Wednesday | March 18, 2026 |

ವಿಪತ್ತು ನಿರ್ವಹಣೆಯಲ್ಲಿರುವುದು ಕೇವಲ 930.14 ಕೋಟಿ; ಬೆಳೆಹಾನಿ ಸಬ್ಸಿಡಿ ಪಾವತಿಗೆ ಅನುದಾನ ಕೊರತೆ?

Support THE-FILE

spot_img

ಬೆಂಗಳೂರು; ಬರ ಪರಿಹಾರಕ್ಕೆ 5,283.32  ಕೋಟಿ ರು ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿರುವ ರಾಜ್ಯದಲ್ಲೀಗ ಬೆಳೆ ಹಾನಿ ಇನ್‌ಪುಟ್‌ ಸಬ್ಸಿಡಿ ಪಾವತಿಸಲು ಅನುದಾನ ಕಡಿಮೆ ಇರುವುದು ಇದೀಗ ಬಹಿರಂಗವಾಗಿದೆ.

 

ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದ್ದು ಬೆಳೆ ಹಾನಿ ಪರಿಹಾರಕ್ಕೆ ಎಲ್ಲ ರೀತಿಯಿಂದಲೂ ಸ್ಪಂದಿಸಲಾಗುವುದು ಎಂದು ಕೃಷಿ ಸಚಿವ ಕೃಷ್ಣಬೈರೇಗೌಡ ಅವರು ಹೇಳಿಕೆ ನೀಡಿರುವ ಬೆನ್ನಲ್ಲೇ ಬೆಳೆ ಹಾನಿ ಇನ್‌ಪುಟ್‌ ಸಬ್ಸಿಡಿ ಪಾವತಿಸಲು ಅನುದಾನ ಕಡಿಮೆ ಇದೆ ಎಂಬ ಸಂಗತಿಯು ಮುನ್ನೆಲೆಗೆ ಬಂದಿದೆ.

 

ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ಕೋಶದ ಅಧಿಕಾರಿಗಳು ಬೆಳೆ ಹಾನಿ ಇನ್‌ಪುಟ್‌ ಸಬ್ಸಿಡಿ ಪಾವತಿಸಲು ಅನುದಾನ ಕಡಿಮೆ ಇದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರ ಗಮನಕ್ಕೆ ತಂದಿದ್ದಾರೆ. ನೈರುತ್ಯ ಮುಂಗಾರು 2023ರಲ್ಲಿ ಮಳೆಯ ಕೊರತೆಯಿಂದಾಗಿ ತುತ್ತಾಗಿರುವ ತಾಲೂಕುಗಳನ್ನು ಬರ ಘೋಷಣೆ ಮಾಡುವ ಸಂಬಂಧ 2023ರ ಸೆಪ್ಟಂಬರ್‍‌ 22ರಂದು  ನಡೆಯಲಿರುವ  ಸಚಿವ ಸಂಪುಟಕ್ಕೆ ಮಂಡಿಸಿರುವ ಟಿಪ್ಪಣಿಯಲ್ಲಿಯೂ (ಸಂಖ್ಯೆ; ಕಂಇ 449 ಟಿಎನ್‌ಆರ್‍‌ 2023) ಈ ಅಂಶವನ್ನೂ ಪ್ರಸ್ತಾವಿಸಲಾಗಿದೆ. ಈ ಸಂಬಂಧ ಕೆಲ ದಾಖಲೆಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

‘ಬೆಳೆಹಾನಿ ಇನ್‌ಪುಟ್‌ ಸಬ್ಸಿಡಿ ಪಾವತಿಸಲು ಎಸ್‌ಡಿಆರ್‍‌ಎಫ್‌ ಅಡಿ 930.14 ಕೋಟಿ ಲಭ್ಯವಿದ್ದು ಅನುದಾನ ಕಡಿಮೆ ಇರುವುದರಿಂದ ಬರ ಘೋಷಣೆ ನಂತರ ಬರ ಕೈಪಿಡಿ 2020ರ ಪ್ರಕಾರ ಸಮಗ್ರ ಜ್ಞಾಪಕ ಪತ್ರವನ್ನು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (ಎನ್‌ಡಿಆರ್‍ಎಫ್‌) ಹಂಚಿಕೆಗಾಗಿ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯಕ್ಕೆ ಸಲ್ಲಿಸಲಾಗುವುದು. ಎನ್‌ಡಿಆರ್‍‌ಎಫ್‌ ಹಂಚಿಕೆಯನ್ನು ರೈತರಿಗೆ ಇನ್ಫುಟ್‌ ಸಬ್ಸಿಡಿ/ ಬೆಳೆ ನಷ್ಟ ಪರಿಹಾರವನ್ನು ವಿತರಿಸಲು ಬಳಸಲಾಗುತ್ತದೆ,’ ಎಂದು ವಿಪತ್ತು ನಿರ್ವಹಣೆ ಅಧಿಕಾರಿಗಳು ಸಚಿವ ಸಂಪುಟ ಟಿಪ್ಪಣಿಯಲ್ಲಿ ವಿವರಿಸಿರುವುದು ಗೊತ್ತಾಗಿದೆ.

 

ಟ್ಯಾಂಕರ್‍‌ ಮತ್ತು ಕೊಳವೆ ಬಾವಿಗಳ ಮೂಲಕ ಕುಡಿಯುವ ನೀರು ಸರಬರಾಜು ಮುಂತಾದ ತಕ್ಷಣದ ಬರ ಪರಿಹಾರದ ವೆಚ್ಚವನ್ನು ಪ್ರಾಥಮಿಕವಾಗಿ ರಾಜ್ಯ ಸರ್ಕಾರದ ಬಳಿ ಲಭ್ಯವಿರುವ ಎಸ್‌ಡಿಆರ್‍‌ಎಫ್‌ ನಿಧಿಯಿಂದ ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ ಮಾನದಂಡಗಳ ಪ್ರಕಾರ ಮಾಡಲಾಗುತ್ತದೆ ಎಂದು ಟಿಪ್ಪಣಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.

 

ಹೆಚ್ಚುವರಿಯಾಗಿ 134 ತಾಲೂಕುಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳಿಂದ ಬೆಳೆ ಹಾನಿ ಸಮೀಕ್ಷೆ ವರದಿ ಪಡೆದಿದೆ. ಒಟ್ಟು 134 ತಾಲೂಕುಗಳಲ್ಲಿ 2,625 ಗ್ರಾಮಗಳನ್ನು ರ್‍ಯಾಂಡಮ್‌ ಆಗಿ ಗುರುತಿಸಿ ಇವುಗಳಲ್ಲಿ ಒಟ್ಟು 19,075 ಪ್ಲಾಟ್‌ಗಳಲ್ಲಿ ಆಪ್‌ ಮೂಲಕ ಬೆಳೆ ದೃಢೀಕರಣ ಮಾಡಲಾಗಿದೆ. ಮೊದಲು ಸಾಧಾರಣವೆಂದು ಗುರುತಿಸಲಾಗಿದ್ದ 51 ತಾಲೂಕುಗಳಲ್ಲಿ ಮತ್ತೊಮ್ಮೆ ಬೆಳೆ ಹಾನಿ ದೃಢೀಕರಣ ಕೈಗೊಳ್ಳಲಾಗಿತ್ತು. ನಂತರ 41 ತಾಲೂಕುಗಳು ತೀವ್ರ ಬರ ವರ್ಗದಲ್ಲಿ ಹಾಗೂ ಉಳಿದ 10 ತಾಲೂಕುಗಳನ್ನು ಸಾಧಾರಣ ಬರ ವರ್ಗದಲ್ಲಿ ಗುರುತಿಸಲಾಗಿತ್ತು.

 

ಹೊಸದಾಗಿ ಬರ ಪರಿಸ್ಥಿತಿ ಕಂಡು ಬಂದ 83 ತಾಲೂಕುಗಳಲ್ಲಿ ಯಳಂದೂರು ತಾಲೂಕು ಶೇ.33ಕ್ಕಿಂತ ಕಡಿಮೆ ಬೆಳೆ ಹಾನಿಯಾಗಿರುವುದರಿಂದ ಬರ ಎಂದು ಘೋಷಿಸಲು ಅರ್ಹತೆ ಪಡೆದಿರಲಿಲ್ಲ. ಆದ್ದರಿಂದ ಈ ತಾಲೂಕನ್ನು ಹೊರತುಪಡಿಸಿ 82 ತಾಲೂಕುಗಳ ಪೈಕಿ 58 ತಾಲೂಕುಗಳು ತೀವ್ರ ಬರ ಹಾಗೂ 24 ತಾಲೂಕುಗಳು ಸಾಧಾರಣ ಬರ ಎಂದು ನಿರ್ಣಯಿಸಿದೆ ಎಂಬ ಅಂಶವನ್ನು ಸಚಿವ ಸಂಪುಟ ಟಿಪ್ಪಣಿ ಹಾಳೆಯಲ್ಲಿ ವಿವರಿಸಿರುವುದು ಗೊತ್ತಾಗಿದೆ.

ರಾಜ್ಯದಲ್ಲಿ ಶೇ.70ರಷ್ಟು ಬೆಳೆ ಹಾನಿ; 10,117 ಬೆಳೆ ತಾಕುಗಳಲ್ಲಿ ಶೇ.50ಕ್ಕಿಂತಲೂ ನಷ್ಟ

 

ಬರ ಕೈಪಿಡಿ 2020ರ ಪ್ರಕಾರ ಕಡ್ಡಾಯ ಮತ್ತು ಪರಿಣಾಮ ಸೂಚಕಗಳಲ್ಲಿ ಒಟ್ಟು 236 ತಾಲೂಕುಗಳಲ್ಲಿ ಬೆಳೆ ಹಾನಿ ದೃಢೀಕರಣ ನಂತರ ಅರ್ಹತೆ ಪಡೆದ 195 ತಾಲೂಕುಗಳ ಪೈಕಿ 161 ತೀವ್ರ ಬರ ಹಾಗೂ 34 ಸಾಧಾರಣ ಬರ ತಾಲೂಕುಗಳಲ್ಲಿ ಕಾಲ ಕಾಲಕ್ಕೆ ಅರ್ಹತೆ ಪಡೆಯುವ ಆಧಾರದ ಮೇಲೆ ಬರ ಘೋಷಿಸಿರುವ ಸರ್ಕಾರದ ಆದೇಶಕ್ಕೆ ಸಚಿವ ಸಂಪುಟದ ಘಟನೋತ್ತರ ಅನುಮೋದನೆ ಕೋರಿದೆ.

 

‘ ಕೇಂದ್ರ ಸರ್ಕಾರಕ್ಕೆ ಬರ ಕೈಪಿಡಿ 2020ರಂತೆ ಸಂಬಂಧ ಪಟ್ಟ ಎಲ್ಲಾ ಇಲಾಖೆಗಳಿಂದ ನಿಗದಿತ ನಮೂನೆಯಲ್ಲಿ ಮಾಹಿತಿ ಪಡೆದಿದೆ. ತುರ್ತು ನಿರ್ವಹಣೆಗಾಗಿ ಅಗತ್ಯವಿರುವ ಅನುದಾನದ ವಿವರವನ್ನು ಪಡೆದು ರಾಜ್ಯ ಸರ್ಕಾರಾದಿಂದ ಬರ ನಿರ್ವಹಣೆಗಾಗಿ ಕೇಂದ್ರ ಸರ್ಕಾರದಿಂದ ಎನ್‌ಡಿಆರ್‍‌ಎಫ್‌ ಅಡಿ ಆರ್ಥಿಕ ನೆರವು ಕೋರಲು ಮೆಮೊರಂಡಮ್‌ ತಯಾರಿಸಲಾಗಿದೆ. ಕೇಂದ್ರ ಸರ್ಕಾರದ ಎಸ್‌ಡಿಆರ್‍‌ಎಫ್ ಮತ್ತು ಎನ್‌ಡಿಆರ್‍‌ಎಫ್‌ ಮಾರ್ಗಸೂಚಿ ಪ್ರಕಾರ 5,283.32 ಕೋಟಿ ರು.ಗಳನ್ನು ಕೋರಲಾಗಿದೆ,’ ಎಂದು ಸಚಿವ ಸಂಪುಟ ಟಿಪ್ಪಣಿಯ ಪ್ರಸ್ತಾವನೆಯಲ್ಲಿ ವಿವರಿಸಿರುವುದು ತಿಳಿದು ಬಂದಿದೆ.

Hot this week

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

Topics

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

Related Articles

Popular Categories

error: Content is protected !!