Monday | August 24, 2026 |

ಕಲಿಕೆ ಹಿಂದುಳಿಯುವಿಕೆಗೆ ಕಾರಣವಾದ ‘ಹೆಬ್ಬುಲಿ’ ಕಟಿಂಗ್‌; ಚರ್ಚೆಗೆ ಗ್ರಾಸವಾದ ಮುಖ್ಯೋಪಾಧ್ಯಾಯರ ಪತ್ರ

ಬೆಂಗಳೂರು; ಕಲಿಕೆಯಲ್ಲಿ ಹಿಂದುಳಿಯುತ್ತಿರುವ ಶಾಲಾ ಮಕ್ಕಳಿಗೆ ಗುಣಮಟ್ಟದ ಬೋಧನೆ, ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಉನ್ನತೀಕರಿಸಬೇಕು ಎಂಬ ನಿಟ್ಟಿನಲ್ಲಿ ಶೈಕ್ಷಣಿಕ ವಲಯದಲ್ಲಿ ಹೆಚ್ಚು ಚರ್ಚೆಗಳು ನಡೆಯುತ್ತಿರುವ ಹೊತ್ತಿನಲ್ಲಿಯೇ ಜಮಖಂಡಿ ತಾಲೂಕಿನ ಕುಲಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಹೆಬ್ಬುಲಿ ಕಟಿಂಗ್‌ ಕಲಿಕೆಯಲ್ಲಿ ಹಿಂದುಳಿಯುವಿಕೆಗೆ ಕಾರಣವಾಗಿದೆ ಎಂಬ ಅಂಶವು ಚರ್ಚೆಗೆ ಗ್ರಾಸವಾಗಿದೆ.

 

ಹೆಬ್ಬುಲಿ ಚಿತ್ರದಲ್ಲಿ ನಟ ಸುದೀಪ್‌ ಅವರ ಕೇಶ ವಿನ್ಯಾಸವು ಅವರ ಅಭಿಮಾನಿಗಳ ಮನಸೂರೆಗೊಂಡಿತ್ತು. ಇದೀಗ ಶಾಲಾ ಮಕ್ಕಳೂ ಸಹ ಅದೇ ಕೇಶ ವಿನ್ಯಾಸಕ್ಕೆ ಮೊರೆ ಹೋಗಿರುವ ಕಾರಣ ಕಲಿಕೆ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ ಎಂದು ಕುಲಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶಿವಾಜಿ ನಾಯಕ್‌ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

 

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಕುಲಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶಿವಾಜಿ ನಾಯಕ್‌ ಅವರು ವ್ಯವಸ್ಥಿತ ಮತ್ತು ಶಿಸ್ತಿನಿಂದ ಕಾಣುವಂತಹ ಹೇರ್‌ ಕಟಿಂಗ್‌ ಮಾಡಬೇಕು ಎಂದು ಕುಲಹಳ್ಳಿಯ ಹೇರ್‌ ಕಟಿಂಗ್‌ ಅಂಗಡಿ ಮಾಲೀಕರಿಗೆ 2023ರ ಜುಲೈ 20ರಂದು ಬರೆದಿರುವ ಪತ್ರದಲ್ಲಿ ಹೆಬ್ಬುಲಿ ಕಟಿಂಗ್‌ ಕುರಿತು ಪ್ರಸ್ತಾಪಿಸಿದ್ದಾರೆ.

 

ಪತ್ರದಲ್ಲೇನಿದೆ?

 

ನಮ್ಮ ಶಾಲೆಯ ಗಂಡು ಮಕ್ಕಳು ಹೆಬ್ಬುಲಿಯಂತಹ ಇತರೆ ತರಹದ ಹೇರ್‌ ಕಟಿಂಗ್‌ (ತಲೆಯ ಒಂದು ಬದಿಗೆ ಕೂದಲು ಬಿಟ್ಟು ಇನ್ನೊಂದು ಬದಿಗೆ ಕೂದಲು ಉಳಿಸಿಕೊಳ್ಳುವುದು) ಮಾಡಿಸಿಕೊಂಡು ಶಾಲೆಗೆ ಬರುತ್ತಿದ್ದು ಇದರಿಂದ ವಿದ್ಯಾರ್ಥಿಗಳು ಶಾಲೆಯಲ್ಲಿ ಕಲಿಕೆಗೆ ಆಸಕ್ತಿ ತೋರಿಸದೇ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ಹೆಚ್ಚು ಮಹತ್ವ ನೀಡದೇ ಕಲಿಕೆಯಲ್ಲಿ ಹಿಂದೆ ಉಳಿಯುತ್ತಿದ್ದಾರೆ.

 

ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಒಪ್ಪುವಂತಹ ಹೇರ್‌ ಕಟಿಂಗ್‌ ಮಾಡಲು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ. ಒಂದು ವೇಳೆ ವಿದ್ಯಾರ್ಥಿಗಳು ಹೆಬ್ಬುಲಿ ಹೇರ್‌ ಕಟಿಂಗ್‌ ಮಾಡಲು ನಿಮಗೆ ಒತ್ತಾಯಿಸಿದರೆ ಅಂತಹ ವಿದ್ಯಾರ್ಥಿಗಳ ಹೆಸರನ್ನು ನನಗೆ ಅಥವಾ ಅವರ ಪಾಲಕರ ಗಮನಕ್ಕೆ ತರಬೇಕು ಎಂದು ಮುಖ್ಯೋಪಾಧ್ಯಾಯ ಶಿವಾಜಿ ನಾಯಕ್‌ ಅವರು ಹೇರ್‌ ಕಟಿಂಗ್‌ ಅಂಗಡಿ ಮಾಲೀಕರಿಗೆ ಬರೆದ ಪತ್ರದಲ್ಲಿ ಕೋರಿದ್ದಾರೆ.

Hot this week

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...
Please Scan to make Your Contribution

Topics

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

Related Articles

Popular Categories

error: Content is protected !!