Saturday | May 9, 2026 |

ಶಾಸಕರಿಗೆ ‘ನಿದ್ರಾ’ ಮಾದರಿ ಹಾಸಿಗೆ, ದಿಂಬು ಖರೀದಿ; ಕಾಯರ್ ಬೋರ್ಡ್‌ ಬದಿಗಿರಿಸಿದ ಸರ್ಕಾರ

ಬೆಂಗಳೂರು; ಶಾಸಕರಿಗೆ  ‘ನಿದ್ರಾ’ ಮಾದರಿಯ ಹಾಸಿಗೆ, ದಿಂಬು, ತಲೆದಿಂಬು, ಸೋಫಾ, ಡೋರ್‍‌ ಫುಟ್‌ ಮ್ಯಾಟ್‌, ಟರ್ಕಿ ಟವಲ್‌, ಉಲ್ಲನ್‌ ಬೆಡ್‌ ಶೀಟ್‌ ಸೇರಿದಂತೆ ಇನ್ನಿತರೆ ಸಾಮಗ್ರಿಗಳನ್ನು 1.60 ಕೋಟಿ ರು. ವೆಚ್ಚದಲ್ಲಿ ಖರೀದಿಸಲು ಸರ್ಕಾರವು ಹೆಚ್ಚುವರಿ ಅನುದಾನವನ್ನು ಮಂಜೂರು ಮಾಡಿದೆ.

 

ಶಾಸಕರ ಭವನಕ್ಕೆ 2012ರಿಂದ 2023ರವರೆಗೂ  ಸಿಂಗಲ್‌ ಬೆಡ್‌, ಡಬಲ್‌ ಬೆಡ್‌ , ಸೋಫಾ ಲೂಸ್‌ ಕುಷನ್‌, ತಲೆದಿಂಬು, ಡೋರ್‍‌ ಫುಟ್‌ ಮ್ಯಾಟ್‌ಗಳನ್ನು ಸಾರ್ವಜನಿಕ ಉದ್ದಿಮೆಯಾದ ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮದಿಂದಲೇ ಹಾಸಿಗೆಗಳನ್ನು ಖರೀದಿಸಲಾಗುತ್ತಿತ್ತು.

 

ಆದರೆ ಇವುಗಳು ಸರಿ ಇಲ್ಲವೆಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಹೀಗಾಗಿ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚರೋಪತಿ ಕ್ಷೇಮ ವನದಲ್ಲಿ ಬಳಸಿದ್ದ ನಿದ್ರಾ ಮಾದರಿಯ ಹಾಸಿಗೆಗಳನ್ನೇ ಕೊಯಮತ್ತೂರಿನ ಖಾಸಗಿ ಕಂಪನಿಯಿಂದ ಖರೀದಿಸಲು ಮುಂದಾಗಿದೆ.

 

ಶಾಸಕರ ಕೊಠಡಿಗಳಿಗೆ ಅಗತ್ಯವಿರುವ ಸಿಂಗಲ್‌, ಡಬಲ್‌ ಹಾಸಿಗೆ, ದಿಂಬು ಸೇರಿದಂತೆ ಮತ್ತಿತರ ಸಾಮಗ್ರಿಗಳನ್ನು ಖರೀದಿಸಲು ಆರ್ಥಿಕ ಇಲಾಖೆಯು 4(ಜಿ) ವಿನಾಯಿತಿ ನೀಡಿದೆ. ಈ ಸಂಬಂಧ ‘ದಿ ಫೈಲ್‌’ ಆರ್‍‌ಟಿಐ ಅಡಿಯಲ್ಲಿ ದಾಖಲೆಗಳನ್ನು ಪಡೆದಿದೆ.

 

ಹಾಸಿಗೆ ಹಾಗೂ ಇನ್ನಿತರೆ ವಸ್ತುಗಳನ್ನು ಕೂಡಲೇ ಬದಲಾಯಿಸಿ ಹೊಸದಾದ ಹಾಸಿಗಗಳನ್ನು ನೀಡಬೇಕು ಎಂದು ಶಾಸಕರ ಒತ್ತಡ ಹೇರಿದ್ದರು.  ಇದಕ್ಕೆ  ಮಣಿದಿರುವ ವಿಧಾನಸಭೆ ಸಚಿವಾಲಯವು, ಆರ್ಥಿಕ ಇಲಾಖೆಗೆ 4(ಜಿ) ವಿನಾಯಿತಿಗಾಗಿ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಯನ್ನು ಪರಿಶೀಲಿಸಿದ್ದ ಆರ್ಥಿಕ ಇಲಾಖೆಯು ಪ್ರಸ್ತಾವನೆಗೆ ಅನುಮೋದನೆ ನೀಡಿರುವುದು ತಿಳಿದು ಬಂದಿದೆ.

 

ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ ಅನುಮೋದನೆ ನೀಡಿದ್ದಾರೆ.

 

ಮೊದಲ ಬಾರಿಗೆ ಆಯ್ಕೆಯಾದ ಶಾಸಕರುಗಳಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚರೋಪತಿ ಆಯುರ್ವೇದಿಕ್‌ ಕ್ಷೇಮ ವನದಲ್ಲಿ ಏರ್ಪಡಿಸಿದ್ದ ತರಬೇತಿ ಶಿಬಿರದಲ್ಲಿ ನೀಡಿದ್ದ ನಿದ್ರಾ ಮಾದರಿ ಹಾಸಿಗೆಗಳನ್ನೇ ಒದಗಿಸಬೇಕು ಎಂದು ಶಾಸಕರು ಬೇಡಿಕೆ ಇರಿಸಿದ್ದರು. ಹೀಗಾಗಿ ನಿದ್ರಾ ಮಾದರಿಯ ಹಾಸಿಗೆಗಳನ್ನೇ ಖರೀದಿಸಲು ವಿಧಾನಸಭೆ ಸಚಿವಾಲಯವು ದರ ಪಟ್ಟಿ ಪಡೆದಿತ್ತು.

 

‘ಮೊದಲ ಬಾರಿಗೆ ಆಯ್ಕೆಯಾದ ಸದಸ್ಯರುಗಳಿಗೆ ಇತ್ತೀಚೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚೋರಪತಿ ಆಯುರ್ವೇದಿಕ್‌ ಸೆಂಟರ್‍‌ನ ಕ್ಷೇಮ ವನದಲ್ಲಿ ತರಬೇತಿ ಶಿಬಿರ ಏರ್ಪಡಿಸಲಾಗಿತ್ತು. ಆ ಸಂದರ್ಭದಲ್ಲಿ ಸಭಾಧ್ಯಕ್ಷ ಯು ಟಿ ಖಾದರ್‌ ಸೇರಿದಂತೆ ಶಾಸಕರು   ಹಾಗೂ ಸಚಿವಾಲಯದ ಅಧಿಕಾರಿಗಳು ಅಲ್ಲಿ ಬಳಕೆ ಮಾಡುತ್ತಿರುವ ಹಾಸಿಗೆಗಳನ್ನು ಪರಿಶೀಲಿಸಿದ್ದರು.

 

ಈ ಹಾಸಿಗೆಗಳು ದೇಹಾರೋಗ್ಯಕ್ಕೆ ಸೂಕ್ತವಾದಂತಹ ಮತ್ತು ಆರಾಮದಾಯಕವಾಗಿರುವಂತಹ ನಿದ್ರಾ ಮಾದರಿಯ ಹಾಸಿಗೆಗಳೆಂದು ತಿಳಿದು ಬಂದಿರುತ್ತದೆ,’ ಎಂದು ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌ ಕೆ ಅತೀಕ್‌ ಅವರಿಗೆ ಪ್ರಸ್ತಾವನೆಯಲ್ಲಿ ವಿವರಿಸಿದ್ದರು.

 

300 ಸಂಖ್ಯೆಯ ಸಿಂಗಲ್‌ ಹಾಶಿಗೆ, 150 ಸಂಖ್ಯೆಯ ಡಬಲ್‌ ಹಾಸಿಗೆ ಹಾಗೂ 1,250 ಸಂಖ್ಯೆಯ ದಿಂಬು, 50 ಸೆಟ್‌ ಸೋಫಾ ಲೂಸ್‌ ಕುಷನ್‌, 200 ಸಂಖ್ಯೆಯ ಡೋರ್‍‌ ಫುಟ್‌ ಮ್ಯಾಟ್‌, 1,000 ಸಂಖ್ಯೆಯ ರಬ್ಬರ್‍‌ ಫುಟ್‌ ಮ್ಯಾಟ್‌, 1,250 ಸಂಖ್ಯೆಯ ಸಿಂಗಲ್‌ ಬೆಡ್‌ಶೀಟ್‌, 600 ಸಂಖ್ಯೆಯ ಡಬಲ್‌ ಬೆಡ್‌ಶೀಟ್‌, 250 ಸಂಖ್ಯೆ ಟರ್ಕಿ ಟವಲ್‌, 600 ಸಂಖ್ಯೆಯ ಉಲ್ಲನ್‌ ಬೆಡ್‌ ಶೀಟ್‌, ಬ್ಲಾಂಕೇಟ್‌ಗಳನ್ನು ಕೊಯಮತ್ತೂರಿನ ರಿಪೋಸ್‌ ಮ್ಯಾಟ್ರಸ್‌ ಪ್ರೈವೈಟ್‌ ಲಿಮಿಟೆಡ್‌ನಿಂದ ನೇರವಾಗಿ ಖರೀದಿಸಲು ಪ್ರಸ್ತಾವನೆಯಲ್ಲಿ ಕೋರಿದ್ದರು ಎಂಬುದು ತಿಳಿದು ಬಂದಿದೆ.

 

ರೆಸ್ಟೋಲೆಕ್ಸ್‌, ಬೆಂಗಳೂರಿನ ಸದಾಶಿವನಗರದಲ್ಲಿರುವ ಜತ್ತಿ ಟ್ರಾಕ್ಸ್‌ ಎಲ್ಎಲ್‌ಪಿ ನಿಂದ ದರ ಪಟ್ಟಿ ಪಡೆದಿತ್ತು. ಈ ಪೈಕಿ ರಿಪೋಸ್‌ ಮ್ಯಾಟ್ರಸ್‌ ಪ್ರೈವೈಟ್‌ ಲಿಮಿಟೆಡ್‌ಗೆ ಕಾರ್ಯಾದೇಶ ನೀಡಿದೆ ಎಂಬುದು ಗೊತ್ತಾಗಿದೆ.

Hot this week

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...
Please Scan to make Your Contribution

Topics

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

Related Articles

Popular Categories

error: Content is protected !!