Friday | May 1, 2026 |

‘ನಿನಗೆಷ್ಟೋ ಧೈರ್ಯ, ಜೀವಂತ ಸುಡಿಸುತ್ತೇನೆ’; ಹಲ್ಲೆ ನಡೆಸಿದ್ದ ಕೆಎಸ್‌ಆರ್‍‌ಟಿಸಿ ಅಧ್ಯಕ್ಷನ ವಿರುದ್ಧ ಎಫ್‌ಐಆರ್‍‌

ಬೆಂಗಳೂರು; ಪ್ರಥಮದರ್ಜೆ ಗುತ್ತಿಗೆದಾರ ಹಾಗೂ ಕಾಂಗ್ರೆಸ್‌ ಕಾರ್ಯಕರ್ತ ರಾಯಸಂದ್ರ ರವಿಕುಮಾರ್‍‌ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಗುಬ್ಬಿ ವಿಧಾನಸಭೆ ಕ್ಷೇತ್ರದ ಶಾಸಕ ಎಸ್‌ ಆರ್‍‌ ಶ್ರೀನಿವಾಸ್‌ ಅವರ ವಿರುದ್ದ ಎಫ್‌ಐಆರ್‍‌ ದಾಖಲಾಗಿದೆ.

 

ರಾಯಸಂದ್ರ ರವಿಕುಮಾರ್‍‌ ಅವರ ಮೇಲೆ ಶಾಸಕ ಹಾಗೂ ಕೆಎಸ್‌ಆರ್‍‌ಟಿಸಿ ಅಧ್ಯಕ್ಷ   ಶ್ರೀನಿವಾಸ್‌ ಮತ್ತು ಅವರ ಸಂಗಡಿಗರ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ್ದರೂ ಸಹ ಸ್ಥಳೀಯ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಘಟನೆ ನಡೆದು 2 ದಿವಸದ ನಂತರ ಎಫ್‌ಐಆರ್‍‌ ದಾಖಲಿಸಿರುವುದು ಗೊತ್ತಾಗಿದೆ.

 

ಶಾಸಕ ಶ್ರೀನಿವಾಸ್‌ ಅವರ ವಿರುದ್ಧ ಪೊಲೀಸರು ದಾಖಲಿಸಿರುವ ಎಫ್‌ಐಆರ್‍‌ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯು ಹದಗೆಟ್ಟಿದೆ ಮತ್ತು ಹಲ್ಲೆ, ಕೊಲೆ, ಅತ್ಯಾಚಾರ ಪ್ರಕರಣಗಳಂತಹ ಅಪರಾಧಗಳ ಸಂಖ್ಯೆಯೂ ಹೆಚ್ಚಿವೆ ಎಂದು ಸದನದಲ್ಲಿ ಪ್ರತಿಪಕ್ಷಗಳು ಆರೋಪಿಸಿದ್ದವು. ಇದರ ಬೆನ್ನಲ್ಲೇ ಸ್ವತಃ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆಯೇ ಕಾಂಗ್ರೆಸ್‌ ಶಾಸಕ ಶ್ರೀನಿವಾಸ್‌ ಮತ್ತವರ ಗುಂಪೊಂದು ಹಲ್ಲೆ ನಡೆಸಿರುವುದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯು ಹಳಿ ತಪ್ಪಿದೆ ಎಂಬ ಆರೋಪಕ್ಕೆ ಮತ್ತೊಂದು ಸಾಕ್ಷ್ಯ ಲಭಿಸಿದಂತಾಗಿದೆ.

 

ವಿಶೇಷವೆಂದರೇ ಗೃಹ ಸಚಿವ ಡಾ ಜಿ ಪರಮೇಶ್ವರ್‍‌ ಅವರ ಸ್ವಕ್ಷೇತ್ರದಲ್ಲಿಯೇ ಈ ಹಲ್ಲೆ ನಡೆದಿರುವುದು ಕಾನೂನು ಸುವ್ಯವಸ್ಥೆಯ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ.

 

ಎಫ್‌ಐಆರ್‍‌ನಲ್ಲೇನಿದೆ?

 

ರಸ್ತೆ, ಚರಂಡಿ ಮತ್ತಿತರ ನಾಗರಿಕ ಮೂಲಭೂತ ಸೌಲಭ್ಯಗಳ ಕಾಮಗಾರಿ ನಡೆಸುವ ಸಂಬಂಧ ಪಂಚಾಯತ್‌ರಾಜ್‌ ಇಲಾಖೆಯು ಕರೆದಿದ್ದ ಟೆಂಡರ್‍‌ನಲ್ಲಿ ಪ್ರಥಮದರ್ಜೆ ಗುತ್ತಿಗೆದಾರ ರಾಯಸಂದ್ರ ರವಿಕುಮಾರ್‍‌ ಅವರು ಕಡಿಮೆ ದರ ನಮೂದಿಸಿದ್ದರಿಂದಾಗಿ ಸಿವಿಲ್‌ ಕಾಮಗಾರಿಯ ಗುತ್ತಿಗೆ ದೊರೆತಿತ್ತು.

 

ಈ ಸಂಬಂಧ ಕಾರ್ಯಪಾಲಕ ಇಂಜಿನಿಯರ್‍‌ ಅವರು 2024ರ ಫೆ.21ರಂದು ಅಂಚೆ ಮೂಲಕ ರವಿಕುಮಾರ್‍‌ ಅವರಿಗೆ ಗುತ್ತಿಗೆಯ ಸಮ್ಮತಿ ದಾಖಲೆಗಳನ್ನು ರವಾನಿಸಿದ್ದರು. 2024ರ ಫೆ.27ರಿಂದ ಈ ಗುತ್ತಿಗೆ ಸಮ್ಮತಿ ಪತ್ರವು ಜಾರಿಯಾಗಿತ್ತು.

 

ಗುತ್ತಿಗೆ ಸಮ್ಮತಿ ಪತ್ರ ಕೈ ಸೇರಿದ ನಂತರ ರವಿಕುಮಾರ್‍‌ ಅವರು 2024ರ ಮಾರ್ಚ್‌ 14ರಂದು ಮಧ್ಯಾಹ್ನ ಕುಣಿಗಲ್‌ ಮುಖ್ಯ ರಸ್ತೆಯಲ್ಲಿರುವ ಕೆ ಲಕ್ಕಪ್ಪ ವೃತ್ತದ ಬಳಿ ಇರುವ ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ವಿಭಾಗಕ್ಕೆ ಭೇಟಿ ನೀಡಿದ್ದರು. ಗುತ್ತಿಗೆ ಕರಾರನ್ನು ಮಾಡಿಕೊಳ್ಳುವ ಸಂಬಂಧ ಸಹಾಯಕ ಇಂಜಿನಿಯರ್‍‌ ಲಿಂಗರಾಜು ಅವರು ತಕರಾರು ತೆಗೆದಿದ್ದರು.

 

ಈ ಕುರಿತು ಅಧಿಕಾರಿಗಳಿಗೆ ರವಿಕುಮಾರ್‍‌ ಅವರು ಚರ್ಚಿಸಿದ್ದರು. ಆದರೆ ಕಡೇ ಗಳಿಗೆಯಲ್ಲಿ ಈ ಕಾಮಗಾರಿಯು ರದ್ದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಇದು ಕಾನೂನುಬಾಹಿರ ಮತ್ತು ಏಕಪಕ್ಷೀಯವಾಗಿ ಕೂಡಿದೆ ಎಂದು ರವಿಕುಮಾರ್‍‌ ಅವರು ಸ್ಥಳದಲ್ಲಿಯೇ ಆರೋಪಿಸಿದ್ದರು. ಅಲ್ಲದೇ ಅನಿರ್ದಿಷ್ಟಾವಧಿಯ ಪ್ರತಿಭಟನೆಯನ್ನೂ ನಡೆಸಿದ್ದರು.

 

ಇದೇ ಹೊತ್ತಿನಲ್ಲಿ ಗುಬ್ಬಿ ಶಾಸಕ ಎಸ್‌ ಆರ್‍‌ ಶ್ರೀನಿವಾಸ್‌ ಮತ್ತು ಅವರ 10 ಮಂದಿ ಬೆಂಬಲಿಗರು ಏಕಾಏಕೀ ಧರಣಿ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದರು.

 

‘ಮಾನಸಿಕ ಸ್ಥಿಮಿತ ಕಳೆದುಕೊಂಡ ಶಾಸಕ ಎಸ್‌ ಆರ್‍‌ ಶ್ರೀನಿವಾಸ್‌ ಅವರು ಯಾವನೋ ಅವನು ರಾಯಸಂದ್ರ ರವಿ ಎಂದು ಕಿರುಚಾಡಿ ನನ್ನ ಕ್ಷೇತ್ರದಲ್ಲಿ ನನ್ನ ಅನುಮತಿ ಇಲ್ಲದೇ ಕಾಮಗಾರಿ ಮಂಜೂರು ಮಾಡಿಸಿಕೊಳ್ಳಲು ಎಷ್ಟು ಧೈರ್ಯ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ನಿನಗೆ ತಾಕತ್ತಿದ್ದರೆ ಕೆಲಸ ಮಾಡು ನಿನ್ನೊಂದಿಗೆ ನಿನ್ನ ಕೆಲಸ ಮಾಡಿಸುವ ಯಂತ್ರೋಪಕರಣದೊಂದಿಗೆ ಜೀವಂತ ಸುಡಿಸುತ್ತೇನೆ ಎಂದು ಕೂಗಾಡಿದರು,’ ಎಂದು ರವಿಕುಮಾರ್‍‌ ಅವರು ದೂರಿನಲ್ಲಿ ಘಟನೆಯನ್ನು ವಿವರಿಸಿದ್ದಾರೆ.

 

ಹಲ್ಲೆಗೊಳಗಾಗಿರುವ ರಾಯಸಂದ್ರ ರವಿಕುಮಾರ್‍‌

 

ಈ ವೇಳೆ ‘ನನ್ನ ಮೇಲೆ ಏಕಾಏಕೀ ಕೈಗಳಿಂದ ಮನಸೋ ಇಚ್ಛೆ ಗುದ್ದಿ ಜೋರಾಗಿ ಹಿಮ್ಮುಖನಾಗಿ ಬೀಳುವಂತೆ ತಳ್ಳಿದಾಗ ಕತ್ತಿನ ಹಿಂಭಾಗ ಹಾಗೂ ಬೆನ್ನಿನ ಮೇಲೆ ರಕ್ತ ಹೆಪ್ಪುಗಟ್ಟಿದ ಗಾಯಗಳಾದವು. ನಂತರ ಅವರ ಜೊತೆ ಬಂದಿದ್ದವರು ಸಹ ಕೈ ಕಾಲುಗಳಿಂದ ತುಳಿದು ಕಾಲಿನಿಂದ ಒದ್ದರು. ದೇಹದ ಹಲವಾರು ಕಡೆ ಮೂಗೇಟು ಗಾಯಗಳನ್ನು ಮಾಡಿದರು. ನಂತರ ನನ್ನನ್ನು ಎತ್ತಿ ಕಾರಿಗೆ ಎತ್ತಿ ಹಾಕಿಕೊಳ್ಳಿರೋ ಎಲ್ಲಿಯಾದರೂ ತೆಗೆದುಕೊಂಡು ಹೋಗಿ ಸಾಯಿಸಿ ಬಿಡೋಣ ಎಂದು ಕೊಲೆ ಮಾಡುವ ಉದ್ದೇಶದಿಂದ ಧರಣಿ ನಡೆಯುತ್ತಿದ್ದ ಸ್ಥಳದಿಂದ ಎಳೆದುಕೊಂಡು ಹೋಗಿದ್ದರು,’ ಎಂದು ರವಿಕುಮಾರ್‍‌ ಅವರು ಘಟನೆಯನ್ನು ಮತ್ತಷ್ಟು ವಿವರಿಸಿರುವುದ ಗೊತ್ತಾಗಿದೆ.

 

ಈ ಸಂಬಂಧ ರವಿಕುಮಾರ್‍‌ ಅವರು ನೀಡಿದ್ದ ದೂರಿನ ಮೇರೆಗೆ 48 ಗಂಟೆಗಳ ನಂತರ ಗುಬ್ಬಿ ಶಾಸಕ ಎಸ್‌ ಆರ್‍‌ ಶ್ರೀನಿವಾಸ್‌ ಮತ್ತು ಅವರ ಸಂಗಡಿಗರ ವಿರುದ್ಧ ಐಪಿಸಿ ಸೆಕ್ಷನ್‌ 1860, 511, 506, 504, 143, 149, 323, 363 ಅಡಿಯಲ್ಲಿ ಮೊಕದ್ದಮೆ ದಾಖಲಿಸಿದ್ದಾರೆ.

Hot this week

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

Topics

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು...

Related Articles

Popular Categories

error: Content is protected !!