Monday | March 30, 2026 |

ಹಣ ವರ್ಗಾವಣೆ, ಸಾಗಣೆ; ಡಿಕೆಶಿ ಸೂಚನೆಯಂತೆಯೇ ಬೇನಾಮಿ ವ್ಯವಹಾರಗಳ ನಿರ್ವಹಣೆ

Support THE-FILE

spot_img

ಬೆಂಗಳೂರು; ಮೊದಲನೇ ಆರೋಪಿ ಡಿ ಕೆ ಶಿವಕುಮಾರ್‍‌ ಅವರ ಎಲ್ಲಾ ಬೇನಾಮಿ ವ್ಯವಹಾರಗಳನ್ನು ನಾಲ್ಕನೇ ಆರೋಪಿಯು ನಿರ್ವಹಿಸುತ್ತಿದ್ದರು ಮತ್ತು ಸಹಕರಿಸುತ್ತಿದ್ದರು. ಎಲ್ಲವೂ ಮೊದಲನೇ ಆರೋಪಿ ಡಿ ಕೆ ಶಿವಕುಮಾರ್ ಸೂಚನೆಯಂತೆಯೇ ನಡೆಯುತ್ತಿತ್ತು ಎಂಬುದನ್ನು ಆದಾಯ ತೆರಿಗೆ ಇಲಾಖೆಯು ವಿಚಾರಣೆ ವೇಳೆ ಪತ್ತೆ ಹಚ್ಚಿದೆ.

 

ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದಡಿಯಲ್ಲಿ ಡಿ ಕೆ ಶಿವಕುಮಾರ್‍‌ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್‍‌ ದಾಖಲಿಸಿರುವ ಬೆನ್ನಲ್ಲೇ ಆದಾಯ ತೆರಿಗೆ ಇಲಾಖೆಯ ಉಪ ನಿರ್ದೇಶಕರು ನ್ಯಾಯಾಲಯಕ್ಕೆ ಸಲ್ಲಿಸಿರುವ ಸಂಪೂರ್ಣ ವಿವರಗಳು ಮುನ್ನೆಲೆಗೆ ಬಂದಿವೆ.

 

ಈ ಸಂಬಂಧ ‘ದಿ ಫೈಲ್‌’ ಸಮಗ್ರ ಕಡತವನ್ನು ಆರ್‍‌ಟಿಐ ಅಡಿಯಲ್ಲಿ ಪಡೆದುಕೊಂಡಿದೆ.

 

‘ಹಣ ವರ್ಗಾವಣೆ ಮತ್ತು ಸಾಗಣೆಗೆ ಸಂಬಂಧಿಸಿದಂತೆ ವಿವರಿಸಿದ ನಾಲ್ಕನೇ ಅರೋಪಿ,  ಶೈಲೇಂದ್ರ ಎನ್ನುವವರು ನನ್ನನ್ನು ಭೇಟಿ ಮಾಡಿ ಮೂರು ಕಂತುಗಳಲ್ಲಿ ಹಣ ನೀಡಿದರು ಎಂದು ತಿಳಿಸಿದ್ದಾರೆ. ಇದು ಆರೋಪಿ-1ರ ಸೂಚನೆಗೆ ಅನುಸಾರ ನಡೆಯಿತು. ಇದೇ ಸಂದರ್ಭದಲ್ಲಿ ಜಗದೀಶ್‌ ಚಂದ್‌ ಎನ್ನುವವರು ಹೇಳಿಕೆ ನೀಡಿದ್ದು ಈ ನಗದನ್ನು ಆರೋಪಿ-4 ಮತ್ತು ಅರೋಪಿ-5 ವ್ಯವಹರಿಸುತ್ತಿದ್ದರು ಎಂದು ಹೇಳಿದ್ದಾರೆ,’ ಎಂದು ವಿವರಿಸಲಾಗಿದೆ.

 

ನಾಲ್ಕನೇ ಆರೋಪಿಯು ಸರ್ಕಾರಿ ನೌಕರ. ಅಷ್ಟೊಂದು ಹಣವನ್ನು ತನ್ನದೇ ಮೂಲಗಳಿಂದ ಗಳಿಸಲು ಸಾಧ್ಯವಿಲ್ಲ. ಈ ಬಂಗಲೆಗಳಲ್ಲಿ ವಶಕ್ಕೆ ಪಡೆದ ಹಣ ಖಚಿತವಾಗಿ ಮೊದಲನೇ ಆರೋಪಿಗೆ ಸೇರಿದ್ದಾಗಿದೆ. ನಾಲ್ಕನೇ ಆರೋಪಿಯು ಮೊದಲೇ ಆರೋಪಿಯ ಎಲ್ಲಾ ಬೇನಾಮಿ ವ್ಯವಹಾರಗಳನ್ನು ನಿರ್ವಹಿಸುತ್ತಿದ್ದರು. ಇನ್ನೂ ಹಲವು ಬೇನಾಮಿ ವ್ಯವಹಾರಕ್ಕೆ ಸಹಕರಿಸುತ್ತಿದ್ದರು. ಐದನೇ ಆರೋಪಿಯು ಈ ಎಲ್ಲಾ ವಹಿವಾಟಿನ ವಿವರಗಳನ್ನು ದಾಖಲಿಸುತ್ತಿದ್ದ ಎಂದು ವಿವರಿಸಿರುವುದು ಗೊತ್ತಾಗಿದೆ.

 

‘ಈ ಮೇಲಿನ ಸಾಕ್ಷಿಗಳು ಮತ್ತು ಚರ್ಚೆಗಳನ್ನು ಗಮನಿಸಿದಾಗ ಸ್ಪಷ್ಟವಾಗುವುದೇನೆಂದರೆ ಭೌತಿಕವಾಗಿ ಲಭ್ಯವಾದ ಹಣ ಆರೋಪಿ-1ಕ್ಕೆ ಸೇರಿದೆ ಎಂಬುದು. ಇದೇ ಸಂದರ್ಭದಲ್ಲಿ ಆರೋಪಿ-3ರ ಬಂಗಲೆಯಲ್ಲಿ ತಪಾಸಣೆ ಮುಂದುವರೆದಿತ್ತು. ನವ ದೆಹಲಿಯಲ್ಲಿ ನಾನು ಯಾವುದೇ ಕಚೇರಿ ಅಥವಾ ಬಿಸಿನೆಸ್‌ ಹೊಂದಿಲ್ಲ ಎಂದು ಮೂರನೇ ಆರೋಪಿಯು ಹೇಳಿದ್ದಾರೆ. ಈ ಅಪಾರ್ಟ್‌ಮೆಂಟನ್ನು ಆರೋಪಿ-1 ಉಪಯೋಗಿಸುತ್ತಿದ್ದಾರೆ ಎಂದು ಹೇಳಿದ್ದಾರೆ,’ ಎಂದು ವಿವರಿಸಿದ್ದಾರೆ.

 

ವಿಶೇಷವೆಂದರೇ ಬಂಗಲೆಗಳಲ್ಲಿ ಸಿಕ್ಕಿದ್ದ ನಗದು ತಮಗೆ ಸೇರಿದ್ದಲ್ಲ ಎಂದು ಮೂರನೇ ಆರೋಪಿ ಹೇಳಿಕೆ ನೀಡಿದ್ದರು. ಮೂರನೇ ಆರೋಪಿಯ ಹೇಳಿಕೆಗಳನ್ನು ಗಮನಿಸಿದರೇ ಮೊದಲನೇ ಆರೋಪಿಯ ಅನಧಿಕೃತ ನಗದು ವರ್ಗಾವಣೆಗಳನ್ನು ನೋಡಬಹುದು. ಅಲ್ಲದೇ ಮೊದಲನೇ ಆರೋಪಿಯ ಹೇಳಿಕೆಗಳನ್ನು ಗಮನಿಸಿದರೆ ಬಂಗಲೆಯ ಕೊಠಡಿಯೊಂದನ್ನು ಮೊದಲನೇ ಆರೋಪಿಯು ಬಳಕೆ ಮಾಡುತ್ತಿದ್ದರು ಮತ್ತು ಅದರಲ್ಲಿ ನಗದನ್ನು ಬಚ್ಚಿಟ್ಟಿದ್ದರು ಎಂಬುದು ಗೊತ್ತಾಗುತ್ತದೆ ಎಂದು ಆದಾಯ ತೆರಿಗೆ ಇಲಾಖೆಯು ತನ್ನ ವಿವರಣೆಯಲ್ಲಿ ದಾಖಲಿಸಿದೆ

 

‘ಈ ವಿವರಗಳನ್ನು ವಿಶ್ಲೇಷನಾತ್ಮಕವಾಗಿ ಗಮನಿಸಿದಾಗ ಮೂರನೇ ಆರೋಪಿ-3 ವ್ಯವಸ್ಥಿತವಾಗಿ ಬೆಂಬಲ ನೀಡಿರುವುದು ಕಂಡುಬರಲಿದೆ. ತೆರಿಗೆ ವಂಚನೆ ಮಾಡುವ ಉದ್ದೇಶದಿಂದ ಹೀಗೆ ಮಾಡಲಾಗಿದೆ. ಜೊತೆಗೆ ಆರೋಪಿ-1 ದಂಡದಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಲಾಗಿದೆ. ಆರೋಪಿ-1ರನ್ನು ರಕ್ಷಿಸುವುದಕ್ಕಾಗಿಯೂ ಹೀಗೆ ಮಾಡಲಾಗಿದೆ ಎಂಬುದು ಮೇಲಿನ ವಿವರಗಳನ್ನು ಗಮನಿಸಿದಾಗ ಅರಿವಿಗೆ ಬರಲಿದೆ,’ ಎಂದು ವಿವರಿಸಿದೆ.

 

ತಪಾಸಣೆ ವೇಳೆ ಮತ್ತು ವಶಕ್ಕೆ ಪಡೆದ ನಗದು ಮೊದಲನೇ ಆರೋಪಿಗೆ ಸೇರಿದೆ. ವಶಕ್ಕೆ ಪಡೆದ ನಗದು ಲೆಕ್ಕಕ್ಕೆ ಸಿಗದಿರುವುದು ಮತ್ತು ಮೊದಲನೇ ಆರೋಪಿಯು ತೆರಿಗೆ ವ್ಯಾಪ್ತಿಗೆ ಸಲ್ಲಿಸದಿರುವುದು, ಮೂರನೇ ಆರೋಪಿ ಮತ್ತು ಮೊದಲನೇ ಆರೋಪಿಯು ನಗದಿನ ಮೂಲವು ಯಾವುದು ಎಂದು ಹೇಳಲು ವಿಫಲವಾಗಿದ್ದಾರೆ ಎಂದು ವಿವರಿಸಿದ್ದಾರೆ.

 

‘ಈ ಸತ್ಯಗಳು ಮತ್ತು ಮೇಲ್ಕಂಡ ಸಾಕ್ಷಿಗಳನ್ನು ಗಮನಿಸಿದರೆ ಮೊದಲನೇ ಆರೋಪಿಯನ್ನು ಆದಾಯ ತೆರಿಗೆ ಇಲಾಖೆ ಕಾಯ್ದೆಯ ಸೆಕ್ಷನ್‌ 276ಸಿ ಮತ್ತು 277 ಕಾನೂನು ಕ್ರಮ ಜರುಗಿಸಬಹುದಾಗಿದೆ,’ ಶಿಫಾರಸ್ಸು ಮಾಡಿದ್ದಾರೆ.

ಶಿಕ್ಷಣ, ಟ್ರಸ್ಟ್‌, ರಿಯಲ್‌ ಎಸ್ಟೇಟ್‌ ವಹಿವಾಟು; ಕಳಂಕಿತ ಹಣವನ್ನು ಕಳಂಕ ರಹಿತವಾಗಿಸಲು ಹೂಡಿಕೆ

ಮೊದಲ ಆರೋಪಿಗೆ ಸೇರಿದ ಮನೆಗಳ ಮೇಲೆ ದಾಳಿ ನಡೆಸಿದ ವೇಳೆಯಲ್ಲಿ ದಾಖಲೆಗಳ ಮೇಲೆ ಪ್ರಮಾಣ ಸ್ವೀಕರಿಸಲಾಗಿತ್ತು. ನಾಲ್ಕನೇ ಆರೋಪಿಯೊಂದಿಗೆ ನಿಮ್ಮ ಸಂಬಂಧದ ಕುರಿತು ಪ್ರಶ್ನಿಸಿದ್ದ ವೇಳೆಯಲ್ಲಿ ನಾಲ್ಕನೇ ಆರೋಪಿಯೊಂದಿಗೆ ಹೊಂದಿರುವ ಎಲ್ಲ ಹಣಕಾಸು ಸಂಬಂಧಗಳನ್ನು ಹೇಳಿದ್ದರು.

 

ಬಿ-2 ಸಫ್ದರ್‍‌ಜಂಗ್‌ ಎನ್‌ಕ್ಷೇವ್‌ ಮನೆ ರೂ.41,03,600 ಲಕ್ಷ, ಬಿ-4 ಸಫ್ದರ್‍‌ಜಂಗ್‌ ಎನ್‌ಕ್ಲೇವ್‌ ಮನೆ 1,37,36,500 ಕೋಟಿ, ಬಿ-5 ಸಫ್ದರ್‍‌ಜಂಗ್‌ ಎನ್‌ಕ್ಲೇವ್‌ ಮನೆ 6,68,84,100 ಕೋಟಿ, ಆರೋಪಿ-4ರ ಮನೆಯಲ್ಲಿ 12,44,900 ಲಕ್ಷ ರೂ., ಜೋವಿನ್‌ ಜೋಸೆಫ್‌ ಅವರ ಮನೆಯಲ್ಲಿ 23,38,000 ಲಕ್ಷ ರು.ಗಳನ್ನು ವಶಕ್ಕೆ ಪಡೆದಿತ್ತು.

Hot this week

1,094.81 ಕೋಟಿಯಷ್ಟು ಭೂ ಕಂದಾಯ ಬಾಕಿ; ವಸೂಲಾತಿಗೆ ರೇರಾ ಮೀನಮೇಷ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ...

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

Topics

1,094.81 ಕೋಟಿಯಷ್ಟು ಭೂ ಕಂದಾಯ ಬಾಕಿ; ವಸೂಲಾತಿಗೆ ರೇರಾ ಮೀನಮೇಷ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ...

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

Related Articles

Popular Categories

error: Content is protected !!