Monday | March 16, 2026 |

ಸರ್ಕಾರದ ‘200 ಕೋಟಿ’ ರಾಮಭಕ್ತಿಯನ್ನು ಸಮರ್ಥಿಸಿಕೊಂಡ ಕಾಂಗ್ರೆಸ್‌

Support THE-FILE

spot_img

ಬೆಂಗಳೂರು; ರಾಜ್ಯದಲ್ಲಿರುವ ಪುರಾತನ ರಾಮಮಂದಿರ ಜೀರ್ಣೋದ್ಧಾರ ಮತ್ತು  ಅಯೋಧ್ಯೆಯಲ್ಲಿ ವಸತಿ ಗೃಹ ನಿರ್ಮಾಣಕ್ಕೆ ಒಟ್ಟಾರೆ 200 ಕೋಟಿ ರು. ಮೊತ್ತದಲ್ಲಿ ಸರ್ಕಾರವು ಘೋಷಿಸಲಿರುವ  ಹೊಸ ಯೋಜನೆಯು ಚರ್ಚೆಗೆ ಗ್ರಾಸವಾಗಿದೆ. ಸರ್ಕಾರ ಇದೇ ಫೆಬ್ರುವರಿಯಲ್ಲಿ ಮಂಡಿಸಲಿರುವ  ಆಯವ್ಯಯದಲ್ಲಿ  ಈ ಯೋಜನೆಯ ಘೋಷಣೆಯನ್ನು  ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯೂ  ಸಮರ್ಥಿಸಿಕೊಂಡಿದೆ.

 

ರಾಮಮಂದಿರಗಳ ಜೀರ್ಣೋದ್ಧಾರ ಮತ್ತು ಅಯೋಧ್ಯೆಯಲ್ಲಿ ವಸತಿ ಗೃಹ ನಿರ್ಮಾಣಕ್ಕೆ 200 ಕೋಟಿ ರು ಮೊತ್ತದ ಯೋಜನೆಯನ್ನು ಮುಂಬರುವ ಬಜೆಟ್‌ ಅಧಿವೇಶನದಲ್ಲಿ ಸರ್ಕಾರವು ಘೋಷಿಸಲಿದೆ ಎಂದು ‘ದಿ ಫೈಲ್‌-ವಾರ್ತಾಭಾರತಿ’ಯು ವರದಿ ಪ್ರಕಟಿಸಿತ್ತು.

 

ಈ ವರದಿಯು ರಾಜಕೀಯ ಅಂಗಳದಲ್ಲಿ ಬಿರುಸಿನ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ   ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯು  ದಿ ಫೈಲ್‌ನ ಸಹಭಾಗಿ ವಾರ್ತಾಭಾರತಿ ಪ್ರಕಟಿಸಿದ್ದ ವರದಿಯನ್ನು ಹಂಚಿಕೊಂಡಿದೆ.

 

ಟ್ವೀಟ್‌ನಲ್ಲೇನಿದೆ?

 

‘ರಾಜ್ಯದ ಪುರಾತನ ರಾಮ ಮಂದಿರಗಳನ್ನು ಜೀರ್ಣೋದ್ದಾರ ಮಾಡಲು ಸರ್ಕಾರ 100 ಕೋಟಿ ಹಣ ಮೀಸಲಿಟ್ಟಿದೆ. ರಾಮ ಕರ್ನಾಟಕದಲ್ಲೂ ಇದ್ದಾನೆ, ಆಸ್ತಿಕರ ಭಕ್ತಿಗಾಗಿ.. ಕರ್ನಾಟಕದಲ್ಲಿನ ರಾಮನ ಭಕ್ತರು ಕರ್ನಾಟಕದಲ್ಲೇ ರಾಮನ ದರ್ಶನ, ಆಶೀರ್ವಾದ ಪಡೆಯಬಹುದು. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಪುರಾತನ ದೇವಾಲಯಗಳನ್ನು ಜೀರ್ಣೋದ್ದಾರ ಮಾಡುವ ಕ್ರಮ ಕೈಗೊಂಡಿದೆ. ದೇವರು, ಧರ್ಮವೆಂದರೆ ನಮಗೆ ರಾಜಕೀಯದ ವಸ್ತುವಲ್ಲ, ನಂಬಿಕೆಗಳಿಗೆ, ಭಕ್ತಿಗೆ ಇರುವ ಆದ್ಯಾತ್ಮದ ಮಾರ್ಗವಷ್ಟೇ,’ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದೆ.

 

 

 

ಇದೇ ಫೆಬ್ರುವರಿ-ಮಾರ್ಚ್‌ನಲ್ಲಿ ಮಂಡಿಸಲಿರುವ 2024-25ನೇ ಸಾಲಿನ ಆಯವ್ಯಯದಲ್ಲಿ ಪುರಾತನ ರಾಮ ಮಂದಿರ ಜೀರ್ಣೋದ್ಧಾರ ಮತ್ತು ಅಯೋಧ್ಯೆಯಲ್ಲಿ ಬೃಹತ್‌ ವಸತಿ ಗೃಹ ನಿರ್ಮಾಣ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಲಿದ್ದಾರೆ ಎಂದು ತಿಳಿದು ಬಂದಿದೆ.

 

2024-25ನೇ ಸಾಲಿನ ಆಯವ್ಯಯಕ್ಕೆ ಸಂಬಂಧಿಸಿದಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯು ರೂಪಿಸಿರುವ ಹೊಸ ಯೋಜನೆಗಳ ಪಟ್ಟಿಯಲ್ಲಿ ರಾಮ ಮಂದಿರ ಜೀರ್ಣೋದ್ಧಾರ ಮತ್ತು ಅಯೋಧ್ಯೆಯಲ್ಲಿ ವಸತಿ ಗೃಹ ನಿರ್ಮಾಣವೂ ಸೇರಿದೆ. ಈ ಕುರಿತು ಮುಜುರಾಯಿ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೂ ಇಲಾಖೆ ಅಧಿಕಾರಿಗಳು ಚರ್ಚಿಸಿದ್ದಾರೆ. ಈ ಕುರಿತು ‘ದಿ ಫೈಲ್‌’ ಮತ್ತು ವಾರ್ತಾಭಾರತಿ’ ಜನವರಿ 24ರಂದು ದಾಖಲೆ ಸಹಿತ ವರದಿ ಪ್ರಕಟಿಸಿತ್ತು.

ರಾಮಮಂದಿರ ಜೀರ್ಣೋದ್ದಾರ, ಅಯೋಧ್ಯೆಯಲ್ಲಿ ವಸತಿಗೃಹ ನಿರ್ಮಾಣ; 200 ಕೋಟಿ ರು ಅನುದಾನಕ್ಕೆ ಪ್ರಸ್ತಾವ

 

 

ಬೆಂಗಳೂರು ನಗರದ ಮಹದೇವಪುರದಲ್ಲಿ ನಡೆದಿದ್ದ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರು ಭಾಗಿಯಾಗಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ರಾಮ ಮಂದಿರಗಳ ಜೀರ್ಣೋದ್ಧಾರಕ್ಕೆ 100 ಕೋಟಿ ಮತ್ತು ಅಯೋಧ್ಯೆಯಲ್ಲಿ ವಸತಿ ಗೃಹ ನಿರ್ಮಾಣ ಮಾಡಲು ಉದ್ದೇಶಿಸಿರುವುದು ಕುತೂಹಲ ಮೂಡಿಸಿತ್ತು.

 

‘ರಾಜ್ಯದಲ್ಲಿ 100 ಪುರಾತನ ರಾಮ ಮಂದಿರಗಳ ಜೀರ್ಣೋದ್ಧಾರಕ್ಕಾಗಿ ತಲಾ 1.00 ಕೋಟಿ ರು.ಗಳ ವೆಚ್ಚದಲ್ಲಿ ಒಟ್ಟು 100.00 ಕೋಟಿ ರು.ಗಳನ್ನು ಒದಗಿಸಲು ಉದ್ದೇಶಿಸಿದೆ. ಅಯೋಧ್ಯೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ನಿವೇಶನ ಹಂಚಿಕೆ ಮಾಡಿದರೆ ರಾಜ್ಯ ಸರ್ಕಾರವು 100. 00 ಕೋಟಿ ರು. ವೆಚ್ಚದಲ್ಲಿ ವಸತಿ ಗೃಹವನ್ನು ನಿರ್ಮಾಣ ಮಾಡಲು ಉದ್ದೇಶಿಸಿದೆ. ಈ ಎರಡೂ ಯೋಜನೆಗಳಿಗೆ ನಿಗದಿಗೊಳಿಸಿರುವ ಮೊತ್ತವು ಆರ್ಥಿಕ ಇಲಾಖೆಯ ಸೂಚಿಸಿರುವ ಮೊತ್ತದೊಳಗೇ ಇದೆ,’ ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯು ಹೊಸ ಯೋಜನೆಗಳನ್ನು ವಿವರಿಸಿದೆ.

 

ಅದೇ ರೀತಿ ಮುಜುರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ನಿಗಮ, ದೇವಾಲಯ, ಕೊಪ್ಪಳ ಜಿಲ್ಲೆ ಹುಲಿಗೆಮ್ಮ ದೇವಾಲಯ ಅಭಿವೃದ್ಧಿಗಾಗಿ ಪ್ರಾಧಿಕಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಅಭಿವೃದ್ಧಿಗಾಗಿ ಪ್ರಾಧಿಕಾರವನ್ನು ರಚಿಸಲಾಗುವುದು ಎಂದು ಘೋಷಿಸಲಿದೆ. ಈ ಎರಡೂ ಪ್ರಾಧಿಕಾರಗಳ ರಚನೆಯು ಆಯವ್ಯಯದ ಘೋಷಣೆಯಾಗಿದೆ. ಸರ್ಕಾರದ ಸಂಚಿತ ನಿಧಿಯಿಂದ ಅನುದಾನವು ಅಗತ್ಯವಿರುವುದಿಲ್ಲ ಎಂದು ಇಲಾಖೆಯು ವಿವರಿಸಿರುವುದು ತಿಳಿದು ಬಂದಿದೆ.

Hot this week

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

ಎಪಿಎಂಸಿಯಲ್ಲಿ ಅಕ್ರಮ; ನಿಯಮಬಾಹಿರವಾಗಿ 2,132 ಕಮಿಷನ್ ಏಜೆಂಟ್ ಲೈಸೆನ್ಸ್ ಮಂಜೂರು,

ಬೆಂಗಳೂರು; ಕೃಷಿ ಉತ್ಪನ್ನ ಮಾರುಕಟ್ಟೆ  ಸ್ವಂತ ಪ್ರಾಂಗಣ ಹೊಂದದೇ ಇದ್ದರೂ ಸಹ...

ರಾಜ್ಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಬೇಕು 10,000 ಕೋಟಿ ಹೆಚ್ಚುವರಿ ಅನುದಾನ; ಸಚಿವ ಸಂಪುಟಕ್ಕೆ ಪ್ರಸ್ತಾವ

ಬೆಂಗಳೂರು; ರಾಜ್ಯ ಶಿಕ್ಷಣ ನೀತಿ ಆಯೋಗವು ಮಾಡಿರುವ  ಒಟ್ಟು 72 ಪ್ರಮುಖ...

ಸರ್ಕಾರಿ ಜಮೀನು ಭೂಗಳ್ಳರ ಪಾಲು; ಪಿ ನಂಬರ್ ದುರಸ್ತಿ ಹೆಸರಿನಲ್ಲಿ ಅಕ್ರಮ, ತಹಶೀಲ್ದಾರ್‍‌ಗಳೇ ಭಾಗಿ, ಕ್ರಮವೇ ಇಲ್ಲ

ಬೆಂಗಳೂರು;  ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಲಕ್ಕೂರು ಹೋಬಳಿ ಸಂಪಂಗೆರೆ ಗ್ರಾಮದಲ್ಲಿನ...

Topics

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

ಎಪಿಎಂಸಿಯಲ್ಲಿ ಅಕ್ರಮ; ನಿಯಮಬಾಹಿರವಾಗಿ 2,132 ಕಮಿಷನ್ ಏಜೆಂಟ್ ಲೈಸೆನ್ಸ್ ಮಂಜೂರು,

ಬೆಂಗಳೂರು; ಕೃಷಿ ಉತ್ಪನ್ನ ಮಾರುಕಟ್ಟೆ  ಸ್ವಂತ ಪ್ರಾಂಗಣ ಹೊಂದದೇ ಇದ್ದರೂ ಸಹ...

ರಾಜ್ಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಬೇಕು 10,000 ಕೋಟಿ ಹೆಚ್ಚುವರಿ ಅನುದಾನ; ಸಚಿವ ಸಂಪುಟಕ್ಕೆ ಪ್ರಸ್ತಾವ

ಬೆಂಗಳೂರು; ರಾಜ್ಯ ಶಿಕ್ಷಣ ನೀತಿ ಆಯೋಗವು ಮಾಡಿರುವ  ಒಟ್ಟು 72 ಪ್ರಮುಖ...

ಸರ್ಕಾರಿ ಜಮೀನು ಭೂಗಳ್ಳರ ಪಾಲು; ಪಿ ನಂಬರ್ ದುರಸ್ತಿ ಹೆಸರಿನಲ್ಲಿ ಅಕ್ರಮ, ತಹಶೀಲ್ದಾರ್‍‌ಗಳೇ ಭಾಗಿ, ಕ್ರಮವೇ ಇಲ್ಲ

ಬೆಂಗಳೂರು;  ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಲಕ್ಕೂರು ಹೋಬಳಿ ಸಂಪಂಗೆರೆ ಗ್ರಾಮದಲ್ಲಿನ...

7ನೇ ವೇತನ ಆಯೋಗ ಶಿಫಾರಸ್ಸು; ಬದ್ಧ ವೆಚ್ಚದಲ್ಲಿ ಹೆಚ್ಚಳ, 15,000 ಕೋಟಿಯಿಂದ 20,000 ಕೋಟಿಗೆ ಏರಿಕೆ

ಬೆಂಗಳೂರು;  7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿದಲ್ಲಿ  ಮುಂಬರುವ ವರ್ಷಗಳಲ್ಲಿ ಬದ್ಧ...

ವಿಚಾರಣೆಗಳಿಗೆ ಹಾಜರಾಗದಿದ್ದರೂ ಸಂಭಾವನೆ ಕೋರಿದ ಪಬ್ಲಿಕ್ ಪ್ರಾಸಿಕ್ಯೂಟರ್ಸ್‌: 590 ಪ್ರಕರಣ ಪತ್ತೆ

ಬೆಂಗಳೂರು; ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ...

ಹುದ್ದೆಗಳ ಸಂಖ್ಯೆಯಲ್ಲಿ ಗಣನೀಯ ಕಡಿತ, ಸಾಮಾಜಿಕ ನ್ಯಾಯಕ್ಕೆ ಪೆಟ್ಟು; ವಿವಿಗಳ ಅಭಿಪ್ರಾಯ ಬಹಿರಂಗ

ಬೆಂಗಳೂರು; ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಸಂದರ್ಭದಲ್ಲಿ  ವಿಶ್ವವಿದ್ಯಾಲಯವನ್ನು ಘಟಕವನ್ನಾಗಿ ಪರಿಗಣಿಸಿದ್ದಲ್ಲಿ ...

Related Articles

Popular Categories

error: Content is protected !!