Wednesday | August 26, 2026 |

ಕೇಂದ್ರ ಪುರಸ್ಕೃತ 7 ಕಾರ್ಯಕ್ರಮಗಳಿಗೆ ಬಿಡಿಗಾಸು ನೀಡದ ಕೇಂದ್ರ ಮತ್ತು ರಾಜ್ಯ ಸರ್ಕಾರ

ಬೆಂಗಳೂರು; ಅಮೃತ್‌ ಮಿಷನ್‌, ತುಂಗಾ ಮೇಲ್ದಂಡೆ ಯೋಜನೆ, ಹಿಂದುಳಿದ ವರ್ಗಗಳ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಸೇರಿದಂತೆ ಒಟ್ಟು ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವು ತನ್ನ ಪಾಲಿನ ಅನುದಾನದಲ್ಲಿ  ಬಿಡಿಗಾಸನ್ನೂ ಒದಗಿಸಿಲ್ಲ.

 

ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪೈಕಿ 7 ಕಾರ್ಯಕ್ರಮಗಳಿಗೆ ರಾಜ್ಯ ಸರ್ಕಾರವು 2023-24ನೇ ಸಾಲಿನಲ್ಲಿ 1,221.49 ಕೋಟಿ ರು. ಅನುದಾನ ಒದಗಿಸಿಕೊಂಡಿತ್ತು. ಕೇಂದ್ರ ಸರ್ಕಾರವು ಇವೇ ಕಾರ್ಯಕ್ರಮಗಳಿಗೆ 1,917.48 ಕೋಟಿ ರು. ಅನುದಾನ ಮೀಸಲಿರಿಸಿತ್ತು. ಆದರೆ ಈ ಕಾರ್ಯಕ್ರಮಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರವು ಡಿಸೆಂಬರ್‌ ಅಂತ್ಯಕ್ಕೆ ನಯಾ ಪೈಸೆಯನ್ನೂ ಬಿಡುಗಡೆ ಮಾಡಿಲ್ಲ.

 

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ 2024ರ ಜನವರಿ 25ರಂದು ನಡೆದ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳ ಸಭೆಯಲ್ಲಿ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಕುರಿತಾಗಿ ಚರ್ಚೆ ನಡೆದಿದೆ. ಈ ಸಭೆಯಲ್ಲಿ ಮಂಡಿಸಿದ್ದ ಅಂಕಿ ಅಂಶಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

20 ಇಲಾಖೆಗಳಲ್ಲಿ ಅನುಷ್ಠಾನಗೊಂಡಿರುವ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರವು 2023-24ನೇ ಸಾಲಿಗೆ 5,980.79 ಕೋಟಿ ರು. ಅನುದಾನ ಒದಗಿಸಿಕೊಂಡಿತ್ತು. ಇದರಲ್ಲಿ ಡಿಸೆಂಬರ್‌ ಅಂತ್ಯಕ್ಕೆ 1,566.76 ಕೋಟಿ ರು. ಮಾತ್ರ ಬಿಡುಗಡೆ ಮಾಡಿದೆ. ಇನ್ನು 4,414.03 ಕೋಟಿ ರು.ಗಳನ್ನು ಬಿಡುಗಡೆಗೆ ಬಾಕಿ ಇರಿಸಿಕೊಂಡಿರುವುದು ಗೊತ್ತಾಗಿದೆ.

 

ಅದೇ ರೀತಿ ರಾಜ್ಯ ಸರ್ಕಾರವು ಇದೇ 20 ಇಲಾಖೆಗಳಲ್ಲಿ ಅನುಷ್ಠಾನಗೊಂಡಿರುವ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಿಗೆ 2023-24ನೇ ಸಾಲಿಗೆ 9,511.38 ಕೋಟಿ ರು. ಅನುದಾನ ಒದಗಿಸಿತ್ತು. ಈ ಪೈಕಿ ಡಿಸೆಂಬರ್‌ ಅಂತ್ಯಕ್ಕೆ 7,064.03 ಕೋಟಿ ರು. ಬಿಡುಗಡೆ ಮಾಡಿದೆ. 2,447.35 ಕೋಟಿ ರು.ಗಳನ್ನು ಬಿಡುಗಡೆಗೆ ಬಾಕಿ ಉಳಿಸಿಕೊಂಡಿದೆ.

 

ಶೂನ್ಯ ಬಿಡುಗಡೆ

 

ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿನ ಅಮೃತ್‌ ಮಿಷನ್‌ ಯೋಜನೆಗೆ ರಾಜ್ಯವು 320.00 ಕೋಟಿ ರು., ಕೇಂದ್ರವು 480.00 ಕೋಟಿ ರು., ಪ್ರಾಥಮಿಕ ಶಿಲ್ಕು 1,538.35 ಕೋಟಿ ರು ಸೇರಿ ಒಟ್ಟಾರೆ 2,338.05 ಕೋಟಿ ರು. ಒಟ್ಟು ಅನುದಾನವಿದೆ. ಈ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವು ಡಿಸೆಂಬರ್‌ ಅಂತ್ಯಕ್ಕೆ ಬಿಡಿಗಾಸನ್ನೂ ನೀಡಿಲ್ಲ.

 

ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಗೆ ರಾಜ್ಯವು 316.00 ಕೋಟಿ ರು., ಕೇಂದ್ರವು 474.00 ಕೋಟಿ ರು.,ಪ್ರಾಥಮಿಕ ಶಿಲ್ಕು 355.31 ಕೋಟಿ ರು ಸೇರಿ ಒಟ್ಟಾರೆ 1,145.31 ಕೋಟಿ ರು. ಅನುದಾನ ಲಭ್ಯವಾಗಿಸಿಕೊಂಡಿದೆ. ಇದರಲ್ಲಿಯೂ ಕೇಂದ್ರ ಮತ್ತು ರಾಜ್ಯ ಸರ್ಕಾರವು ತನ್ನ ಪಾಲಿನ ಅನುದಾನದ ಬಿಡುಗಡೆಯಲ್ಲಿ ಶೂನ್ಯ ಸಂಪಾದಿಸಿದೆ.

 

ಜಲಸಂಪನ್ಮೂಲ ಇಲಾಖೆಯ ನಾರಾಯಣಪುರ ಎಡದಂಡೆ ಕಾಲುವೆ ಯೋಜನೆಯಲ್ಲಿ (ಇಆರ್‌ಎಂ)ನಲ್ಲಿ ರಾಜ್ಯವು 100 ಕೋಟಿ ರು.,. ಕೇಂದ್ರ ಸರ್ಕಾರವು 250 ಕೋಟಿ ರು., ಸೇರಿ ಒಟ್ಟಾರೆ 350 ಕೋಟಿ ರು. ಅನುದಾನ ಒದಗಿಸಿಕೊಂಡಿದೆ. ಕೇಂದ್ರ ಮತ್ತು ರಾಜ್ಯವು ಈ ಯೋಜನೆಗೂ ತನ್ನ ಪಾಲಿನಲ್ಲಿ ನಯಾ ಪೈಸೆ ನೀಡಿಲ್ಲ.

 

ವಸತಿ ಇಲಾಖೆಯ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ)ಯಲ್ಲಿ ರಾಜ್ಯವು 164.00 ಕೋಟಿ ರು., ಕೇಂದ್ರವು 246.00 ಕೋಟಿ ರು, ಪ್ರಾಥಮಿಕ ಶಿಲ್ಕು 838.10 ಕೋಟಿ ರು ಸೇರಿ ಒಟ್ಟು 1,248.10 ಕೋಟಿ ರು. ಅನುದಾನವಿದೆ. ಇಲ್ಲಿಯೂ ಕೇಂದ್ರ ಮತ್ತು ರಾಜ್ಯ ಸರ್ಕಾರವು ತನ್ನ ಪಾಲಿನ ಹಣವನ್ನು ನೀಡಿಲ್ಲ.

 

ನಗರಾಭಿವೃದ್ಧಿ ಇಲಾಖೆಯ ಸ್ವಚ್ಛ ಭಾರತ (ನಗರ) ಯೋಜನೆಗೆ ರಾಜ್ಯವು 90 ಕೋಟಿ ರು., ಕೇಂದ್ರವು 200 ಕೋಟಿ ರು., ಪ್ರಾಥಮಿಕ ಶಿಲ್ಕು 747.75 ಕೋಟಿ ರು. ಅನುದಾನವಿದೆ. ಸ್ವಚ್ಛ ಭಾರತ ಯೋಜನೆಗೂ ಕೇಂದ್ರ ಸರ್ಕಾರವು ಬಿಡಿಗಾಸನ್ನು ನೀಡಿಲ್ಲ. ರಾಜ್ಯವೂ ಇದೇ ಹಾದಿಯನ್ನೇ ಹಿಡಿದಿದೆ.

 

ಜಲಸಂಪನ್ಮೂಲ ಇಲಾಖೆಯಡಿಯಲ್ಲಿ ತುಂಗಾ ಮೇಲ್ದಂಡೆ ಯೋಜನೆಗೆ ರಾಜ್ಯವು 100.49 ಕೋಟಿ ರು., ಕೇಂದ್ರ ಸರ್ಕಾರವು 112.46 ಕೋಟಿ ರು ಸೇರಿ ಒಟ್ಟು 212.97 ಕೋಟಿ ರು. ಅನುದಾನ ನಿಗದಿಪಡಿಸಿಕೊಂಡಿದೆ. ಇದರಲ್ಲಿಯೂ ಎರಡೂ ಸರ್ಕಾರಗಳು ನಯಾಪೈಸೆಯನ್ನು ನೀಡಿಲ್ಲ.

 

ಸಮಾಜ ಕಲ್ಯಾಣ ಇಲಾಖೆಯಲ್ಲಿ ಪ್ರಧಾನಮಂತ್ರಿ ಆದರ್ಶ ಯೋಜನೆಗೆ ಕೇಂದ್ರವು 100 ಕೋಟಿ ರು. ನೀಡಿದೆಯಾದರೂ ಡಿಸೆಂಬರ್‌ ಅಂತ್ಯಕ್ಕೆ ಬಿಡಿಗಾಸು ನೀಡಿಲ್ಲ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ರಾಜ್ಯವು 131 ಕೋಟಿ ರು., ಕೇಂದ್ರವು 55 ಕೋಟಿ ರು. ಸೇರಿ ಒಟ್ಟಾರೆ 186 ಕೋಟಿ ರು. ಅನುದಾನ ನೀಡಬೇಕಿತ್ತು. ಆದರೆ ಡಿಸೆಂಬರ್‌ ಅಂತ್ಯಕ್ಕೆ ನಯಾಪೈಸೆಯೂ ಬಿಡುಗಡೆಯಾಗಿಲ್ಲ.

Hot this week

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...
Please Scan to make Your Contribution

Topics

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

Related Articles

Popular Categories

error: Content is protected !!