Sunday | July 26, 2026 |

ಅನುಮತಿ ಇಲ್ಲದೇ ನೇಮಕಾತಿಗೆ ಮುಂದಾದ ವಿಧಾನ ಪರಿಷತ್‌; ಅಧಿಸೂಚನೆ ಹಿಂಪಡೆಯಲು ನಿರ್ದೇಶನ, ಮುಖಭಂಗ?

ಬೆಂಗಳೂರು; ಖಾಲಿ ಇದ್ದ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಸಹಮತಿ ಇಲ್ಲದೆಯೇ ವಿಧಾನ ಪರಿಷತ್‌ ಸಚಿವಾಲಯವು ಅಧಿಸೂಚನೆ ಹೊರಡಿಸಿರುವುದು ಇದೀಗ ಬಹಿರಂಗವಾಗಿದೆ.

 

ನೇಮಕಾತಿ ಸಂಬಂಧ ಅನುಮತಿ ಕೋರಿದ್ದ ಪ್ರಸ್ತಾವನೆಯು ಆರ್ಥಿಕ ಇಲಾಖೆಯ ಪರಿಶೀಲನೆ ಹಂತದಲ್ಲಿರುವಾಗಲೇ ವಿಧಾನ ಪರಿಷತ್‌ ಸಚಿವಾಲಯವು ಅಧಿಸೂಚನೆ ಹೊರಡಿಸಿತ್ತು. ಹೀಗಾಗಿ ಅಧಿಸೂಚನೆಯನ್ನು ಹಿಂಪಡೆದುಕೊಳ್ಳಬೇಕು ಎಂದು ಆರ್ಥಿಕ ಇಲಾಖೆಯು ವಿಧಾನ ಪರಿಷತ್‌ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ.

 

ಆರ್ಥಿಕ ಇಲಾಖೆ ಹೊರಡಿಸಿರುವ ನಿರ್ದೇಶನವು ವಿಧಾನ ಪರಿಷತ್‌ ಸಚಿವಾಲಯದೊಂದಿಗೆ ಸಂಘರ್ಷಕ್ಕೆ ದಾರಿಮಾಡಿಕೊಟ್ಟಂತಾಗಿದೆ. ಅಲ್ಲದೇ ವಿಧಾನ ಪರಿಷತ್‌ ಸಚಿವಾಲಯಕ್ಕೆ ಮುಖಭಂಗವಾದಂತಾಗಿದೆ.

 

ಖಾಲಿ ಇರುವ ವಿವಿಧ ವೃಂದದ ಹುದ್ದೆಗಳನ್ನು ನೇರ ನೇಮಕಾತಿ ಅಡಿ ಭರ್ತಿ ಮಾಡಲು ಪರಿಷತ್‌ನ ಸಭಾಪತಿ ಬಸವರಾಜ ಹೊರಟ್ಟಿ ಅವರೊಂದಿಗೆ ಅಧಿಕಾರಿಗಳು ಚರ್ಚಿಸಿದ್ದರು. ಚರ್ಚೆಯ ನಂತರ ಅನುಮೋದನೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಕಳಿಸಿತ್ತು. ಈ ಕುರಿತು ಆರ್ಥಿಕ ಇಲಾಖೆಯು ಯಾವುದೇ ತೀರ್ಮಾನ ಕೈಗೊಂಡಿಲ್ಲ. ಈ ಪ್ರಸ್ತಾವನೆ ಕುರಿತು ಪರಿಶೀಲನೆ ನಡೆಸುತ್ತಿದೆ. ಆದರೂ ವಿಧಾನಪರಿಷತ್‌ ಸಚಿವಾಲಯವು ನೇಮಕಾತಿಗೆ ಅಧಿಸೂಚನೆ ಹೊರಡಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

 

ವಿಧಾನಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು 2024ರ ಮಾರ್ಚ್‌ 4 ಮತ್ತು 12ರಂದು ಅಧಿಸೂಚನೆ ಹೊರಡಿಸಿತ್ತು. ಇದರಲ್ಲಿ ವಾಹನ ಚಾಲಕರು, ಸೀನಿಯರ್‍‌ ಪ್ರೋಗ್ರಾಮರ್‍‌ ಸೇರಿದಂತೆ ಇನ್ನಿತರೆ ಸಹಾಯಕ ಹುದ್ದೆಗಳಿದ್ದವು.

 

 

ಆರ್ಥಿಕ ಇಲಾಖೆಯ ನಿರ್ದೇಶನದಲ್ಲೇನಿದೆ?

 

ವಿಧಾನ ಪರಿಷತ್‌ನ ಸಚಿವಾಲಯವು ಖಾಲಿ ಇರುವ ಉಳಿಕೆ ಮೂಲ ವೃಂದ ಮತ್ತುಕಲ್ಯಾಣ ಕರ್ನಾಟಕ ವೃಂದದಲ್ಲಿನ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿತ್ತು.

 

ಈ ಅಧಿಸೂಚನೆಗಳಲ್ಲಿ ನಮೂದಿಸಿರುವ ಹುದ್ದೆಗಳನ್ನು ತುಂಬಲು ಆರ್ಥಿಕ ಇಲಾಖೆಯ ಅನುಮತಿ ಕೋರಿತ್ತು. ಪ್ರಸ್ತಾವನೆಯು ಇನ್ನು ಆರ್ಥಿಕ ಇಲಾಖೆಯಲ್ಲಿ ಪರಿಶೀಲನೆಯಲ್ಲಿದ್ದು ಈ ಹುದ್ದೆಗಳನ್ನು ನೇಋ ನೇಮಕಾತಿ ಮೂಲಕ ಭರ್ತಿ ಮಾಡಲು ಇದುವರೆವಿಗೂ ಸಹಮತಿಸಿರುವುದಿಲ್ಲ.

 

ಆದರೂ ತಮ್ಮ ಸಚಿವಾಲಯದಿಂದ ಸದರಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಗಳನ್ನು ಹೊರಡಿಸಲಾಗಿರುತ್ತದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆಯಲ್ಲಿ ವಾಹನ ಚಾಲಕರು ಹಾಗೂ ಗ್ರೂಪ್‌ ಡಿ ವೃಂದಗಳಲ್ಲಿ ಖಾಲಿ ಇರುವ ಹುದ್ದೆಗಳು ಹಾಗೂ ಇನ್ನೂ ಮುಂದೆ ಖಾಲಿಯಾಗುವ ಹುದ್ದೆಗಳನ್ನು ಬಾಹ್ಯ ಮೂಲಗಳ ಮುಖಾಂತರ ಪೂರೈಸಬೇಕು ಎಂದು ಸ್ಪಷ್ಟವಾಗಿ ತಿಳಿಸಿದೆ. ಇದನ್ನು ಎಲ್ಲಾ ಆಡಳಿತ ಇಲಾಖೆಗಳು ಪಾಲಿಸುತ್ತಿವೆ.

 

2024ರ ಮಾರ್ಚ್‌ 4 ಮತ್ತು 12ರಂದು ತಮ್ಮ ಸಚಿವಾಲಯದಿಂದ ಹೊರಡಿಸಿರುವ ಅಧಿಸೂಚನೆಗಳನ್ನು ಪೂರ್ವ ನಿದರ್ಶನವೆಂದು ಪರಿಗಣಿಸಿ ಎಲ್ಲಾ ಆಡಳಿತ ಇಲಾಖೆಗಳು ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮ ವಹಿಸುವ ಸಾಧ್ಯತೆಗಳಿರುತ್ತವೆ ಎಂದು ಆರ್ಥಿಕ ಇಲಾಖೆಯು ತನ್ನ ಪತ್ರದಲ್ಲಿ ಹೇಳಿದೆ.

 

Transaction of Business Rules 1977 ರ ಪ್ರಕಾರ ಯಾಔಉದೇ ಹುದ್ದೆಗಳನ್ನು ಭರ್ತಿ ಮಾಡಬೇಕಾದಲ್ಲಿ ಆರ್ಥಿಕ ಇಲಾಖೆಯ ಸಹಮತಿ ಕಡ್ಡಾಯವಾಗಿರುತ್ತದೆ. ಈ ಅಂಶಗಳ ಹಿನ್ನೆಲೆಯ್ಲಲಿ ತಮ್ಮ ಸಚಿವಾಲಯದಿಂದ ಹೊರಡಿಸಿರುವ ಮೇಲ್ಕಂಡ ಎರಡೂ ಅಧಿಸೂಚನೆಗಳನ್ನೂ ಕೂಡಲೇ ಹಿಂಪಡೆಯಬೇಕು ಎಂದು ಆರ್ಥಿಕ ಇಲಾಖೆಯು ನಿರ್ದೇಶಿಸಿದೆ. ಈ ಪತ್ರಕ್ಕೆ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌ ಕೆ ಅತೀಕ್‌ ಅವರು ಅನುಮೋದಿಸಿರುವುದು ಗೊತ್ತಾಗಿದೆ.

Hot this week

ದೇಶದಲ್ಲಿ 5.64 ಕೋಟಿ, ರಾಜ್ಯದಲ್ಲಿ 23.21 ಲಕ್ಷ ಪ್ರಕರಣಗಳು ವಿಚಾರಣೆಗೆ ಬಾಕಿ; ನ್ಯಾಯಾಲಯಗಳಲ್ಲಿ ಕೆಲಸದ ಒತ್ತಡ, ನ್ಯಾಯದಾನವೂ ವಿಳಂಬ

ಬೆಂಗಳೂರು: ದೇಶದ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 5.64 ಕೋಟಿಗೂ ಅಧಿಕ ಪ್ರಕರಣಗಳು...

15ನೇ ಹಣಕಾಸು ಆಯೋಗ; ಗುಜರಾತ್‌ಗೆ ಅತೀ ಕಡಿಮೆ, ಕರ್ನಾಟಕಕ್ಕೆ ಅತೀ ಹೆಚ್ಚು ಮೊತ್ತ ಬಿಡುಗಡೆಗೆ ಬಾಕಿ

ಬೆಂಗಳೂರು; ಕರ್ನಾಟಕ ರಾಜ್ಯವೂ ಸೇರಿದಂತೆ ದೇಶದ 28 ರಾಜ್ಯಗಳಲ್ಲಿರುವ ಗ್ರಾಮ ಪಂಚಾಯ್ತಿಗಳಿಗೆ...

ಪೋಕ್ಸೋ; ಕರ್ನಾಟಕದಲ್ಲಿ 21,436 ಪ್ರಕರಣಗಳು ವಿಚಾರಣೆಗೆ ಬಾಕಿ, ದೇಶದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಶೇ.48ರಷ್ಟು ಹೆಚ್ಚಳ

ಬೆಂಗಳೂರು:  ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೋ...

ಮುದ್ರಾ ಯೋಜನೆ ಸಾಲದ ಖಾತೆ ತೆರೆಯುವಲ್ಲಿ ಹಿಂದುಳಿದ 8 ಜಿಲ್ಲೆ; ಸಾಲ ನೀಡುವಲ್ಲಿ ಖಾಸಗಿ ಬ್ಯಾಂಕ್‌ಗಳದ್ದೇ ಮೇಲುಗೈ

ಬೆಂಗಳೂರು; ಮುದ್ರಾ ಸಾಲ ಸಹಿತ ವಿವಿಧ ಸ್ವಯಂ ಉದ್ಯಮ ಯೋಜನೆಗಳಡಿ ಕರ್ನಾಟಕ...
Please Scan to make Your Contribution

Topics

15ನೇ ಹಣಕಾಸು ಆಯೋಗ; ಗುಜರಾತ್‌ಗೆ ಅತೀ ಕಡಿಮೆ, ಕರ್ನಾಟಕಕ್ಕೆ ಅತೀ ಹೆಚ್ಚು ಮೊತ್ತ ಬಿಡುಗಡೆಗೆ ಬಾಕಿ

ಬೆಂಗಳೂರು; ಕರ್ನಾಟಕ ರಾಜ್ಯವೂ ಸೇರಿದಂತೆ ದೇಶದ 28 ರಾಜ್ಯಗಳಲ್ಲಿರುವ ಗ್ರಾಮ ಪಂಚಾಯ್ತಿಗಳಿಗೆ...

ಪೋಕ್ಸೋ; ಕರ್ನಾಟಕದಲ್ಲಿ 21,436 ಪ್ರಕರಣಗಳು ವಿಚಾರಣೆಗೆ ಬಾಕಿ, ದೇಶದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಶೇ.48ರಷ್ಟು ಹೆಚ್ಚಳ

ಬೆಂಗಳೂರು:  ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೋ...

ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮ ವ್ಯವಸ್ಥಾಪಕ ನಿರ್ದೇಶಕರ ಬದಲಾವಣೆಗೆ ಸಚಿವರ ಪಟ್ಟು; ಐಎಎಸ್‌, ಕೆಎಎಸ್‌ಯೇತರ ಅಧಿಕಾರಿ ನೇಮಕಕ್ಕೆ ಮುಂದಾಗಿರುವುದೇಕೆ?

ಬೆಂಗಳೂರು; ತಮಿಳುನಾಡು ಮಾದರಿಯಲ್ಲಿ ಕರ್ನಾಟಕದ ವೈದ್ಯಕೀಯ ಸರಬರಾಜು ನಿಗಮವನ್ನು ಸ್ಥಾಪಿಸಿರುವ ರಾಜ್ಯ...

ರೈಲ್ವೇ ಯೋಜನೆಗಳಿಗೆ ಗ್ರಹಣ; 7,748 ಕೋಟಿ ರು ಅನುದಾನವಿದ್ದರೂ ಬಿರುಸುಗೊಳ್ಳದ ಭೂಸ್ವಾಧೀನ ಪ್ರಕ್ರಿಯೆ, ರಾಜ್ಯದತ್ತಲೇ ಬೊಟ್ಟು ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು; ಕರ್ನಾಟಕದಲ್ಲಿ  ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರವು  2026-27ನೇ ಸಾಲಿನಲ್ಲಿ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೇರದ ಭದ್ರಾ ಮೇಲ್ದಂಡೆ ಯೋಜನೆ; ಸಹಾಯಧನ ಬಿಡುಗಡೆ ವಿಳಂಬಕ್ಕೆ ನೆಪವೊಡ್ಡಿದ ಕೇಂದ್ರ

ಬೆಂಗಳೂರು; ರಾಜ್ಯದ ಮಹತ್ವಾಕಾಂಕ್ಷೆ ನೀರಾವರಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆಯ ಅಂದಾಜು...

Related Articles

Popular Categories

error: Content is protected !!