Thursday | June 11, 2026 |

ಬೊಕ್ಕಸಕ್ಕೆ ಹೊರೆಯಾದ ‘ಗೃಹಜ್ಯೋತಿ’; ಗೃಹ ಬಳಕೆದಾರ, ಸರ್ಕಾರಿ ಇಲಾಖೆಗಳಿಂದಲೇ 11,757.07 ಕೋಟಿ ರು ಬಾಕಿ

ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನದಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತಿದೆ ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರವು ಇದೀಗ ಅಧಿಕೃತವಾಗಿ ಒಪ್ಪಿಕೊಂಡಿದೆ.

 

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಪರಿಷತ್‌ನಲ್ಲಿ ಮಧು ಮಾದೇಗೌಡ ಮತ್ತು ಎಂ ನಾಗರಾಜು, ಕೇಶವ ಪ್ರಸಾದ್‌ ಅವರು ಕೇಳಿದ್ದ ಪ್ರಶ್ನೆಗಳಿಗೆ ಸಚಿವ ಕೆ ಜೆ ಜಾರ್ಜ್‌ ಅವರು ನೀಡಿರುವ ಉತ್ತರದಲ್ಲಿ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತಿದೆ ಎಂದು ಮಾಹಿತಿ ಒದಗಿಸಿದ್ದಾರೆ.

 

ಅದೇ ರೀತಿ ಗೃಹ ಜ್ಯೋತಿ ಯೋಜನೆ ಜಾರಿಯಾದ ನಂತರ ಗ್ರಾಹಕರು ಸಂಪೂರ್ಣ ಬಾಕಿ ವಿದ್ಯುತ್‌ ಮೊತ್ತವನ್ನು ಪಾವತಿಸಿಲ್ಲ. ಗೃಹ ಬಳಕೆ ಗ್ರಾಹಕರು, ಸರ್ಕಾರಿ ಇಲಾಖೆಗಳು, ಕಚೇರಿಗಳು ಸಹ ಸೆಪ್ಟಂಬರ್‍‌ ಮತ್ತು ಅಕ್ಟೋಬರ್‍‌ ಅಂತ್ಯಕ್ಕೆ 11,757.07 ಕೋಟಿ ರು.ಗಳನ್ನು ಬಾಕಿ ಉಳಿಸಿಕೊಂಡಿವೆ ಎಂದು ಮಾಹಿತಿ ಒದಗಿಸಿದ್ದಾರೆ.

 

ಬೊಕ್ಕಸಕ್ಕೆ ಹೊರೆ

 

ಗೃಹ ಜ್ಯೋತಿ ಯೋಜನೆಯ ಅನುಷ್ಠಾನಕ್ಕಾಗಿ ಸರ್ಕಾರವು 2023-24ನೇ ಸಾಲಿಗೆ ಅಂದಾಜು 13,910 ಕೋಟಿ ರು.ಗಳ ಸಹಾಯಧನದ ಅವಶ್ಯಕತೆ ಇದೆ ಎಂದು ಅಂದಾಜಿಸಿದೆ. ಜಲೈ 2023ರ ಆಯವ್ಯಯದಲ್ಲಿ 9,000 ಕೋಟಿ ರು. ಗಳನ್ನು ಹಂಚಿಕೆ ಮಾಡಿ ಒದಗಿಸಿದೆ. ಈ ಮೊತ್ತವು ಸರ್ಕಾರದ ಬೊಕ್ಕಸಕ್ಕೆ ಹೊರೆಯಾದರೂ ಸಹ ಸರ್ಕಾರವು ಈ ಮೊತ್ತವನ್ನು ಸಹಾಯಧನದ ರೂಪದಲ್ಲಿ ವಿದ್ಯುತ್‌ ಸರಬರಾಜು ಕಂಪನಿಗಳಿಗೆ ಒದಗಿಸುತ್ತಿದೆ ಎಂದು ಉತ್ತರದಲ್ಲಿ ಸಚಿವ ಜಾರ್ಜ್‌ ಅವರು ಉತ್ತರ ಒದಗಿಸಿದ್ದಾರೆ.

 

2023ರ ನವೆಂಬರ್‍‌ 18ರ ಅಂತ್ಯಕ್ಕೆ 1.63 ಕೋಟಿ ರು ಗ್ರಾಹಕರು ನೋಂದಣಿಯಾಗಿದೆ. ಇದರಲ್ಲಿ 1.50 ಕೋಟಿ ಗ್ರಾಹಕರು ಈ ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ. ಗೃಹ ಜ್ಯೋತಿ ಯೋಜನೆ ಜಾರಿಯಾದ ನಂತರ ಗ್ರಾಹಕರು ಸಂಪೂರ್ಣ ಬಾಕಿ ವಿದ್ಯುತ್‌ ಮೊತ್ತವನ್ನು ಪಾವತಿಸಿರುವುದಿಲ್ಲ. ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲು 2023ರ ಜೂನ್‌ 30ರ ಅಂತ್ಯಕ್ಕೆ ಬಾಕಿ ಇರುವ ವಿದ್ಯುತ್‌ ಶುಲ್ಕದ ಬಾಕಿ ಮೊತ್ತವನ್ನು ಪಾವತಿಸಲು 2023ರ ಸೆ.30ರವರೆಗೆ ಕಾಲಾವಕಾಶ ನೀಡಲಾಗಿತ್ತು ಎಂದು ಅಂಕಿ ಅಂಶಗಳನ್ನು ಒದಗಿಸಿದ್ದಾರೆ.

 

ಗೃಹ ಬಳಕೆದಾರರಿಂದ 1,471.47 ಕೋಟಿ ರು. ಬಾಕಿ

 

ಬೆಸ್ಕಾಂ ವ್ಯಾಪ್ತಿಯಲ್ಲಿ 2023ರ ಅಕ್ಟೋಬರ್‍‌ ಅಂತ್ಯಕ್ಕೆ 14,66,017 ಗ್ರಾಹಕರಿದ್ದಾರೆ. ಇದೇ ಅವಧಿಗೆ 397.89 ಕೋಟಿ ರು. ವಿದ್ಯುತ್‌ ಬಿಲ್‌ ಬಾಕಿ ಇದೆ. ಮೆಸ್ಕಾಂನಲ್ಲಿ 4,39,887 ಗ್ರಾಹಕರು ಇದ್ದಾರೆ. ಇವರಿಂದ 62.88 ಕೋಟಿ ರು. ವಿದ್ಯುತ್‌ ಬಿಲ್‌ ಬಾಕಿ ಇದೆ. ಸೆಸ್ಕ್‌ನಲ್ಲಿ 12,57,675 ಗ್ರಾಹಕರಿದ್ದಾರೆ. ಇವರಿಂದ 306.93 ಕೋಟಿ ರು. ಬಾಕಿ ಇದೆ. ಹೆಸ್ಕಾಂ (ಸೆಪ್ಟಂಬರ್‍‌ 23 ಅಂತ್ಯಕ್ಕೆ 10,52,675 ಗ್ರಾಹಕರಿದ್ದಾರೆ. ಇವರಿಂದ 196.09 ಕೋಟಿ ರು. ಬಾಕಿ ಇದೆ. ಜೆಸ್ಕಾಂನಲ್ಲಿ 26,80,139 ಗ್ರಾಹಕರಿದ್ದಾರೆ. ಇವರಿಂದ 507.68ಕೋಟಿ ರು. ಬಾಕಿ ಸೇರಿ ಒಟ್ಟಾರೆ 68,95,910 ಗ್ರಾಹಕರಿದ್ದು ಇವರಿಂದ 1,471.47 ಕೋಟಿ ರು. ವಿದ್ಯುತ್‌ ಬಿಲ್‌ ಬಾಕಿ ಇದೆ ಎಂದು ಮಾಹಿತಿ ನೀಡಿದ್ದಾರೆ.

 

ಇಲಾಖೆಗಳಿಂದ 10,285.60 ಕೋಟಿ ರು. ಬಾಕಿ

 

ಅದೇ ರೀತಿ ಸರ್ಕಾರಿ ಇಲಾಖೆಗಳು, ಕಚೇರಿಗಳು ಸಹ ಬಾಕಿ ಉಳಿಸಿಕೊಂಡಿವೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಸೆಪ್ಟಂಬರ್‍‌ 2023 ಅಂತ್ಯಕ್ಕೆ 6,036.11 ಕೋಟಿ ರು., ಮೆಸ್ಕಾಂ ವ್ಯಾಪ್ತಿಯಲ್ಲಿ 465.01 ಕೋಟಿ ರು., ಸೆಸ್ಕ್‌ನಲ್ಲಿ 736.38 ಕೋಟಿ ರು., ಹೆಸ್ಕಾಂನಲ್ಲಿ 999.53 ಕೋಟಿ ರು., ಜೆಸ್ಕಾಂನಲ್ಲಿ 2,036.62 ಕೋಟಿ ರು., ಹುಕ್ಕೇರಿಯಲ್ಲಿ 11.95 ಕೋಟಿ ರು. ಸೇರಿ ಒಟ್ಟಾರೆ 10,285.60 ಕೋಟಿ ರು. ಬಾಕಿ ಇದೆ ಎಂದು ಮಾಹಿತಿ ಒದಗಿಸಿದ್ದಾರೆ.

 

ರಾಜ್ಯದ ಜನತೆಗೆ 200 ಯೂನಿಟ್‌ ವಿದ್ಯುತ್‌ ಉಚಿತವಾಗಿ ನೀಡುವುದರಿಂದ ಉಳಿತಾಯವಾಗುವ ಹಣದಿಂದ ಸಾಮಾನ್ಯ ಜನರ ಖರೀದಿ ಶಕ್ತಿ ಜತೆಗೆ ನಾಗರಿಕರಲ್ಲಿ ಹಣ ಉಳಿತಾಯವಾಗಲಿದೆ. ಇದರಿಂದ ಉತ್ಪಾದನಾ ವವಲಯಕ್ಕೆ ಹೆಚ್ಚು ಪ್ರೋತ್ಸಾಹಧನ ನೀಡಿದಂತಾಗುತ್ತದೆ. ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉದ್ಯೋಗ ಸೃಷ್ಟಿಸಲು ಸಹಕಾರಿಯಾಗುತ್ತದೆ. ಹಾಗೂ ರಾಜ್ಯದ ಆರ್ಥಿಕ ಪರಿಸ್ಥಿತಿ ಸದೃಢವಾಗುತ್ತದೆ ಎಂದು ಸರ್ಕಾರವು ಗೃಹ ಜ್ಯೋತಿ ಯೋಜನೆಯನ್ನು ಸಮರ್ಥಿಸಿಕೊಂಡಿರುವುದನ್ನು ಸ್ಮರಿಸಬಹುದು.

Hot this week

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...
Please Scan to make Your Contribution

Topics

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

Related Articles

Popular Categories

error: Content is protected !!