Sunday | May 3, 2026 |

ಮ್ಯುಟೇಷನ್‌ ರಿಜಿಸ್ಟರ್‌ ನಿರ್ವಹಿಸದ 335 ಪಂಚಾಯ್ತಿಗಳು; ಲೆಕ್ಕ ಪರಿಶೋಧನೆ ವರದಿ

ಬೆಂಗಳೂರು; ರಾಜ್ಯದ ಒಟ್ಟು ಗ್ರಾಮ ಪಂಚಾಯ್ತಿಗಳ ಪೈಕಿ 253 ಪಂಚಾಯ್ತಿಗಳು ಕಟ್ಟಡ ಮತ್ತು ಭೂಮಿಗೆ ಸಂಬಂಧಿಸಿದ ತೆರಿಗೆ ನಿರ್ಧರಣೆ ಪಟ್ಟಿ, ಆಸ್ತಿ ತೆರಿಗೆ ಪಟ್ಟಿಯ ಮ್ಯುಟೇಷನ್‌ನ್ನು ನಿರ್ವಹಿಸಿಲ್ಲ ಎಂಬುದು ಲೆಕ್ಕ ಪತ್ರ ಮತ್ತು ಲೆಕ್ಕ ಪರಿಶೋಧನೆಯು ಪತ್ತೆ ಹಚ್ಚಿದೆ.

 

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ 1993ರ ಪ್ರಕರಣ 246(1) ಮತ್ತು ಗ್ರಾಮ ಪಂಚಾಯ್ತಿಗಳ ಆಯವ್ಯಯ ಮತ್ತು ಲೆಕ್ಕಪತ್ರಗಳ ನಿಯಮಗಳು 2006ರ ನಿಯಮ 112(1) ಅನ್ವಯ ರಾಜ್ಯದ ಗ್ರಾಮ ಪಂಚಾಯ್ತಿಗಳ 2020-21ನೇ ಸಾಲಿನ ಆರ್ಥಿಕ ವ್ಯವಹಾರಗಳ ಲೆಕ್ಕಪರಿಶೋಧನೆ ನಡೆಸಿ ಈ ಸಂಬಂಧ ಸರ್ಕಾರಕ್ಕೆ ವರದಿಯನ್ನೂ ಸಲ್ಲಿಸಿದೆ. ಈ ವರದಿಯ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ತೆರಿಗೆ ನಿರ್ಧರಣಕ್ಕಾಗಿ ಯಾವುದೇ ಆಸ್ತಿಗಳನ್ನು ಒಳಪಡಿಸಿದಾಗ ಅಥವಾ ತೆರಿಗೆ ನಿರ್ಧರಣವನ್ನು ಹೆಚ್ಚಿಸಿದಾಗ ಅಥವಾ ತೆರಿಗೆ ನಿರ್ಧರಣ ಪಟ್ಟಿಯ ದೃಢೀಕರಣದ ನಂತರದಲ್ಲಿ ಬೇಡಿಕೆಯಲ್ಲಿ ಯಾವುದಾದರೂ ಬದಲಾವಣೆ ಮಾಡಿದಾಗ ನಮೂನೆ 10ರ ಮ್ಯುಟೇಷನ್‌ ರಿಜಿಸ್ಟರ್‌ನಲ್ಲಿ ನಮೂದಿಸಬೇಕು ಎಂಬ ನಿಯಮವಿದೆ. ಆದರೆ 335 ಪಂಚಾಯ್ತಿಗಳು ನಮೂನೆ 10ನ್ನು ನಿರ್ವಹಿಸಿಲ್ಲ. ‘ತೆರಿಗೆ ನಿರ್ಧರಣೆ ಪಟ್ಟಿ ಅನುಪಸ್ಥಿತಿಯಲ್ಲಿ ಮ್ಯುಟೇಷನ್‌ ರಿಜಿಸ್ಟರ್‌ನ ನಿಖರತೆಯನ್ನು ಸಮರ್ಥಿಸಲಾಗುವುದಿಲ್ಲ. ಇದರಿಂದಾಗಿ ಆಸ್ತಿ ತೆರಿಗೆ ಬೇಡಿಕೆಯ ಏರಿಕೆ/ಇಳಿಕೆಯು ನಿಖರವಾಗಿ ಆಗದೇ ಆದಾಯದಲ್ಲಿ ನಷ್ಟವುಂಟಾಗುವ ಸಂಭವನೀಯತೆ ಹೆಚ್ಚಿದೆ,’ ಎಂದು ವರದಿಯು ವಿವರಿಸಿದೆ.

 

ಭೂಮಿ ಮತ್ತು ಕಟ್ಟಡಗಳ ತೆರಿಗೆಗಳ ಬೇಡಿಕೆ, ವಸೂಲಾತಿ ಹಾಗೂ ಬಾಕಿ ರಿಜಿಸ್ಟರ್‌ (ನಮೂನೆ-11) ನಿರ್ವಹಿಸಬೇಕು. ಆದರೆ 139 ಪಂಚಾಯ್ತಿಗಳು ಇಂತಹ ನಮೂನೆಯನ್ನು ನಿರ್ವಹಿಸಿಲ್ಲ. ನಿಯಮ 34ರ ನಮೂನೆ 15ರಲ್ಲಿ ಆದಾಯ ತರುವ ಆಸ್ತಿಪಾಸ್ತಿಗಳ ವಿವರ ಮತ್ತು ಕಂದಾಯ ವಸೂಲಾತಿ ವಿವರದ ರಿಜಿಸ್ಟರ್‌ನ್ನು 428 ಪಂಚಾಯ್ತಿಗಳು ನಿರ್ವಹಿಸಿಲ್ಲ.

 

ಬೆಳಗಾವಿ ಜಿಲ್ಲೆಯ 50 ಪಂಚಾಯ್ತಿಗಳು ತೆರಿಗೆ ನಿರ್ಧರಣೆ ಪಟ್ಟಿಯನ್ನು ನಿರ್ವಹಿಸಿಲ್ಲ. ಅದೇ ರೀತಿ ಇದೇ ಜಿಲ್ಲೆಯಲ್ಲಿ ಮ್ಯುಟೇಷನ್‌ ರಿಜಸ್ಟರ್‌, ಡಿಸಿಬಿ ವಹಿ, ಮತ್ತು ಆದಾಯ ತರುವ ಆಸ್ತಿಪಾಸ್ತಿಗಳ ವಿವರ ಮತ್ತು ಕಂದಾಯ ವಸೂಲಿ ವಿವರದ ರಿಜಿಸ್ಟರ್‌ನ್ನು ನಿರ್ವಹಿಸಿಲ್ಲ. ಈ ಮೂರು ವಿಭಾಗಗಳಲ್ಲೂ ಬೆಳಗಾವಿ ಜಿಲ್ಲೆಯಲ್ಲಿ ತಲಾ 50 ಪಂಚಾಯ್ತಿಗಳಿವೆ ಎಂದು ವರದಿಯಲ್ಲಿ ಪಟ್ಟಿ ಒದಗಿಸಿರುವುದು ತಿಳಿದು ಬಂದಿದೆ.

 

ನಮೂನೆ 29ರಲ್ಲಿಯೂ ಪೀಠೋಪಕರಣ, ಯಂತ್ರೋಪಕರಣ ಮತ್ತು ಇತರೆ ಸಾಮಗ್ರಿಗಳ ಚರಾಸ್ತಿ ರಿಜಿಸ್ಟರ್‌ನ್ನು 350 ಪಂಚಾಯ್ತಿಗಳು ನಿರ್ವಹಿಸಿಲ್ಲ. ಅದೇ ರೀತಿ 436 ಗ್ರಾಮ ಪಂಚಾಯ್ತಿಗಳು ಭೂ ದಾಖಲಾತಿ ರಿಜಿಸ್ಟರ್‌ನ್ನು ನಿರ್ವಹಿಸಿಲ್ಲ. 394 ಪಂಚಾಯ್ತಿಗಳು ಕಟ್ಟಡ, ರಸ್ತೆ, ಸೇತುವೆ, ಅಡಿಗಾಲುವೆ, ಚರಂಡಿ, ಬೀದಿದೀಪದ ಕಂಬಗಳು ಸೇರಿದಂತೆ ಮೂಲಭೂತ ಸೌಕರ್ಯಗಳ ಸ್ಥಿರಾಸ್ತಿಯ ರಿಜಿಸ್ಟರ್‌ನ್ನು ನಿರ್ವಹಿಸಿಲ್ಲ ಎಂದು ವರದಿಯು ಬಹಿರಂಗಗೊಳಿಸಿದೆ.

 

ಅದೇ ರೀತಿ 339 ಗ್ರಾಮ ಪಂಚಾಯ್ತಿಗಳು ಪ್ರಸಕ್ತ ಸಾಲಿನಲ್ಲಿ ತೆರಿಗೆ ಪರಿಷ್ಕರಣೆ ಮಾಡಿಲ್ಲ. ಆಂತರಿಕ ಆದಾಯಗಳ ಸಂಗ್ರಹಕ್ಕಾಗಿ 189 ಗ್ರಾಮ ಪಂಚಾಯ್ತಿಗಳು ಮಾತ್ರ ಆಸ್ತಿ ಮಾಲೀಕರಿಗೆ ನೋಟೀಸ್‌ ಜಾರಿ ಮತ್ತು ಗ್ರಾಮ ಸಭೆ, ವಾರ್ಡ್‌ ಸಭೆಗಳಲ್ಲಿ ಜನರಿಗೆ ತಿಳಿವಳಿಕೆ ನೀಡುವಂತಹ ಕ್ರಮಗಳನ್ನು ಕೈಗೊಂಡಿದೆ. ಸ್ವಂತ ಸಂಪನ್ಮೂಲಗಳನ್ನು ಹೆಚ್ಚಿಸಲು ಹೆಚ್ಚಿನ ಪಂಚಾಯ್ತಿಗಳು ಅಗತ್ಯ ಕ್ರಮಗಳನ್ನೂ ಕೈಗೊಂಡಿಲ್ಲ ಎಂದು ವರದಿಯಿಂದ ಗೊತ್ತಾಗಿದೆ.

Hot this week

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

Topics

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

Related Articles

Popular Categories

error: Content is protected !!