Wednesday | August 26, 2026 |

ಎನ್‌ಸಿಸಿ ಕಂಪನಿ ನಿರ್ಮಾಣದ ಬಿಮ್ಸ್‌ ಆಸ್ಪತ್ರೆ ಬೀಮ್‌ನಲ್ಲೂ ನೀರು ಸೋರಿಕೆ; ಆತಂಕದಲ್ಲಿ ರೋಗಿಗಳು

ಬೆಂಗಳೂರು; ಇಲ್ಲಿನ ಹೆಣ್ಣೂರು ಕ್ರಾಸ್ ಬಳಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ತಾಯಿ ಮಗುವನ್ನು ಬಲಿ ಪಡೆದುಕೊಂಡಿರುವ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಾಗಿರುವ ನಾಗಾರ್ಜುನ ಕನ್ಸ್‌ಟ್ರಕ್ಷನ್ಸ್‌ ಕಂಪನಿಯು ಬೀದರ್‌ನಲ್ಲಿನ ಬಿಮ್ಸ್‌ ಆಸ್ಪತ್ರೆಯಲ್ಲಿಯೂ ಕಳಪೆ ಕಾಮಗಾರಿ ಮಾಡಿರುವ ಪರಿಣಾಮ ಆಸ್ಪತ್ರೆಯ ಬೀಮ್‌ಗಳಲ್ಲಿ ನೀರು ಸೋರಿಕೆಯಾಗುತ್ತಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

 

‘ಆಸ್ಪತ್ರೆ ವಿಸ್ತರಣೆಗಾಗಿ ಅಳವಡಿಸಿರುವ ಬೀಮ್‌ಗಳಲ್ಲಿ ನೀರು ಸೋರಿಕೆಯಾಗುತ್ತಿದೆ. ಜಾಯಿಂಟ್‌ ಕೆಲಸಗಳು ಸರಿಯಾಗಿ ಆಗದೇ ಇರುವುದರಿಂದ ನೀರು ಸೋರಿಕೆಯಾಗುತ್ತಿದೆ. ಕಾಮಗಾರಿಯನ್ನು ಸಮರ್ಪಕವಾಗಿ ಮಾಡದೇ ಇರುವುದೇ ಇದಕ್ಕೆ ಕಾರಣ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ಸಲ್ಲಿಸಿರುವ ವರದಿಯು ಇದೀಗ ಮುನ್ನೆಲೆಗೆ ಬಂದಿದೆ.

 

ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರ ಮೇಲುಸ್ತುವಾರಿಯಲ್ಲಿ ಎನ್‌ಸಿಸಿ ಸಂಸ್ಥೆಯು ಕಾಮಗಾರಿ ಕೈಗೆತ್ತಿಕೊಂಡಿತ್ತು. ಈ ಕಂಪನಿಯು ಕೈಗೆತ್ತಿಕೊಂಡಿರುವ ಆಸ್ಪತ್ರೆಯ ಕಾಮಗಾರಿಯು ಕಳಪೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಕಾಮಗಾರಿ ಗುಣಮಟ್ಟದ ಕುರಿತು ವರದಿಯನ್ನು ಸಲ್ಲಿಸದ ಪಿಡಬ್ಲ್ಯೂಡಿ ಇಲಾಖೆಯ ಕಾರ್ಯಪಾಲಕ ಅಭಿಯಂತರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವರದಿಯಲ್ಲಿ ಶಿಫಾರಸ್ಸು ಮಾಡಿರುವುದು ವರದಿಯಿಂದ ಗೊತ್ತಾಗಿದೆ. ಆದರೆ ಇದುವರೆಗೂ ಸಚಿವ ಡಾ ಕೆ ಸುಧಾಕರ್‌ ಅವರು ಈ ಕುರಿತು ಯಾವುದೇ ಕ್ರಮಕೈಗೊಂಡಿಲ್ಲ ಎಂದು ತಿಳಿದು ಬಂದಿದೆ.

 

ವೈದ್ಯಕೀಯ ಶಿಕ್ಷಣ ಇಲಾಖೆ ಸಲ್ಲಿಸಿರುವ ವರದಿ ಪ್ರತಿ

 

‘ನಾಗಾರ್ಜುನ ಕನ್ಸ್‌ಟ್ರಕ್ಷನ್ಸ್‌ ಕಂಪನಿಯವರು ಎಲ್ಲಾ ಕಾಮಗಾರಿಗಳನ್ನು ಮುಗಿಸಿ 2020ನೇ ವರ್ಷದಲ್ಲಿ ಕಟ್ಟಡವನ್ನು ಆಸ್ಪತ್ರೆಗೆ ಹಸ್ತಾಂತರ ಮಾಡಿರುತ್ತಾರೆ. ಕಾಮಗಾರಿಗೆ ನಿಗದಿಪಡಿಸಿದ್ದ ಅನುದಾನದಲ್ಲಿ 105 ಕೋಟಿ ರುಗಳನ್ನು ಸಂಸ್ಥೆಗೆ ಪಾವತಿಸಲಾಗಿದೆ. ಬಾಕಿ ಪಾವತಿಸಬೇಕಾಗಿರುವ ಅನುದಾನವನ್ನು ಬಿಡುಗಡೆ ಮಾಡಿಲ್ಲ,’ ಎಂಬುದು ವರದಿಯಿಂದ ಗೊತ್ತಾಗಿದೆ.

 

ಬಿಮ್ಸ್‌ ಆಸ್ಪತ್ರೆ ಕಟ್ಟಡ ಕಾಮಗಾರಿಯೂ ಸೇರಿದಂತೆ ಇಲ್ಲಿನ ಅವ್ಯವಸ್ಥೆಗಳ ಕುರಿತು ಶಾಸಕ ಹಾಗೂ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಸದಸ್ಯರೂ ಆಗಿರುವ ಈಶ್ವರ್ ಬಿ ಖಂಡ್ರೆ ಅವರು ಹಲವು ದೂರುಗಳನ್ನು ಸಮಿತಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇವರ ನೇತೃತ್ವದಲ್ಲಿ 2022ರ ನವೆಂಬರ್‌ 9ರಂದು ಆಸ್ಪತ್ರೆಯ ಕಾಮಗಾರಿ ಮತ್ತು ವ್ಯವಸ್ಥೆಗಳನ್ನು ಪರಿವೀಕ್ಷಣೆ ನಡೆಸಲಾಗಿತ್ತು. ಪರಿವೀಕ್ಷಣೆ ವೇಳೆಯಲ್ಲಿ ಆಸ್ಪತ್ರೆ ಕಾಮಗಾರಿಯಲ್ಲಿನ ಹಲವು ಲೋಪಗಳು ಬೆಳಕಿಗೆ ಬಂದಿದ್ದವು. ಇದನ್ನಾಧರಿಸಿ ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು ಎಂಬುದು ಗೊತ್ತಾಗಿದೆ.

 

ಸಿಬ್ಬಂದಿಗಳ ವಾಹನ ನಿಲುಗಡೆಗಾಗಿ ಮೀಸಲಿಟ್ಟಿರುವ ಆಸ್ಪತ್ರೆಯ ನೆಲಮಹಡಿಯಲ್ಲಿ ನೀರು ಸೋರಿಕೆಯಾಗುತ್ತಿರುವುದು, ಅಗ್ನಿಶಾಮಕ ಇಲಾಖೆಯವರು ವಿಧಿಸಿರುವ ದಂಡದ ಮೊತ್ತನ್ನು ಪಾವತಿಸಲು ವಿಫಲವಾಗಿರುವುದು, ಇಂಟರ್‌ನೆಟ್‌ ಸೇವೆ ಅಸಮರ್ಪಕವಾಗಿರುವುದು, ಆಸ್ಪತ್ರೆಯಲ್ಲಿ ಕ್ಯಾಥ್ ಲ್ಯಾಬ್‌ ಪ್ರಾರಂಭಿಸದೇ ಇರುವುದು, ಆಸ್ಪತ್ರೆಯ ಸಿವಿಲ್‌ ಕಾಮಗಾರಿಗಳಲ್ಲಿ ಆಗಿರುವ ಲೋಪಗಳ ಕುರಿತು ಕ್ರಮಕೈಗೊಳ್ಳದಿರುವುದು, ಆಸ್ಪತ್ರೆಗೆ ಲೆಕ್ಕಾಧಿಕಾರಿ, ಆರ್ಥಿಕ ಸಲಹೆಗಾರರನ್ನು ನೇಮಿಸದಿರುವುದು ಸೇರಿದಂತೆ ಹಲವು ಲೋಪಗಳನ್ನು ಪರಿವೀಕ್ಷಣೆ ವೇಳೆಯಲ್ಲಿ ಪತ್ತೆ ಹಚ್ಚಿದೆ.

 

ಮೆಟ್ರೋ ಪಿಲ್ಲರ್‌ ಕುಸಿದು ಬಿದ್ದು ತಾಯಿ ಮತ್ತು ಮಗು ಬಲಿ ಪಡೆದುಕೊಂಡಿರುವ ಪ್ರಕರಣದಲ್ಲಿ ನಾಗಾರ್ಜುನ ಕಂಪನಿ ಮತ್ತು ಅದರ ನಿರ್ದೇಶಕ ಚೈತನ್ಯ, ಜೂನಿಯರ್ ಎಂಜಿನಿಯರ್ ಪ್ರಭಾಕರ್, ಮೇಲ್ವಿಚಾರಣಾ ಪ್ರಾಜೆಕ್ಟ್ ಮ್ಯಾನೇಜರ್ ಮಥಾಯ್, ಯೋಜನಾ ವ್ಯವಸ್ಥಾಪಕ ವಿಕಾಸ್ ಸಿಂಗ್, ಮೇಲ್ವಿಚಾರಕ ಲಕ್ಷ್ಮೀಪತಿ ಹಾಗೂ ಬಿಎಂಆರ್‌ಸಿಎಲ್ ಉಪ ಮುಖ್ಯ ಎಂಜಿನಿಯರ್ ವೆಂಕಟೇಶ್ ಶೆಟ್ಟಿ, ಕಾರ್ಯನಿರ್ವಾಹಕ ಎಂಜಿನಿಯರ್ ಮಹೇಶ್ ಬೆಂಡೆಕರಿ ಮತ್ತು ಜೂನಿಯರ್ ಎಂಜಿನಿಯರ್ ಜಾಫರ್ ಸಾದಿಕ್ ಹೆಸರನ್ನು ಎಫ್ಐಆರ್ ನಲ್ಲಿ ದಾಖಲಿಸಿರುವುದನ್ನು ಸ್ಮರಿಸಬಹುದು.

Hot this week

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...
Please Scan to make Your Contribution

Topics

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

Related Articles

Popular Categories

error: Content is protected !!