Monday | March 30, 2026 |

ಮೂಲಸೌಕರ್ಯಕ್ಕೆ 93,226 ಕೋಟಿ, ಇಂಧನ ವಲಯಕ್ಕೆ 81,974 ಕೋಟಿ, ಕೃಷಿಗೆ ಕೇವಲ 1,053 ಕೋಟಿ ಹೂಡಿಕೆ

Support THE-FILE

spot_img

ಬೆಂಗಳೂರು; ಮೂಲ ಸೌಕರ್ಯ ಕಲ್ಪಿಸುವ ಉದ್ದೇಶ ಮತ್ತು ಇಂಧನ ವಲಯದ ಸಾರ್ವಜನಿಕ ಉದ್ಯಮಗಳಲ್ಲಿಯೇ ಅತಿ ಹೆಚ್ಚು ಹೂಡಿಕೆ ಮಾಡಿರುವ ರಾಜ್ಯ ಸರ್ಕಾರವು ಕೃಷಿ ಹಾಗೂ ಸಂಬಂಧಿತ ಚಟುವಟಿಕೆಗಳ ಉದ್ದಿಮೆಗಳಿಗೆ ಅತೀ ಕಡಿಮೆ ಪ್ರಮಾಣದ ಹೂಡಿಕೆ ಮಾಡಿದೆ.

 

ಕೃಷಿ ಚಟುವಟಿಕೆ ಮತ್ತು ಕೃಷಿ ಯಾಂತ್ರೀಕರಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ರೈತರ ಆದಾಯವನ್ನು ದ್ವಿಗುಣಗೊಳಿಸಲಾಗುತ್ತಿದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರವು ಭರ್ಜರಿ ಪ್ರಚಾರ ಪಡೆದುಕೊಂಡಿತ್ತು. ಅಲ್ಲದೇ ವಿಧಾನಸಭೆ ಅಧಿವೇಶನದಲ್ಲಿಯೇ ಕೃಷಿ ಸಚಿವ ಬಿ ಸಿ ಪಾಟೀಲ್‌ ಅವರೂ ಸಹ ಕೃಷಿ ಯಾಂತ್ರೀಕರಣಕ್ಕೆ ಹೆಚ್ಚಿನ ಒತ್ತು  ನೀಡಲಾಗಿದೆ ಎಂದು ಹೇಳಿಕೆ ನೀಡಿದ್ದರ  ಹೊತ್ತಿನಲ್ಲಿಯೇ ಸಾರ್ವಜನಿಕ ಉದ್ಯಮಗಳಲ್ಲಿನ ಹೂಡಿಕೆ ಕುರಿತಾಗಿ ಸಿಎಜಿ ಸಲ್ಲಿಸಿರುವ ವರದಿಯು ಮುನ್ನೆಲೆಗೆ ಬಂದಿದೆ.

 

2021ರ ಮಾರ್ಚ್‌ ಅಂತ್ಯದವರಿಗೆ ಮೂಲ ಸೌಕರ್ಯ ವಲಯದ ಸಾರ್ವಜನಿಕ ಉದ್ದಿಮೆಗಳಿಗೆ 93, 226.24 ಕೋಟಿ ರು. ಮತ್ತು ಇಂಧನ ವಲಯದ ಸಾರ್ವಜನಿಕ ಉದ್ದಿಮೆಗಳಿಗೆ 81,974.15 ಕೋಟಿ ರು. ಹೂಡಿಕೆ ಮಾಡಿದ್ದರೇ ಕೃ‍ಷಿ ಹಾಗೂ ಸಂಬಂಧಿತ ಚಟುವಟಿಕೆಗಳಿಗೆ ಕೇವಲ 1,053.34 ಕೋಟಿ ರು. ಹೂಡಿಕೆ ಮಾಡಲಾಗಿದೆ ಎಂದು ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

 

ಸಾರ್ವಜನಿಕ ಉದ್ದಿಮೆಗಳ ಪೈಕಿ ಮೂಲ ಸೌಕರ್ಯ ಹಾಗೂ ಇಂಧನ ವಲಯಗಳಲ್ಲಿ ಹೂಡಿಕೆಗಳಿಗೆ ಹೆಚ್ಚಿನ ಒತ್ತು ನೀಡಿದ್ದು ಇದು ಕ್ರಮವಾಗಿ ಶೇ. 50.17, ಹಾಗೂ ಶೇ. 44.12ರಷ್ಟಾಗಿದೆ. 2016-17 ಹಾಗೂ 2020-21ರ ನಡುವೆ ಮೂಲ ಸೌಕರ್ಯ ಹಾಗೂ ಇಂಧನ ವಲಯಗಳಲ್ಲಿ ಹೂಡಿಕೆಗಳು ಕ್ರಮವಾಗಿ 39,667.67 ಕೋಟಿ ಹಾಗೂ 39,781.19 ಕೋಟಿ ಮೊತ್ತಗಳಷ್ಟು ಹೆಚ್ಚಳಗೊಂಡಿದ್ದವು ಎಂದು ವಿವರಿಸಿದೆ.

 

ಕೃಷಿ ಹಾಗೂ ಸಂಬಂಧಿತ, ಹಣಕಾಸು, ಮೂಲಸೌಕರ್ಯ, ಉತ್ಪಾದನೆ, ಇಂಧನ, ಸೇವೆಗಳು ಮತ್ತು ಇತರೆ ವಲಯಗಳಲ್ಲಿ ಒಟ್ಟು 105 ಸಾರ್ವಜನಿಕ ಉದ್ಯಮವು ಕಾರ್ಯನಿರತವಾಗಿವೆ. 13 ಸ್ಥಗಿತಗೊಂಡಿವೆ. ಈ ಉದ್ದಿಮೆಗಳಲ್ಲಿ 2021ರ ಮಾರ್ಚ್‌ ಅಂತ್ಯಕ್ಕೆ ಒಟ್ಟಾರೆ 1,85,804.43 ಕೋಟಿ ರು.ಹೂಡಿಕೆಯಾಗಿದೆ.
ಹಾಗೆಯೇ ಇದೇ ಅವಧಿಯಲ್ಲಿ 670.18 ಕೋಟಿ ಮೊತ್ತದಷ್ಟು ಹೂಡಿಕೆಗಳನ್ನು ಮಾಡಿದ್ದ 13 ಸಾರ್ವಜನಿಕ ಉದ್ಯಮಗಳು ಕಳೆದ ದ18 ವರ್ಷಗಳಿಂದ ಕಾರ್ಯ ಸ್ಥಗಿತಗೊಂಡಿವೆ. 27 ಸಾರ್ವಜನಿಕ ವಲಯದ ಉದ್ದಿಮೆಗಳು 2021ರ ಮಾರ್ಚ್‌ ಅಂತ್ಯದವರೆಗೂ ಹೂಡಿಕೆಗಳಿಗೆ ಸಂಬಂಧಿಸಿದಂತೆ ಮಾಹಿತಿಯನ್ನೇ ಸಿಎಜಿಗೆ ಒದಗಿಸಿಲ್ಲ.

 

70 ಸಾರ್ವಜನಿಕ ವಲಯ ಉದ್ದಿಮೆಗಳ ಪೈಕಿ 36ರಲ್ಲಿ 18,319.38 ಕೋಟಿ ಮೊತ್ತದಷ್ಟು ಹೂಡಿಕೆಯಾಗಿದೆ. ಆದರೆ ಲೆಕ್ಕಪತ್ರಗಳನ್ನು ಅಂತಿಮ ರೂಪಕ್ಕೆ ತರುವಲ್ಲಿ ಹಾಗೂ ನಂತರದಲ್ಲಿ ಅವುಗಳ ಲೆಕ್ಕಪರಿಶೋಧನೆಯ ಅನುಪಸ್ಥಿತಿಯಲ್ಲಿ ಮಾಡಿರುವ ಹೂಡಿಕೆಗಳ ಹಾಗೂ ಭರಿಸಿರುವ ವೆಚ್ಚಗಳ ಕುರಿತು ಸಮರ್ಪಕ ಲೆಕ್ಕ ಇಡಲಾಗಿದೆಯೇ ಅಥವಾ ಮೊತ್ತವನ್ನು ಯಾವ ಉದ್ದೇಶಕ್ಕೆ ಹೂಡಿಕೆ ಮಾಡಲಾಗಿತ್ತೋ ಅಂತಹ ಉದ್ದೇಶವು ಈಡೇರಿರುವುದೋ ಅಥವಾ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಲಾಗಿಲ್ಲ ಎಂದು ಸಿಎಜಿ ವರದಿಯಲ್ಲಿ ವಿವರಿಸಿದೆ.

 

42 ಸಾರ್ವಜನಿಕ ವಲಯ ಉದ್ದಿಮೆಗಳು 2,986.47 ಕೋಟಿಯಷ್ಟು ನಷ್ಟ ಹೊಂದಿವೆ. ಕೆಎಸ್‌ಎಸ್‌ಡಿಸಿಎಲ್‌, ಕೆಎಂಎಂಡಿಸಿಎಲ್‌, ಕೆಎಎಡಿಸಿಎಲ್‌ ತಮ್ಮ ಮೊದಲ ಲೆಕ್ಕಪತ್ರಗಳನ್ನೇ ಇನ್ನೂ ಅಂತಿಮ ರೂಪಕ್ಕೆ ತಂದಿಲ್ಲ. ಲಾಭಕ್ಕೆ ಪ್ರಮುಖವಾಗಿ ಕೊಡುಗೆ ನೀಡಿರುವ ಕೆಪಿಸಿಎಲ್‌ 1,209.56 ಕೋಟಿ, ಕೆಪಿಟಿಸಿಎಲ್‌ 398.93 ಕೋಟಿ, ಹೆಸ್ಕಾಂ 2,490.26 ಕೋಟಿ, ಆರ್‌ಪಿಎಸಿಎಲ್‌ 1,431.84 ಕೋಟಿ ಗಮನಾರ್ಹ ಮೊತ್ತದ ನಷ್ಟವನ್ನು ಭರಿಸಿದ್ದವು.

 

ಕಾರ್ಯನಿರತ ಸಾರ್ವಜನಿಕ ಉದ್ದಿಮೆಗಳು 2016-17ರಲ್ಲಿ 155.12 ಕೋಟಿ ಮೊತ್ತದಷ್ಟು ನಿವ್ವಳ ಲಾಭ ತೋರಿಸಿದ್ದವು. 2017-18, 2018-19, 2019-20 ಹಾಗೂ 2020-21ನೇ ಸಾಲಿನಲ್ಲಿ ಕ್ರಮವಾಗಿ 2,099.69 ಕೋಟಿ, 2,340.99 ಕೋಟಿ, 3,374.05 ಕೋಟಿ, 5,137.65 ಕೋಟಿಯಷ್ಟು ನಿವ್ವಳ ನಷ್ಟ ಭರಿಸಿದ್ದವು ಎಂದು ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

Hot this week

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

Topics

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

Related Articles

Popular Categories

error: Content is protected !!