Friday | March 20, 2026 |

ಕಡತ, ರಿಜಿಸ್ಟರ್‍‌ ಹೊತ್ತೊಯ್ದಿದ್ದ ಆರೋಪ; ಮಾಜಿ ಸಚಿವ ಆನಂದ್‌ಸಿಂಗ್‌ ಅಳಿಯ ಸೇರಿ 13 ಮಂದಿಗೆ ನೋಟೀಸ್‌

Support THE-FILE

spot_img

ಬೆಂಗಳೂರು; ನಗರಸಭೆ ದಾಖಲೆ ಕೊಠಡಿಯಲ್ಲಿದ್ದ ಡಿಮ್ಯಾಂಡ್‌ ರಿಜಿಸ್ಟ್ರರ್‍‌ಗಳು ಸೇರಿದಂತೆ ಹಲವು ಮಹತ್ವದ ದಾಖಲೆಗಳನ್ನು  ಹೊತ್ತೊಯ್ದಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆನಂದ್‌ಸಿಂಗ್‌ ಅವರ ಅಳಿಯ ಸಂದೀಪ್‌ ಸಿಂಗ್‌, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಹಾಲಿ ಪೌರಾಯುಕ್ತ ವಿ ರಮೇಶ್‌ ಸೇರಿದಂತೆ ಒಟ್ಟು 13 ಮಂದಿಗೆ ಹೊಸಪೇಟೆ ನಗರಸಭೆಯ ಹಾಲಿ ಪೌರಾಯುಕ್ತರು ನೋಟೀಸ್‌ ಜಾರಿಗೊಳಿಸಿದ್ದಾರೆ.

 

ಹೊಸಪೇಟೆ ನಗರಸಭೆಯ ದ್ವಿತೀಯ ದರ್ಜೆ ಗುಮಾಸ್ತ ಸುರೇಶ್‌ಬಾಬು ಡಿ ಹೆಚ್‌ ಎಂಬುವರು ಮುಖ್ಯಮಂತ್ರಿ ಸಿದ್ದರಾಮಯ್ಯ , ಪೌರಾಡಳಿತ ಸಚಿವ ರಹೀಂ ಖಾನ್‌ ಅವರಿಗೆ ಸಲ್ಲಿಸಿದ್ದ ದೂರನ್ನಾಧರಿಸಿ   ‘ದಿ ಫೈಲ್‌’ ವರದಿ ಪ್ರಕಟಿಸಿತ್ತು. ವರದಿ ಬೆನ್ನಲ್ಲೇ  13 ಮಂದಿಗೆ ನೋಟೀಸ್‌ ಜಾರಿಗೊಳಿಸಿರುವುದು ಗೊತ್ತಾಗಿದೆ. ನೋಟೀಸ್‌ನ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಈ ಪ್ರಕರಣದಲ್ಲಿ ಮಾಜಿ ಸಚಿವ ಆನಂದ್‌ ಸಿಂಗ್‌ ಅವರ ಅಳಿಯ ಸಂದೀಪ್‌ ಸಿಂಗ್‌, ಹೊಸಪೇಟೆಯ ಹಿಂದಿನ ಪೌರಾಯುಕ್ತ ಮನೋಹರ್‍‌, ಮನ್ಸೂರ್‍‌ ಅಹ್ಮದ್‌, ಕಂದಾಯ ಅಧಿಕಾರಿ ಅಜೀತ್‌ ಸಿಂಗ್‌, ಕಚೇರಿ ವ್ಯವಸ್ಥಾಪಕ ಸುಬ್ರಮಣ್ಯ ಶೆಟ್ಟಿ, ಯೋಜನಾ ನಿರ್ದೇಶಕರ ಕಾರ್ಯಾಲಯದ ಎಫ್‌ಡಿಎ ನೂರ್‍‌ ಅಹಮ್ಮದ್‌, ಸುರೇಶ್‌, ರಾಮಪ್ಪ, ಹೆಚ್‌ ಯಲ್ಲಪ್ಪ, ಹೆಚ್‌ ಶಂಕರ್‍‌  ಮತ್ತು ದೂರುದಾರ ಸುರೇಶ್‌ ಬಾಬು ಡಿ ಹೆಚ್‌ ಅವರಿಗೂ ನೋಟೀಸ್‌ ಜಾರಿಯಾಗಿದೆ.

 

ನೋಟೀಸ್‌ ತಲುಪಿದ 24 ಗಂಟೆಯೊಳಗೆ ಸೂಕ್ತ ಲಿಖಿತ ಸಮಜಾಯಿಷಿ ನೀಡಬೇಕು. ಇಲ್ಲದಿದ್ದಲ್ಲಿ ನಿಯಮಾನುಸಾರ ತಮ್ಮ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದೂ ನೋಟೀಸ್‌ನಲ್ಲಿ ಎಚ್ಚರಿಕೆ ನೀಡಿರುವುದು ಗೊತ್ತಾಗಿದೆ.

 

ಪ್ರಕರಣದ ವಿವರ

 

 

‘ಮಾಜಿ ಸಚಿವ ಆನಂದ್‌ ಸಿಂಗ್‌ ಹಾಗೂ ಅವರ ಕುಟುಂಬ ಸದಸ್ಯರು ರಾಜಕೀಯ ದರ್ಪದಿಂದ ಅಕ್ರಮವಾಗಿ ನಗರಸಭೆ ದಾಖಲೆ ಕೊಠಡಿಯಲ್ಲಿದ್ದ ಡಿಮ್ಯಾಂಡ್‌ ರಿಜಿಸ್ಟರ್‍‌ಗಳು, ಕೆಎಂಎಫ್‌ 24 ರಿಜಿಸ್ಟರ್‍‌ಗಳು, ಎಂ ಆರ್‍‌ 19 ರಿಜಿಸ್ಟರ್‍‌ಗಳು ಹಾಗೂ ಇನ್ನಿತರೆ ಡಿಮ್ಯಾಂಡ್‌ ರಿಜಿಸ್ಟರ್‍‌ಗಳ ಕಡತಗಳನ್ನು ಪೌರಾಯುಕ್ತ ಮನೋಹರ್‍‌ ಅವರ ಸಮ್ಮುಖದಲ್ಲಿಯೇ ಹೊತ್ತೊಯ್ದಿದ್ದಾರೆ. ಸಿಸಿಟಿವಿ ಕ್ಯಾಮರಾಗಳನ್ನು ಬಂದ್‌ ಮಾಡಿಸಿ ತೆಗೆದುಕೊಂಡು ಹೋಗಿದ್ದಾರೆ,’ ಎಂದು ನಗರಸಭೆಯ ದ್ವಿತೀಯ ದರ್ಜೆ ಸಹಾಯಕ ಸುರೇಶ್‌ಬಾಬು ಎಂಬುವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ಸಲ್ಲಿಸಿದ್ದರು.

 

ಮಾಜಿ ಸಚಿವ ಆನಂದ್‌ ಸಿಂಗ್‌ ಅವರ ಅಳಿಯ ಸಂದೀಪ್‌ ಸಿಂಗ್‌, ನಗರಸಭೆಯ ಹಾಲಿ ಸದಸ್ಯರು ಮತ್ತು ಮಾಜಿ ಸದಸ್ಯ ವೇಣುಗೋಪಾಲ್‌ ಮತ್ತಿತರರು , ನಗರಸಭೆಯ ಈ ಹಿಂದಿನ ಪೌರಾಯುಕ್ತರಾದ ವಿ ರಮೇಶ್‌, ಮನ್ಸೂರ್‍‌ ಅಹ್ಮದ್‌, ಕಂದಾಯ ಅಧಿಕಾರಿಗಳಾದ ಸುಬ್ರಮಣ್ಯ ಶೆಟ್ಟಿ, ಅಜಿತ್‌ ಸಿಂಗ್‌, ದ್ವಿತೀಯ ದರ್ಜೆ ಸಹಾಯಕರಾದ ನೂರ್‍‌ ಅಹಮ್ಮದ್‌, ಸುರೇಶ್‌, ವ್ಯವಸ್ಥಾಪಕ ಕೃಷ್ಣಮೂರ್ತಿ, ಬಿಲ್ ಕಲೆಕ್ಟರ್‍‌ ಯಲ್ಲಪ್ಪ, ರಾಮಪ್ಪ, ಶಂಕರ್‍‌ ಮತ್ತಿತರರು ಆನಂದ್‌ ಸಿಂಗ್‌ ಅವರ ಅಳಿಯ ಸಂದೀಪ್‌ ಸಿಂಗ್‌ ಅವರಿಗೆ ಈ ಅಕ್ರಮಕ್ಕೆ ಸಹಕರಿಸಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದರು.

 

‘ಕಡತಗಳನ್ನು ತೆಗೆದುಕೊಂಡು ಹೋಗಿದ್ದರೂ ಇದುವರೆಗೂ ಅವುಗಳನ್ನು ವಾಪಸ್‌ ತಂದುಕೊಟ್ಟಿಲ್ಲ. ಇದರ ಬಗ್ಗೆ ಸಾಕಷ್ಟು ಬಾರಿ ಪೌರಾಯುಕ್ತರ ಗಮನಕ್ಕೆ ತಂದರೂ ಸಹ ನನಗೆ ಬೈದು ನೀನು ಸುಮ್ಮನೆ ಇದ್ದುಬಿಡು. ಸಾರ್ವಜನಿಕರು ಏನು ಕೇಳಿದರೂ ನನ್ನಹತ್ತಿರ ಯಾವುದೇ ದಾಖಲೆಗಳು ಇಲ್ಲ ಎಂದು ಹೇಳು ಎಂದು ಪೌರಾಯುಕ್ತರು ಹೇಳಿದ್ದರು,’ ಎಂದು ದೂರಿನಲ್ಲಿ ಹೇಳಲಾಗಿತ್ತು.

 

ವಾರ್ಡ್‌ ನಂಬರ್‍‌ 35ರಲ್ಲಿ ಎಂ ಆರ್‍‌ 19, ವ್ಯಾಲಂ ನಂ -2, 03, 05, 06, ವಾರ್ಡ್‌ ನಂಬರ್‍‌ 35 ಜಂಬುನಾಥನಹಳ್ಳಿ ಎಂ ಆರ್‍‌ 26 ವ್ಯಾಲಂ ನಂ 05, ಕೆಎಂಎಫ್‌ ವ್ಅಲಂ ನಂ 32, 33, 34,35, 36, 38, 39, ವಾರ್ಡ್ ನಂಬರ್‍‌ 8ರಲ್ಲಿ ಎಂ ಆರ್‍‌ 26 ವ್ಯಾಲಂ ನಂ 03, 18, 21, 82, 93, ರೆಜ್ಯೂಲೇಷನ್‌ ರಿಜಿಸ್ಟರ್‍‌ 1990-91ರಿಂದ 1992-93, ಕಲ್ಲಹಳ್ಳಿ ಗ್ರಾಮ ಪಂಚಾಯ್ತಿಗೆ ಸೇರಿದ ಡಿಮ್ಯಾಂಡ್‌ ರಿಜಿಸ್ಟರ್‍‌ ವ್ಯಾಲಂ 01, 04, 02, ಸಂಕ್ಲಾಪುರ ರಿಜಿಸ್ಟರ್‍‌ ವ್ಯಾಲಂ ನಂ 02, ಅಮರಾವತಿ ಪುರಸಭೆ ಎಂ ಆರ್‍‌ ನಂ 19, ವ್ಯಾಲಂ ನಂ 01,02 ಹಳೇ ವಾರ್ಡ್‌ ನಂ 6, ವ್ಯಾಲಂ 01 ಸೇರಿದಂತೆ ಒಟ್ಟು 49 ಕಡತಗಳು, ರಿಜಿಸ್ಟರ್‍‌ಗಳನ್ನು ಅಕ್ರಮವಾಗಿ ತೆಗೆದುಕೊಂಡು ಹೋಗಿದ್ದಾರೆ ಎಂದು ಸುರೇಶ್‌ ಬಾಬು ಅವರು ದೂರಿನಲ್ಲಿ ವಿವರಿಸಿದ್ದರು.

ದರ್ಪ; ಪೌರಾಯುಕ್ತರ ಸಮ್ಮುಖದಲ್ಲೇ ರಿಜಿಸ್ಟರ್‍‌, ಕಡತ, ದಾಖಲೆಗಳ ಹೊತ್ತೊಯ್ದರೇ ಮಾಜಿ ಸಚಿವರ ಅಳೀಮಯ್ಯ?

ಆನಂದ್‌ ಸಿಂಗ್‌ ಅವರು ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇದಕ್ಕೂ ಮೊದಲು ಕಾಂಗ್ರೆಸ್‌ ಮತ್ತು ಸಿದ್ದರಾಮಯ್ಯ ಅವರೊಂದಿಗೆ ನಿಕಟವಾಗಿ ಗುರುತಿಸಿಕೊಂಡಿದ್ದನ್ನು ಸ್ಮರಿಸಬಹುದು.

Hot this week

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

Topics

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

Related Articles

Popular Categories

error: Content is protected !!