Thursday | August 27, 2026 |

ನಾರಾಯಣಪುರ ಎಡದಂಡೆ ಕಾಲುವೆ; ನಿಯಮ ಉಲ್ಲಂಘಿಸಿ 465 ಕೋಟಿ ಮೊತ್ತದ ಕಾಮಗಾರಿ ಗುತ್ತಿಗೆ

ಬೆಂಗಳೂರು; ನಾರಾಯಣಪುರ ಎಡದಂಡೆ ಕಾಲುವೆಯ ಆಧುನೀಕರಣ, ವಿಸ್ತರಣೆ, ನವೀಕರಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅಂದಾಜಿಸಿದ್ದ ಯೋಜನಾ ಮೊತ್ತವನ್ನು ಸರ್ಕಾರದ ಅನುಮೋದನೆ ಪಡೆಯದೇ ಮತ್ತು ನಿಯಮ ಉಲ್ಲಂಘಿಸಿ  465 ಕೋಟಿ ರು. ಮೊತ್ತದ ಕಾಮಗಾರಿಗಳಿಗೆ ಗುತ್ತಿಗೆ ನೀಡಿರುವ ಪ್ರಕರಣವನ್ನು ‘ದಿ ಫೈಲ್‌’ ಇದೀಗ ಹೊರಗೆಡವುತ್ತಿದೆ.

 

ನಾರಾಯಣಪುರ ಎಡದಂಡೆ ಕಾಲುವೆಯ ನೀರಿನ ಬಳಕೆಯಲ್ಲಿ ದಕ್ಷತೆ ಹೆಚ್ಚಿಸುವ ಉದ್ದೇಶದಿಂದ ಕಾಲುವೆ ವಿಸ್ತರಣೆ, ನವೀಕರಣ ಮತ್ತು ಆಧುನೀಕರಣದ ಪ್ರಸ್ತಾವನೆ, ಅಂದಾಜು ಮೊತ್ತವನ್ನು ಎರಡೆರಡು ಬಾರಿ ಪರಿಷ್ಕರಿಸಿರುವ ಕೃಷ್ಣಾ ಭಾಗ್ಯ ಜಲನಿಗಮದ ಅಧಿಕಾರಿಗಳು ಬಹುದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

 

ಹಾಗೆಯೇ ನೀರಾವರಿ ಯೋಜನೆಗಳ ಕಾಮಗಾರಿ ನಡೆಸಿರುವ ಗುತ್ತಿಗೆದಾರರಿಂದ ಶೇ.40ರಷ್ಟು ಕಮಿಷನ್‌ ವ್ಯವಹಾರ ನಡೆದಿದೆ ಎಂಬ ಗುರುತರವಾದ ಆರೋಪಗಳು ಸರ್ಕಾರದ ವಿರುದ್ಧ ಕೇಳಿ ಬಂದಿರುವ ನಡುವೆಯೇ ನಿಯಮಗಳ ಉಲ್ಲಂಘಿಸಿ 465 ಕೋಟಿ ರು. ಮೊತ್ತದ ಕಾಮಗಾರಿಗಳನ್ನು ಗುತ್ತಿಗೆ ನೀಡಿರುವ ಈ ಪ್ರಕರಣವು ಹೆಚ್ಚು ಮಹತ್ವ ಪಡೆದುಕೊಂಡಿದೆ.

 

ಈ ಕುರಿತು ‘ದಿ ಫೈಲ್‌’ 500 ಕ್ಕೂ ಹೆಚ್ಚು ಪುಟಗಳನ್ನೊಳಗೊಂಡಿರುವ ಸಮಗ್ರ ಕಡತವನ್ನು ಆರ್‌ಟಿಐ ಅಡಿಯಲ್ಲಿ ಪಡೆದುಕೊಂಡಿದೆ.

 

ಅಲ್ಲದೆ ಜಲಸಂಪನ್ಮೂಲ ಇಲಾಖೆ ಮತ್ತು ಇದರ ಅಡಿಯಲ್ಲಿ ಬರುವ ಕೃಷ್ಣಭಾಗ್ಯ ಜಲನಿಗಮದ ಅಧಿಕಾರಿಗಳು ಸರ್ಕಾರವನ್ನೂ ಕತ್ತಲಲ್ಲಿಟ್ಟು ನೂರಾರು ಕೋಟಿ ರು. ಮೊತ್ತದ ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವುದು ಕೂಡ ಬಹಿರಂಗವಾಗಿದೆ. ಆದರೂ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಈ ಪ್ರಕರಣದತ್ತ ಗಮನಹರಿಸಿಲ್ಲ ಎಂದು ತಿಳಿದು ಬಂದಿದೆ.

 

ಎನ್‌ಆರ್‌ಬಿಸಿ ಎಡದಂಡೆ ಕಾಲುವೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಪರಿಷ್ಕೃತ ಮೊತ್ತಕ್ಕೆ ಅನುಮೋದನೆ ಕೋರುವ ಸಂಬಂಧ ಜಲಸಂಪನ್ಮೂಲ ಇಲಾಖೆಯು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಪರಿಶೀಲಿಸಿರುವ ಅರ್ಥಿಕ ಇಲಾಖೆಯು, ಈ ಪ್ರಕ್ರಿಯೆಯಲ್ಲಿ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಅಭಿಪ್ರಾಯಪಟ್ಟಿರುವುದು ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳಿಗೆ ಹೆಚ್ಚಿನ ಬಲ ತಂದುಕೊಟ್ಟಿದೆ.

 

ಆರ್ಥಿಕ ಇಲಾಖೆ ನೀಡಿರುವ ಅಭಿಪ್ರಾಯದಲ್ಲೇನಿದೆ?

 

‘ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. (ಸಂ;ಆಇ 258 ಆಕೋ-1/2022, WRD 94 KBN 2021 DATED 13-09-2022) ಅಡಳಿತ ಇಲಾಖೆಯು ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೇ, ಅರ್ಥಿಕ ಇಲಾಖೆಯ ಗಮನಕ್ಕೂ ತರದೇ ರೂ 465.00 ಕೋಟಿ ರು.ಗಳ ಕಾಮಗಾರಿಗಳಿಗೆ ಗುತ್ತಿಗೆ ನೀಡಿ ಕೈಗೆತ್ತಿಕೊಂಡಿರುವುದು ನಿಯಮಗಳ ಉಲ್ಲಂಘನೆಯಾಗಿದ್ದು ಈ ಸಂಬಂಧ ಸದರಿ ಪ್ರಕ್ರಿಯೆಯಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಹಾಗೂ ಸದರಿ ಪ್ರಸ್ತಾವನೆಗೆ ವೆಚ್ಚ ಭರಿಸಲು ಇಲಾಖೆಯಡಿ ಯಾವ non-grounded ಕಾಮಗಾರಿಗಳನ್ನು ಕಡಿತಗೊಳಿಸಲಾಗುವುದು ಎಂಬ ಬಗ್ಗೆ ಮಾಹಿತಿ ನೀಡಬೇಕು,’ ಎಂದು ಅರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ ಗಾಯಿತ್ರಿ ಅವರು 2022ರ ಸೆಪ್ಟಂಬರ್‌ 13ರಂದು ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

 

ಅರ್ಥಿಕ ಇಲಾಖೆಯು ಬರೆದಿರುವ ಪತ್ರದ ಪ್ರತಿ

 

ಜಲಸಂಪನ್ಮೂಲ ಇಲಾಖೆಯ ಪ್ರಸ್ತಾವನೆಯಲ್ಲೇನಿತ್ತು?

 

ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆ, ಹುಣಸಗಿ ಶಾಖಾ ಕಾಲುವೆ, ಶಹಾಪೂರ ಶಾಖಾ ಕಾಲುವೆ, ಮುಡಬಾಳ ಶಾಖಾ ಕಾಲುವೆ, ಜೇವರ್ಗಿ ಶಾಖಾ ಕಾಲುವೆ ಹಾಗೂ ಇಂಡಿ ಶಾಖಾ ಕಾಲುವೆಯ 0.00 ಕಿ ಮೀ ನಿಂದ 64.00 ಕಿ ಮೀವರೆಗೆ ಹಾಗೂ ಈ ಶಾಖಾ ಕಾಲುವೆಗಳ ಅಡಿ ಬರುವ ಡಿಸ್ಟ್ರಿಬ್ಯೂಟರಿ ಹಾಗೂ ಲ್ಯಾಟರಲ್/ಡಿಪಿಒಗಳಿಗೆ ಮಾತ್ರ ಸ್ಕಾಡಾ ಒಂದನೇ ಹಂತದ ಹಾಗೂ ಎರಡನೇ ಹಂತದ ಸ್ವಯಂಚಾಲಿತ ಸ್ಕಾಡಾ ಗೇಟುಗಳ ಅಳವಡಿಕೆಗೆ ಮಾತ್ರ ಪರಿಗಣಿಸಲಾಗಿದೆ.

 

ಹಾಗೆಯೇ ಇಂಡಿ ಶಾಖಾ ಕಾಲುವೆಯ 64.00 ಕಿ ಮೀನಿಂದ 172.00 ಕಿ ಮೀವರೆಗೆ ಹಾಗೂ ಅದರಡಿ ಬರುವ ಡಿಸ್ಟ್ರಿಬ್ಯೂಟರಿ ಹಾಗೂ ಲ್ಯಾಟರಲ್‌ /ಡಿಪಿಒಗಳಿಗೆ ಸ್ವಯಂ ಚಾಲಿತ ಸ್ಕಾಡಾ ಗೇಟುಗಳ ಅಳವಡಿಕೆಯು ಪರಿಗಣಿಸಲಾಗಿರುವುದಿಲ್ಲ. ಸ್ಕಾಡಾ ಎರಡನೇ ಹಂತದ ಅಂದಾಜು ಪಟ್ಟಿಗೆ ಅನುಮೋದನೆ ಪಡೆಯುವ ಸಮಯದಲ್ಲಿ ಇಂಡಿ ಶಾಖಾ ಕಾಲುವೆಯ 64.000 ಕಿ ಮೀನಿಂದ 172.00 ಕಿ ಮೀವರೆಗೆ ಹಾಗೂ ಅದರಡಿ ಬರುವ ಡಿಸ್ಟ್ರಿಬ್ಯೂಟರಿ ಹಾಗೂ ಲ್ಯಾಟರಲ್‌ /ಡಿಪಿಒಗಳಿಗೆ ಸ್ವಯಂಚಾಲಿತ ಸ್ಕಾಡಾ ಅಳವಡಿಕೆಯನ್ನು ಪರಿಗಣಿಸಲಾಗಿದೆ.

 

ಇದರಿಂದ ನಾರಾಯಣಪುರ ಎಡದಂಡೆ ಕಾಲುವೆಯ ಇಆರ್‌ಎಂ ಕಾಮಗಾರಿಯ ಅಂದಾಜು ಮೊತ್ತದಲ್ಲಿ 465.02 ಕೋಟಿ ರು. ಹೆಚ್ಚುವರಿಯಾಗಿದ್ದು ಮೂಲ ಅಂದಾಜು ಪಟ್ಟಿ ತಯಾರಿಕೆಯಲ್ಲಿ ಯಾವುದೇ ಲೋಪದೋಷವಾಗಿರುವುದಿಲ್ಲ ಎಂದು ಜಲಸಂಪನ್ಮೂಲ ಇಲಾಖೆಯು ಸಮಜಾಯಿಷಿ ನೀಡಿರುವುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

 

ಆದರೆ ಅರ್ಥಿಕ ಇಲಾಖೆಯು ಈ ಸಮಜಾಯಿಷಿಯನ್ನು ಒಪ್ಪಿಲ್ಲ. ಬದಲಿಗೆ 465 ಕೋಟಿ ಹೆಚ್ಚುವರಿ ಮೊತ್ತಕ್ಕೆ ಸರ್ಕಾರದ ಅನುಮೋದನೆ ಪಡೆಯದೇ ಗುತ್ತಿಗೆ ನೀಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ಪ್ರಕ್ರಿಯೆಯಲ್ಲಿ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಅಭಿಪ್ರಾಯ ನೀಡಿರುವುದು ಈ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದಕ್ಕೆ ಸಾಕ್ಷ್ಯವನ್ನು ಒದಗಿಸಿದಂತಾಗಿದೆ.

Hot this week

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...
Please Scan to make Your Contribution

Topics

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

Related Articles

Popular Categories

error: Content is protected !!