹಿತಿಯನ್ನು ಒದಗಿಸಿದ್ದಾರೆ. ಈ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ, ಬಿ ವೈ ವಿಜಯೇಂದ್ರ, ಎಸ್‌ ಟಿ ಸೋಮಶೇಖರ್‌, ಆರ್‌ ಅಶೋಕ್‌, ಬಿ ಝಡ್‌ ಜಮೀರ್‌ ಅಹ್ಮದ್‌ ಖಾನ್‌ ಪ್ರಕರಣಗಳೂ ಇವೆ.

 

ಗುತ್ತಿಗೆದಾರರಿಂದ ಶೇ.40 ಕಮಿಷನ್‌ಗೆ ಬೇಡಿಕೆ ಇರಿಸಿದ್ದ ಆರೋಪಗಳೂ ಸೇರಿದಂತೆ ಭ್ರಷ್ಟಾಚಾರದ ಆರೋಪಗಳ ಸುಳಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರವು ಸಿಲುಕಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒದಗಿಸಿರುವ ಭ್ರಷ್ಟ ಅಧಿಕಾರಿಗಳು ಮತ್ತು ಭ್ರಷ್ಟ ರಾಜಕಾರಣಿಗಳ ಪಟ್ಟಿಯು ಮುನ್ನೆಲೆಗೆ ಬಂದಿದೆ.

 

2016-17ರಿಂದ 2018ರವರೆಗೆ ಅಧಿಕಾರ ನಡೆಸಿದ್ದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ 841 ಪ್ರಕರಣಗಳು ದಾಖಲಾಗಿದ್ದರೆ, 2019ರಿಂದ 2022ರವರೆಗೆ ಒಟ್ಟು 1,407 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಕಳೆದ 2 ವರ್ಷವೊಂದರಲ್ಲೇ 736 ಪ್ರಕರಣಗಳು ದಾಖಲಾಗಿರುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒದಗಿಸಿರುವ ಪಟ್ಟಿಯಿಂದ ತಿಳಿದು ಬಂದಿದೆ.

 

ಕಾಂಗ್ರೆಸ್‌ ಸರ್ಕಾರದ ಅವಧಿಯ 2016-17ರಿಂದ 2018ರವರೆಗೆ 841 ಪ್ರಕರಣಗಳು ದಾಖಲಾಗಿವೆ. 2019ರಿಂದ 2022ರವರೆಗೆ ಒಟ್ಟು 1,407 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಕಳೆದ 2 ವರ್ಷದಲ್ಲೇ 736 ಪ್ರಕರಣಗಳಿವೆ. 2016ರಲ್ಲಿ 178, 2017ರಲ್ಲಿ 288, 2018ರಲ್ಲಿ 375, 2019ರಲ್ಲಿ 376, 2020ರಲ್ಲಿ 295, 2021ರಲ್ಲಿ 371, 2022ರಲ್ಲಿ 365 ಪ್ರಕರಣಗಳು ದಾಖಲಾಗಿವೆ.

 

2,248 ಪ್ರಕರಣಗಳಲ್ಲಿ ಪಿಡಬ್ಲ್ಯೂಡಿ ಇಂಜಿನಿಯರ್‌ಗಳು, ಗುಮಾಸ್ತರು, ಪಿಡಿಓಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು, ಶಿರಸ್ತೆದಾರ್‌ಗಳು, ಆರ್‌ಟಿಓ ಅಧಿಕಾರಿಗಳು, ದ್ವಿತೀಯ ದರ್ಜೆ ಗುಮಾಸ್ತರುಗಳು, ಶಿಕ್ಷಣಾಧಿಕಾರಿಗಳು, ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಸದಸ್ಯರು, ಪೊಲೀಸ್‌ ಇನ್ಸ್‌ಪೆಕ್ಟರ್‌ಗಳು, ಬಿಬಿಎಂಪಿ ಇಂಜನಿಯರ್‌ಗಳು, ಅಧಿಕಾರಿಗಳು, ಅಬಕಾರಿ ಇನ್ಸ್‌ಪೆಕ್ಟರ್‌ಗಳು, ಕಾರ್ಮಿಕ ಅಧಿಕಾರಿಗಳು, ಪುರಸಭೆ ಮುಖ್ಯಾಧಿಕಾರಿಗಳು ಸೇರಿದಂತೆ ಕೆಳ ಹಂತದ ಅಧಿಕಾರಿಗಳ ಮೇಲಷ್ಟೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿರುವುದು ಪಟ್ಟಿಯಿಂದ ಗೊತ್ತಾಗಿದೆ.

 

ಬಿ ಎಸ್‌ ಯಡಿಯೂರಪ್ಪ (ಖಾಸಗಿ ಮೊಕದ್ದಮೆ ದಾಖಲಾಗಿದ್ದ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿಯಾಗಿದ್ದರು 2017) ಸಚಿವ ವಿ ಸೋಮಣ್ಣ (ದಾಳಿ ವೇಳೆಯಲ್ಲಿ ವಿಧಾನಪರಿಷತ್‌ ಸದಸ್ಯರಾಗಿದ್ದರು), ಸಿ ಟಿ ರವಿ, (ಖಾಸಗಿ ಮೊಕದ್ದಮೆ), ಆರ್‌ ಅಶೋಕ್‌ (2018- ಉತ್ತರಹಳ್ಳಿ ಶಾಸಕ ಟ್ರ್ಯಾಪ್‌) ಬಿ ಝಡ್‌ ಜಮೀರ್‌ ಅಹ್ಮದ್‌ ಖಾನ್‌ , ಬಿ ಎಸ್‌ ಯಡಿಯೂರಪ್ಪ, ಬಿ ವೈ ವಿಜಯೇಂದ್ರ, ಶಶಿಧರ ಮರಡಿ, ಡಾ ಜಿ ಸಿ ಪ್ರಕಾಶ್‌, ಎಸ್‌ ಟಿ ಸೋಮಶೇಖರ್‌ ವಿರುದ್ಧದ ಪ್ರಕರಣಗಳಿವೆ ಎಂಬ ವಿವರಗಳು ಪಟ್ಟಿಯಲ್ಲಿವೆ.

Hot this week

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

Topics

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

Related Articles

Popular Categories

error: Content is protected !!