Monday | May 4, 2026 |

ಜ್ಯೋತಿಷ್ಯ ಶಾಸ್ತ್ರ ಸಲಹೆ ನೀಡಲು ಸರ್ಕಾರಿ ಅಧಿಕಾರಿಗೆ ಅನುಮತಿ ನೀಡಿದ ಸರ್ಕಾರ

ಬೆಂಗಳೂರು; ಸರ್ಕಾರಿ ಕಛೇರಿ ಕೆಲಸಕ್ಕೆ ಯಾವುದೇ ತೊಂದರೆಯಾಗದಂತೆ ಬಿಡುವಿನ ವೇಳೆಯಲ್ಲಿ ಜ್ಯೋತಿಷ್ಯ ಶಾಸ್ತ್ರದ ಸಲಹೆ ನೀಡಲು ಸಹಕಾರ ಸಂಘಗಳ ಜಂಟಿ ನಿಬಂಧಕರೊಬ್ಬರಿಗೆ ಸರ್ಕಾರವು ಅನುಮತಿ ನೀಡಿರುವುದು ಇದೀಗ ಬಹಿರಂಗವಾಗಿದೆ.

 

ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮ 2021ರ 18ರಲ್ಲಿ ನಿರ್ದಿಷ್ಟವಾಗಿ ಜ್ಯೋತಿಷ್ಯ ಶಾಸ್ತ್ರದ ಸಲಹೆ ನೀಡುವ ಬಗ್ಗೆ ಏನನ್ನೂ ಸ್ಪಷ್ಟಪಡಿಸದೇ ಮತ್ತು ಉಲ್ಲೇಖಿಸದೇ ಇದ್ದರೂ ಸಹ ಸಹಕಾರ ಇಲಾಖೆಯು ಈ ಅನುಮತಿ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಶಿವಮೊಗ್ಗದ ಮಲವಗೊಪ್ಪದಲ್ಲಿರುವ ಭದ್ರಾ ಕಾಡಾದಲ್ಲಿ ಭೂ ಅಭಿವೃದ್ಧಿ ಅಧಿಕಾರಿಯಾಗಿರುವ ಡಾ ನಾಗೇಶ್‌ ಎಸ್‌ ಡೋಂಗರೆ ಅವರಿಗೆ 2023ರ ಸೆ.27ರಂದು ಈ ಅನುಮತಿ ನೀಡಿದೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಜ್ಯೋತಿಷ್ಯ ಶಾಸ್ತ್ರದ ಸಲಹೆ ನೀಡುವ ಸಂಬಂಧ ಡಾ ನಾಗೇಶ್‌ ಎಸ್‌ ಡೋಂಗರೆ ಅವರು ಅನುಮತಿ ಕೋರಿ ಸರ್ಕಾರಕ್ಕೆ 2023ರ ಆಗಸ್ಟ್‌ 17ರಂದು ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಪರಿಶೀಲಿಸಿದ್ದ ಸಹಕಾರ ಇಲಾಖೆಯು ಜ್ಯೋತಿಷ್ಯ ಶಾಸ್ತ್ರದ ಸಲಹೆ ನೀಡಲು ಅನುಮತಿ ನೀಡಿ (ಸಂ; ಸಿ ಒ / 225/ಇಸಿಎ/2023) ಪತ್ರ ಬರೆದಿದೆ. ಇದಕ್ಕೆ ಸಚಿವ ಕೆ ಎನ್‌ ರಾಜಣ್ಣ ಅವರೂ ಸಹ ಅನುಮೋದಿಸಿದ್ದಾರೆ ಎಂದು ತಿಳಿದು ಬಂದಿದೆ.

 

‘ಮನವಿಯನ್ನು ಪರಿಶೀಲಿಸಲಾಗಿದ್ದು ಸರ್ಕಾರಿ ಕಚೇರಿ ಕೆಲಸಕ್ಕೆ ಯಾವುದೇ ತೊಂದರೆಯಾಗದಂತೆ ತಮಗೆ ಬಿಡುವಿನ ವೇಳೆಯಲ್ಲಿ ಕಚೇರಿ ಕೆಲಸದ ನಂತರ ಜ್ಯೋತಿಷ್ಯ ಶಾಸ್ತ್ರದ ಸಲಹೆ ನೀಡಲು ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮ 2021ರ 18ರ ಅನುಸಾರ ಅನುಮತಿ ನೀಡಲಾಗಿದೆ. ಹಾಗೂ ಸಲಹೆಯಿಂದ ಬರುವ ಗೌರವ ಸಂಭಾವನೆಯನ್ನು ತಮ್ಮ ಆಸ್ತಿ ಮತ್ತು ಹೊಣೆಗಾರಿಕೆ ವಿವರಗಳಲ್ಲಿ ನಮೂದಿಸುವ ಷರತ್ತುಗಳಿಗೆ ಒಳಪಟ್ಟು ಅನುಮತಿ ನೀಡಲಾಗಿದೆ,’ ಎಂದು ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯು ಪತ್ರದಲ್ಲಿ ನಿರ್ದೇಶಿಸಿದ್ದಾರೆ.

 

ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮ 2021ರ 18ರಲ್ಲೇನಿದೆ?

 

ಯಾರೇ ಸರ್ಕಾರಿ ನೌಕರನು, ನಿಯಮಿಸಲಾದ ಪ್ರಾಧಿಕಾರದಿಂದ ಪೂರ್ವ ಮಂಜೂರಾತಿಯನ್ನು ಪಡೆದ ಹೊರತು, ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಯಾವುದೇ ರೀತಿಯ ವ್ಯಾಪಾರದಲ್ಲಿ ಅಥವಾ ವ್ಯವಹಾರದಲ್ಲಿ ತೊಡಗತಕ್ಕದ್ದಲ್ಲ ಅಥವಾ ಯಾವುದೇ ಇತರೆ ಉದ್ಯೋಗಕ್ಕಾಗಿ ಮಾತುಕತೆ ನಡೆಸಬಾರದು. ಅಥವಾ ಯಾವುದೇ ಇತರೆ ಉದ್ಯೋಗ ಕೈಗೊಳ್ಳಬಾರದು.

 

ಸಾಮಾಜಿಕ ಅಥವಾ ಧರ್ಮಾರ್ಥ ಸ್ವರೂಪದ ಗೌರವಾರ್ಥ ಕೆಲಸಗಳನ್ನು ಅಥವಾ ಸಾಹಿತ್ಯ, ಕಲಾತ್ಮಕ ಅಥವಾ ವೈಜ್ಞಾನಿಕ ಸ್ವರೂಪದ ಸಾಂದರ್ಭಿಕ ಕೆಲಸಗಳನ್ನು ಷರತ್ತುಗಳಿಗೊಳಪಟ್ಟು ಕೈಗೊಳ್ಳಬಹುದು.
ಅಂಥ ಯಾವುದೇ ಕೆಲಸಗಳನ್ನು ತಾನು ಕೈಗೊಂಡ ಒಂದು ತಿಂಗಳೊಳಗಾಗಿ ಅವನು ಸರ್ಕಾರಕ್ಕೆ ಅದರ ಸಂಪೂರ್ಣ ವಿವರಗಳನ್ನು ವರದಿ ಮಾಡಬೇಕು. ಅದರಿಂದ ಆತನ ಅಧಿಕೃತ ಕರ್ತವ್ಯಗಳಿಗೆ ತೊಂದರೆಯಾಗಬಾರದು ಮತ್ತು ಯಾವುದೇ ಅಂಥ ಕೆಲಸವನ್ನು ಮುಂದುವರೆಸಬಾರದು ಎಂದು ಸರ್ಕಾರವು ನಿರ್ದೇಶಿಸಿದರೆ ಅಂಥ ಕೆಲಸವನ್ನು ನಿಲ್ಲಿಸಬೇಕು ಎಂದು ಹೇಳಿದೆ.

 

ಯಾವುದೇ ಅಂಥ ಕೆಲಸವು ಚುನಾವಣೀಯ ಪದವನ್ನು ಧಾರಣ ಮಾಡುವುದನ್ನು ಒಳಗೊಂಡಿದ್ದರೇ ಅಥವಾ ನಿಯಮಿಸಲಾದ ಪ್ರಾಧಿಕಾರದ ಪೂರ್ವ ಮಂಜೂರಾತಿಯಿಲ್ಲದೇ ಅಂತಹ ಯಾವುದೇ ಪದದ ಚುನಾವಣೆಗೆ ಸ್ಪರ್ಧಿಸಬಾರದು.

 

ಸರ್ಕಾರಿ ನೌಕರನು ತನ್ನ ಅಥವಾ ತನ್ನ ಪತ್ನಿ ಅಥವಾ ಪತಿಯ ಅಥವಾ ತನ್ನ ಕುಟುಂಬದ ಯಾರೇ ಇತರ ಸದಸ್ಯನ ಒಡೆತನದಲ್ಲಿರುವ ಅಥವಾ ನಿರ್ವಹಣೆಯಲ್ಲಿರುವ ವ್ಯವಹಾರವನ್ನು ಅಥವಾ ವಿಮಾ ಏಜೆನ್ಸಿಯನ್ನು ಅಥವಾ ಕಮಿಷನ್‌ ಏಜೆನ್ಸಿಯನ್ನು ಬೆಂಬಲಿಸಿ ಪ್ರಚಾರ ಮಾಡಿದರೆ ಈ ನಿಯಮದ ಉಲ್ಲಂಘನೆಯಾಗಲಿದೆ.

 

ಪ್ರತಿಯಿಒಬ್ಬ ಸರ್ಕಾರಿ ನೌಕರನು ಅಥವಾ ಅವನ ಕುಟುಂಬದ ಯಾರೇ ಸದಸ್ಯನು ವ್ಯಾಪಾರದಲ್ಲಿ ಅಥವಾ ವ್ಯವಹಾರದಲ್ಲಿ ತೊಡಗಿದ್ದರೆ ಅಥವಾ ವಿಮಾ ಏಜೆನ್ಸಿಯ ಅಥವಾ ಕಮಿಷನ್‌ ಏಜೆನ್ಸಿಯ ಒಡೆತನ ಹೊಂದಿದ್ದರೇ ಅಥವಾ ನರ್ವಿಹಣೆ ಮಾಡುತ್ತಿದ್ದರೇ ಆ ಬಗ್ಗೆ ಪ್ರಾಧಿಕಾರಕ್ಕೆ ವರದಿ ಮಾಡಬೇಕು.

 

ಜಾರಿಯಲ್ಲಿರುವ ಇತರ ಯಾವುದೇ ಕಾನೂನಿನ ಮೇರೆಗೆ ನೋಂದಾಯಿಸಬೇಕಾದ ಅಗತ್ಯವಿರುವ ಯಾವುದೇ ಬ್ಯಾಂಕ್‌ನ್ನು ಅಥವಾ ಇತರ ಕಂಪನಿಯನ್ನು ಅಥವಾ ವಾಣಿಜ್ಯ ಉದ್ದೇಶಕ್ಕಾಗಿ ಯಾವುದೇ ಸಹಕಾರ ಸಂಘವನ್ನು ನಿಯಮಿಸಲಾದ ಪ್ರಾಧಿಕಾರದ ಪೂರ್ವ ಮಂಜೂರಾತಿ ಪಡೆಯದೇ ನೋಂದಾಯಿಸುವ ಉತ್ತೇಜಿಸುವ ಅಥವಾ ನಿರ್ವಹಣೆ ಮಾಡುವ ಕಾರ್ಯದಲ್ಲಿ ಪಾಲ್ಗೊಳ್ಳಬಾರದು.

 

ಯಾರೇ ಸರ್ಕಾರಿ ನೌಕರನು ನಿಯಮಿಸಿದ ಪ್ರಾಧಿಕಾರದಿಂದ ಸಾಮಾನ್ಯ ಅಥವಾ ವಿಶೇಷ ಮಂಜೂರಾತಿ ಪಡೆಯದೇ ಯಾವುದೇ ಸಾರ್ವಜನಿಕರ ಸಂಸ್ಥೆಗೆ ಅಥವಾ ಯಾರೇ ಖಾಸಗಿ ವ್ಯಕ್ತಿಗೆ ಮಾಡಿಕೊಟ್ಟ ಕೆಲಸಕ್ಕಾಗಿ ಯಾವುದೇ ಶುಲ್ಕವನ್ನ ತೆಗೆದುಕೊಳ್ಳಬಾರದು ಎಂದು ಸೂಚಿಸಿದೆ.

Hot this week

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...
Please Scan to make Your Contribution

Topics

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

Related Articles

Popular Categories

error: Content is protected !!