Wednesday | August 26, 2026 |

16ನೇ ಹಣಕಾಸು ಆಯೋಗ; ರಾಜ್ಯದ ಆರ್ಥಿಕ ಪರಿಸ್ಥಿತಿ, ಸವಾಲು ಮನವರಿಕೆಗೆ ತಜ್ಞರ ನೇಮಕ?

ಬೆಂಗಳೂರು; ಕೇಂದ್ರ ಸರ್ಕಾರವು ನೀತಿ ಆಯೋಗದ ಮಾಜಿ ಉಪಾಧ್ಯಕ್ಷ ಡಾ ಅರವಿಂದ್‌ ಪನಗಾರಿಯಾ ಅವರನ್ನು 16ನೇ ಹಣಕಾಸು ಆಯೋಗದ ಅಧ್ಯಕ್ಷರನ್ನಾಗಿ ನೇಮಕಗೊಳಿಸಿದ ಬೆನ್ನಲ್ಲೇ ಇದೇ ಆಯೋಗದ ಮುಂದೆ ಕರ್ನಾಟಕದ ಆರ್ಥಿಕ ಪರಿಸ್ಥಿತಿ, ಆರ್ಥಿಕ ಸವಾಲುಗಳು ಕುರಿತು ಮನವರಿಕೆ ಮಾಡಲು ವಿಷಯ ತಜ್ಞರು ಮತ್ತು ಅನುಭವಿ ಆಡಳಿತಗಾರರ ತಂಡವೊಂದನ್ನು ರಚಿಸಲು ಮುಂದಾಗಿದೆ.

 

ರಾಜ್ಯದ 6ನೇ ವೇತನ ಆಯೋಗದ ಅಧ್ಯಕ್ಷರೂ ಆಗಿದ್ದ ಹಿರಿಯ ಐಎಎಸ್‌ ಅಧಿಕಾರಿ ಎಂ ಆರ್‍‌ ಶ್ರೀನಿವಾಸಮೂರ್ತಿ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲು ಒಲವು ವ್ಯಕ್ತಪಡಿಸಿರುವುದು ಇದೀಗ ಬಹಿರಂಗವಾಗಿದೆ.
16ನೇ ಕೇಂದ್ರ ಹಣಕಾಸು ಆಯೋಗದ ಮುಂದೆ ರಾಜ್ಯ ಸರ್ಕಾರದ ಪರವಾಗಿ ತಾರ್ಕಿಕ ಮತ್ತು ನಿಖರ ಅಂಕಿ ಅಂಶಗಳೊಂದಿಗೆ ಮೆಮೊರೆಂಡಮ್‌ ಸಿದ್ಧಪಡಿಸುವ ಮಹತ್ತರ ಹೊಣೆಗಾರಿಕೆಯನ್ನು ಈ ಸಮಿತಿ ಮೇಲೆ ಹೊರಿಸಲಿದೆ.

 

ವಿಶೇಷವೆಂದರೇ  ಭಾರತ ಸರ್ಕಾರವು 16ನೇ ಕೇಂದ್ರ ಹಣಕಾಸು ಆಯೋಗವನ್ನು  ರಚಿಸುವ ಮುನ್ನವೇ ಮುಂಜಾಗ್ರತವಾಗಿ ಕರ್ನಾಟಕ ಸರ್ಕಾರವು ನವೆಂಬರ್‍‌ 2023ರಲ್ಲಿಯೇ ಎಂ ಆರ್‍‌ ಶ್ರೀನಿವಾಸಮೂರ್ತಿ ಅವರ ನೇತೃತ್ವದ ತಂಡವೊಂದನ್ನು ರಚಿಸಲು ಕಸರತ್ತು ನಡೆಸಿತ್ತು.

 

ಈ ಕುರಿತು ‘ದಿ ಫೈಲ್‌’ಗೆ ಕೆಲ ದಾಖಲೆಗಳು (FD -FCC/12/2023) ಲಭ್ಯವಾಗಿವೆ.

 

‘ಹಿಂದಿನ 15ನೇ ಕೇಂದ್ರ ಹಣಕಾಸು ಆಯೋಗದ ವರದಿಯಿಂದ ಕರ್ನಾಟಕ ರಾಜ್ಯಕ್ಕೆ ದೊರಕಬೇಕಾದ ಪಾಲು ಸರಿಯಾದ ಪ್ರಮಾಣದಲ್ಲಿ ದೊರಕಿಲ್ಲ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಬಹಳಷ್ಟು ಪ್ರಮಾಣದಲ್ಲಿ ಆರ್ಥಿಕ ನಷ್ಟವುಂಟಾಗಿದೆ. 15ನೇ ಹಣಕಾಸು ಆಯೋಗದ ವರದಿಯಿಂದ ಉಂಟಾಗಿರುವ ಅನ್ಯಾಯವು 16ನೇ ಕೇಂದ್ರ ಹಣಕಾಸು ಆಯೋಗದ ವರದಿಯಲ್ಲಿ ಮತ್ತೊಮ್ಮೆ ಉದ್ಭವಿಸದಂತೆ ಎಚ್ಚರಿಕೆ ವಹಿಸಬೇಕಿದೆ,’ ಎಂದು ರಾಜ್ಯ ಸರ್ಕಾರವು ಇಂಗಿತ ವ್ಯಕ್ತಪಡಿಸಿರುವುದು ತಿಳಿದು ಬಂದಿದೆ.

15ನೇ ಹಣಕಾಸು ಆಯೋಗ; ಬಿಡಿಗಾಸೂ ನೀಡದ ಕೇಂದ್ರ, 551.53 ಕೋಟಿ ಮರಳಿಸಿದ ಆರೋಗ್ಯ ಇಲಾಖೆ

 

ರಾಜ್ಯದ ಆರ್ಥಿಕ ಪರಿಸ್ಥಿತಿ, ರಾಜ್ಯದ ಮುಂದಿರುವ ಆರ್ಥಿಕ ಸವಾಲುಗಳು ಮತ್ತಿತರೆ ವಿಷಯಗಳನ್ನು ಒಳಗೊಂಡಂತೆ ರಾಜ್ಯಕ್ಕೆ ದೊರಕಬೇಕಾದ ಆರ್ಥಿಕ ಸವಾಲು, ನ್ಯಾಯಯುತ ಪಾಲನ್ನು ಕೇಂದ್ರದಿಂದ ಪಡೆಯಲು ಸರಿಯಾಗಿ ಮನವರಿಕೆ ಮಾಡಲು ಒಂದು ವಿಸ್ತೃತವಾದ ಮೆಮೋರಂಡಮ್‌ ಸಲ್ಲಿಸಬೇಕಿದೆ. ಈ ಸಮಿತಿಯು ರಾಜ್ಯಕ್ಕೆ ಹೆಚ್ಚಿನ ಮತ್ತು ನ್ಯಾಯಯುತ ಪಾಲನ್ನು ಒದಗಿಸಿಕೊಡುವಲ್ಲಿ ಈ ಮೆಮೊರೆಂಡಮ್‌ ಗಣನೀಯ ಪಾತ್ರವನ್ನು ವಹಿಸತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ‘ದಿ ಫೈಲ್‌’ ಮುಂದೆ ಆಶಯ ವ್ಯಕ್ತಪಡಿಸಿದರು.

15ನೇ ಹಣಕಾಸು ಆಯೋಗ; 2,142 ಕೋಟಿ ಬಾಕಿ ಉಳಿಸಿಕೊಂಡರೂ ತುಟಿಬಿಚ್ಚದ ಈಶ್ವರಪ್ಪ

 

ತಂಡದಲ್ಲಿ ಯಾರೆಲ್ಲಾ ಇರಲಿದ್ದಾರೆ?

 

ಎಂ ಆರ್‍‌ ಶ್ರೀನಿವಾಸ್ ಮೂರ್ತಿ ಅವರ ನೇತೃತ್ವದಲ್ಲಿ ಐಸೆಕ್‌ನ ನಿವೃತ್ತ ನಿರ್ದೇಶಕರೂ ಮತ್ತು 14ನೇ ಕೇಂದ್ರ ಹಣಕಾಸು ಆಯೋಗದ ಸದಸ್ಯರೂ ಆಗಿದ್ದ ಡಾ ಗೋವಿಂದರಾವ್‌, ಐಐಎಸ್ಸಿಯ ಡಾ ನರೇಂದ್ರಪಾಣಿ, ನಾರಾಯಣರಾವ್‌ ಅವರನ್ನೊಳಗೊಂಡ ಪರಿಣಿತರ ತಂಡವಿರಲಿದೆ. ಇವರಿಗೆ ಲಂಪ್‌ಸಮ್‌ ಒಟ್ಟು 5 ಲಕ್ಷ ರು. ಗೌರವ ಧನ ನೀಡಬಹುದು ಎಂದು ಗೊತ್ತಾಗಿದೆ.

15ನೇ ಹಣಕಾಸು ಆಯೋಗ; ರಾಜ್ಯ ವಿಪತ್ತು ನಿರ್ವಹಣೆಗೆ ಈವರೆಗೂ ಬಿಡುಗಡೆಯಾಗದ ಅನುದಾನ

 

ಕೇಂದ್ರ ಸರಕಾರವು ನೀತಿ ಆಯೋಗದ ಮಾಜಿ ಉಪಾಧ್ಯಕ್ಷ ಡಾ.ಅರವಿಂದ್ ಪನಗಾರಿಯಾ ಅವರನ್ನು 16ನೇ ಹಣಕಾಸು ಆಯೋಗದ ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ಈಗಾಗಲೇ ಆದೇಶವನ್ನು ಹೊರಡಿಸಿದೆ. ಪನಗಾರಿಯಾ ಅಮೆರಿಕದ ಕೊಲಂಬಿಯಾ ವಿವಿಯಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಆರ್ಥಿಕ ವ್ಯವಹಾರಗಳ ಇಲಾಖೆಯು ಹೊರಡಿಸಿರುವ ಅಧಿಸೂಚನೆಯಂತೆ ಐಎಎಸ್ ಅಧಿಕಾರಿ ರಿತ್ವಿಕ್ ರಂಜನಂ ಪಾಂಡೆ ಅವರು ಹಣಕಾಸು ಆಯೋಗದ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಆರೋಗ್ಯ ಕ್ಷೇತ್ರಕ್ಕೆ ಬಿಡುಗಡೆಯಾಗದ 552 ಕೋಟಿ; ಅನುಷ್ಠಾನಗೊಂಡಿಲ್ಲ ಆಯೋಗದ ಶಿಫಾರಸ್ಸು?

 

ಆಯೋಗದ ಅಧ್ಯಕ್ಷರು ಮತ್ತು ಇತರ ಸದಸ್ಯರು ಹುದ್ದೆಯನ್ನು ವಹಿಸಿಕೊಂಡ ದಿನಾಂಕದಿಂದ ವರದಿ ಸಲ್ಲಿಕೆಯ ದಿನಾಂಕ ಅಥವಾ 2025,ಅ.31;ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಅಧಿಕಾರದಲ್ಲಿರುತ್ತಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

 

ಹಣಕಾಸು ಆಯೋಗವು ಕೇಂದ್ರ ಮತ್ತು ರಾಜ್ಯಗಳ ನಡುವೆ ತೆರಿಗೆ ಹಂಚಿಕೆ,ಭಾರತದ ಸಂಚಿತ ನಿಧಿಯಿಂದ ರಾಜ್ಯಗಳಿಗೆ ಆದಾಯ ಅನುದಾನವನ್ನು ನಿಯಂತ್ರಿಸುವ ನೀತಿಗಳು,ರಾಜ್ಯ ಹಣಕಾಸು ಆಯೋಗದ ಶಿಫಾರಸುಗಳ ಆಧಾರದಲ್ಲಿ ಪಂಚಾಯತ್‌ಗಳು ಮತ್ತು ನಗರಸಭೆಗಳ ಸಂಪನ್ಮೂಲಗಳನ್ನು ಹೆಚ್ಚಿಸಲು ರಾಜ್ಯದ ಸಂಚಿತ ನಿಧಿಯನ್ನು ಹೆಚ್ಚಿಸಲು ಅಗತ್ಯ ಕ್ರಮಗಳ ಬಗ್ಗೆ ಶಿಫಾರಸುಗಳನ್ನು ಮಾಡುತ್ತದೆ.

 

ಆಯೋಗವು ವಿಪತ್ತು ನಿರ್ವಹಣಾ ಕ್ರಮಗಳಿಗೆ ಹಣಕಾಸು ಒದಗಿಸುವ ಪ್ರಸ್ತುತ ವ್ಯವಸ್ಥೆಗಳನ್ನು ಪುನರ್‌ಪರಿಶೀಲಿಸಬಹುದು ಮತ್ತು ಸೂಕ್ತ ಶಿಫಾರಸುಗಳನ್ನು ಮಾಡಬಹುದು ಎಂದೂ ಅಧಿಸೂಚನೆಯಲ್ಲಿ ಹೇಳಲಾಗಿದೆ. ಆಯೋಗವು 2026,ಎ.1ರಿಂದ ಆರಂಭಗೊಳ್ಳುವ ಐದು ವರ್ಷಗಳ ಅವಧಿಗಾಗಿ ತನ್ನ ವರದಿಯನ್ನು 2025,ಅ.31ರೊಳಗೆ ಸಲ್ಲಿಸಬೇಕಿದೆ.

Hot this week

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...
Please Scan to make Your Contribution

Topics

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

Related Articles

Popular Categories

error: Content is protected !!