Monday | September 21, 2026 |

ಹೊರಗುತ್ತಿಗೆ ಸೇವೆ ಸ್ಥಗಿತಕ್ಕೆ ಸೂಚನೆ; ಬೀದಿಗೆ ಬಿದ್ದ ಅಟಲ್‌ಜಿ ಜನಸ್ನೇಹಿಯ ಡೇಟಾ ಎಂಟ್ರಿ ಆಪರೇಟರ್‍‌ಗಳು

ಬೆಂಗಳೂರು; ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಏದುಸಿರು ಬಿಡುತ್ತಿರುವ ಕಾಂಗ್ರೆಸ್‌ ಸರ್ಕಾರವು ಇದೀಗ ಏಕಾಏಕೀ ರಾಜ್ಯದ ಅಟಲ್‌ಜಿ ಜನಸ್ನೇಹಿ ಕೇಂದ್ರಗಳಲ್ಲಿ ಹೊರಗುತ್ತಿಗೆ ಸೇವೆ ಸ್ಥಗಿತಗೊಳಿಸಿ ಡೇಟಾ ಎಂಟ್ರಿ ಆಪರೇಟರ್‍‌ಗಳನ್ನು ಬೀದಿಯಲ್ಲಿ ನಿಲ್ಲಿಸಿದೆ.

 

ಸಾರ್ವತ್ರಿಕ ಚುನಾವಣೆ, ಕೋವಿಡ್‌ ಸಂದರ್ಭ, ಅತಿವೃಷ್ಟಿ ಮತ್ತು ಅನಾವೃಷ್ಟಿಯಂತಹ ಸಂದರ್ಭಗಳಲ್ಲಿ ಅಟಲ್‌ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಡೇಟಾ ಎಂಟ್ರಿ ಆಪರೇಟರ್‍‌ಗಳು ಕಾರ್ಯನಿರ್ವಹಿಸುತ್ತಿದ್ದರು. ಆದರೀಗ ಕಾಂಗ್ರೆಸ್‌ ಸರ್ಕಾರವು ದಿಢೀರ್‍‌ ಎಂದು ಅವರ ಸೇವೆಯನ್ನು ಸ್ಥಗಿತಗೊಳಿಸಿ ಹೊರಡಿಸಿರುವ ಆದೇಶದಿಂದಾಗಿ ಅವರ ಬದುಕನ್ನು ಕಿತ್ತುಕೊಂಡತಾಗಿದೆ.

 

ಈ ಸಂಬಂಧ ಡೇಟಾ ಆಪರೇಟರ್‍‌ಗಳು ತಮ್ಮ ಸೇವೆ ಮುಂದುವರೆಸಬೇಕು ಎಂದು ಕೋರಿ ಸಲ್ಲಿಸಿದ್ದ ಮನವಿಯೂ ಮುಖ್ಯಮಂತ್ರಿ ಕಚೇರಿಯ ಕಸದ ಬುಟ್ಟಿಗೆ ಸೇರಿದೆ.

 

ಹೊರಗುತ್ತಿಗೆ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಡೇಟಾ ಆಪರೇಟರ್‍‌ಗಳನ್ನು 2023ರ ಜುಲೈ 28ರಂದು ನಡೆದ ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಅವರ ನಿರ್ದೇಶನದಂತೆ ಕೆಲಸದಿಂದ ಕಿತ್ತು ಹಾಕಲಾಗಿದೆ.’ಅಟಲ್‌ಜೀ ಜನಸ್ನೇಹಿ ನಿರ್ದೇಶನಾಲಯದ ಅಡಿಯಲ್ಲಿ ನೇಮಿಸಿಕೊಂಡಿರುವ ಡಾಟಾ ಎಂಟ್ರಿ ಆಪರೇಟರ್‍‌ಗಳನ್ನು ಆರ್ಥಿಕ ಇಲಾಖೆಯು ಅನುಮೋದಿಸಿರುವವ ಸಂಸ್ಥೆಗೆ ಸೀಮಿತಗೊಳಿಸಿ ಇನ್ನುಳಿದ ಆಪರೇಟರ್‍‌ಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲು ಸೂಚಿಸಲಾಗಿದೆ,’ ಎಂದು ನಿರ್ದೇಶಕರು 2023ರ ಜುಲೈ 31ರಂದು ಅಧಿಕೃತ ಜ್ಞಾಪನ ಪತ್ರ ಹೊರಡಿಸಿದ್ದಾರೆ. ಈ ಪತ್ರವು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ರಾಜ್ಯದ ಅಟಲ್‌ಜೀ ಜನಸ್ನೇಹಿ ಕೇಂದ್ರಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಡೇಟಾ ಎಂಟ್ರಿ ಆಪರೇಟರ್‍‌ಗಳ ಸೇವೆಯನ್ನು ಒದಗಿಸಲು ಧಾರವಾಡದ ಎಸ್‌ಬಿಎಲ್‌ ಎಂಟರ್‍‌ಪ್ರೈಸೆಸ್‌ಗೆ ಸೂಚಿಸಲಾಗಿತ್ತು. ಜುಲೈ 2023ರವರೆಗೆ ಈ ಸಂಸ್ಥೆಯಿಂದ ರಾಜ್ಯದ ಅಟಲ್‌ಜೀ ಜನಸ್ನೇಹಿ ಕೇಂದ್ರಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಡೇಟಾ ಎಂಟ್ರಿ ಆಪರೇಟರ್‍‌ಗಳ ಸೇವೆಯನ್ನು ಪಡೆಯಲಾಗಿತ್ತು.

 

‘ಅಟಲ್‌ಜಿ ಜನಸ್ನೇಹಿ ಕೇಂದ್ರಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಡೇಟಾ ಎಂಟ್ರಿ ಆಪರೇಟ್‌ಗಳನ್ನು ಕೂಡಲೇ ಕರ್ತವ್ಯದಿಂದ ಬಿಡುಗಡೆಗೊಳಿಸಲು ಸೂಚಿಸಿ ಹೊರಗುತ್ತಿಗೆ ಆಧಾರದ ಸೇವೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಿ ಆದೇಶಿಸಿದೆ.

 

ಸುಮಾರು ವರ್ಷಗಳಿಂದ ಅಟಲ್‌ ಜಿ ಜನಸ್ನೇಹಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಚುನಾವಣೆ, ಕೋವಿಡ್‌, ಅತಿವೃಷ್ಟಿ, ಅನಾವೃಷ್ಟಿ ಸಂದರ್ಭದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸೇವೆಯನ್ನು ಸ್ಥಗಿತಗೊಳಿಸುವ  ನಿರ್ಧಾರದಿಂದ ನಮ್ಮ ಜೀವನವೇ ಬಲಿಯಾಗಲಿದೆ ಎಂದು ಡೇಟಾ ಎಂಟ್ರಿ ಆಪರೇಟರ್‍‌ಗಳು ಮನವಿಯಲ್ಲಿ ಗೋಳು ತೋಡಿಕೊಂಡಿದ್ದಾರೆ.

 

‘ನಾವೆಲ್ಲರೂ ಇದೇ ಕೆಲಸವನ್ನು ಅವಲಂಬಿಸಿ ಬದುಕುತ್ತಿದ್ದೇವೆ. ನಮ್ಮ ಕುಟುಂಬವೂ ಕೂಡ ನಮ್ಮನ್ನೇ ಆಧರಿಸಿ ಜೀವನ ನಡೆಸುತ್ತಿದೆ. ನಾವು ಎಷ್ಟೋ ಜನರು ಅಂಗವಿಕಲರಿದ್ದೇವೆ. ವಿಧವೆಯರಿದ್ದೇವೆ. ನಾವೀಗ ಬೀದಿಪಾಲಾಗಿದ್ದೇವೆ. ನಾವೆಲ್ಲರೂ ಇದೇ ಕೆಲಸವನ್ನು ಅವಲಂಬಿಸಿ ನಮ್ಮ ಮಕ್ಕಳನ್ನು ಶಾಲೆಗೆ ಕಳಿಸುತ್ತಿದ್ದೇವೆ. ಈಗ ತಾವು ನಮ್ಮನ್ನು ಕೆಲಸದಿಂದ ಸ್ಥಗಿತಗೊಳಿಸಿದರೆ ನಾವು  ನಮ್ಮ ಮಕ್ಕಳು ಬೀದಿಪಾಲಾಗುವ ಪರಿಸ್ಥಿತಿ ಬರುತ್ತದೆ. ನಮ್ಮ ಜೀವನ ಬೀದಿಪಾಲಾಗಲು ಕಾರಣಕರ್ತರಾಗಬೇಡಿ,’ ಎಂದು ಡೇಟಾ ಆಪರೇಟರ್‍‌ಗಳು ಮನವಿಯಲ್ಲಿ ಕೋರಿದ್ದಾರೆ.

Hot this week

ಖರ್ಗೆ ಕುಟುಂಬ ಸದಸ್ಯರ ಸಿದ್ದಾರ್ಥ ವಿಹಾರ ಟ್ರಸ್ಟ್‌; ಪ್ರಕರಣ ಮುಂದುವರಿಕೆ, ಲೋಕಾಯುಕ್ತ ಎಸ್‌ಪಿ ಗೆ ನೋಟೀಸ್‌ ನೀಡಿದ ನ್ಯಾಯಾಲಯ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ,...

ಪಿಎಸ್‌ಐ ನೇಮಕಾತಿ ಹಗರಣ; ಅಮೃತ್‌ ಪೌಲ್‌ ವಿರುದ್ಧ ಇಲಾಖೆ ವಿಚಾರಣೆ, ವಿಚಾರಣಾಧಿಕಾರಿಗೆ 15 ಲಕ್ಷ ರು ಸಂಭಾವನೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪಿಎಸ್‌ಐಗಳ ನೇಮಕಾತಿಯಲ್ಲಿನ...

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...
Please Scan to make Your Contribution

Topics

ಪಿಎಸ್‌ಐ ನೇಮಕಾತಿ ಹಗರಣ; ಅಮೃತ್‌ ಪೌಲ್‌ ವಿರುದ್ಧ ಇಲಾಖೆ ವಿಚಾರಣೆ, ವಿಚಾರಣಾಧಿಕಾರಿಗೆ 15 ಲಕ್ಷ ರು ಸಂಭಾವನೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪಿಎಸ್‌ಐಗಳ ನೇಮಕಾತಿಯಲ್ಲಿನ...

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...

ಅನಂತ್‌ ನಾಗ್‌ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ; 8 ವರ್ಷದ ಹಿಂದಿನ ವಿಸ್ತೃತ ಸಂದರ್ಶನ

ಬೆಂಗಳೂರು;  ಕನ್ನಡ ಚಿತ್ರರಂಗದ  ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ...

ಭೂಗತ ಸುರಂಗ ಮಾರ್ಗ; ರಿಯಾಯಿತಿ ಅವಧಿಯಲ್ಲೇ ಗರಿಷ್ಠ ಟೋಲ್‌ ಸಂಗ್ರಹಣೆ, ದರ ಪರಿಷ್ಕರಣೆಯ ಹಿಂದಿನ ರಹಸ್ಯ ಬಯಲು

ಬೆಂಗಳೂರು; ಭೂಗತ ಸುರಂಗ ಮಾರ್ಗದಲ್ಲಿ ರಿಯಾಯಿತಿ ಅವಧಿಯಲ್ಲಿ ಗರಿಷ್ಠ ಟೋಲ್‌ ಸಂಗ್ರಹಣೆ...

Related Articles

Popular Categories

error: Content is protected !!