Sunday | May 3, 2026 |

ಗ್ರಾಮ ಪಂಚಾಯ್ತಿಗಳಲ್ಲಿ ಲೆಕ್ಕಪರಿಶೋಧನೆ; 251.99 ಕೋಟಿ ರು. ಜಮೆ-ವೆಚ್ಚಕ್ಕೆ ದಾಖಲೆಗಳೇ ಇಲ್ಲ

ಬೆಂಗಳೂರು; ರಾಜ್ಯದ ಒಟ್ಟು ಗ್ರಾಮ ಪಂಚಾಯ್ತಿಗಳ ಪೈಕಿ 147 ಪಂಚಾಯ್ತಿಗಳು ದಾಖಲೆ ನಿರ್ವಹಣೆಯಲ್ಲಿ ಮತ್ತು ಲೆಕ್ಕ ಪರಿಶೋಧನೆಗೆ ದಾಖಲೆಗಳನ್ನು ಒದಗಿಸುವಲ್ಲಿ ವಿಫಲವಾಗಿವೆ. ಅದೇ ರೀತಿ ಲೆಕ್ಕಪರಿಶೋಧನೆಗೆ 251.99 ಕೋಟಿ ರು.ಗಳ ಜಮೆ ಮತ್ತು ವೆಚ್ಚಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳನ್ನು ಲೆಕ್ಕಪರಿಶೋಧನೆಗೆ ಹಾಜರುಪಡಿಸಿಲ್ಲ ಎಂಬುದನ್ನು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ಪತ್ತೆ ಹಚ್ಚಿದೆ.

 

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ 1993ರ ಪ್ರಕರಣ 246(1) ಮತ್ತು ಗ್ರಾಮ ಪಂಚಾಯ್ತಿಗಳ ಆಯವ್ಯಯ ಮತ್ತು ಲೆಕ್ಕಪತ್ರಗಳ ನಿಯಮಗಳು 2006ರ ನಿಯಮ 112(1) ಅನ್ವಯ ರಾಜ್ಯದ ಗ್ರಾಮ ಪಂಚಾಯ್ತಿಗಳ 2020-21ನೇ ಸಾಲಿನ ಆರ್ಥಿಕ ವ್ಯವಹಾರಗಳ ಲೆಕ್ಕಪರಿಶೋಧನೆ ನಡೆಸಿ ಈ ಸಂಬಂಧ ಸರ್ಕಾರಕ್ಕೆ ವರದಿಯನ್ನೂ ಸಲ್ಲಿಸಿದೆ. ಈ ವರದಿಯ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಅದೇ ರೀತಿ ಬೆಂಗಳೂರು, ಬೆಳಗಾವಿ, ಕಲ್ಬುರ್ಗಿ ಮತ್ತು ಮೈಸೂರು ವಿಭಾಗದ ಒಟ್ಟು 121 ಪಂಚಾಯ್ತಿಗಳ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಚಾರ್ಜ್‌ಲೀಸ್ಟ್‌ ತಯಾರಿಸಿ ಕಾರ್ಯಭಾರವನ್ನು ಹಸ್ತಾಂತರ ಮಾಡಿಲ್ಲ.
ಬೆಂಗಳೂರು ವಿಭಾಗದಲ್ಲಿ 14, ಬೆಳಗಾವಿ ವಿಭಾಗದಲ್ಲಿ 56, ಕಲ್ಬುರ್ಗಿ ವಿಭಾಗದಲ್ಲಿ 54, ಮೈಸೂರು ವಿಭಾಗದಲ್ಲಿ 23 ಸೇರಿ ಒಟ್ಟು 147 ಪಂಚಾಯ್ತಿಗಳು ಜಮೆ ಮತ್ತು ವೆಚ್ಚದ ದಾಖಲೆಗಳನ್ನು ಲೆಕ್ಕಪರಿಶೋಧನೆಗೆ ಹಾಜರುಪಡಿಸಿಲ್ಲ. ಇದರ ಮೊತ್ತವೇ 251,99,1,892 ರು ಗಳು ಎಂಬುದು ವರದಿಯಿಂದ ತಿಳಿದು ಬಂದಿದೆ.

 

ಗ್ರಾಮ ಪಂಚಾಯ್ತಿಗಳು ಪೂರ್ಣ ಪ್ರಮಾಣದಲ್ಲಿ ಬ್ಯಾಂಕ್‌ಗಳ ಮೂಲಕ ಆರ್ಥಿಕ ವ್ಯವಹಾರಗಳನ್ನು ನಿರ್ವಹಿಸುತ್ತಿದೆ. ಬ್ಯಾಂಕ್‌ ಚೆಕ್‌ ಪುಸ್ತಕಗಳು, ಕಾಮಗಾರಿ ಅಳತೆ ಪುಸ್ತಕಗಳು ಸೇರಿದಂತೆ ಪ್ರಮುಖ ಅರ್ಥಿಕ ದಾಖಲೆಗಳನ್ನು ಜಾಗೂರಕತೆಯಿಂದ ನಿರ್ವಹಿಸಬೇಕು. ಅಲ್ಲದೇ ಈ ಎಲ್ಲಾ ದಾಖಲೆಗಳನ್ನು ಕಾರ್ಯಭಾರ ವಹಿಸಿಕೊಂಡ ಅಧಿಕಾರಿಗೆ ಕಾರ್ಯಭಾರ ಪಟ್ಟಿಯ ಮುಖಾಂತರ ಹಸ್ತಾಂತರಿಸಬೇಕು. ಆದರೆ 121 ಪಂಚಾಯ್ತಿಗಳ ಅಭಿವೃದ್ಧಿ ಅಧಿಕಾರಿಗಳು ಕಾರ್ಯಭಾರ ಪಟ್ಟಿ ಮುಖಾಂತರ ಈ ಯಾವ ದಾಖಲೆಗಳನ್ನೂ ಹಸ್ತಾಂತರ ಮಾಡಿಲ್ಲ ಎಂಬುದು ವರದಿಯಿಂದ ಮೇಲ್ನೋಟಕ್ಕೆ ಕಂಡುಬಂದಿದೆ.

 

ಕರ್ನಾಟಕ ಪಂಚಾಯತ್‌ರಾಜ್‌ ನಿಯಮಗಳು 2006ರರ ನಿಯಮ 43ರ ಅನ್ವಯ ಪಾವತಿಗೆ ಬಿಲ್‌ ಅಥವಾ ವೋಚರ್‍‌ಗಳ ಆಧಾರ ಇರಬೇಕು. ಕರ್ನಾಟಕ ಆರ್ಥಿಕ ಸಂಹಿತೆ ಸೆಕ್ಷನ್‌ 3 ಮತ್ತು 49ರ ಅನ್ವಯ ವೆಚ್ಚಗಳ ಲೆಕ್ಕಪತ್ರಗಳನ್ನು ನಿರ್ವಹಿಸಬೇಕು. ಲೆಕ್ಕ ಪರಿಶೋಧನೆಗೆ ಅಂತಹ ದಾಖಲೆಗಳನ್ನು ಒದಗಿಸಬೇಕು.

 

ವೋಚರ್‍‌ ಹಾಗೂ ಅಗತ್ಯ ಪೂರಕ ದಾಖಲೆಗಳನ್ನು ಲೆಕ್ಕಪರಿಶೋಧನೆಗೆ ಹಾಜರುಪಡಿಸದೇ ಇದ್ದಲ್ಲಿ ಇದು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಕರ್ತವ್ಯಲೋಪವೆಂದು ಪರಿಗಣಿಸಲಾಗುತ್ತದೆ. ಅಲ್ಲದೇ ಅಂತಹ ಪಿಡಿಓ ವಿರುದ್ಧ ಶಿಸ್ತು ಕ್ರಮ, ಸೇವಾ ಬಡ್ತಿ ತಡೆಯುವುದು, ಸಿವಿಲ್‌, ಕ್ರಿಮಿನಲ್‌ ಮೊಕದ್ದಮೆ ಹೂಡಲು ಅವಕಾಶವಿದೆ. ಹಾಗೆಯೇ ಮೈಸೂರು ಆಡಿಟ್‌ ಮ್ಯಾನ್ಯುಯಲ್‌ ನಿಯಮ 537ರ ಅನುಸಾರ ಹಣ ದುರುಪಯೋಗವಾಗಿದೆಂದು ಸಹ ಪರಿಗಣಿಸಬಹುದು ಎಂದು ವರದಿಯಲ್ಲಿ ವಿವರಿಸಲಾಗಿದೆ.

Hot this week

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

Topics

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

Related Articles

Popular Categories

error: Content is protected !!