Saturday | May 9, 2026 |

ನಾರಾಯಣಪುರ ಎಡದಂಡೆ ಯೋಜನಾ ವೆಚ್ಚ; 2 ಬಾರಿ ಪರಿಷ್ಕರಣೆ, ದೋಷಪೂರಿತ ಅಂದಾಜು

ಬೆಂಗಳೂರು; ನಾರಾಯಣಪುರ ಎಡದಂಡೆ ನಾಲೆ ಯೋಜನೆಯಡಿ ಕಾಲುವೆಗಳ ಆಧುನೀಕರಣ, ವಿಸ್ತರಣೆ, ನವೀಕರಣಕ್ಕೆ ಸಂಬಂಧಿಸಿದಂತೆ ಅಂದಾಜು ವೆಚ್ಚವನ್ನು ಎರಡು ಬಾರಿ ಪರಿಷ್ಕರಿಸಿದ್ದ ಕೃಷ್ಣಭಾಗ್ಯ ಜಲನಿಗಮವು ದೋಷಪೂರಿತ ಅಥವಾ ತಪ್ಪು ಅಂದಾಜನ್ನು ಜಲಸಂಪನ್ಮೂಲ ಇಲಾಖೆಗೆ ಸಲ್ಲಿಸಿತ್ತು.

 

ಈ ಯೋಜನೆಗೆ 2012ರಲ್ಲೇ ಆಡಳಿತಾತ್ಮಕ ಅನುಮೋದನೆ ದೊರೆತ ನಂತರವೂ ಕಾಮಗಾರಿಗೆ ವೇಗ ಸಿಗದ ಕಾರಣ ಅಂದಾಜು ವೆಚ್ಚದಲ್ಲಿ ಏರಿಕೆಯಾಗಿತ್ತು. ಯೋಜನೆಯ ಅಂದಾಜು ವೆಚ್ಚವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಿದ್ದ ನಿಗಮವು ಎರಡನೇ ಬಾರಿಯೂ ಪರಿಷ್ಕೃತಗೊಳಿಸಲು 2022ರ ಜನವರಿ 19ರಂದು ಸಲ್ಲಿಸಿದ್ದ ಪ್ರಸ್ತಾವನೆಗೆ ಜಲಸಂಪನ್ಮೂಲ ಇಲಾಖೆಯು ಆಕ್ಷೇಪಗಳನ್ನು ಎತ್ತಿತ್ತು. ಆದರೂ ಸಚಿವ ಗೋವಿಂದ ಕಾರಜೋಳ ಅವರು ಈ ಕುರಿತು ಕ್ರಮವಹಿಸಲಿಲ್ಲ ಎಂದು ಗೊತ್ತಾಗಿದೆ.

 

ಈ ಕುರಿತು ‘ದಿ ಫೈಲ್‌’ 500ಕ್ಕೂ ಹೆಚ್ಚು ಪುಟಗಳನ್ನೊಳಗೊಂಡಿರುವ ಸಮಗ್ರ ಕಡತವನ್ನು ಆರ್‌ಟಿಐ ಅಡಿಯಲ್ಲಿ ಪಡೆದುಕೊಂಡಿದೆ.

 

ಜಲಸಂಪನ್ಮೂಲ ಇಲಾಖೆ ಪತ್ರದಲ್ಲೇನಿದೆ?

 

2015ರ ಡಿಸೆಂಬರ್‌ 3ರಂದು 4,233.98 ಕೋಟಿ ರು. ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಇದರಲ್ಲಿ ರಾಜ್ಯದ ಪಾಲು 2,988.35 ಕೋಟಿ ರು., ಹಾಗೂ ಕೇಂದ್ರದ ಪಾಲು 1,245.63 ಕೋಟಿ ಗಳಾಗಿವೆ. ಈ ಯೋಜನೆಗೆ ಈವರೆಗೆ ಭರಿಸಿದ ವೆಚ್ಚವೆಷ್ಟು, ಇದರಲ್ಲಿ ರಾಜ್ಯದ ಪಾಲು ಮತ್ತು ಕೇಂದ್ರದ ಪಾಲಿನ ವೆಚ್ಚವೆಷ್ಟು, ಪರಿಷ್ಕೃತ ಅಂದಾಜು ಮೊತ್ತ 4,699.00 ಕೋಟಿಗಳನ್ನು ಅನುಮೋದಿತ ಅಂದಾಜು ಮೊತ್ತ 4,233.98 ಕೋಟಿಗಳಿಗೆ ಹೋಲಿಸಿದಾಗ 465.02 ಕೋಟಿ ಹೆಚ್ಚಳವಾಗಿರುತ್ತದೆ.

 

ಇದರಲ್ಲಿ ರಾಜ್ಯದ ಪಾಲು ಮತ್ತು ಕೇಂದ್ರದ ಪಾಲು ಎಷ್ಟು , ಈ ಯೋಜನೆಯನ್ನು ಈಗಾಗಲೇ ಒಂದು ಭಾರೀ ಪರಿಷ್ಕೃತಗೊಳಿಸಲಾಗಿರುತ್ತದೆ. ಈಗ ಮತ್ತೊಮ್ಮೆ ಪರಿಷ್ಕೃತಗೊಳಿಸುವುದು ದೋಷಪೂರಿತ ಅಥವಾ ತಪ್ಪಾದ ಅಂದಾಜು ತಯಾರಿಸಿದಂತೆ ಅಗುವುದಿಲ್ಲವೇ, ಇದಕ್ಕೆ ಕಾರಣಗಳೇನು ಎಂದು ಜಲಸಂಪನ್ಮೂಲ ಇಲಾಖೆಯು 2022ರ ಜನವರಿ 19ರಂದೇ ಕೃಷ್ಣಭಾಗ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿತ್ತು.

 

ಕೃಷ್ಣಭಾಗ್ಯ ಜಲನಿಗಮದ ಉತ್ತರವೇನು?

 

ಎನ್‌ಎಲ್‌ಬಿಸಿ-ಇಆರ್‌ಎಂ ಯೋಜನೆಯಡಿ ಈಗಾಗಲೇ ಕೈಗೆತ್ತಿಕೊಂಡಿರುವ ಸ್ಕಾಡಾ ಫೇಸ್‌-1 ಕಾಮಗಾರಿ ಪೂರ್ಣಗೊಳಿಸಿ ಅನುಷ್ಟಾನಗೊಳಿಸಲಾಘಿದೆ. ಈ ಮೊದಲು ಅನುಮೋದಿತ ಎನ್‌ಎಲ್‌ಬಿಸಿ-ಇಆರ್‌ಎಂ ಯೋಜನೆಯಡಿ ಇಂಡಿ ಶಾಖಾ ಕಾಲುವೆ 0.00ರಿಂದ 64.00 ವರೆಗಿನ ಕಾಲುವೆ ಜಾಲದ ಆಧುನೀಕರಣ ಮಾತ್ರ ಪರಿಗಣಿಸಲಾಗಿತ್ತು.

 

ಆದರೆ ಇಂಡಿ ಶಾಖಾ ಕಾಲುವೆ ಜಾಲದಡಿ ಸಮರ್ಪಕ ನೀರು ನಿರ್ವಹಣೆ ಮತ್ತು ನೀರು ಬಳಕೆ ಸಾಮರ್ಥ್ಯ ಅಭಿವೃದ್ಧಿಗೆ ಸಹಕಾರಿಯಾಗಲು ಸ್ಥಳೀಯ ಪ್ರತಿನಿಧಿಗಳು ಸಲ್ಲಿಸಿರುವ ಮನವಿಗಳು ಮತ್ತು ಸರ್ಕಾರದ ಮಟ್ಟದಲ್ಲಿ ಜರುಗಿದ್ದ ಪರಿಶೀಲನಾ ಸಭೆಗಳಲ್ಲಿ ಕಾಲುವೆ ಕಾಮಗಾರಿ 172.00 ಕಿ ಮೀ ವರೆಗೆ ವಿಸ್ತರಣೆಯಾಗಿತ್ತು.  ಇಆರ್‌ಎಂ ಯೋಜನೆಯ ಪರಿಷ್ಕೃತ ವಿವರವಾದ ಯೋಜನೆ ವರದಿ ಅಂದಾಜು 4,699.00 ಕೋಟಿ ಆಗಿದೆ ಎಂದು ಸ್ಪಷ್ಟನೆ ನೀಡಿತ್ತು ಎಂಬುದು ಪತ್ರದಿಂದ ಗೊತ್ತಾಗಿದೆ.

 

ಈ ಯೋಜನೆ ಅನುಷ್ಠಾನವನ್ನು 2015-16ರಲ್ಲಿ ಕೇಂದ್ರ ಸರ್ಕಾರದ ಎಐಬಿಪಿ ಮತ್ತು ಪಿಎಂಕೆಎಸ್‌ವೈ ಯೋಜನೆಯಡಿ ಪರಿಗಣಿಸಲಾಗಿರುತ್ತದೆ. ಹಾಗೂ ಈ ಯೋಜನೆಯನ್ನು ಕೇಂದ್ರ ಸಚಿವಾಲಯವು ಅಂತಿಮಗೊಳಿಸಿದ್ದ 99 ಆದ್ಯತೆ ಯೋಜನೆಯಡಿ ಪರಿಗಣಿಸಿದೆ.

 

ಈ ಯೋಜನೆಯ ಪರಿಷ್ಕೃತ ಮಾರ್ಗಸೂಚಿಗಳನ್ವಯ ಕೇಂದ್ರ ಸಹಾಯಧನವು 940.50 ಕೋಟಿ ಆಗಿದೆ. ಅಂದಾಜು ಪಟ್ಟಿ ತಯಾರಿಕೆಯಲ್ಲಿ ಯಾವುದೇ ಲೋಪದೋಷಗಳಾಗಿರುವುದಿಲ್ಲ. ಈ ಯೋಜನೆಯನ್ನು 2022ರ ಜೂನ್‌ ಅಂತ್ಯದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಎಂದು 2022ರ ಮೇ 12 ಮತ್ತು ಮೇ 17 ಮತ್ತು ಮೇ 30ರಂದು ವಿವರಣೆ ನೀಡಿತ್ತು.

Hot this week

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...
Please Scan to make Your Contribution

Topics

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

Related Articles

Popular Categories

error: Content is protected !!