Wednesday | August 19, 2026 |

ಹಣ, ಅಶ್ಲೀಲ ಸುದ್ದಿಗಳ ಜಾಲತಾಣ; 3 ವರ್ಷದಲ್ಲಿ 32,746 ಪ್ರಕರಣ, 11,125 ಸೈಬರ್‌ ಅಪರಾಧ ಮೊಕದ್ದಮೆ ದಾಖಲು

ಬೆಂಗಳೂರು; ಹಣ, ಅಶ್ಲೀಲ ಮತ್ತಿತರ ವಿಷಯಗಳ ಜಾಲತಾಣಗಳ ಕುರಿತಂತೆ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 32,746 ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಇದೇ ಅವಧಿಯಲ್ಲಿ 11,125 ಪ್ರಕರಣಗಳು ಸೈಬರ್‌ ಅಪರಾಧದಡಿಯಲ್ಲಿ ದಾಖಲಾಗಿವೆ ಎಂಬ ಅಂಕಿ ಅಂಶಗಳನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬಹಿರಂಗಪಡಿಸಿದ್ದಾರೆ.

 

ಕೋವಿಡ್‌ ಮೊದಲ ಅವಧಿಯಲ್ಲಿ 3,501 ಸೈಬರ್‌ ಅಪರಾಧಗಳಿದ್ದರೆ ಹಣ, ಅಶ್ಲೀಲ ಮತ್ತಿತರರ ವಿಷಯಗಳ ಜಾಲತಾಣಗಳ ಕುರಿತಂತೆ ಒಟ್ಟು 10,738 ಪ್ರಕರಣಗಳು ದಾಖಲಾಗಿವೆ ಎಂಬ ಮಾಹಿತಿ ಒದಗಿಸಿದ್ದಾರೆ.
ವಿಧಾನಪರಿಷತ್‌ ಸದಸ್ಯ ಡಾ ಚಂದ್ರಶೇಖರ್‌ ಬ ಪಾಟೀಲ್‌ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸೈಬರ್‌ ಅಪರಾಧಗಳಲ್ಲಿ ಭಾಗಿಯಾಗಿರುವ ಆರೋಪಿಗಳ ಹೆಸರುಗಳನ್ನು ಬಹಿರಂಗಪಡಿಸಿಲ್ಲ.

 

ಸೈಬರ್‌ ಅಪರಾಧಿಗಳಡಿಯಲ್ಲಿ ದಾಖಲಾಗಿರುವ 37,746 ಪ್ರಕರಣಗಳಲ್ಲಿನ ಕೇವಲ 1,503 ಆರೋಪಿಗಳನ್ನಷ್ಟೇ ಬಂಧಿಸಿರುವುದು ಸಚಿವರು ನೀಡಿರುವ ಉತ್ತರದಿಂದ ಗೊತ್ತಾಗಿದೆ.
2021ರಲ್ಲಿ 3,501, 2022ರಲ್ಲಿ 2,701, 2023 (ಜನವರಿ ಅಂತ್ಯ) 172 ಸೈಬರ್‌ ಅಪರಾಧಗಳು ದಾಖಲಾಗಿದ್ದರೆ 2020ರಲ್ಲಿ 10,738, 2021ರಲ್ಲಿ 8,132, 2022ರಲ್ಲಿ 12,551, 2023 (ಜನವರಿ ಅಂತ್ಯ) 1,325 ಪ್ರಕರಣಗಳು ಹಣ, ಅಶ್ಲೀಲ ಮತ್ತಿತರ ಜಾಲತಾಣಗಳ ಕುರಿತಾಗಿವೆ.

 

ಕಳೆದೆರಡು ವರ್ಷಗಳಿಂದ ಆನ್‌ಲೈನ್‌ ಬ್ಯಾಂಕಿಂಗ್‌ ಮತ್ತು ಮೊಬೈಲ್ ಮೂಲಕ ಹಣ ದೋಚುವ ಸೈಬರ್‌ ಅಪರಾಧ ಪ್ರಕರಣಗಳು ದ್ವಿಗುಣಗೊಂಡಿದ್ದರೂ ಸೈಬರ್ ಅಪರಾಧಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳ ರಚನೆ ಆಗಿಲ್ಲ. ಕಳೆದೊಂದು ವರ್ಷದಿಂದಲೂ ಪೊಲೀಸ್‌ ಮಹಾನಿರ್ದೇಶಕರು ವಿಶೇಷ ನ್ಯಾಯಾಲಯ ಸ್ಥಾಪನೆ ಕುರಿತು ಪತ್ರಗಳನ್ನು ಬರೆಯತ್ತಿದ್ದರೂ ಸರ್ಕಾರ ಮಾತ್ರ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ.

 

ವಿಶೇಷ ನ್ಯಾಯಾಲಯಗಳ ಸ್ಥಾಪನೆ ಕುರಿತು ಗಮನಹರಿಸಬೇಕಿದ್ದ ಕಾನೂನು ಇಲಾಖೆಯು ದಿವ್ಯ ನಿರ್ಲಕ್ಷ್ಯ ವಹಿಸಿದೆ. ಹೀಗಾಗಿ ಒಳಾಡಳಿತ ಇಲಾಖೆಯು ಸೈಬರ್‌ ಅಪರಾಧಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಬೇಕು ಎಂದು 2022ರ ಮೇ 31ರಂದು ಪತ್ರವನ್ನು ಬರೆದಿತ್ತು.

 

‘ದೇಶದಲ್ಲಿ ಐ ಟಿ ಕ್ಷೇತ್ರವು ವ್ಯಾಪಕವಾಗಿ ಅಭಿವೃದ್ಧಿಯಾಗುತ್ತಿದ್ದು ಕರ್ನಾಟಕ ರಾಜ್ಯವು ಅಗ್ರಸ್ಥಾನದಲ್ಲಿದೆ. ಪ್ರಸ್ತುತ ಸಾರ್ವಜನಿಕರು ದೈನಂದಿನ ವ್ಯವಹಾರಗಳನ್ನು ಹೆಚ್ಚಾಗಿ ಅನ್‌ಲೈನ್‌ ಬ್ಯಾಂಕಿಂಗ್‌, ಮೊಬೈಲ್‌ ಮೂಲಕ ಹಣಕಾಸಿನ ಚಲಾವಣೆ ಮಾಡುತ್ತಿರುವುದರಿಂದ ಸೈಬರ್‌ ವಂಚಕರ ಸಂಖ್ಯೆಯು ಹೆಚ್ಚಾಗಿ ಸೈಬರ್‌ ಅಪರಾಧಗಳು 2019ರಿಂದ ದ್ವಿಗುಣಗೊಂಡಿದೆ. ಆದ್ದರಿಂದ ಸೈಬರ್‌ ಅಪರಾಧಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲು ಕ್ರಮವಹಿಸಬೇಕು,’ ಎಂದು ಒಳಾಡಳಿತ ಇಲಾಖೆಯು ಕಾನೂನು ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.

 

ಸೈಬರ್‌ ಅಪರಾಧಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಹಾಗೂ ಇಂತಹ ಪ್ರಕರಣಗಳನ್ನು ತಡೆಗಟ್ಟಲುರಾಜ್ಯದ ಪ್ರತಿ ಜಿಲ್ಲೆ ಹಾಗೂ ನಗರಗಳಲ್ಲಿ ವಿಶೇಷ ಸೈಬರ್‌, ನಾರ್ಕೋಟಿಕ್‌ ಎಕಾನಾಮಿಕ್‌ ಪೊಲೀಸ್‌ ಠಾಣೆಗಳನ್ನು ಸ್ಥಾಪಿಸಿದೆ. ರಾಜ್ಯದಲ್ಲಿ ಒಟ್ಟು 46 ಸಿಇಎನ್‌ ಪೊಲೀಸ್‌ ಠಾಣೆಗಳು ಹಾಗೂ ಇವುಗಳ ಪೈಕಿ ಬೆಂಗಳೂರು ನಗರದಲರ್ಲಿ ಮಾತ್ರ 8 ವಿಶೇಷ ಸಿಇಎನ್‌ಪೊಲೀಸ್‌ ಠಾಣೆಗಳು ಪ್ರತಿ ವಿಭಾಗಕ್ಕೆ ಒಂದರಂತೆ ಕಾರ್ಯನಿರ್ವಹಿಸುತ್ತಿವೆ.

 

ಸೈಬರ್‌ ಅಪರಾಧಗಳನ್ನು ತಡೆಗಟ್ಟುವ ಸಲುವಾಗಿಸಿಐಡಿ ಕಚೇರಿಯಲ್ಲಿ ಸೆಂಟರ್‌ ಫಾರ್‌ ಸೈಬರ್‌ ಕ್ರೈಮ್‌ ಇನ್ವೆಸ್ಟಿಗೇಷನ್‌ ಮತ್ತುಡಿಜಿಟಲ್‌ ಫೊರೆನ್ಸಿಕ್‌ ಟ್ರೈನಿಂಗ್‌ ಅಂಡ್‌ ರೀಸರ್ಚ್ ಘಟಕ ಆರಂಭಿಸಿದೆ ಎಂದು ತಿಳಿದುಬಂದಿದೆ.

Hot this week

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

ಹಿಂದುಳಿದ ಸಮುದಾಯ ಅಭಿವೃದ್ಧಿ ನಿಗಮಗಳಿಗೆ 473.41 ಕೋಟಿ ಅನುದಾನ ಹಂಚಿಕೆ; ನಾಲ್ಕೂವರೆ ತಿಂಗಳಾದರೂ ನಯಾಪೈಸೆಯೂ ಬಿಡುಗಡೆಯಾಗಿಲ್ಲ

ಬೆಂಗಳೂರು; ಆರ್ಥಿಕ ವರ್ಷ ಆರಂಭವಾಗಿ ನಾಲ್ಕೂವರೆ ತಿಂಗಳಾದರೂ ಸಹ ಹಿಂದುಳಿದ ವರ್ಗಗಳ...
Please Scan to make Your Contribution

Topics

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

ಫ್ರೀಡಂ ಹಬ್ಬಕ್ಕೆ 6 ಕೋಟಿ ವೆಚ್ಚ!; ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಕೆಲಸ ಆರಂಭಿಸಿದ ಕಂಪನಿ

ಬೆಂಗಳೂರು; ಹೊಸದಾಗಿ ವಿದ್ಯಾರ್ಥಿ ನಿಲಯಗಳ ಆರಂಭ, ಅನುಮೋದಿತ ಕಾಮಗಾರಿಗಳ ಕಾರ್ಯಭಾರಕ್ಕೆ ನಲುಗಿ...

3,206 ಪಂಚಾಯ್ತಿಗಳಲ್ಲಿ ಶಾಸನಬದ್ಧ ತೆರಿಗೆ ವಸೂಲು; ಸರ್ಕಾರಕ್ಕೆ ಪಾವತಿಯಾಗದ 17.28 ಕೋಟಿ ಎಲ್ಲಿದೆ?

ಬೆಂಗಳೂರು; ರಾಜ್ಯದ 27 ಜಿಲ್ಲೆಗಳ 3,206 ಪಂಚಾಯ್ತಿಗಳು ಸರಕು ಸೇವಾ ತೆರಿಗೆ,...

Related Articles

Popular Categories

error: Content is protected !!