Tuesday | August 25, 2026 |

ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ 314.06 ಕೋಟಿ ರು. ನಷ್ಟ; ಸಿಎಜಿ ಗೌಪ್ಯ ಪತ್ರ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರವು 2022-23ನೇ ಸಾಲಿನಲ್ಲಿ ಮೀಸಲಿರಿಸಿದ್ದ ಮೊತ್ತಕ್ಕಿಂತಲೂ 114. ಕೋಟಿ ರು ಹೆಚ್ಚಿಗೆ ಮೊತ್ತಕ್ಕೆ ವೇತನ ಪರಿಷ್ಕರಣೆಗೆ ನೀಡಿರುವ ಅನುಮೋದನೆಯು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ 314.06 ಕೋಟಿ ರು. ನಷ್ಟ ಸಂಭವಿಸಲು ಕಾರಣವಾಗಲಿದೆ ಇದೀಗ ಬಹಿರಂಗವಾಗಿದೆ.

 

ಈ ಕುರಿತು ವಿವರಣೆ ನೀಡಬೇಕು ಎಂದು ಪ್ರಧಾನ ಮಹಾಲೇಖಪಾಲರು ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ ಎನ್‌ ವಿ ಪ್ರಸಾದ್‌ ಅವರಿಗೆ 2024ರ ಏಪ್ರಿಲ್‌ 1ರಂದು ಗೌಪ್ಯ ಪತ್ರ ಬರೆದಿದೆ. ಈ ಪತ್ರವು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಹಿಂದಿನ ಬಿಜೆಪಿ ಸರ್ಕಾರವು 2022-23ರಲ್ಲಿ ಸಿಬ್ಬಂದಿ ವೇತನ ಪರಿಷ್ಕರಣೆಗಾಗಿ 202.60 ಕೋಟಿ ರು.ಗಳನ್ನು ಮೀಸಲಿಟ್ಟಿತ್ತು. ಆದರೆ ನಿಗಮದ ಲಾಭ-ನಷ್ಟದ ಲೆಕ್ಕಾಚಾರದ ಪ್ರಕಾರ ಸಿಬ್ಬಂದಿ ವೇತನ ಪರಿಷ್ಕರಣೆಗಾಗಿ 314.06 ಕೋಟಿ ರು.ಗಳಿಗೆ ಅವಕಾಶ ಮಾಡಿಕೊಂಡಿತ್ತು.

 

ತನ್ನ ಅಧಿಕಾರದ ಅಂತ್ಯದ ದಿನಗಳಲ್ಲಿ ಅಂದರೆ ಮಾರ್ಚ್ 1, 2023ರಿಂದಲೇ ಅನ್ವಯವಾಗುವಂತೆ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಸಿಬ್ಬಂದಿ ವೇತನ ಪರಿಷ್ಕರಣೆಗೆ ಅನುಮೋದಿಸಿ 2023ರ ಮಾರ್ಚ್‌ 17ರಂದು ಆದೇಶ ಹೊರಡಿಸಿತ್ತು ಎಂಬುದು ಸಿಎಜಿಯ ಪತ್ರದಿಂದ ಗೊತ್ತಾಗಿದೆ.

 

ವಿಶೇಷವೆಂದರೇ ವೇತನ ಪರಿಷ್ಕರಣೆಯು ಎಂದಿನಿಂದ ಅನ್ವಯ ಆಗಬೇಕು ಎಂಬುದನ್ನು ನಿರ್ಧರಿಸಲು ಸರ್ಕಾರವು ಸಮಿತಿ ರಚಿಸಿತ್ತು. ಈ ಸಮಿತಿಯು 2023ರ ನವೆಂಬರ್‍‌ನಲ್ಲಿ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಹೀಗಾಗಿ ಈಗಿನ ಸರ್ಕಾರವು ಇನ್ನೂ ಈ ಬಗ್ಗೆ ನಿರ್ಧಾರ ಕೈಗೊಂಡಿಲ್ಲ. ಆದರೂ ಈಗಾಗಲೇ ವೇತನ ಪರಿಷ್ಕರಣೆಗೆ ಅನುಮೋದನೆ ನೀಡಿರುವ ಪರಿಣಾಮ ಚಾಲ್ತಿ ಖಾತೆಯಲ್ಲಿ 314.06 ಕೋಟಿಯಷ್ಟು ನಷ್ಟವಾಗಲಿದೆ ಎಂದು ಸಿಎಜಿ ತನ್ನ ಪತ್ರದಲ್ಲಿ ವಿವರಿಸಿರುವುದು ಗೊತ್ತಾಗಿದೆ.

 

ರಸ್ತೆ ಅಪಘಾತಗಳ ಪರಿಹಾರಗಳಿಗಾಗಿ ಮಾಡಿರುವ ವೆಚ್ಚದ ಬಗ್ಗೆಯೂ ಸಿಎಜಿಯು ತನ್ನ ಗೌಪ್ಯ ಪತ್ರದಲ್ಲಿ ಉಲ್ಲೇಖಿಸಿದೆ. ‘2019-20ರಿಂದ 2021-22ರವರೆಗೆ ಪರಿಹಾರಕ್ಕಾಗಿ 57.47 ಕೋಟಿ ರು ವೆಚ್ಚವಾಗಿದೆ. ಇದೇ ಸಂದರ್ಭದಲ್ಲಿ 2023ರ ಮಾರ್ಚ್‌ 31ರಂದು 25.42 ಕೋಟಿ ರು ಉಳಿದಿತ್ತು. ಇದು ವರ್ಷದ ಮಟ್ಟಿಗೆ 32.05 ಕೋಟಿ ರು.ಗಳಾಗಿವೆ. 2021-22ರ ಪರಿಸ್ಥಿತಿಯಂತೆಯೇ ಇದ್ದರೂ ನಿಗಮವು ಯಾವುದೇ ಕ್ರಮ ಜರುಗಿಸಲಿಲ್ಲ,’ ಎಂದು ವಿವರಿಸಿರುವುದು ಪತ್ರದಿಂದ ತಿಳಿದು ಬಂದಿದೆ.

 

ಬೀದರ್‍‌ ವಿಭಾಗಕ್ಕೆ ಸಂಬಂಧಿಸಿದಂತೆ 1.21 ಕೋಟಿ ರು. ಬಾಕಿ ಇತ್ತು. ಜಿಲ್ಲಾಧಿಕಾರಿ ಮಾಹಿತಿ ಮೇರೆಗೆ ನಿಗಮವು ಈ ಮೊತ್ತವನ್ನು ಪಡೆಯಲಿದೆ. ನಗರದೊಳಗೆ ಪ್ರವಾಸಿ ಬಸ್‌ಗಳನ್ನು ನಿರ್ವಹಣೆ ಮಾಡಲು ಕೈಗೊಂಡ ನಷ್ಟವನ್ನು ಭರಿಸಲು ಈ ಮೊತ್ತವನ್ನು ಬಳಸಲಾಗುತ್ತದೆ. ಆದರೆ ಜಿಲ್ಲಾಧಿಕಾರಿಗಳ ಈ ಕ್ರಮಕ್ಕೆ ಹಣಕಾಸು ಇಲಾಖೆಯು ಯಾವುದೇ ಅನುಮೋದನೆ ನೀಡಿಲ್ಲ. ಹೀಗಾಗಿ ಖರ್ಚು ಮತ್ತು ವೆಚ್ಚಗಳ ಲೆಕ್ಕವು ಕ್ರಮಬದ್ಧವಾಗಿಲ್ಲ. ಇದರಿಂದ ನಿಗಮವು 1.21 ಕೋಟಿ ರು. ನಷ್ಟಕ್ಕೆ ಗುರಿಯಾಗಲಿದೆ ಎಂದು ಸಿಎಜಿಯು ಹೇಳಿದೆ.

 

ವಾಹನಗಳ ಮೇಲಿನ ಸವಕಳಿ ಕುರಿತೂ ಸಿಎಜಿಯು ವಿವರಿಸಿದೆ. ಬಸ್‌ಗಳ ಹೊರ ಕವಚಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಿಎಸ್‌ಟಿ 2.41 ಕೋಟಿ ರು.ಗಳನ್ನು 2022-23ನೇ ಸಾಲಿಗೆ ಕಟಾಯಿಸಿಲ್ಲ. ಆದರೆ ನಿಗಮವು ಬಸ್‌ಗಳ ಮೌಲ್ಯವನ್ನೇ ಕಡಿಮೆ ಮಾಡಿತ್ತು. ಇದರಿಂದಾಗಿ 2.41 ಕೋಟಿ ನಷ್ಟವಾಗಿದೆ ಎಂದು ತನ್ನ ಪತ್ರದಲ್ಲಿ ಉಲ್ಲೇಖಿಸಿದೆ.

 

ಲೆಕ್ಕ ಪರಿಶೋಧನೆ ನೀತಿ ಪ್ರಕಾರ ಕಟ್ಟಡ ಸವಕಳಿಯನ್ನು ಶೇ.2.5ರಷ್ಟು ತೆಗೆಯಬೇಕು. ಡಾಂಬರೀಕರಣ ಸೇರಿದಂತೆ ಕಟ್ಟಡಗಳ ಕಾಮಗಾರಿಗಳು, ವಿದ್ಯುತ್‌ ಸಂಪರ್ಕ ಕಾಮಗಾರಿಗಳು ಸೇರಿದಂತೆ 2022-23ರಲ್ಲಿ 3.37 ಕೋಟಿ ರು. ವೆಚ್ಚವಾಗಿತ್ತು. ಸವಕಳಿ ತೆಗೆಯುವ ಸಂಬಂಧ 2016-17ರಿಂದ 2021-22ರ ಅವಧಿಯಲ್ಲಿ ಎಚ್ಚರಿಕೆ ನೀಡಿದ್ದರೂ ಈ ಸಂಬಂಧ ಅಗತ್ಯ ಕ್ರಮ ಕೈಗೊಂಡಿಲ್ಲ ಎಂಬುದು ಸಿಎಜಿ ಪತ್ರದಿಂದ ತಿಳಿದು ಬಂದಿದೆ.

 

ಸಾರಿಗೆ ನಿಗಮವು 76.43 ಕೋಟಿ ರು. ಗ್ರಾಚ್ಯುಟಿ ನಿಧಿ ಸೃಷ್ಟಿಸಿದೆ. 1.21 ಕೋಟಿ ರು ಮೊತ್ತದ ಆಸ್ತಿಗಳನ್ನು ಅಧಿಕವಾಗಿ ತೋರಿಸುತ್ತಿದೆ. ಋಣಭಾರ 284.42 ಕೋಟಿ ರು ಎಂದು ತೋರಿಸಿದೆ. ಅಲ್ಲದೇ ನಷ್ಟವನ್ನು 243.21 ಕೋಟಿ ರು. ಹೆಚ್ಚುವರಿಯಾಗಿ ತೋರಿಸಿದೆ ಎಂದು ಸಿಎಜಿ ಪತ್ರದಲ್ಲಿ ಹೇಳಲಾಗಿದೆ.

 

ಸಿಎಜಿ ಬರೆದಿರುವ ಗೌಪ್ಯ ಪತ್ರದ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕಾರಿಗಳೊಂದಿಗೆ ಇನ್ನಷ್ಟೇ ಚರ್ಚಿಸಬೇಕಿದೆ ಎಂದು ಗೊತ್ತಾಗಿದೆ.

Hot this week

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...
Please Scan to make Your Contribution

Topics

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

Related Articles

Popular Categories

error: Content is protected !!