Sunday | May 3, 2026 |

ಸಬ್ಸಿಡಿ; ಕೃಷಿ, ಹಾಲು, ಸ.ಕಲ್ಯಾಣಕ್ಕೆ 1,425 ಕೋಟಿ ಕಡಿತ , ಮಹಿಳಾ, ಆಹಾರ, ಇಂಧನಕ್ಕೆ 15,566 ಕೋಟಿ ಹೆಚ್ಚಳ

ಬೆಂಗಳೂರು; ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ತಿಣುಕಾಡುತ್ತಿರುವ ಕಾಂಗ್ರೆಸ್‌ ಸರ್ಕಾರವು ಇದೀಗ ಕೃಷಿ, ತೋಟಗಾರಿಕೆ ಸೇರಿದಂತೆ ಹಲವು ವಲಯಗಳಿಗೆ ನೀಡುತ್ತಿದ್ದ ಸಹಾಯಧನವನ್ನೂ ಕಡಿತಗೊಳಿಸಿದೆ. ಅಲ್ಲದೇ ಆಹಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಮತ್ತು ಇಂಧನ ವಲಯಕ್ಕೆ ಹೆಚ್ಚಿನ ಸಹಾಯಧನವನ್ನು ಹಂಚಿಕೆ ಮಾಡಿದೆ.

 

ಐದು ಗ್ಯಾರಂಟಿಗಳಿಗೆ ಕಾಂಗ್ರೆಸ್‌ ಸರ್ಕಾರವು ಹಣಕಾಸನ್ನು ಹೇಗೆ ಹೊಂದಿಸಲಿದೆ ಎಂಬ ಕುತೂಹಲಗಳನ್ನು ಹುಟ್ಟಿಸಿದ್ದ ಈ ಬಜೆಟ್‌, ಹಿಂದಿನ ಸರ್ಕಾರಗಳು ಘೋಷಿಸಿದ್ದ ಜನಪ್ರಿಯ ಕಾರ್ಯಕ್ರಮಗಳನ್ನೂ ಕೈಬಿಟ್ಟಿದೆ.
ಕೃಷಿ, ತೋಟಗಾರಿಕೆ, ಹಾಲು, ಅರಣ್ಯ, ಸಹಕಾರ, ಸಮಾಜ ಕಲ್ಯಾಣ, ವಾರ್ತೆ, ಪ್ರವಾಸೋದ್ಯಮ ಮತ್ತು ವಸತಿ ವಲಯಗಳಿಗೆ ಒಟ್ಟಾರೆ 1,425.13 ಕೋಟಿ ರು. ಸಹಾಯಧನ ಕಡಿತಗೊಂಡಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆಹಾರ, ಇಂಧನ ವಲಯಕ್ಕೆ 15,566 ಕೋಟಿ ರು. ಹೆಚ್ಚಿನ ಸಹಾಯ ಧನ ಘೋಷಿಸಲಾಗಿದೆ.

 

2022-23ನೇ ಸಾಲಿನಲ್ಲಿ ಕೃಷಿ ತೋಟಗಾರಿಕೆಗೆ 3,498.99 ಕೋಟಿ ರು. ಹಂಚಿಕೆಯಾಗಿತ್ತು. 2023-24ರಲ್ಲಿ 2,607.00 ಕೋಟಿ ರು. ಪ್ರಸ್ತಾವಿಸಿದೆ. ಹಿಂದಿನ ಸಾಲಿಗೆ ಹೋಲಿಸಿದರೆ ಕೃಷಿ ಮತ್ತು ತೋಟಗಾರಿಕೆ ವಲಯಕ್ಕೆ 891.99 ಕೋಟಿ ರು. ಕಡಿತಗೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

 

ಹಾಲಿಗೆ ಹಿಂದಿನ ಸಾಲಿನಲ್ಲಿ 1,207.00 ಕೋಟಿ ರು. ಇದ್ದರೇ 2023-24ರಲ್ಲಿ 1,180.00 ಕೋಟಿ ರು. ನೀಡಿದೆ. ಹಿಂದಿನ ಸಾಲಿಗೆ ಹೋಲಿಸಿದರೆ 26.3 ಕೋಟಿ ರು ಕಡಿತಗೊಂಡಿದೆ. ಅರಣ್ಯಕ್ಕೆ ಕಳೆದ ಬಾರಿ 3.00 ಕೋಟಿ ರು. ಸಹಾಯಧನ ನೀಡಿದ್ದರೇ ಈ ಬಾರಿ 2 ಕೋಟಿ ನೀಡಿ 1 ಕೋಟಿ ಕಡಿತಗೊಳಿಸಿದೆ.

 

ಹಾಗೆಯೇ ಸಹಕಾರ ವಲಯಕ್ಕೆ ಕಳೆದ ಬಾರಿ 2,307.55 ಕೋಟಿ ರು. ನೀಡಿದ್ದು, ಈ ಬಾರಿ 1,949.72 ಕೋಟಿ ರು. ನೀಡಿರುವ ಸಿದ್ದರಾಮಯ್ಯ ಅವರು ಸಹಕಾರ ವಲಯಕ್ಕೆ 357.83 ಕೋಟಿ ರು.ಗಳನ್ನು ಕಡಿತಗೊಳಿಸಿದೆ. ಅದೇ ರೀತಿ ಸಮಾಜ ಕಲ್ಯಾಣಕ್ಕೆ ಕಳೆದ ಸಾಲಿನಲ್ಲಿ 312.50 ಕೋಟಿ ರು. ಸಹಾಯಧನ ನೀಡಿದ್ದರೇ ಈ ಬಾರಿ 182.00 ಕೋಟಿ ರು. ನೀಡಿದೆ. ಕಳೆದ ಸಾಲಿಗೆ ಹೋಲಿಸಿದರೆ 130.00 ಕೋಟಿ ಕಡಿತಗೊಳಿಸಿದಂತಾಗಿದೆ.

 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಕಳೆದ ಬಾರಿ ಕಳೆದ ಬಾರಿ 187.04 ಕೋಟಿ ರು. ನೀಡಿದ್ದರೇ ಈ ಬಾರಿ 232.00 ಕೋಟಿ ರು. ನೀಡಿದೆ. ಕಳೆದ ಸಾಲಿಗೆ ಹೋಲಿಸಿದರೆ 45 ಕೋಟಿ ರು. ಹೆಚ್ಚಿಗೆ ನೀಡಿರುವುದು ಕಂಡು ಬಂದಿದೆ. ಅದೇ ರೀತಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ 2,810.00 ಕೋಟಿ ರು. ನೀಡಿದ್ದರೇ ಈ ಬಾರಿ 10,275 ಕೋಟಿ ರು. ಸಹಾಯಧನ ಒದಗಿಸಿದೆ. ಕಳೆದ ಸಾಲಿಗೆ ಹೋಲಿಸಿದರೆ ಈ ಬಾರಿ 7,465 ಕೋಟಿ ರು. ಹೆಚ್ಚಿಗೆ ನೀಡಿದೆ. ಇಂಧನ ವಲಯಕ್ಕೆ ಕಳೆದ ಬಾರಿ 14,012.61 ಕೋಟಿ ರು. ನೀಡಿದ್ದರೇ ಈ ಬಾರಿ 22,158.00 ಕೋಟಿ ರು. ನೀಡುವ ಮೂಲಕ ಇಂಧನಕ್ಕೆ 8,056 ಕೋಟಿ ರು. ಹೆಚ್ಚಿನ ಸಹಾಯಧನ ನೀಡಿದೆ.

 

ರೈತ ವಿದ್ಯಾನಿಧಿ ಯೋಜನೆ (ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ), ವಿವೇಕ ಶಾಲೆ ಅಭಿವೃದ್ಧಿ ಯೋಜನೆ, ಹೆಣ್ಣುಮಕ್ಕಳ ಭಾಗ್ಯಲಕ್ಷ್ಮೀ ಬಾಂಡ್‌ ಯೋಜನೆ, ಜಿಲ್ಲೆಗೊಂದು ಗೋಶಾಲೆ ಯೋಜನೆ, ಎಪಿಎಂಸಿ ಕಾಯ್ದೆ ರದ್ದು, ಕೃಷಿ ಭೂಮಿ ಮಾರಾಟ ಕಾಯ್ದೆ ರದ್ದುಮ ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ, ಮಹಿಳಾ ಸ್ತ್ರೀ ಸಾಮರ್ಥ್ಯ ಯೋಜನೆ (ಮಹಿಳೆಯರ ಸ್ವಸಹಾಯ ಸಂಘಗಳಿಗೆ 5 ಲಕ್ಷ ರೂ ಸಹಾಯಧನ)ಮ ಭೂಸಿರಿ ಯೋಜನೆ (ರೈತರಿಗೆ 10 ಸಾವಿರ ರೂ. ಸಹಾಯಧನ), ಶ್ರಮಶಕ್ತಿ ಯೋಜನೆ (ಕೃಷಿಕ ಮಹಿಳೆಯರಿಗೆ ಮಾಸಿಕ 500 ರೂ.)ಮ ಅಗ್ನಿವೀರ್‌ ಯೋಜನೆಗೆ ಸೇರುವ ಎಸ್‌ಸಿ / ಎಸ್‌ಟಿ ಯುವಕರಿಗೆ ತರಬೇತಿ ನೀಡುವ ಯೋಜನೆ, ಮಕ್ಕಳ‌ ಬಸ್ – ಉಚಿತ ಬಸ್ ಯೋಜನೆ, ಅಂತರ್ಜಲ ಹೆಚ್ಚಿಸುವ ಜಲನಿಧಿ ಯೋಜನೆಯನ್ನು ಕೈಬಿಟ್ಟಿದೆ.

 

ಸರ್ಕಾರ ಶಕ್ತಿ ಯೋಜನೆಗೆ ವಾರ್ಷಿಕ 4000 ಕೋಟಿ ರೂ., ಗೃಹ ಜ್ಯೋತಿ ಯೋಜನೆಗೆ 13,900 ಕೋಟಿ ರೂ. ಸೇರಿ ಗ್ಯಾರಂಟಿ ಯೋಜನೆಗಳಿಗೆ 52,000 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದೆ. ಗ್ಯಾರಂಟಿ ಯೋಜನೆಗಳಿಗಾಗಿ ಆದಾಯ ಕ್ರೋಢಿಕರಿಸಲು ಹೆಚ್ಚಿನ ಆದ್ಯತೆ ನೀಡಿದೆ.

 

ಮೂರು ಪ್ರಮುಖ ಇಲಾಖೆಯಿಂದ ರಾಜಸ್ವ ಸಂಗ್ರಹದ ಗುರಿ ಹೊಂದಿದೆ. ವಾಣಿಜ್ಯ ತೆರಿಗೆ ಇಲಾಖೆಯಿಂದ 1,01,000 ಲಕ್ಷ ಕೋಟಿ ರೂ., ಅಬಕಾರಿ ಇಲಾಖೆಯಿಂದ ರಾಜಸ್ವ 36,000 ಕೋಟಿ ರೂ. ಹಾಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ 25,000 ಕೋಟಿ ರೂ. ಆದಾಯವನ್ನು ನಿರೀಕ್ಷಿಸಲಾಗಿದೆ. ಇನ್ನು, ಹೊಸ ವಾಹನ ನೋಂದಣಿಯಿಂದ 11,500 ಕೋಟಿ ರೂ., ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ 9 ಸಾವಿರ ಕೋಟಿ ರೂ. ಆದಾಯ ನಿರೀಕ್ಷಿಸಿದೆ.

Hot this week

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

Topics

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

Related Articles

Popular Categories

error: Content is protected !!