Friday | April 17, 2026 |

ಎಂಎಸ್‌ಐಎಲ್‌ ಟೆಂಡರ್‍‌ನಲ್ಲಿ ಅಕ್ರಮ; ನಿವೃತ್ತ ಜಿಲ್ಲಾ ನ್ಯಾಯಾಧೀಶರಿಂದ ತನಿಖೆಗೆ ಆದೇಶ

ಬೆಂಗಳೂರು; ಮೈಸೂರ್‍‌ ಇಂಟರ್‍‌ ನ್ಯಾಷನಲ್‌ ಲಿಮಿಟೆಡ್‌ನ ಪ್ರವಾಸೋದ್ಯಮ  ವ್ಯವಹಾರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ನಡೆದಿದ್ದ ಟೆಂಡರ್‍‌ ಪ್ರಕ್ರಿಯೆಯೂ ಸೇರಿದಂತೆ ಇನ್ನಿತರೆ ಚಟುವಟಿಕೆಗಳಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳ ಕುರಿತು ನಿವೃತ್ತ ಜಿಲ್ಲಾ ನ್ಯಾಯಾಧೀಶರಿಂದ ತನಿಖೆ ನಡೆಸಲು ರಾಜ್ಯ ಸರ್ಕಾರವು ಆದೇಶಿಸಿದೆ.

 

ಎಂಎಸ್‌ಐಎಲ್‌ನಲ್ಲಿನ ಪ್ರವಾಸೋದ್ಯಮ ಚಟುವಟಿಕೆಗಳ ಭಾಗವಾಗಿರುವ ಟಿಕೆಟ್‌ ಪ್ಯಾಕೇಜ್‌, ಮಾರಾಟ ಮತ್ತ ಫೋರೆಕ್ಸ್‌ ಇತ್ಯಾದಿಗಳನ್ನು ರಾಜ್ಯ ಮತ್ತು ಹೊರ ರಾಜ್ಯಗಳ ಶಾಖೆಗಳಲ್ಲಿ ನಿರ್ವಹಿಸಲು ಕರೆದಿದ್ದ ಟೆಂಡರ್‍‌ನಲ್ಲಿ ಅಕ್ರಮಗಳು ನಡೆದಿದ್ದವು ಎಂದು ಹಲವು ದೂರುಗಳು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಗೆ ಸಲ್ಲಿಕೆಯಾಗಿದ್ದವು.

 

ಈ ದೂರನ್ನಾಧರಿಸಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಯ ನಿರ್ದೇಶಕರಾದ ಐಎಎಸ್‌ ಅಧಿಕಾರಿ ಪಿ ಸತ್ಯಭಾಮ ಅವರ ನೇತೃತ್ವದಲ್ಲಿ ನಡೆದಿದ್ದ ಪ್ರಾಥಮಿಕ ತನಿಖೆಯು ಅಕ್ರಮಗಳು ನಡೆದಿವೆ ಎಂದು ಸಾಬೀತುಪಡಿಸಿತ್ತು. ಇದರ ಮುಂದುವರೆದ ತನಿಖೆಯನ್ನು ಇದೀಗ ರಾಜ್ಯ ಸರ್ಕಾರವು ನಿವೃತ್ತ ಜಿಲ್ಲಾ ನ್ಯಾಯಾಧೀಶರಿಂದ ನಡೆಸಲು 2023ರ ಸೆ.21ರಂದು ಆದೇಶ ಹೊರಡಿಸಿದೆ. ಈ ಆದೇಶದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಪ್ರಾಥಮಿಕ ತನಿಖಾ ವರದಿ ಆಧರಿಸಿ ಮುಂದಿನ ತನಿಖೆ ನಡೆಸಲು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ನಿವೃತ್ತ ಜಿಲ್ಲಾ ನ್ಯಾಯಾಧೀಶ ಬಿ ವಿ ಪ್ರಕಾಶ್‌ ಎಂಬುವರನ್ನು ನೇಮಿಸಿದೆ.

 

ಮೈಸೂರ್‍‌ ಸೇಲ್ಸ್‌ ಇಂಟರ್‍‌ ನ್ಯಾಷನಲ್‌ ಲಿಮಿಟೆಡ್‌ನಿಂದ ನಡೆಯುತ್ತಿರುವ ಪ್ರವಾಸೋದ್ಯಮ ಚಟುವಟಿಕೆಗಳಾದ ಟಿಕೆಟಿಂಗ್‌ ಪ್ಯಾಕೇಜ್‌, ಮಾರಾಟ ಮತ್ತು ಫೋರೆಕ್ಸ್‌ ಇತ್ಯಾದಿ ಚಟುವಟಿಕೆಗಳನ್ನು ನಡೆಸಲು ನಿಶಿ ಫೋರೆಕ್ಸ್‌ ಅಂಡ್‌ ಲೆಸ್ಯೂರ್‍‌ ಪ್ರೈವೈಟ್‌ ಲಿಮಿಟೆಡ್‌ಗೆ ವಹಿಸಲಾಗಿತ್ತು. ಈ ಕಂಪನಿಯು 2022ರ ಮೇ 21ರಿಂದ ಜಾರಿಗೆ ಬರುವಂತೆ ರಾಜ್ಯದ ಹಾಗೂ ರಾಜ್ಯದ ಹೊರಗಿನ ಶಾಖೆಗಳಲ್ಲಿ ಕಾರ್ಯನಿರ್ವಹಿಸಬೇಕಿತ್ತು.
ಈ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ನಡೆದಿದ್ದ ಟೆಂಡರ್‍‌ನಲ್ಲಿ ಅಕ್ರಮಗಳು ನಡೆದಿವೆ ಎಂದು ಮಂಡಳಿಯ ನಿರ್ದೇಶಕರಾದ ವೆಂಕಟೇಶ್‌ ನಾಯ್ಡು ಮತ್ತು ರವೀಂದ್ರ ಹಾಗೂ ಮಾಜಿ ನಿರ್ದೇಶಕರಾದ ಎಸ್‌ ಆರ್‍‌ ಸನತ್‌ಕುಮಾರ್‍‌ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಸಿದ್ದರು.

 

ಈ ಅಕ್ರಮದ ಕುರಿತು ಸತ್ಯಾಸತ್ಯತೆ ತಿಳಿಯಲು 2023ರ ಮಾರ್ಚ್‌ 24 ಮತ್ತು ಜೂನ್‌ 7ರಂದು ತನಿಖೆ ನಡೆಸಲು ಆದೇಶ ಹೊರಡಿಸಲಾಗಿತ್ತು. ಅದರಂತೆ ಪ್ರಾಥಮಿಕ ತನಿಖೆ ನಡೆಸಿದ್ದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ನಿರ್ದೇಶಕರಾದ ಐಎಎಸ್‌ ಅಧಿಕಾರಿ ಪಿ ಸತ್ಯಭಾಮ ಅವರು ತನಿಖೆ ನಡೆಸಿ 2023ರ ಜೂನ್‌ 28ರಂದು ತನಿಖಾ ವರದಿ ಸಲ್ಲಿಸಿದ್ದರು.

 

‘ಎಂಎಸ್‌ಐಎಲ್‌ ಸಂಸ್ಥೆಯು ಪ್ರವಾಸ ಮತ್ತು ಪ್ರಯಾಣ ಅಭಿವೃದ್ಧಿಗಾಗಿ ನಡೆಸಿದ್ದ ಟೆಂಡರ್‍‌ ಹಾಗೂ ನಿಶಿ ಫೋರೆಕ್ಸ್‌ ಲೆಸ್ಯರ್‍‌ ಪ್ರೈವೈಟ್‌ ಲಿಮಿಟೆಡ್‌ಗೆ ನೀಡಿದ್ದ ಟೆಂಡರ್‍‌ನಲ್ಲಿ ಕೆಟಿಪಿಪಿ ನಿಯಮಗಳು ಉಲ್ಲಂಘನೆಯಾಗಿರುವುದು ಸ್ಪಷ್ಟವಾಗಿ ಮತ್ತು ನಿಸ್ಸಂಶಯವಾಗಿ ಕಂಡು ಬರುತ್ತದೆ,’ ಎಂದು ಸತ್ಯಭಾಮ ಅವರು ತಮ್ಮ ವಿಚಾರಣೆ ವರದಿಯಲ್ಲಿ ಹೇಳಿದ್ದರು ಎಂಬುದು ಆದೇಶದಿಂದ ತಿಳಿದು ಬಂದಿದೆ.
ಈ ಕಂಪನಿಯು ವಿದೇಶಿ ವಿನಿಮಯ, ಹಣ ವರ್ಗಾವಣೆ, ಪಾಸ್‌ಪೋರ್ಟ್‌ ಮತ್ತು ವಿಮೆ ಸೇವೆಗಳನ್ನು ಒದಗಿಸುತ್ತಿದೆ ಎಂದು ಗೊತ್ತಾಗಿದೆ.

Hot this week

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

Topics

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

Related Articles

Popular Categories

error: Content is protected !!